Homeಕರ್ನಾಟಕ‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

- Advertisement -
- Advertisement -

ಬೆಂಗಳೂರು: ಮಧ್ಯ ಭಾರತದ ಬಸ್ತಾರ್ ಪ್ರದೇಶವು ಕಳೆದ ಕೆಲವು ತಿಂಗಳುಗಳಿಂದ ಸರ್ಕಾರದ ಸಶಸ್ತ್ರ ಪಡೆಗಳು ಮತ್ತು ಆದಿವಾಸಿಗಳ ನಡುವಿನ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ‘ಆಪರೇಷನ್ ಕಾಗರ್’ ಎಂಬ ಕಾರ್ಯಾಚರಣೆಯು ನಕ್ಸಲರ ನಿಗ್ರಹದ ಹೆಸರಿನಲ್ಲಿ ಬುಡಕಟ್ಟು ಸಮುದಾಯಗಳ ಮೇಲೆ ನಡೆಸುತ್ತಿರುವ ದಮನಕಾರಿ ಕ್ರಮವಾಗಿದೆ. ಇದು ಸಂವಿಧಾನದ ಆಶಯಗಳನ್ನು ಬದಿಗಿಟ್ಟು ನಡೆಯುತ್ತಿರುವ ಯುದ್ಧವಿದ್ದಂತೆ. ಈ ಪರಿಸ್ಥಿತಿಯು ಮೂಲನಿವಾಸಿಗಳ ಬದುಕು ಮತ್ತು ಸಂವಿಧಾನದ ಮೇಲಿನ ನಂಬಿಕೆಯನ್ನು ಅಲುಗಾಡಿಸಿದೆ,” ಎಂದು ಛತ್ತೀಸ್‌ಗಡದ ಆದಿವಾಸಿಗಳ ಪರ ಹೋರಾಟಗಾರ್ತಿ ಸೋನಿ ಸೋರಿ ಹೇಳಿದರು.

ಶನಿವಾರ ಬೆಂಗಳೂರಿನ ಆಶೀರ್ವದ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಲಿ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಂಘರ್ಷದ ಮೂಲ ಕಾರ್ಪೊರೇಟ್ ಬಂಡವಾಳಶಾಹಿಗಳ ಹಿತಾಸಕ್ತಿ ಎಂದು ಬಲವಾಗಿ ಪ್ರತಿಪಾದಿಸಿದರು. “ದಂಡಕಾರಣ್ಯದಲ್ಲಿ ಅಡಗಿರುವ ರೂ.70 ಲಕ್ಷ ಕೋಟಿ ಮೌಲ್ಯದ ಖನಿಜ ಸಂಪತ್ತೇ ಈ ಯುದ್ಧಕ್ಕೆ ಮೂಲ ಕಾರಣ. ಈ ಸಂಪತ್ತನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸುವ ಉದ್ದೇಶದಿಂದಲೇ ಆಪರೇಷನ್ ಕಾಗರ್ ಜಾರಿಗೊಳಿಸಲಾಗಿದೆ ಎಂಬುದು ಮಾನವ ಹಕ್ಕುಗಳ ಕಾರ್ಯಕರ್ತರ ದೃಢವಾದ ನಂಬಿಕೆ,” ಎಂದರು.

ಸೋನಿ ಸೋರಿ ಅವರ ಪ್ರಕಾರ, ಅಭಿವೃದ್ಧಿಯ ಹೆಸರಿನಲ್ಲಿ ಬುಡಕಟ್ಟು ಜನಾಂಗದವರು ಶತಮಾನಗಳಿಂದ ವಾಸಿಸುತ್ತಿರುವ ಪ್ರದೇಶಗಳನ್ನು ನಾಶ ಮಾಡಲಾಗುತ್ತಿದೆ. ಇದು ಅವರ ಸಾಂಸ್ಕೃತಿಕ ಪರಂಪರೆ, ಸ್ವಯಂ ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕುಗಳಿಗೆ ಗಂಭೀರ ಅಪಾಯ ತಂದೊಡ್ಡಿದೆ. “ಬುಡಕಟ್ಟು ಜನಾಂಗದವರ ಬದುಕುವ ಹಕ್ಕನ್ನು ಹರಣ ಮಾಡಲಾಗುತ್ತಿದ್ದು, ಇದು ಸಂವಿಧಾನದ ಮೂಲಭೂತ ಹಕ್ಕುಗಳನ್ನೇ ಕಡೆಗಣಿಸಿದಂತಾಗಿದೆ,” ಎಂದು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಕಲಿ ಎನ್‌ಕೌಂಟರ್‌ಗಳು ಮತ್ತು ಸತ್ಯಶೋಧನೆಗೆ ನಿರಾಕರಣೆ

