Homeಕರ್ನಾಟಕ‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

- Advertisement -
- Advertisement -

ಬೆಂಗಳೂರು: ಮಧ್ಯ ಭಾರತದ ಬಸ್ತಾರ್ ಪ್ರದೇಶವು ಕಳೆದ ಕೆಲವು ತಿಂಗಳುಗಳಿಂದ ಸರ್ಕಾರದ ಸಶಸ್ತ್ರ ಪಡೆಗಳು ಮತ್ತು ಆದಿವಾಸಿಗಳ ನಡುವಿನ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ‘ಆಪರೇಷನ್ ಕಾಗರ್’ ಎಂಬ ಕಾರ್ಯಾಚರಣೆಯು ನಕ್ಸಲರ ನಿಗ್ರಹದ ಹೆಸರಿನಲ್ಲಿ ಬುಡಕಟ್ಟು ಸಮುದಾಯಗಳ ಮೇಲೆ ನಡೆಸುತ್ತಿರುವ ದಮನಕಾರಿ ಕ್ರಮವಾಗಿದೆ. ಇದು ಸಂವಿಧಾನದ ಆಶಯಗಳನ್ನು ಬದಿಗಿಟ್ಟು ನಡೆಯುತ್ತಿರುವ ಯುದ್ಧವಿದ್ದಂತೆ. ಈ ಪರಿಸ್ಥಿತಿಯು ಮೂಲನಿವಾಸಿಗಳ ಬದುಕು ಮತ್ತು ಸಂವಿಧಾನದ ಮೇಲಿನ ನಂಬಿಕೆಯನ್ನು ಅಲುಗಾಡಿಸಿದೆ,” ಎಂದು ಛತ್ತೀಸ್‌ಗಡದ ಆದಿವಾಸಿಗಳ ಪರ ಹೋರಾಟಗಾರ್ತಿ ಸೋನಿ ಸೋರಿ ಹೇಳಿದರು.

ಶನಿವಾರ ಬೆಂಗಳೂರಿನ ಆಶೀರ್ವದ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಲಿ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಂಘರ್ಷದ ಮೂಲ ಕಾರ್ಪೊರೇಟ್ ಬಂಡವಾಳಶಾಹಿಗಳ ಹಿತಾಸಕ್ತಿ ಎಂದು ಬಲವಾಗಿ ಪ್ರತಿಪಾದಿಸಿದರು. “ದಂಡಕಾರಣ್ಯದಲ್ಲಿ ಅಡಗಿರುವ ರೂ.70 ಲಕ್ಷ ಕೋಟಿ ಮೌಲ್ಯದ ಖನಿಜ ಸಂಪತ್ತೇ ಈ ಯುದ್ಧಕ್ಕೆ ಮೂಲ ಕಾರಣ. ಈ ಸಂಪತ್ತನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸುವ ಉದ್ದೇಶದಿಂದಲೇ ಆಪರೇಷನ್ ಕಾಗರ್ ಜಾರಿಗೊಳಿಸಲಾಗಿದೆ ಎಂಬುದು ಮಾನವ ಹಕ್ಕುಗಳ ಕಾರ್ಯಕರ್ತರ ದೃಢವಾದ ನಂಬಿಕೆ,” ಎಂದರು.

ಸೋನಿ ಸೋರಿ ಅವರ ಪ್ರಕಾರ, ಅಭಿವೃದ್ಧಿಯ ಹೆಸರಿನಲ್ಲಿ ಬುಡಕಟ್ಟು ಜನಾಂಗದವರು ಶತಮಾನಗಳಿಂದ ವಾಸಿಸುತ್ತಿರುವ ಪ್ರದೇಶಗಳನ್ನು ನಾಶ ಮಾಡಲಾಗುತ್ತಿದೆ. ಇದು ಅವರ ಸಾಂಸ್ಕೃತಿಕ ಪರಂಪರೆ, ಸ್ವಯಂ ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕುಗಳಿಗೆ ಗಂಭೀರ ಅಪಾಯ ತಂದೊಡ್ಡಿದೆ. “ಬುಡಕಟ್ಟು ಜನಾಂಗದವರ ಬದುಕುವ ಹಕ್ಕನ್ನು ಹರಣ ಮಾಡಲಾಗುತ್ತಿದ್ದು, ಇದು ಸಂವಿಧಾನದ ಮೂಲಭೂತ ಹಕ್ಕುಗಳನ್ನೇ ಕಡೆಗಣಿಸಿದಂತಾಗಿದೆ,” ಎಂದು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಕಲಿ ಎನ್‌ಕೌಂಟರ್‌ಗಳು ಮತ್ತು ಸತ್ಯಶೋಧನೆಗೆ ನಿರಾಕರಣೆ

