Homeಎಚ್.ಎಸ್.ದೊರೆಸ್ವಾಮಿಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ರಾಷ್ಟ್ರೀಯ ಕಾಂಗ್ರೆಸ್ ಪಟ್ಟಾಗಿ ದೇಶದ ಸ್ವಾತಂತ್ರ್ಯಕ್ಕೆ 100 ವರ್ಷಕ್ಕೂ ಮೇಲ್ಪಟ್ಟು ಹೋರಾಡಿತು. ಅಂಬೇಡ್ಕರರೂ ಅವಿಚ್ಛಿನ್ನವಾಗಿ ತಮ್ಮ ಜೀವಮಾನಪರ್ಯಂತ ಹಿಂದುಳಿದವರ, ಅಸ್ಪೃಶ್ಯರ, ಅರಣ್ಯವಾಸಿಗಳ ಸಂಘಟನೆ ಕೆಲಸದಲ್ಲಿ ತೊಡಗಿದ್ದರು.

- Advertisement -
- Advertisement -

ಕೆಲವು ಮೌಲ್ಯಗಳಿಗಾಗಿ ಅಂಬೇಡ್ಕರ್, ಮಹಾತ್ಮಾ ಗಾಂಧಿ ಮುಂತಾದ ಮಹಾನಾಯಕರನ್ನು ದೇಶದ ಜನ ಗೌರವಿಸುತ್ತಾರೆ. ಆದರೆ ನಮ್ಮ ಆಧುನಿಕ ಲೇಖಕರು, ಅಂಬೇಡ್ಕರ್ ಮತ್ತು ಗಾಂಧೀಜಿ ಇಬ್ಬರೂ ವಿರೋಧಿಗಳು ಎಂಬಂತೆ ಬಿಂಬಿಸಲು ಪಣತೊಟ್ಟಿದ್ದಾರೆ. ತಮ್ಮ ಜೀವಿತ ಕಾಲದಲ್ಲಿ ಈ ಮಹನೀಯರು ತುಂಬ ಸಾಧನೆ ಮಾಡಿದ್ದಾರೆ. ಅದಕ್ಕಾಗಿ ನಾವು ಅವರಿಗೆ ಗೌರವ ಸಲ್ಲಿಸಬೇಕೆ ಹೊರತು ಅವರನ್ನು ಕಡು ವಿರೋಧಿಗಳು ಎಂದು ಬಿಂಬಿಸಿ ಜನರ ಮನಸ್ಸಿನಲ್ಲಿ ವಿಷ ತುಂಬುವುದು ಶ್ರೇಯಸ್ಕರವಲ್ಲ. ಆ ಮಹನೀಯರಲ್ಲಿದ್ದ ವೈಚಾರಿಕ ವ್ಯತ್ಯಾಸವನ್ನು ನಾವು ಪರಿಗಣಿಸುವುದು ಸರಿ ಆದರೆ ಅವರನ್ನು ಕಡುವೈರಿಗಳು ಎಂಬಂತೆ ಚಿತ್ರಿಸುವುದು ಇತಿಹಾಸಕ್ಕೆ ಅಪಮಾನ ಮಾಡಿದಂತೆ.

ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪಿಸಿದವರು ಆಲನ್ ಆಕ್ಟೇವಿಯನ್ ಹ್ಯೂಮ್ ಎಂಬ ಇಂಗ್ಲಿಷರು. ಅವರು ಈಸ್ಟ್ ಇಂಡಿಯಾ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದವರು. ನಾವು ಬ್ರಿಟನ್‍ನಲ್ಲಿ ಇಷ್ಟೊಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ, ಭಾರತೀಯರಿಗೂ ಆ ಸ್ವಾತಂತ್ರ್ಯ ಸಿಗಬೇಕು ಎನ್ನುವ ದೃಷ್ಟಿಯಿಂದ ರಾಷ್ಟ್ರೀಯ ಕಾಂಗ್ರೆಸ್ಸನ್ನು ಅವರು ಸ್ಥಾಪಿಸಿದರು. ಅಂದಿನ ಭಾರತದ ಮಹಾದಿಗ್ಗಜರಾದ ದಾದಾಭಾಯ್ ನವರೋಜಿ, ಫಿರೊಜ್‍ಷಾ ಮೆಹ್ತಾ ಮುಂತಾದವರು ರಾಷ್ಟ್ರೀಯ ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಅವರೆಲ್ಲ ಕ್ಲಾಸ್ ಲೀಡರ್‌ಗಳು. ಈ ಭಾರತೀಯ ದಿಗ್ಗಜಗಳ ಬಗೆಗೆ ಬ್ರಿಟಿಷ್ ಆಡಳಿತಗಾರರಿಗೆ ಬಹಳ ಗೌರವ ಇತ್ತು.

