Homeಕರ್ನಾಟಕ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ ತಿದ್ದುಪಡಿಗಳನ್ನು ತರಬೇಕಾದ ಅಗತ್ಯತೆಗಳ ಬಗ್ಗೆ ರೈತರು ತಮ್ಮ ಅಭಿಪ್ರಾಯಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ

- Advertisement -
- Advertisement -

“ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ಅವರು ಹೇಳಿರುವುದನ್ನು ರೈತರು ಸ್ವಾಗತಿಸಿದ್ದಾರೆ.

“ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕೇವಲ ಕೋಮು ಕೇಂದ್ರಿತವಾಗಿ ನೋಡಲಾಗುತ್ತಿತ್ತು. ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ಆದರೆ ಇದರಿಂದ ಇಡೀ ರೈತಾಪಿ ಸಮುದಾಯ ತೊಂದರೆಗೆ ಸಿಲುಕಿರುವುದು ಚರ್ಚೆಯಾಗಿರಲಿಲ್ಲ. ಈ ನಿಟ್ಟಿನಲ್ಲಿ ಸಚಿವರು ಇಟ್ಟಿರುವ ಹೆಜ್ಜೆ ಸ್ವಾಗತಾರ್ಹ” ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಕೆ.ವೆಂಕಟೇಶ್, “ಈಗ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೋಣ ಮತ್ತು ಎಮ್ಮೆಗಳ ವಧೆಗೆ ಅವಕಾಶವಿದೆ. ಆದರೆ ಹಸುವನ್ನು ಕಡಿಯಲು ಅವಕಾಶ ಇಲ್ಲ. ಹಸುವನ್ನು ಯಾಕೆ ಕಡಿಯಬಾರದು? ಈ ಕಾಯ್ದೆಯಿಂದಾಗಿ ರೈತರಿಗೆ ಬಹಳ ತೊಂದರೆ ಆಗುತ್ತಿದೆ. ಸ್ವತಃ ನಾನು ಹಸುವನ್ನು ಸಾಕಿದ್ದೇನೆ. ಒಂದು ಹಸು ಸತ್ತುಹೋದಾಗ ಅದನ್ನು ಮಣ್ಣು ಮಾಡಲು ಕಷ್ಟಪಡಬೇಕಾಯಿತು. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ಕ್ರಮ ಜರುಗಿಸುತ್ತೇವೆ” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, “ಗೋಹತ್ಯೆ ನಿಷೇಧ ಹಿಂಪಡೆಯುವ ಮುನ್ನ ಕಾಂಗ್ರೆಸ್ಸಿನವರು ಗೋಹತ್ಯೆಯ ಬಗ್ಗೆ ಗಾಂಧೀಜಿಯವರ ನಿಲುವು ಏನಿತ್ತು ಎಂಬುದನ್ನು ತಿಳಿಯಲಿ” ಎಂದಿದ್ದಾರೆ.

ರಾಜಕೀಯ ಹಗ್ಗಜಗ್ಗಾಟ ಏನೇ ಇರಲಿ, ರಾಜ್ಯದ ರೈತಾಪಿ ಸಮುದಾಯ ಸಚಿವರ ಹೇಳಿಕೆಯನ್ನು ಮುಕ್ತವಾಗಿ ನೋಡುತ್ತಿದೆ.

ಇದನ್ನೂ ಓದಿರಿ: ಮಂಡ್ಯ: ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ನಿಧನ; ವಾರದಲ್ಲಿ 3ನೇ ಪ್ರಕರಣ