ಮಾತು ಮುಂದುವರೆಸಿದ ಸೋನಿ, ಈ ಕಾರ್ಯಾಚರಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ವ್ಯಾಪಕವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು. “ಕಳೆದ ಒಂದು ವರ್ಷದಲ್ಲೇ ನಡೆದ 70ಕ್ಕೂ ಹೆಚ್ಚು ಎನ್‌ಕೌಂಟರ್‌ಗಳಲ್ಲಿ 600ಕ್ಕೂ ಹೆಚ್ಚು ಮಾವೋವಾದಿಗಳು ಮತ್ತು ಆದಿವಾಸಿಗಳನ್ನು ಕೊಲ್ಲಲಾಗಿದೆ ಎಂದು ಸರ್ಕಾರ ಹೇಳಿದರೂ, ಈ ಕುರಿತು ಯಾವುದೇ ತನಿಖೆ ನಡೆದಿಲ್ಲ. ಎನ್‌ಕೌಂಟರ್‌ಗಳು ನಕಲಿ ಎಂದು ನಮ್ಮ ಸಮುದಾಯದಲ್ಲಿ ಎಲ್ಲರಿಗೂ ಗೊತ್ತು. ಆಪರೇಷನ್ ಕಾಗರ್ ಪ್ರಾರಂಭವಾದಾಗಿನಿಂದ, ಯಾವುದೇ ಮಾನವ ಹಕ್ಕುಗಳ ಸಂಘಟನೆ ಅಥವಾ ಸ್ವತಂತ್ರ ಸತ್ಯಶೋಧನಾ ತಂಡಕ್ಕೆ ಬಸ್ತಾರ್‌ಗೆ ಭೇಟಿ ನೀಡಲು ಅವಕಾಶ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಈ ರೀತಿಯ ನಿಯಂತ್ರಣವು ಅದರ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದು ಮಾನವ ಹಕ್ಕುಗಳ ಸಂಘಟನೆಗಳ ಕಾರ್ಯವೈಖರಿಗೆ ದೊಡ್ಡ ಅಡ್ಡಿಯಾಗಿದೆ,” ಎಂದು ಅವರು ವಿವರಿಸಿದರು.

ಶಾಂತಿ ಮಾತುಕತೆಗಳ ನಿರಾಕರಣೆ

ಸೋನಿ ಸೋರಿ ಅವರು, ಆದಿವಾಸಿಗಳು ದಶಕಗಳ ಕಾಲ ಹೋರಾಡಿ ಪಡೆದ ಕಾನೂನುಗಳಾದ 1996ರ ಪೆಸಾ ಕಾಯ್ದೆ ಮತ್ತು 2006ರ ಅರಣ್ಯ ಹಕ್ಕು ಕಾಯ್ದೆಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಪಾದಿಸಿದರು. “ಈ ಕಾಯ್ದೆಗಳನ್ನು ತಿದ್ದುಪಡಿಗಳ ಹೆಸರಿನಲ್ಲಿ ದುರ್ಬಲಗೊಳಿಸಲಾಗುತ್ತಿದೆ. ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ, ನಮ್ಮನ್ನು ನಕ್ಸಲೀಯರೆಂದು ಬಂಧಿಸಲಾಗುತ್ತದೆ ಅಥವಾ ಗುಂಡಿಕ್ಕಿ ಕೊಲ್ಲಲಾಗುತ್ತದೆ. ಕಳೆದ 35 ವರ್ಷಗಳಲ್ಲಿ 8,000ಕ್ಕೂ ಹೆಚ್ಚು ಆದಿವಾಸಿ ಜನರನ್ನು ನಕಲಿ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲಾಗಿದೆ, ಆದರೆ ಯಾವುದೇ ತನಿಖೆ ನಡೆದಿಲ್ಲ. ರಾಜಕೀಯ ನಾಯಕರ ಪಾತ್ರವನ್ನು ಪೊಲೀಸರೇ ನಿರ್ವಹಿಸುತ್ತಿರುವ ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಸಂಪೂರ್ಣವಾಗಿ ನಶಿಸಿವೆ,” ಎಂದರು.

