Homeಎಚ್.ಎಸ್.ದೊರೆಸ್ವಾಮಿಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ರಾಷ್ಟ್ರೀಯ ಕಾಂಗ್ರೆಸ್ ಪಟ್ಟಾಗಿ ದೇಶದ ಸ್ವಾತಂತ್ರ್ಯಕ್ಕೆ 100 ವರ್ಷಕ್ಕೂ ಮೇಲ್ಪಟ್ಟು ಹೋರಾಡಿತು. ಅಂಬೇಡ್ಕರರೂ ಅವಿಚ್ಛಿನ್ನವಾಗಿ ತಮ್ಮ ಜೀವಮಾನಪರ್ಯಂತ ಹಿಂದುಳಿದವರ, ಅಸ್ಪೃಶ್ಯರ, ಅರಣ್ಯವಾಸಿಗಳ ಸಂಘಟನೆ ಕೆಲಸದಲ್ಲಿ ತೊಡಗಿದ್ದರು.

- Advertisement -
- Advertisement -

ಕೆಲವು ಮೌಲ್ಯಗಳಿಗಾಗಿ ಅಂಬೇಡ್ಕರ್, ಮಹಾತ್ಮಾ ಗಾಂಧಿ ಮುಂತಾದ ಮಹಾನಾಯಕರನ್ನು ದೇಶದ ಜನ ಗೌರವಿಸುತ್ತಾರೆ. ಆದರೆ ನಮ್ಮ ಆಧುನಿಕ ಲೇಖಕರು, ಅಂಬೇಡ್ಕರ್ ಮತ್ತು ಗಾಂಧೀಜಿ ಇಬ್ಬರೂ ವಿರೋಧಿಗಳು ಎಂಬಂತೆ ಬಿಂಬಿಸಲು ಪಣತೊಟ್ಟಿದ್ದಾರೆ. ತಮ್ಮ ಜೀವಿತ ಕಾಲದಲ್ಲಿ ಈ ಮಹನೀಯರು ತುಂಬ ಸಾಧನೆ ಮಾಡಿದ್ದಾರೆ. ಅದಕ್ಕಾಗಿ ನಾವು ಅವರಿಗೆ ಗೌರವ ಸಲ್ಲಿಸಬೇಕೆ ಹೊರತು ಅವರನ್ನು ಕಡು ವಿರೋಧಿಗಳು ಎಂದು ಬಿಂಬಿಸಿ ಜನರ ಮನಸ್ಸಿನಲ್ಲಿ ವಿಷ ತುಂಬುವುದು ಶ್ರೇಯಸ್ಕರವಲ್ಲ. ಆ ಮಹನೀಯರಲ್ಲಿದ್ದ ವೈಚಾರಿಕ ವ್ಯತ್ಯಾಸವನ್ನು ನಾವು ಪರಿಗಣಿಸುವುದು ಸರಿ ಆದರೆ ಅವರನ್ನು ಕಡುವೈರಿಗಳು ಎಂಬಂತೆ ಚಿತ್ರಿಸುವುದು ಇತಿಹಾಸಕ್ಕೆ ಅಪಮಾನ ಮಾಡಿದಂತೆ.

ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪಿಸಿದವರು ಆಲನ್ ಆಕ್ಟೇವಿಯನ್ ಹ್ಯೂಮ್ ಎಂಬ ಇಂಗ್ಲಿಷರು. ಅವರು ಈಸ್ಟ್ ಇಂಡಿಯಾ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದವರು. ನಾವು ಬ್ರಿಟನ್‍ನಲ್ಲಿ ಇಷ್ಟೊಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ, ಭಾರತೀಯರಿಗೂ ಆ ಸ್ವಾತಂತ್ರ್ಯ ಸಿಗಬೇಕು ಎನ್ನುವ ದೃಷ್ಟಿಯಿಂದ ರಾಷ್ಟ್ರೀಯ ಕಾಂಗ್ರೆಸ್ಸನ್ನು ಅವರು ಸ್ಥಾಪಿಸಿದರು. ಅಂದಿನ ಭಾರತದ ಮಹಾದಿಗ್ಗಜರಾದ ದಾದಾಭಾಯ್ ನವರೋಜಿ, ಫಿರೊಜ್‍ಷಾ ಮೆಹ್ತಾ ಮುಂತಾದವರು ರಾಷ್ಟ್ರೀಯ ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಅವರೆಲ್ಲ ಕ್ಲಾಸ್ ಲೀಡರ್‌ಗಳು. ಈ ಭಾರತೀಯ ದಿಗ್ಗಜಗಳ ಬಗೆಗೆ ಬ್ರಿಟಿಷ್ ಆಡಳಿತಗಾರರಿಗೆ ಬಹಳ ಗೌರವ ಇತ್ತು.

