Homeಕರ್ನಾಟಕ‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

- Advertisement -
- Advertisement -

ಬೆಂಗಳೂರು: ಮಧ್ಯ ಭಾರತದ ಬಸ್ತಾರ್ ಪ್ರದೇಶವು ಕಳೆದ ಕೆಲವು ತಿಂಗಳುಗಳಿಂದ ಸರ್ಕಾರದ ಸಶಸ್ತ್ರ ಪಡೆಗಳು ಮತ್ತು ಆದಿವಾಸಿಗಳ ನಡುವಿನ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ‘ಆಪರೇಷನ್ ಕಾಗರ್’ ಎಂಬ ಕಾರ್ಯಾಚರಣೆಯು ನಕ್ಸಲರ ನಿಗ್ರಹದ ಹೆಸರಿನಲ್ಲಿ ಬುಡಕಟ್ಟು ಸಮುದಾಯಗಳ ಮೇಲೆ ನಡೆಸುತ್ತಿರುವ ದಮನಕಾರಿ ಕ್ರಮವಾಗಿದೆ. ಇದು ಸಂವಿಧಾನದ ಆಶಯಗಳನ್ನು ಬದಿಗಿಟ್ಟು ನಡೆಯುತ್ತಿರುವ ಯುದ್ಧವಿದ್ದಂತೆ. ಈ ಪರಿಸ್ಥಿತಿಯು ಮೂಲನಿವಾಸಿಗಳ ಬದುಕು ಮತ್ತು ಸಂವಿಧಾನದ ಮೇಲಿನ ನಂಬಿಕೆಯನ್ನು ಅಲುಗಾಡಿಸಿದೆ,” ಎಂದು ಛತ್ತೀಸ್‌ಗಡದ ಆದಿವಾಸಿಗಳ ಪರ ಹೋರಾಟಗಾರ್ತಿ ಸೋನಿ ಸೋರಿ ಹೇಳಿದರು.

ಶನಿವಾರ ಬೆಂಗಳೂರಿನ ಆಶೀರ್ವದ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಲಿ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಂಘರ್ಷದ ಮೂಲ ಕಾರ್ಪೊರೇಟ್ ಬಂಡವಾಳಶಾಹಿಗಳ ಹಿತಾಸಕ್ತಿ ಎಂದು ಬಲವಾಗಿ ಪ್ರತಿಪಾದಿಸಿದರು. “ದಂಡಕಾರಣ್ಯದಲ್ಲಿ ಅಡಗಿರುವ ರೂ.70 ಲಕ್ಷ ಕೋಟಿ ಮೌಲ್ಯದ ಖನಿಜ ಸಂಪತ್ತೇ ಈ ಯುದ್ಧಕ್ಕೆ ಮೂಲ ಕಾರಣ. ಈ ಸಂಪತ್ತನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸುವ ಉದ್ದೇಶದಿಂದಲೇ ಆಪರೇಷನ್ ಕಾಗರ್ ಜಾರಿಗೊಳಿಸಲಾಗಿದೆ ಎಂಬುದು ಮಾನವ ಹಕ್ಕುಗಳ ಕಾರ್ಯಕರ್ತರ ದೃಢವಾದ ನಂಬಿಕೆ,” ಎಂದರು.

ಸೋನಿ ಸೋರಿ ಅವರ ಪ್ರಕಾರ, ಅಭಿವೃದ್ಧಿಯ ಹೆಸರಿನಲ್ಲಿ ಬುಡಕಟ್ಟು ಜನಾಂಗದವರು ಶತಮಾನಗಳಿಂದ ವಾಸಿಸುತ್ತಿರುವ ಪ್ರದೇಶಗಳನ್ನು ನಾಶ ಮಾಡಲಾಗುತ್ತಿದೆ. ಇದು ಅವರ ಸಾಂಸ್ಕೃತಿಕ ಪರಂಪರೆ, ಸ್ವಯಂ ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕುಗಳಿಗೆ ಗಂಭೀರ ಅಪಾಯ ತಂದೊಡ್ಡಿದೆ. “ಬುಡಕಟ್ಟು ಜನಾಂಗದವರ ಬದುಕುವ ಹಕ್ಕನ್ನು ಹರಣ ಮಾಡಲಾಗುತ್ತಿದ್ದು, ಇದು ಸಂವಿಧಾನದ ಮೂಲಭೂತ ಹಕ್ಕುಗಳನ್ನೇ ಕಡೆಗಣಿಸಿದಂತಾಗಿದೆ,” ಎಂದು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಕಲಿ ಎನ್‌ಕೌಂಟರ್‌ಗಳು ಮತ್ತು ಸತ್ಯಶೋಧನೆಗೆ ನಿರಾಕರಣೆ