ಇವರು ಮೆಮೊರಂಡಂಗಳನ್ನು ತಯಾರು ಮಾಡಿ ಕಾಲ ಕಾಲಕ್ಕೆ ಬ್ರಿಟಿಷ್ ಸರ್ಕಾರಕ್ಕೆ ಕಳುಹಿಸಿಕೊಡುತ್ತಿದ್ದರು. ಆ ಮೆಮೊರಂಡಂಗಳಲ್ಲಿ ಭಾರತೀಯರಿಗೆ ಸರ್ಕಾರದಲ್ಲಿ ಕೆಲಸಗಳನ್ನು ಕೊಡಬೇಕು, ಬ್ರಿಟಿಷ್ ಮಿಲಿಟರಿಯಲ್ಲಿ ಭಾರತೀಯರಿಗೆ ಹುದ್ದೆಗಳನ್ನು ನೀಡಬೇಕು ಎನ್ನುವಂತಹ ಹತ್ತಾರು ಮನವಿಗಳನ್ನು ಸಲ್ಲಿಸುವ ಮೂಲಕ ಈ ಎಲ್ಲ ಸವಲತ್ತುಗಳನ್ನು ಭಾರತೀಯರೂ ಪಡೆಯುವಂತೆ ಮಾಡಿದರು. ಮುಂದೆ ಅಂಬೇಡ್ಕರರು ವಿದ್ಯಾವಂತರಾದ ಮೇಲೆ ಅವರೂ ಕೂಡ ಶೂದ್ರರು, ಅಸ್ಪೃಶ್ಯರು, ಆದಿವಾಸಿಗಳು, ದಲಿತರಿಗೆ ಆಡಳಿತದಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸುವ ಮೂಲಕ ಹಿಂದುಳಿದ ಜನಾಂಗದವರ ಮತ್ತು ಅಸ್ಪೃಶ್ಯರ ಹಕ್ಕು ಬಾಧ್ಯತೆಗಳನ್ನು ಪಡೆಯುವ ಅನೇಕ ಪ್ರಯತ್ನಗಳನ್ನು ಮಾಡಿದರು. ಕಾಂಗ್ರೆಸ್ ನಾಯಕರು ಭಾರತೀಯರೆಲ್ಲರ ಸಲುವಾಗಿ ಬೇಡಿಕೆಗಳನ್ನಿಟ್ಟರೆ ಅಂಬೇಡ್ಕರರು ಹಿಂದುಳಿದವರ, ದಲಿತರ ಪರವಾಗಿ ದನಿ ಎತ್ತುತ್ತಿದ್ದರು.

ಆ ನಂತರ ಗಾಂಧೀಜಿ ಭಾರತದ ರಾಜಕೀಯಕ್ಕೆ ಇಳಿದರು. ಅವರು 1916ರಲ್ಲೇ ದಕ್ಷಿಣ ಆಫ್ರಿಕದಿಂದ ಭಾರತಕ್ಕೆ ಬಂದರಾದರೂ ಕಾಂಗ್ರೆಸ್ಸಿನಲ್ಲಿ ಕ್ರಿಯಾಶೀಲರಾದದ್ದು 1920ರ ನಂತರ.

ಗಾಂಧೀಜಿ ಭಾರತಕ್ಕೆ ಹಿಂದಿರುಗಿದ ಕೂಡಲೇ ಅವರು ತಮ್ಮ ರಾಜಕೀಯ ಗುರುಗಳಾದ ಗೋಪಾಲಕೃಷ್ಣ ಗೋಖಲೆಯವರನ್ನು ಸಂದರ್ಶಿಸಿ ತಾವು ಭಾರತ ಕಾಂಗ್ರೆಸ್ಸಿನ ಚುಕ್ಕಾಣಿ ಹಿಡಿಯುವ ಇಂಗಿತವನ್ನು ತಮ್ಮ ಗುರುಗಳಲ್ಲಿ ನಿವೇದಿಸಿದರು. ಆಗ ಗೋಖಲೆಯವರು ‘ಕಾಂಗ್ರೆಸ್ಸಿನ ಚುಕ್ಕಾಣಿ ಹಿಡಿಯುವ ಮೊದಲು ಯಾರ ಸೇವೆ ಮಾಡಲು ನೀನು ನಿರ್ಧರಿಸಿದ್ದೀಯಾ ಆ ಜನರ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಬಾ. ಅದಕ್ಕಾಗಿ ಭಾರತವನ್ನೆಲ್ಲ ಒಂದು ಸಾರಿ ಸುತ್ತಿ ಬಾ’ ಎಂದರು. ಗಾಂಧೀಜಿ ಒಂದು ವರ್ಷ ಕಾಲ ಭಾರತವನ್ನು ಸುತ್ತಿಹಾಕಿದ್ದರಿಂದ ಅವರಿಗೆ ಭಾರತೀಯರನ್ನು ಬಡತನ ಕಿತ್ತು ತಿನ್ನುತ್ತಿದ್ದುರ ಅನುಭವವಾಯಿತು. ಬಡವರ ಸೇವೆಗೆ ತನ್ನ ಇಡೀ ಜೀವನವನ್ನು ಮುಡುಪಾಗಿಡುವುದಾಗಿ ನಿರ್ಧರಿಸಿದರು. ಸ್ವಾತಂತ್ರ್ಯದ ಗುರಿಯಾದರೂ. ಬಡತನವನ್ನು ನೀಗುವುದೇ ಆಗಿತ್ತು.