ಶಾಂತಿ ಮಾತುಕತೆಗಳ ಅಸಮರ್ಥತೆಯ ಕುರಿತು ಮಾತನಾಡಿದ ಅವರು, “ಒಂದೆಡೆ, ಮಾವೋವಾದಿ ಪಕ್ಷವು ಶಾಂತಿ ಮಾತುಕತೆಗಳಿಗೆ ಸಿದ್ಧವಿರುವುದಾಗಿ ಘೋಷಿಸಿ, ಅಖಿಲ ಭಾರತ ಮತ್ತು ರಾಜ್ಯ ಮಟ್ಟದಲ್ಲಿ ಶಾಂತಿ ಸಮಿತಿಗಳನ್ನು ರಚಿಸಲು ಪ್ರಯತ್ನಿಸುತ್ತಿದೆ. ಆದರೆ ಸರ್ಕಾರವು ‘ಹತ್ಯೆ ಮಾಡುತ್ತೇವೆ, ನಿರ್ಮೂಲನೆ ಮಾಡುತ್ತೇವೆ’ ಎಂಬ ಧೋರಣೆ ಹೊಂದಿದೆ. ಈ ನಿರ್ದಯಿ ನಿಲುವಿನಿಂದಾಗಿ ಶಾಂತಿಯುತ ಪರಿಹಾರದ ಅವಕಾಶಗಳು ಕಳೆದುಹೋಗುತ್ತಿವೆ,” ಎಂದು ವಿಷಾದ ವ್ಯಕ್ತಪಡಿಸಿದರು. ಹಲವಾರು ರಾಜಕೀಯ ವಿರೋಧ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಶಾಂತಿ ಮಾತುಕತೆ ನಡೆಸುವಂತೆ ಒತ್ತಾಯಿಸಿದರೂ, ಹತ್ಯಾಕಾಂಡಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ನಮ್ಮ ಜವಾಬ್ದಾರಿ

ಕೊನೆಯಲ್ಲಿ, ಸೋನಿ ಸೋರಿ ಅವರು ಎಲ್ಲರಿಗೂ ಒಂದು ಪ್ರಮುಖ ಕರೆ ನೀಡಿದರು. “ಸಂವಿಧಾನದ ಐದನೇ ಮತ್ತು ಆರನೇ ಶೆಡ್ಯೂಲ್‌ಗಳ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಮಾತ್ರ ಬುಡಕಟ್ಟು ಜನಾಂಗದವರ ಪರಿಸ್ಥಿತಿ ಸುಧಾರಿಸಬಹುದು. ಆದರೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಇರುವ ವಿಶೇಷ ಅಧಿಕಾರಗಳನ್ನು ಸರಿಯಾಗಿ ಬಳಸುತ್ತಿಲ್ಲ. ಈ ಎಲ್ಲಾ ಅಧಿಕಾರಗಳನ್ನು ಪ್ರಸ್ತುತ ಸರ್ಕಾರವು ತನ್ನ ಕೈಯಲ್ಲಿ ಹಿಡಿದಿಟ್ಟುಕೊಂಡಿದೆ,” ಎಂದರು.

“ಆಪರೇಷನ್ ಕಾಗರ್ ಅನ್ನು ತಕ್ಷಣವೇ ನಿಲ್ಲಿಸಿ, ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಈ ಯುದ್ಧವು ಬುಡಕಟ್ಟು ಜನರ ಬದುಕನ್ನು ಮಾತ್ರವಲ್ಲದೆ, ದೇಶದ ಪ್ರಜಾಪ್ರಭುತ್ವ ಮತ್ತು ಮಾನವೀಯತೆಯ ಮೌಲ್ಯಗಳನ್ನೂ ನಾಶ ಮಾಡುತ್ತಿದೆ. ಸರ್ಕಾರಗಳು ಸರ್ವಾಧಿಕಾರಿ ಪ್ರವೃತ್ತಿಗಳನ್ನು ಬಿಟ್ಟು, ಶಾಂತಿ ಮತ್ತು ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಅನುಸರಿಸಬೇಕು. ಆದಿವಾಸಿಗಳ ಹಕ್ಕುಗಳು ಮತ್ತು ಜೀವಗಳನ್ನು ರಕ್ಷಿಸಲು, ಶಾಂತಿ ಮಾತುಕತೆಯ ಮೂಲಕ ಕದನ ವಿರಾಮ ಘೋಷಿಸುವುದು ಪ್ರಜಾಪ್ರಭುತ್ವದ ಕರ್ತವ್ಯ. ಈ ಚಳುವಳಿಯನ್ನು ನಿರ್ಮಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ,” ಎಂದು ಸೋನಿ ಸೋರಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ಪ್ರತ್ಯೇಕ ಒಳಮೀಸಲಾತಿ ಇಲ್ಲ ಎಂದಿದ್ದಕ್ಕೆ ಫ್ರೀಡಂ ಪಾರ್ಕಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಲೆಮಾರಿ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...