ರೈತರ ಮನದಾಳದ ಮಾತುಗಳು

ಮಂಡ್ಯ ಜಿಲ್ಲೆಯ ರೈತ ನಗರಕೆರೆ ಜಗದೀಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು. “ಇತಿಹಾಸ ಪ್ರಸಿದ್ಧ ಮುಡುಕುತೊರೆ ಜಾತ್ರೆಯಲ್ಲಿ ಮಾರಾಟ ಮಾಡಲೆಂದು ಮಳವಳ್ಳಿ ರೈತನೊಬ್ಬ ಹಸುಗಳನ್ನು ಸಾಗಣೆ ಮಾಡುವಾಗ ಇಲ್ಲಿನ ಪೊಲೀಸರು ತಡೆದರು. ಗೋರಕ್ಷಣೆಯ ಹೆಸರಿನಲ್ಲಿ ದಾಂಧಲೆ ಎಬ್ಬಿಸುವವರೇನೂ ಅಲ್ಲಿರಲಿಲ್ಲ. ಸರ್ಕಾರದ ಭಾಗವಾಗಿರುವ ಪೊಲೀಸರೇ ತೊಂದರೆ ಕೊಟ್ಟರು. ಜಾತ್ರೆಯಲ್ಲಿ ಮಾರಲೆಂದು ತೆಗೆದುಕೊಂಡು ಹೋಗುತ್ತಿದ್ದೇವೆ ಎಂದರೂ ಕೇಳಲಿಲ್ಲ. ಮೈಸೂರಿನಲ್ಲಿರುವ ಗೋಶಾಲೆಯೊಂದಕ್ಕೆ ಹಸುಗಳನ್ನು ಎಳೆದುಕೊಂಡು ಹೋದರು. ಅದರ ಪಾಲನೆಗಾಗಿ ಪ್ರತಿ ದಿನ ಮುನ್ನೂರು ರೂಪಾಯಿ ಕಟ್ಟುವಂತೆ ರೈತನನ್ನು ಒತ್ತಾಯಿಸಲಾಯಿತು. ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿತ್ತು. ದಿನವೂ ಹಣ ಕಟ್ಟಲಾಗದೆ ಮನನೊಂದ ರೈತ, ಈ ಹಸುಗಳು ನನ್ನವಲ್ಲ ಎಂದು ಬರೆದುಕೊಟ್ಟು ತಪ್ಪಿಸಿಕೊಂಡ. ಸಾಗಣೆಗಾಗಿ ತರಲಾಗಿದ್ದ ವಾಹನದ ಮಾಲೀಕ ಜಾಮೀನು ಪಡೆಯಲೆಂದೇ 50,000 ರೂಪಾಯಿ ಖರ್ಚು ಮಾಡಿದ. ಈಗಲೂ ಕೋರ್ಟು ಕಚೇರಿ ಅಲೆಯುತ್ತಿದ್ದಾನೆ” ಎಂದು ವಿಷಾದಿಸಿದರು.

“ದನದ ಮಾಂಸ ಮಾರುವ ಮುಸ್ಲಿಮರಿಗೆ ತೊಂದರೆಯಾಗುತ್ತಿದೆ ಎಂಬುದಷ್ಟೇ ಮೇಲುನೋಟಕ್ಕೆ ಚರ್ಚೆಯಾಗುತ್ತಿದೆ. ಆದರೆ ರೈತರಿಗೆ ಆಗುತ್ತಿರುವ ನಷ್ಟ ಮಾತ್ರ ಯಾರ ಗಮನಕ್ಕೂ ಬರುತ್ತಿಲ್ಲ. ನಮ್ಮ ಮನೆಯಲ್ಲಿನ ಒಂದು ಹಸುವಿನ ಕಾಲು ಮುರಿಯಿತು. ಅದನ್ನು ಮಾರಾಟ ಮಾಡಬೇಕಾದಾಗ ಸಾಕಷ್ಟು ತೊಂದರೆಯಾಯಿತು. ಕಾನೂನಿನಲ್ಲಿ ಬದಲಾವಣೆ ತಂದರೆ ರೈತರಿಗೆ ಅನುಕೂಲವಾಗುತ್ತದೆ” ಎಂದರು.

“ಹಸುವಿನಿಂದ ಉಪಯೋಗವಿಲ್ಲದಿದ್ದಾಗ ಅವುಗಳನ್ನು ಸಾಕುವ ಕಷ್ಟವೇನೆಂದು ರೈತರಿಗೆ ಮಾತ್ರ ಗೊತ್ತು. ಮೊದಲೆಲ್ಲ ಇಪ್ಪತ್ತು ಮೂವತ್ತು ಹಸುಗಳನ್ನು ಸಾಕಿಕೊಳ್ಳುತ್ತಿದ್ದವರು ಈಗ ತಮ್ಮ ಮನೆಗಷ್ಟೇ ಅವಶ್ಯಕತೆ ಇರುವಷ್ಟು ಹಸುಗಳನ್ನು ಕಟ್ಟಿಕೊಂಡಿದ್ದಾರೆ. ಹಸುವೊಂದು ಮೂರು ತಿಂಗಳು ಹಾಲು ನೀಡುವುದನ್ನು ನಿಲ್ಲಿಸಿದರೂ ಭಾರವೆನಿಸುತ್ತದೆ. ಮೂರು ತಿಂಗಳ ಕಾಲ ಪೋಷಣೆಯಲ್ಲಿ ಯಾವುದೇ ಕೊರತೆ ಮಾಡುವಂತಿಲ್ಲ. ಹಿಂಡಿ, ಬೂಸಾವನ್ನು ಹಾಕಲೇಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಾಲು ಕಡಿಮೆಯಾಗುತ್ತದೆ. ಹೀಗಿರುವಾಗ ಗಂಡು ಕರುಗಳನ್ನು, ಕಾಲು ಮುರಿದುಕೊಂಡ ಹಸುಗಳನ್ನು ಇಟ್ಟುಕೊಂಡು ಏನು ಮಾಡೋಣ?” ಎಂದು ಪ್ರಶ್ನಿಸಿದರು.