ಭಾರತದ ರಾಷ್ಟ್ರೀಯ ಕಾಂಗ್ರೆಸ್ಸಿನ ಮೊದಲ ಗುರಿ ‘ಡೊಮಿನಿಯನ್ ಸ್ಟೇಟಸ್’ ಆಗಿತ್ತು. ಇಂಗ್ಲಿಷರ ಆಡಳಿತದಲ್ಲೇ ಇದ್ದುಕೊಂಡು ಡೊಮಿನಿಯನ್ ಸ್ಟೇಟಸ್ ಅನುಭವಿಸುವ ವಿಚಾರ ಕಾಂಗ್ರೆಸ್ಸಿನದಾಗಿತ್ತು. ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಧಿಕಾರಕ್ಕೆ ಬಂದಮೇಲೂ ಭಾರತದ ಗುರಿ ಡೊಮಿನಿಯನ್ ಸ್ಟೇಟಸ್ ಪಡೆಯುವುದೇ ಆಗಿತ್ತು.

ಸುಭಾಷ್‍ಚಂದ್ರ ಬೋಸರು ಐಎಎಸ್‍ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಅವರು ಬ್ರಿಟಿಷರ ಅಧೀನದಲ್ಲಿ ಕೆಲಸ ಮಾಡಲು ಇಚ್ಛಿಸದೆ ಭಾರತಕ್ಕೆ ಹಿಂದಿರುಗಿದರು. ಕಾಂಗ್ರೆಸ್ಸಿನ ಸದಸ್ಯರಾದರು. ಸೈಮನ್ ಕಮಿಷನ್ ಭಾರತ ಪ್ರವಾಸ ಮಾಡಿದಾಗ ಬಂಗಾಳದಲ್ಲಿ ‘ಸೈಮನ್ ಗೋ ಬ್ಯಾಕ್’ ಚಳುವಳಿ ಆರಂಭಿಸಿದರು. ದೊಡ್ಡ ಯುವ ಪಡೆ ಕಟ್ಟಿ ಸೈಮನ್ ಕಮಿಷನ್ ಕಲ್ಕತ್ತೆಗೆ ಬಂದಾಗ ಕಪ್ಪು ಬಾವುಟ ಪ್ರದರ್ಶನ ನಡೆಸಿ ಸೆರೆಮನೆಗೆ ಹೋದರು. ಅದೇ ವರ್ಷ ಮದ್ರಾಸಿನಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಿತು. ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ಸುಭಾಷ್ ಹೋದರು. ಸಮ್ಮೇಳನದಲ್ಲಿ ಗಾಂಧಿಜಿ ರಾಷ್ಟ್ರೀಯ ಕಾಂಗ್ರೆಸ್ಸಿನ ಗುರಿ ಡೊಮಿನಿಯನ್ ಸ್ಟೇಟಸ್ ಎಂಬ ನಿರ್ಣಯವನ್ನು ಮಂಡಿಸಿದರು. ಸುಭಾಷ್‍ಚಂದ್ರ ಬೋಸ್ ರಾಷ್ಟ್ರೀಯ ಕಾಂಗ್ರೆಸ್ಸಿನ ಗುರಿ ‘ಪೂರ್ಣ ಸ್ವರಾಜ್ಯ’ ಎಂಬ ತಿದ್ದುಪಡಿಯನ್ನು ತಂದರು. ಕೆಲವೇ ಮತಗಳ ಅಂತರದಲ್ಲಿ ಗಾಂಧಿಯವರು ಮಂಡಿಸಿದ ನಿರ್ಣಯ ಅಂಗೀಕಾರವಾಯಿತು. ಆದರೆ ಗಾಂಧಿಜಿಗೆ ಅದರಿಂದ ಅರಿವಾಗಿ ಮುಂದಿನ ಅಧಿವೇಶನದಲ್ಲೇ ‘ಪೂರ್ಣ ಸ್ವರಾಜ್ಯ ರಾಷ್ಟ್ರೀಯ ಕಾಂಗ್ರೆಸ್ಸಿನ ಗುರಿ’ ಎಂಬ ನಿರ್ಣಯವನ್ನು ಮಂಡಿಸಿ ಅದಕ್ಕೆ ಮನ್ನಣೆ ಪಡೆದರು. ಇದು ಇತಿಹಾಸ.