ಮಾತು ಮುಂದುವರೆಸಿದ ಸೋನಿ, ಈ ಕಾರ್ಯಾಚರಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ವ್ಯಾಪಕವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು. “ಕಳೆದ ಒಂದು ವರ್ಷದಲ್ಲೇ ನಡೆದ 70ಕ್ಕೂ ಹೆಚ್ಚು ಎನ್‌ಕೌಂಟರ್‌ಗಳಲ್ಲಿ 600ಕ್ಕೂ ಹೆಚ್ಚು ಮಾವೋವಾದಿಗಳು ಮತ್ತು ಆದಿವಾಸಿಗಳನ್ನು ಕೊಲ್ಲಲಾಗಿದೆ ಎಂದು ಸರ್ಕಾರ ಹೇಳಿದರೂ, ಈ ಕುರಿತು ಯಾವುದೇ ತನಿಖೆ ನಡೆದಿಲ್ಲ. ಎನ್‌ಕೌಂಟರ್‌ಗಳು ನಕಲಿ ಎಂದು ನಮ್ಮ ಸಮುದಾಯದಲ್ಲಿ ಎಲ್ಲರಿಗೂ ಗೊತ್ತು. ಆಪರೇಷನ್ ಕಾಗರ್ ಪ್ರಾರಂಭವಾದಾಗಿನಿಂದ, ಯಾವುದೇ ಮಾನವ ಹಕ್ಕುಗಳ ಸಂಘಟನೆ ಅಥವಾ ಸ್ವತಂತ್ರ ಸತ್ಯಶೋಧನಾ ತಂಡಕ್ಕೆ ಬಸ್ತಾರ್‌ಗೆ ಭೇಟಿ ನೀಡಲು ಅವಕಾಶ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಈ ರೀತಿಯ ನಿಯಂತ್ರಣವು ಅದರ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದು ಮಾನವ ಹಕ್ಕುಗಳ ಸಂಘಟನೆಗಳ ಕಾರ್ಯವೈಖರಿಗೆ ದೊಡ್ಡ ಅಡ್ಡಿಯಾಗಿದೆ,” ಎಂದು ಅವರು ವಿವರಿಸಿದರು.

ಶಾಂತಿ ಮಾತುಕತೆಗಳ ನಿರಾಕರಣೆ

ಸೋನಿ ಸೋರಿ ಅವರು, ಆದಿವಾಸಿಗಳು ದಶಕಗಳ ಕಾಲ ಹೋರಾಡಿ ಪಡೆದ ಕಾನೂನುಗಳಾದ 1996ರ ಪೆಸಾ ಕಾಯ್ದೆ ಮತ್ತು 2006ರ ಅರಣ್ಯ ಹಕ್ಕು ಕಾಯ್ದೆಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಪಾದಿಸಿದರು. “ಈ ಕಾಯ್ದೆಗಳನ್ನು ತಿದ್ದುಪಡಿಗಳ ಹೆಸರಿನಲ್ಲಿ ದುರ್ಬಲಗೊಳಿಸಲಾಗುತ್ತಿದೆ. ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ, ನಮ್ಮನ್ನು ನಕ್ಸಲೀಯರೆಂದು ಬಂಧಿಸಲಾಗುತ್ತದೆ ಅಥವಾ ಗುಂಡಿಕ್ಕಿ ಕೊಲ್ಲಲಾಗುತ್ತದೆ. ಕಳೆದ 35 ವರ್ಷಗಳಲ್ಲಿ 8,000ಕ್ಕೂ ಹೆಚ್ಚು ಆದಿವಾಸಿ ಜನರನ್ನು ನಕಲಿ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲಾಗಿದೆ, ಆದರೆ ಯಾವುದೇ ತನಿಖೆ ನಡೆದಿಲ್ಲ. ರಾಜಕೀಯ ನಾಯಕರ ಪಾತ್ರವನ್ನು ಪೊಲೀಸರೇ ನಿರ್ವಹಿಸುತ್ತಿರುವ ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಸಂಪೂರ್ಣವಾಗಿ ನಶಿಸಿವೆ,” ಎಂದರು.