“ಮೊದಲೆಲ್ಲ ಗೊಡ್ಡು ಹಸುಗಳನ್ನೂ ಇಟ್ಟುಕೊಳ್ಳಲಾಗುತ್ತಿತ್ತು. ಏಕೆಂದರೆ ಗೋಮಾಳಗಳು ಇದ್ದವು. ಹೇಗೋ ಮೇವು ಸಿಗುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಗೋಮಾಳಗಳು ಇಲ್ಲವಾಗಿವೆ. ಕಾನೂನಿನಲ್ಲಿ ತಿದ್ದುಪಡಿ ತಂದರೆ ಮೊದಲು ಅನುಕೂಲವಾಗುವುದು ರೈತರಿಗೆ” ಎಂದು ಸ್ಪಷ್ಟಪಡಿಸಿದರು.

ಮದ್ದೂರು ಪಟ್ಟಣದ ರೈತರಾದ ದಿವಾಕರ್‌ ತಮ್ಮ ಕಷ್ಟಗಳನ್ನು ‘ನಾನುಗೌರಿ.ಕಾಂ’ ಜೊತೆಯಲ್ಲಿ ಹಂಚಿಕೊಂಡರು. “ಪ್ರಯೋಜನವಿಲ್ಲದ ಹಸುವನ್ನು ಇಂದಿನ ಪರಿಸ್ಥಿತಿಯಲ್ಲಿ ಪೋಷಿಸುವುದು ಕಷ್ಟ. ಮನುಷ್ಯರನ್ನು ಸಾಕುವುದು ಸುಲಭ. ಗೋವುಗಳ ವಿಚಾರದಲ್ಲಿ ಈ ಮಾತನ್ನು ಹೇಳಲಾಗದು. ಹಸುಗಳನ್ನು ಗೋಶಾಲೆಗೆ ಹೊಡೆದು ಹಿಂಸೆ ಕೊಟ್ಟು ಸಾಯಿಸಲಾಗುತ್ತಿದೆ. ಮೇವು, ನೀರಿಲ್ಲದೆ ಅವುಗಳು ಸೊರಗುತ್ತವೆ. ಇದನ್ನೆಲ್ಲ ಕಣ್ಣಿಂದಲೇ ನೋಡಿದ್ದೇವೆ. ಹಾಗೆ ಸಾಯಿಸುವುದಕ್ಕಿಂತ ನೇರವಾಗಿ ಮಾಂಸ ಮಾರಾಟಗಾರರಿಗೆ ಮಾರುವುದು ಉತ್ತಮ. ನಾಲ್ಕಾರು ಜನರಾದರೂ ತಿನ್ನುತ್ತಾರೆ” ಎಂದು ಆಶಿಸಿದರು.

“ಗೋವಿನ ಮಾಂಸ ಸಿಗದಿದ್ದಾಗ ಮಟನ್ ಬೆಲೆ ಹೆಚ್ಚಾಯಿತು. ಹಸು ಸಾಕುವುದಕ್ಕಿಂತ ಕುರಿ, ಮೇಕೆ ಸಾಕುವುದು ಸೂಕ್ತ ಎಂಬ ನಿರ್ಧಾರಕ್ಕೆ ರೈತ ಬಂದನು. 2003-04ರಲ್ಲಿ ಒಂದು ಕಂತೆ ಮೇವಿಗೆ ಮೂರರಿಂದ ನಾಲ್ಕು ರೂಪಾಯಿ ಇತ್ತು. ಕೆಲವು ರೈತರು ತಮ್ಮ ಗದ್ದೆಗಳಲ್ಲಿಯೇ ಉಚಿವಾಗಿ ಮೇವು ಕೊಟ್ಟುಬಿಡುತ್ತಿದ್ದರು. ಇಂದು ಒಂದು ಕಂತೆ ಮೇವಿಗೆ 50 ರೂಪಾಯಿ ಆಗಿದೆ. ಒಂದು ಹಸುವಿಗೆ ದಿನಕ್ಕೆ ಒಂದು ಹೊರೆ ಹಸಿ ಹುಲ್ಲು, ಎರಡು ಹೊರೆ ಒಣ ಹುಲ್ಲು ಹಾಕಬೇಕು. ಒಂದು ಟೈಮ್‌ಗೆ ಎರಡೂವರೆ ಕೆ.ಜಿ. ಹಿಂಡಿಯನ್ನು ನೀಡಬೇಕು. ಒಂದು ಕೆ.ಜಿ. ಹಿಂಡಿಯ ಬೆಲೆ ಕನಿಷ್ಠ 35 ರೂಪಾಯಿ ಇದೆ. ಹೀಗಿರುವಾಗ ಹೇಗೆ ಹಸುಗಳನ್ನು ಸಾಕುವುದು?” ಎಂದು ಕೇಳಿದರು.

