Homeಕರ್ನಾಟಕರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಹೋರಾಟ ಮುಂದುವರಿಯುತ್ತದೆ ಎಂದು ಹೋರಾಟ ಸಮಿತಿ ತಿಳಿಸಿದೆ

- Advertisement -
- Advertisement -

ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ಮೋದಿ ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಭಾರಿ ದೊಡ್ಡ ವಿಜಯವಾಗಿದೆ ಎಂದು ‘ಸಂಯುಕ್ತ ಹೋರಾಟ ಕರ್ನಾಟಕ’ ಶುಕ್ರವಾರ ಹೇಳಿದೆ. ಮಳೆ, ಚಳಿ, ಬಿಸಿಲು, ಬೆದರಿಕೆಗಳನ್ನು ಲೆಕ್ಕಿಸದೇ ದೆಹಲಿಯ ಗಡಿಗಳಲ್ಲಿ ಸತತ ಒಂದು ವರ್ಷದಿಂದ ಹೋರಾಟ ನಡೆಸಿ ಹೋರಾಟದ ಗೆಲುವಿಗೆ ಕಾರಣಿಭೂತರಾದ ಲಕ್ಷಾಂತರ ರೈತರು ಹಾಗು ಇದರ ಭಾಗವಾಗಿ ದೇಶಾದ್ಯಂತ ವ್ಯಾಪಕ ಹೋರಾಟ ನಡೆಸಿದ ರೈತರು, ದಲಿತರು, ಕಾರ್ಮಿಕರನ್ನು ‘ಸಂಯುಕ್ತ ಹೋರಾಟ ಕರ್ನಾಟಕ’ ಅಭಿನಂದಿಸಿದೆ.

ಈ ಬಗ್ಗೆ ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ‘ಸಂಯುಕ್ತ ಹೋರಾಟ ಕರ್ನಾಟಕ’, “ಪ್ರಧಾನಿ ಮೋದಿ ಮೂರು ಕರಾಳ ಕೃಷಿ ಕಾಯ್ದೆಗಳ ವಾಪಸಾತಿ ಮಾಡುವುದಾಗಿ ಮಾತ್ರ ಘೋಷಣೆ ಮಾಡಿದ್ದಾರೆ. ಆದರೆ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ರಚನೆಯ ಬಗ್ಗೆ ಹಾಗು ವಿದ್ಯುತ್‌ ಕ್ಷೇತ್ರದ ಸಂಪೂರ್ಣ ಖಾಸಗಿಕರಣಕ್ಕೆ ಅವಕಾಶ ಮಾಡಿಕೊಡುವ ವಿದ್ಯುತ್‌ ಮಸೂದೆ-2020 ರ ವಾಪಸಾತಿಯ ಬಗ್ಗೆ ಮೌನ ವಹಿಸಿದ್ದಾರೆ. ಈ ಬೇಡಿಕೆಗಳನ್ನು ಸಹ ಈಡೇರಿಸಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ಇದನ್ನೂ ಓದಿ: ವಿವಾದಿತ ಕೃಷಿ ಕಾನೂನುಗಳು ವಾಪಸ್: ರೈತರ ಸಂಭ್ರಮ ವಿಡಿಯೋ ಮತ್ತು ಚಿತ್ರಗಳಲ್ಲಿ

ಬಿಜೆಪಿ ರಾಜ್ಯ ಸರ್ಕಾರವೂ ಮೋದಿಯವರ ದಾರಿಯಲ್ಲಿ ಹೆಜ್ಜೆ ಹಾಕಬೇಕು:

ರೈತರ ಒ೦ದು ವರ್ಷದ ಸತತ ಹೋರಾಟದ ಕಾರಣದಿಂದ ಪ್ರಧಾನಿಗೆ ತಮ್ಮ ತಪ್ಪಿನ ಅರಿವು ಆಗಿದ್ದು, ಈ ಕಾರಣಕ್ಕಾಗಿ ಕರಾಳ ಕೃಷಿ ಕಾಯ್ದೆ ವಾಪಸ್ಸು ಪಡೆದಿದ್ದಾರೆ ಎಂದು ಹೇಳಿರುವ ‘ಸಂಯುಕ್ತ ಹೋರಾಟ’ವು, ಮೋದಿಯ ದಾರಿಯಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಕೂಡಾ ಹೆಜ್ಜೆ ಇಡಬೇಕು ಎಂದು ತಿಳಿಸಿದೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ಮೋದಿಯ ಹಾದಿಯಲ್ಲಿ ಹೆಜ್ಜೆ ಹಾಕಿ, ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿಗಳನ್ನು ಕೂಡಲೇ ರದ್ದು ಮಾಡಬೇಕು” ಎಂದು ಸಂಯುಕ್ತ ಹೋರಾಟ-ಕರ್ನಾಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಇಲ್ಲವೆಂದಾದಲ್ಲಿ ರಾಜ್ಯದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದೆ೦ದು ಸಂಯುಕ್ತ ಹೋರಾಟ ಕರ್ನಾಟಕ ಎಚ್ಚರಿಕೆ ನೀಡಿದೆ.

ಹೋರಾಟ ಮುಂದುವರಿಯುತ್ತದೆ 

ಕೇಂದ್ರದಲ್ಲಿ ಕನಿಷ್ಠ ಬೆಂಬಲ ಬೆಲೆ ಖಾತರಿಯ ಕಾನೂನು, ವಿದ್ಯುತ್‌ ಮಸೂದೆ-2020 ರ ವಾಪಸಾತಿ ಹಾಗು ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗಳ ವಾಪಸಾತಿ, ಕಾರ್ಮಿಕ ಸಂಹಿತೆ ರದ್ಧತಿ, ಸಾರ್ವಜನಿಕ ಉದ್ಯಮಗಳ ಖಾಸಗೀಕರಣಕ್ಕೆ ತಡೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಿಯಂತ್ರಣ, ಸತತ ಮಳೆಯಿಂದ ಬೆಳೆ ನಷ್ಟಕ್ಕೆ ಪರಿಹಾರ, ಹಾಲಿನ ದರ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವ ತನಕ ರಾಜ್ಯದಲ್ಲಿ ಹೋರಾಟವನ್ನು ಮುಂದುವರಿಸಲು ಸಂಯುಕ್ತ ಹೋರಾಟ- ಕರ್ನಾಟಕ ನಿರ್ಧರಿಸಿದೆ ಎಂದು ಹೇಳಿದೆ.

ನವೆಂಬರ್‌ 26 ರ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ 

ದಿಲ್ಲಿಯ ರೈತ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿಯನ್ನು ಘೋಷಿಸಲಾಗಿತ್ತು. ಈ ಕುರಿತು ನಾಳೆ ಬೆಂಗಳೂರಿನಲ್ಲಿ ಸಂಯುಕ್ತ ಹೋರಾಟ-ಕರ್ನಾಟಕದ ಪ್ರತಿಕಾಗೋಷ್ಠಿಯಲ್ಲಿ ಹೋರಾಟದ ರೂಪರೇಷಗಳನ್ನು ಘೋಷಣೆ ಮಾಡಲಾಗುವುದು ಎಂದು ಹೋರಾಟ ಸಮಿತಿ ತಿಳಿಸಿದೆ. ಘೋಷಣೆ ಮಾಡಲಾಗುವುದು ಎಂದು ಹೋರಾಟ ಸಮಿತಿ  tiLiside ತಿಳಿಸಿದೆ. 

ಇದನ್ನೂ ಓದಿ: ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...