ಇವರು ಮೆಮೊರಂಡಂಗಳನ್ನು ತಯಾರು ಮಾಡಿ ಕಾಲ ಕಾಲಕ್ಕೆ ಬ್ರಿಟಿಷ್ ಸರ್ಕಾರಕ್ಕೆ ಕಳುಹಿಸಿಕೊಡುತ್ತಿದ್ದರು. ಆ ಮೆಮೊರಂಡಂಗಳಲ್ಲಿ ಭಾರತೀಯರಿಗೆ ಸರ್ಕಾರದಲ್ಲಿ ಕೆಲಸಗಳನ್ನು ಕೊಡಬೇಕು, ಬ್ರಿಟಿಷ್ ಮಿಲಿಟರಿಯಲ್ಲಿ ಭಾರತೀಯರಿಗೆ ಹುದ್ದೆಗಳನ್ನು ನೀಡಬೇಕು ಎನ್ನುವಂತಹ ಹತ್ತಾರು ಮನವಿಗಳನ್ನು ಸಲ್ಲಿಸುವ ಮೂಲಕ ಈ ಎಲ್ಲ ಸವಲತ್ತುಗಳನ್ನು ಭಾರತೀಯರೂ ಪಡೆಯುವಂತೆ ಮಾಡಿದರು. ಮುಂದೆ ಅಂಬೇಡ್ಕರರು ವಿದ್ಯಾವಂತರಾದ ಮೇಲೆ ಅವರೂ ಕೂಡ ಶೂದ್ರರು, ಅಸ್ಪೃಶ್ಯರು, ಆದಿವಾಸಿಗಳು, ದಲಿತರಿಗೆ ಆಡಳಿತದಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸುವ ಮೂಲಕ ಹಿಂದುಳಿದ ಜನಾಂಗದವರ ಮತ್ತು ಅಸ್ಪೃಶ್ಯರ ಹಕ್ಕು ಬಾಧ್ಯತೆಗಳನ್ನು ಪಡೆಯುವ ಅನೇಕ ಪ್ರಯತ್ನಗಳನ್ನು ಮಾಡಿದರು. ಕಾಂಗ್ರೆಸ್ ನಾಯಕರು ಭಾರತೀಯರೆಲ್ಲರ ಸಲುವಾಗಿ ಬೇಡಿಕೆಗಳನ್ನಿಟ್ಟರೆ ಅಂಬೇಡ್ಕರರು ಹಿಂದುಳಿದವರ, ದಲಿತರ ಪರವಾಗಿ ದನಿ ಎತ್ತುತ್ತಿದ್ದರು.

ಆ ನಂತರ ಗಾಂಧೀಜಿ ಭಾರತದ ರಾಜಕೀಯಕ್ಕೆ ಇಳಿದರು. ಅವರು 1916ರಲ್ಲೇ ದಕ್ಷಿಣ ಆಫ್ರಿಕದಿಂದ ಭಾರತಕ್ಕೆ ಬಂದರಾದರೂ ಕಾಂಗ್ರೆಸ್ಸಿನಲ್ಲಿ ಕ್ರಿಯಾಶೀಲರಾದದ್ದು 1920ರ ನಂತರ.

ಗಾಂಧೀಜಿ ಭಾರತಕ್ಕೆ ಹಿಂದಿರುಗಿದ ಕೂಡಲೇ ಅವರು ತಮ್ಮ ರಾಜಕೀಯ ಗುರುಗಳಾದ ಗೋಪಾಲಕೃಷ್ಣ ಗೋಖಲೆಯವರನ್ನು ಸಂದರ್ಶಿಸಿ ತಾವು ಭಾರತ ಕಾಂಗ್ರೆಸ್ಸಿನ ಚುಕ್ಕಾಣಿ ಹಿಡಿಯುವ ಇಂಗಿತವನ್ನು ತಮ್ಮ ಗುರುಗಳಲ್ಲಿ ನಿವೇದಿಸಿದರು. ಆಗ ಗೋಖಲೆಯವರು ‘ಕಾಂಗ್ರೆಸ್ಸಿನ ಚುಕ್ಕಾಣಿ ಹಿಡಿಯುವ ಮೊದಲು ಯಾರ ಸೇವೆ ಮಾಡಲು ನೀನು ನಿರ್ಧರಿಸಿದ್ದೀಯಾ ಆ ಜನರ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಬಾ. ಅದಕ್ಕಾಗಿ ಭಾರತವನ್ನೆಲ್ಲ ಒಂದು ಸಾರಿ ಸುತ್ತಿ ಬಾ’ ಎಂದರು. ಗಾಂಧೀಜಿ ಒಂದು ವರ್ಷ ಕಾಲ ಭಾರತವನ್ನು ಸುತ್ತಿಹಾಕಿದ್ದರಿಂದ ಅವರಿಗೆ ಭಾರತೀಯರನ್ನು ಬಡತನ ಕಿತ್ತು ತಿನ್ನುತ್ತಿದ್ದುರ ಅನುಭವವಾಯಿತು. ಬಡವರ ಸೇವೆಗೆ ತನ್ನ ಇಡೀ ಜೀವನವನ್ನು ಮುಡುಪಾಗಿಡುವುದಾಗಿ ನಿರ್ಧರಿಸಿದರು. ಸ್ವಾತಂತ್ರ್ಯದ ಗುರಿಯಾದರೂ. ಬಡತನವನ್ನು ನೀಗುವುದೇ ಆಗಿತ್ತು.

