Homeಮುಖಪುಟರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿ, ಪೊಲೀಸರು ಏನು ಮಾಡಲಾಗುವುದಿಲ್ಲ. ರೈತರು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಹೊಂದಿದ್ದಾರೆ ಎಂದು ಸಿಜೆಐ ಎಸ್.ಎ ಬೋಬ್ಡೆ ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 22 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿ, ಪೊಲೀಸರು ಏನು ಮಾಡಲಾಗುವುದಿಲ್ಲ. ರೈತರು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಹೊಂದಿದ್ದಾರೆ ಎಂದು ಸಿಜೆಐ ಎಸ್.ಎ ಬೋಬ್ಡೆ ಹೇಳಿದ್ದಾರೆ.

ರೈತರು ದೆಹಲಿ ತಲುಪುವು ಎಲ್ಲಾ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಔಷಧಿ ಪೂರೈಕೆಗೆ ತಡೆಯಾಗಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಹೋರಾಟ ನಿರತರನ್ನು ರೈತರನ್ನು ಇಲ್ಲಿಂದ ಹೊರಗೆ ಕಳಿಸಬೇಕೆಂದು ಸುಪ್ರೀಂನಲ್ಲಿ ದಾಖಲಾದ ಸರಣಿ ಪಿಐಎಲ್‌ಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೆಹಲಿಯ ರಸ್ತೆಗಳನ್ನು ಮುಚ್ಚದೆ ರೈತರು ಪ್ರತಿಭಟನೆ ಮುಂದುವರೆಸಬಹುದು” ಎಂದಿದೆ.

ನಿನ್ನೆ ಈ ವಿಚಾರದ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಈ ಸಮಸ್ಯೆಯನ್ನು ನಿಭಾಯಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ, ಕೃಷಿಯ ಜ್ಞಾನ ಹೊಂದಿರುವ ಸ್ವತಂತ್ರ ಸದಸ್ಯರು ಮತ್ತು ಎರಡೂ ಕಡೆಯವರನ್ನು ಕೇಳಿ ಮತ್ತು ಏನು ಮಾಡಬೇಕೆಂಬುದರ ಬಗ್ಗೆ ವರದಿ ನೀಡಿ ಎಂದು ಎಸ್‌.ಎ ಬೋಬ್ಡೆ ತಿಳಿಸಿದ್ದರು.  ಮಾತುಕತೆಗಳಲ್ಲಿ ಕೇಂದ್ರವು ಯಶಸ್ವಿಯಾಗುವುದಿಲ್ಲ ಎಂದು ನಾವು ನಿನ್ನೆ ಗಮನಿಸಿದ್ದೇವೆ. ನಿಮ್ಮ ತೀರ್ಮಾನಗಳನ್ನು ರೈತರು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುವುದಿಲ್ಲ. ಸಮಿತಿ ತೀರ್ಮಾನಿಸಲಿ ಎಂದು ಬೋಡ್ಡೆ ಹೇಳಿದ್ದಾರೆ.

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.​

“ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಹಿಂಸಾಚಾರವಿಲ್ಲದೆ ಪ್ರತಿಭಟನೆಗಳು ಮುಂದುವರಿಯಬಹುದು ಹೀಗಾಗಿ ಪೊಲೀಸರು ಈ ಹೋರಾಟವನ್ನು ನಿಗ್ರಹಿಸಲು ಮುಂದಾಗುವುದು ಸರಿಯಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ತಿಳಿಸಿದ್ದಾರೆ.

“ಕೇವಲ ಪ್ರತಿಭಟನೆಗಾಗಿ ಪ್ರತಿಭಟನೆಗಳಾಗಬಾರದು. ಅವು ಕೃಷಿ ದೃಷ್ಟಿಕೋನದಿಂದ ಕೂಡಿರಬೇಕು ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹರೀಶ್​ ಸಾಳ್ವೆ ವಾದ ಮಂಡಿಸಿದಾಗ ಅದನ್ನೆ ನಾವು ಹೇಳುತ್ತಿರುವುದು ಎಂದು ಸುಪ್ರೀ ಕೋರ್ಟ್ ಹೇಳಿದೆ.

“ಪ್ರತಿಭಟನೆಯ ಉದ್ದೇಶವು ಅಹಿಂಸಾತ್ಮಕ ವಿಧಾನಗಳಿಂದ ಈಡೇರಬೇಕು. ಪ್ರತಿಭಟನೆಗಳು ಸಮಸ್ಯೆಗಳ ಬಗ್ಗೆ ಇರಬೇಕು. ಅನ್ಯಾಯಕ್ಕೊಳಗಾದವರಿಗೆ ಪ್ರತಿಭಟಿಸಲು ತಮ್ಮ ಪರವಾದ ನ್ಯಾಯವನ್ನು ಮಂಡಿಸಲು ಅವಕಾಶ ನೀಡಬೇಕು ಮತ್ತು ಸಮಸ್ಯೆಗೆ ಕಾರಣವಾದ ವ್ಯಕ್ತಿಗಳು ಅದಕ್ಕೆ ತಕ್ಕ ಉತ್ತರ ನೀಡಬೇಕು” ಎಂದು ಎಸ್‌.ಎ ಬೋಬ್ಡೆ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಔಷಧಿ ಪೂರೈಕೆಗೆ ತಡೆ, ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆ ಆರೋಪ: ಹೋರಾಟನಿರತ ರೈತರ ಮೇಲೆ ಸುಪ್ರೀಂನಲ್ಲಿ PIL

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...