Photo Courtesy: DailyO

ರಾಷ್ಟ್ರೀಯ ಕಾಂಗ್ರೆಸ್ ಪಟ್ಟಾಗಿ ದೇಶದ ಸ್ವಾತಂತ್ರ್ಯಕ್ಕೆ 100 ವರ್ಷಕ್ಕೂ ಮೇಲ್ಪಟ್ಟು ಹೋರಾಡಿತು. ಅಂಬೇಡ್ಕರರೂ ಅವಿಚ್ಛಿನ್ನವಾಗಿ ತಮ್ಮ ಜೀವಮಾನಪರ್ಯಂತ ಹಿಂದುಳಿದವರ, ಅಸ್ಪೃಶ್ಯರ, ಅರಣ್ಯವಾಸಿಗಳ ಸಂಘಟನೆ ಕೆಲಸದಲ್ಲಿ ತೊಡಗಿದ್ದರಿಂದ ಈಗ ದಲಿತರ ಸಂಘಟನೆ ಬಲಗೊಳ್ಳುತ್ತಿದೆ. ದಲಿತರಲ್ಲಿ ಜಾಗೃತಿ ಮೂಡಿದೆ.

ಕಾಂಗ್ರೆಸ್ ಅತಿ ದೀರ್ಘಕಾಲ ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಸಂಸ್ಥೆ. ಕಾಂಗ್ರೆಸ್ ಒಂದೇ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಸಂಸ್ಥೆ ಎಂಬುದನ್ನು ಕಾಂಗ್ರೆಸ್ ಎಂದೂ ಹೇಳಿಕೊಂಡಿಲ್ಲ. ಸ್ವಾತಂತ್ರ್ಯ ಹೋರಾಟಕ್ಕೆ ಹಿಂದು- ಮುಸ್ಲಿಂ ರಾಜರಾಣಿಗಳು, ಮುಸ್ಲಿಮ್ ಮತದ ರಾಜರಾದ ಹೈದರ್ ಟಿಪ್ಪುಗಳು, ಭಾರತೀಯ ಸೈನಿಕರು, ಐಎನ್‍ಎ, ದಲಿತರು, ಬೇಡರು ಎಲ್ಲರೂ ಕೈಜೋಡಿಸಿದ್ದಾರೆ.

ನಮ್ಮ ಈ ತಲೆಮಾರಿನವರು ಗಾಂಧಿ ಏನು ಮಾಡಿದರು? ಅಂಬೇಡ್ಕರ್ ಏನು ಮಾಡಿದರು ಎಂದು ಪ್ರಶ್ನಿಸುವುದನ್ನು ನಿಲ್ಲಿಸಬೇಕು. ಗಾಂಧಿ ಅಂಬೇಡ್ಕರರ ಚಾರಿತ್ರ್ಯವಧೆ ಮಾಡುವ ಕೆಲಸ ಮಾಡಬಾರದು. ಹೀಗೆ ನಾವು ಕಿತ್ತಾಡುವುದರಿಂದ ಮೋದಿ ಅವರಿಗೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಾವು ಅವಕಾಶ ಮಾಡಿಕೊಟ್ಟಂತಾಗುತ್ತದೆ. ನೆಹರು ಅವರ ಮೇಲೆ ಸರ್ದಾರ್ ಪಟೇಲರನ್ನು ಎತ್ತಿ ಕಟ್ಟುವ ಮಟ್ಟಕ್ಕೆ ಅವರು ಹೋಗುತ್ತಾರೆ ಎಂಬ ಎಚ್ಚರಿಕೆ ನಮ್ಮ ಎಲ್ಲ ಸಂಘಟನೆಗಳಿಗೆ ಇರಲಿ ಎಂದು ನಾನು ಆಶಿಸುತ್ತೇನೆ.


ಇದನ್ನೂ ಓದಿ: ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...