ಭಾರತದ ರಾಷ್ಟ್ರೀಯ ಕಾಂಗ್ರೆಸ್ಸಿನ ಮೊದಲ ಗುರಿ ‘ಡೊಮಿನಿಯನ್ ಸ್ಟೇಟಸ್’ ಆಗಿತ್ತು. ಇಂಗ್ಲಿಷರ ಆಡಳಿತದಲ್ಲೇ ಇದ್ದುಕೊಂಡು ಡೊಮಿನಿಯನ್ ಸ್ಟೇಟಸ್ ಅನುಭವಿಸುವ ವಿಚಾರ ಕಾಂಗ್ರೆಸ್ಸಿನದಾಗಿತ್ತು. ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಧಿಕಾರಕ್ಕೆ ಬಂದಮೇಲೂ ಭಾರತದ ಗುರಿ ಡೊಮಿನಿಯನ್ ಸ್ಟೇಟಸ್ ಪಡೆಯುವುದೇ ಆಗಿತ್ತು.

ಸುಭಾಷ್‍ಚಂದ್ರ ಬೋಸರು ಐಎಎಸ್‍ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಅವರು ಬ್ರಿಟಿಷರ ಅಧೀನದಲ್ಲಿ ಕೆಲಸ ಮಾಡಲು ಇಚ್ಛಿಸದೆ ಭಾರತಕ್ಕೆ ಹಿಂದಿರುಗಿದರು. ಕಾಂಗ್ರೆಸ್ಸಿನ ಸದಸ್ಯರಾದರು. ಸೈಮನ್ ಕಮಿಷನ್ ಭಾರತ ಪ್ರವಾಸ ಮಾಡಿದಾಗ ಬಂಗಾಳದಲ್ಲಿ ‘ಸೈಮನ್ ಗೋ ಬ್ಯಾಕ್’ ಚಳುವಳಿ ಆರಂಭಿಸಿದರು. ದೊಡ್ಡ ಯುವ ಪಡೆ ಕಟ್ಟಿ ಸೈಮನ್ ಕಮಿಷನ್ ಕಲ್ಕತ್ತೆಗೆ ಬಂದಾಗ ಕಪ್ಪು ಬಾವುಟ ಪ್ರದರ್ಶನ ನಡೆಸಿ ಸೆರೆಮನೆಗೆ ಹೋದರು. ಅದೇ ವರ್ಷ ಮದ್ರಾಸಿನಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಿತು. ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ಸುಭಾಷ್ ಹೋದರು. ಸಮ್ಮೇಳನದಲ್ಲಿ ಗಾಂಧಿಜಿ ರಾಷ್ಟ್ರೀಯ ಕಾಂಗ್ರೆಸ್ಸಿನ ಗುರಿ ಡೊಮಿನಿಯನ್ ಸ್ಟೇಟಸ್ ಎಂಬ ನಿರ್ಣಯವನ್ನು ಮಂಡಿಸಿದರು. ಸುಭಾಷ್‍ಚಂದ್ರ ಬೋಸ್ ರಾಷ್ಟ್ರೀಯ ಕಾಂಗ್ರೆಸ್ಸಿನ ಗುರಿ ‘ಪೂರ್ಣ ಸ್ವರಾಜ್ಯ’ ಎಂಬ ತಿದ್ದುಪಡಿಯನ್ನು ತಂದರು. ಕೆಲವೇ ಮತಗಳ ಅಂತರದಲ್ಲಿ ಗಾಂಧಿಯವರು ಮಂಡಿಸಿದ ನಿರ್ಣಯ ಅಂಗೀಕಾರವಾಯಿತು. ಆದರೆ ಗಾಂಧಿಜಿಗೆ ಅದರಿಂದ ಅರಿವಾಗಿ ಮುಂದಿನ ಅಧಿವೇಶನದಲ್ಲೇ ‘ಪೂರ್ಣ ಸ್ವರಾಜ್ಯ ರಾಷ್ಟ್ರೀಯ ಕಾಂಗ್ರೆಸ್ಸಿನ ಗುರಿ’ ಎಂಬ ನಿರ್ಣಯವನ್ನು ಮಂಡಿಸಿ ಅದಕ್ಕೆ ಮನ್ನಣೆ ಪಡೆದರು. ಇದು ಇತಿಹಾಸ.