ಇದನ್ನೂ ಓದಿರಿ: ನಮ್ಮ ಸಚಿವರಿವರು: ಸಭ್ಯ ರಾಜಕಾರಣಕ್ಕೆ ಮತ್ತೊಂದು ಹೆಸರೇ ‘ಕೆ.ವೆಂಕಟೇಶ್‌’

“2013ರಿಂದಲೂ ಹಾಲಿನ ಬೆಲೆಯಲ್ಲಿ ಚೇತರಿಕೆ ಕಂಡಿಲ್ಲ. ಬೇಸಿಗೆ ವೇಳೆ ಪ್ರತಿ ಲೀಟರ್‌ ಹಾಲಿನ ಬೆಲೆ ಹೆಚ್ಚೆಂದರೆ 27 ರೂಪಾಯಿ ಆಗುತ್ತದೆ. ಮಳೆಗಾಲ ಬಂತೆಂದರೆ ಹಾಲಿನ ಬೆಲೆ 23- 24 ರೂ.ವರೆಗೂ ಕುಸಿಯುತ್ತದೆ. ಹಾಲಿನ ಗುಣಮಟ್ಟ ಸರಿ ಇಲ್ಲ ಎಂಬ ತಕರಾರು ತೆಗೆಯುತ್ತಾರೆ. ಇದೆಲ್ಲ ನೋಡಿದರೆ ಹಸುಗಳನ್ನು ಯಾಕೆ ಸಾಕಬೇಕು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಒಂದು ಕಾಲದಲ್ಲಿ ಹತ್ತು ಹಸುಗಳನ್ನು ಸಾಕಿಕೊಂಡಿದ್ದ ನಾನು ಈಗ ಮನೆಯ ಅಗತ್ಯಕ್ಕೆ ಸಾಕೆಂದು ಒಂದು ಹಸು ಕಟ್ಟಿಕೊಂಡಿದ್ದೇನಷ್ಟೇ” ಎಂದು ತಮ್ಮ ಸಂಕಷ್ಟಗಳನ್ನು ವಿವರಿಸಿದರು.

ಮತ್ತೊಬ್ಬ ರೈತರಾದ ಕರೋಟಿ ತಮ್ಮಣ್ಣ ಮಾತನಾಡಿ, “ಹಸುಗಳನ್ನು ಸಾಕಲೆಂದು ಗೋ ಶಾಲೆಗಳನ್ನು ಸರ್ಕಾರ ಮಾಡಿದೆ. ಈ ಶಾಲೆಗಳು ಗೋವುಗಳಿಗೆ ನರಕವಾಗಿವೆ. ಇವುಗಳಿಗೆ ಸುರಿಯುವ ಹಣವನ್ನು ರೈತರಿಗೆ, ಹೈನುಗಾರಿಕೆ ಮಾಡುವವರಿಗೆ ಸಹಾಯಧನವಾಗಿ ನೀಡಿದರೆ ಗೋವಿನ ರಕ್ಷಣೆಯಾಗುತ್ತದೆ” ಎಂದರು.

ಮುಂದುವರಿದು, “ಹಸುಗಳನ್ನು ಸಾಕುವ ರೈತರು ಅವುಗಳಿಗೆ ವಯಸ್ಸಾದಾಗ ಮಾರಾಟ ಮಾಡಿ ಹಣವನ್ನು ದುಂದು ವೆಚ್ಚ ಮಾಡುತ್ತಿರಲಿಲ್ಲ. ಮತ್ತೊಂದು ಹಸುವನ್ನು ತಂದು ಸಾಕುತ್ತಿದ್ದನು. ಗೋಹತ್ಯೆ ನಿಷೇಧ ಕಾಯ್ದೆ ಬಂದ ಮೇಲೆ ಮಾರಾಟ ಕುಸಿಯಿತು. ಕದ್ದು ಮಾರಾಟ ಮಾಡುವಂತಾಯಿತು. ಹೈನುಗಾರಿಕೆ ಮಾಡುವವನಿಗೆ ಬಹುದೊಡ್ಡ ನಷ್ಟವಾಯಿತು. ಕಾನೂನು ತಿದ್ದುಪಡಿಯಾದರೆ ಸಾಕುವವನಿಗೂ ಮತ್ತು ಮಾರುವವನಿಗೂ ಇಬ್ಬರಿಗೂ ಅನುಕೂಲವಾಗುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...