ಶಾಂತಿ ಮಾತುಕತೆಗಳ ಅಸಮರ್ಥತೆಯ ಕುರಿತು ಮಾತನಾಡಿದ ಅವರು, “ಒಂದೆಡೆ, ಮಾವೋವಾದಿ ಪಕ್ಷವು ಶಾಂತಿ ಮಾತುಕತೆಗಳಿಗೆ ಸಿದ್ಧವಿರುವುದಾಗಿ ಘೋಷಿಸಿ, ಅಖಿಲ ಭಾರತ ಮತ್ತು ರಾಜ್ಯ ಮಟ್ಟದಲ್ಲಿ ಶಾಂತಿ ಸಮಿತಿಗಳನ್ನು ರಚಿಸಲು ಪ್ರಯತ್ನಿಸುತ್ತಿದೆ. ಆದರೆ ಸರ್ಕಾರವು ‘ಹತ್ಯೆ ಮಾಡುತ್ತೇವೆ, ನಿರ್ಮೂಲನೆ ಮಾಡುತ್ತೇವೆ’ ಎಂಬ ಧೋರಣೆ ಹೊಂದಿದೆ. ಈ ನಿರ್ದಯಿ ನಿಲುವಿನಿಂದಾಗಿ ಶಾಂತಿಯುತ ಪರಿಹಾರದ ಅವಕಾಶಗಳು ಕಳೆದುಹೋಗುತ್ತಿವೆ,” ಎಂದು ವಿಷಾದ ವ್ಯಕ್ತಪಡಿಸಿದರು. ಹಲವಾರು ರಾಜಕೀಯ ವಿರೋಧ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಶಾಂತಿ ಮಾತುಕತೆ ನಡೆಸುವಂತೆ ಒತ್ತಾಯಿಸಿದರೂ, ಹತ್ಯಾಕಾಂಡಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ನಮ್ಮ ಜವಾಬ್ದಾರಿ

ಕೊನೆಯಲ್ಲಿ, ಸೋನಿ ಸೋರಿ ಅವರು ಎಲ್ಲರಿಗೂ ಒಂದು ಪ್ರಮುಖ ಕರೆ ನೀಡಿದರು. “ಸಂವಿಧಾನದ ಐದನೇ ಮತ್ತು ಆರನೇ ಶೆಡ್ಯೂಲ್‌ಗಳ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಮಾತ್ರ ಬುಡಕಟ್ಟು ಜನಾಂಗದವರ ಪರಿಸ್ಥಿತಿ ಸುಧಾರಿಸಬಹುದು. ಆದರೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಇರುವ ವಿಶೇಷ ಅಧಿಕಾರಗಳನ್ನು ಸರಿಯಾಗಿ ಬಳಸುತ್ತಿಲ್ಲ. ಈ ಎಲ್ಲಾ ಅಧಿಕಾರಗಳನ್ನು ಪ್ರಸ್ತುತ ಸರ್ಕಾರವು ತನ್ನ ಕೈಯಲ್ಲಿ ಹಿಡಿದಿಟ್ಟುಕೊಂಡಿದೆ,” ಎಂದರು.

“ಆಪರೇಷನ್ ಕಾಗರ್ ಅನ್ನು ತಕ್ಷಣವೇ ನಿಲ್ಲಿಸಿ, ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಈ ಯುದ್ಧವು ಬುಡಕಟ್ಟು ಜನರ ಬದುಕನ್ನು ಮಾತ್ರವಲ್ಲದೆ, ದೇಶದ ಪ್ರಜಾಪ್ರಭುತ್ವ ಮತ್ತು ಮಾನವೀಯತೆಯ ಮೌಲ್ಯಗಳನ್ನೂ ನಾಶ ಮಾಡುತ್ತಿದೆ. ಸರ್ಕಾರಗಳು ಸರ್ವಾಧಿಕಾರಿ ಪ್ರವೃತ್ತಿಗಳನ್ನು ಬಿಟ್ಟು, ಶಾಂತಿ ಮತ್ತು ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಅನುಸರಿಸಬೇಕು. ಆದಿವಾಸಿಗಳ ಹಕ್ಕುಗಳು ಮತ್ತು ಜೀವಗಳನ್ನು ರಕ್ಷಿಸಲು, ಶಾಂತಿ ಮಾತುಕತೆಯ ಮೂಲಕ ಕದನ ವಿರಾಮ ಘೋಷಿಸುವುದು ಪ್ರಜಾಪ್ರಭುತ್ವದ ಕರ್ತವ್ಯ. ಈ ಚಳುವಳಿಯನ್ನು ನಿರ್ಮಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ,” ಎಂದು ಸೋನಿ ಸೋರಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ಪ್ರತ್ಯೇಕ ಒಳಮೀಸಲಾತಿ ಇಲ್ಲ ಎಂದಿದ್ದಕ್ಕೆ ಫ್ರೀಡಂ ಪಾರ್ಕಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಲೆಮಾರಿ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...