Photo Courtesy: DailyO

ರಾಷ್ಟ್ರೀಯ ಕಾಂಗ್ರೆಸ್ ಪಟ್ಟಾಗಿ ದೇಶದ ಸ್ವಾತಂತ್ರ್ಯಕ್ಕೆ 100 ವರ್ಷಕ್ಕೂ ಮೇಲ್ಪಟ್ಟು ಹೋರಾಡಿತು. ಅಂಬೇಡ್ಕರರೂ ಅವಿಚ್ಛಿನ್ನವಾಗಿ ತಮ್ಮ ಜೀವಮಾನಪರ್ಯಂತ ಹಿಂದುಳಿದವರ, ಅಸ್ಪೃಶ್ಯರ, ಅರಣ್ಯವಾಸಿಗಳ ಸಂಘಟನೆ ಕೆಲಸದಲ್ಲಿ ತೊಡಗಿದ್ದರಿಂದ ಈಗ ದಲಿತರ ಸಂಘಟನೆ ಬಲಗೊಳ್ಳುತ್ತಿದೆ. ದಲಿತರಲ್ಲಿ ಜಾಗೃತಿ ಮೂಡಿದೆ.

ಕಾಂಗ್ರೆಸ್ ಅತಿ ದೀರ್ಘಕಾಲ ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಸಂಸ್ಥೆ. ಕಾಂಗ್ರೆಸ್ ಒಂದೇ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಸಂಸ್ಥೆ ಎಂಬುದನ್ನು ಕಾಂಗ್ರೆಸ್ ಎಂದೂ ಹೇಳಿಕೊಂಡಿಲ್ಲ. ಸ್ವಾತಂತ್ರ್ಯ ಹೋರಾಟಕ್ಕೆ ಹಿಂದು- ಮುಸ್ಲಿಂ ರಾಜರಾಣಿಗಳು, ಮುಸ್ಲಿಮ್ ಮತದ ರಾಜರಾದ ಹೈದರ್ ಟಿಪ್ಪುಗಳು, ಭಾರತೀಯ ಸೈನಿಕರು, ಐಎನ್‍ಎ, ದಲಿತರು, ಬೇಡರು ಎಲ್ಲರೂ ಕೈಜೋಡಿಸಿದ್ದಾರೆ.

ನಮ್ಮ ಈ ತಲೆಮಾರಿನವರು ಗಾಂಧಿ ಏನು ಮಾಡಿದರು? ಅಂಬೇಡ್ಕರ್ ಏನು ಮಾಡಿದರು ಎಂದು ಪ್ರಶ್ನಿಸುವುದನ್ನು ನಿಲ್ಲಿಸಬೇಕು. ಗಾಂಧಿ ಅಂಬೇಡ್ಕರರ ಚಾರಿತ್ರ್ಯವಧೆ ಮಾಡುವ ಕೆಲಸ ಮಾಡಬಾರದು. ಹೀಗೆ ನಾವು ಕಿತ್ತಾಡುವುದರಿಂದ ಮೋದಿ ಅವರಿಗೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಾವು ಅವಕಾಶ ಮಾಡಿಕೊಟ್ಟಂತಾಗುತ್ತದೆ. ನೆಹರು ಅವರ ಮೇಲೆ ಸರ್ದಾರ್ ಪಟೇಲರನ್ನು ಎತ್ತಿ ಕಟ್ಟುವ ಮಟ್ಟಕ್ಕೆ ಅವರು ಹೋಗುತ್ತಾರೆ ಎಂಬ ಎಚ್ಚರಿಕೆ ನಮ್ಮ ಎಲ್ಲ ಸಂಘಟನೆಗಳಿಗೆ ಇರಲಿ ಎಂದು ನಾನು ಆಶಿಸುತ್ತೇನೆ.


ಇದನ್ನೂ ಓದಿ: ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...