ಮಾತು ಮುಂದುವರೆಸಿದ ಸೋನಿ, ಈ ಕಾರ್ಯಾಚರಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ವ್ಯಾಪಕವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು. “ಕಳೆದ ಒಂದು ವರ್ಷದಲ್ಲೇ ನಡೆದ 70ಕ್ಕೂ ಹೆಚ್ಚು ಎನ್‌ಕೌಂಟರ್‌ಗಳಲ್ಲಿ 600ಕ್ಕೂ ಹೆಚ್ಚು ಮಾವೋವಾದಿಗಳು ಮತ್ತು ಆದಿವಾಸಿಗಳನ್ನು ಕೊಲ್ಲಲಾಗಿದೆ ಎಂದು ಸರ್ಕಾರ ಹೇಳಿದರೂ, ಈ ಕುರಿತು ಯಾವುದೇ ತನಿಖೆ ನಡೆದಿಲ್ಲ. ಎನ್‌ಕೌಂಟರ್‌ಗಳು ನಕಲಿ ಎಂದು ನಮ್ಮ ಸಮುದಾಯದಲ್ಲಿ ಎಲ್ಲರಿಗೂ ಗೊತ್ತು. ಆಪರೇಷನ್ ಕಾಗರ್ ಪ್ರಾರಂಭವಾದಾಗಿನಿಂದ, ಯಾವುದೇ ಮಾನವ ಹಕ್ಕುಗಳ ಸಂಘಟನೆ ಅಥವಾ ಸ್ವತಂತ್ರ ಸತ್ಯಶೋಧನಾ ತಂಡಕ್ಕೆ ಬಸ್ತಾರ್‌ಗೆ ಭೇಟಿ ನೀಡಲು ಅವಕಾಶ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಈ ರೀತಿಯ ನಿಯಂತ್ರಣವು ಅದರ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದು ಮಾನವ ಹಕ್ಕುಗಳ ಸಂಘಟನೆಗಳ ಕಾರ್ಯವೈಖರಿಗೆ ದೊಡ್ಡ ಅಡ್ಡಿಯಾಗಿದೆ,” ಎಂದು ಅವರು ವಿವರಿಸಿದರು.

ಶಾಂತಿ ಮಾತುಕತೆಗಳ ನಿರಾಕರಣೆ

ಸೋನಿ ಸೋರಿ ಅವರು, ಆದಿವಾಸಿಗಳು ದಶಕಗಳ ಕಾಲ ಹೋರಾಡಿ ಪಡೆದ ಕಾನೂನುಗಳಾದ 1996ರ ಪೆಸಾ ಕಾಯ್ದೆ ಮತ್ತು 2006ರ ಅರಣ್ಯ ಹಕ್ಕು ಕಾಯ್ದೆಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಪಾದಿಸಿದರು. “ಈ ಕಾಯ್ದೆಗಳನ್ನು ತಿದ್ದುಪಡಿಗಳ ಹೆಸರಿನಲ್ಲಿ ದುರ್ಬಲಗೊಳಿಸಲಾಗುತ್ತಿದೆ. ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ, ನಮ್ಮನ್ನು ನಕ್ಸಲೀಯರೆಂದು ಬಂಧಿಸಲಾಗುತ್ತದೆ ಅಥವಾ ಗುಂಡಿಕ್ಕಿ ಕೊಲ್ಲಲಾಗುತ್ತದೆ. ಕಳೆದ 35 ವರ್ಷಗಳಲ್ಲಿ 8,000ಕ್ಕೂ ಹೆಚ್ಚು ಆದಿವಾಸಿ ಜನರನ್ನು ನಕಲಿ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲಾಗಿದೆ, ಆದರೆ ಯಾವುದೇ ತನಿಖೆ ನಡೆದಿಲ್ಲ. ರಾಜಕೀಯ ನಾಯಕರ ಪಾತ್ರವನ್ನು ಪೊಲೀಸರೇ ನಿರ್ವಹಿಸುತ್ತಿರುವ ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಸಂಪೂರ್ಣವಾಗಿ ನಶಿಸಿವೆ,” ಎಂದರು.

ಶಾಂತಿ ಮಾತುಕತೆಗಳ ಅಸಮರ್ಥತೆಯ ಕುರಿತು ಮಾತನಾಡಿದ ಅವರು, “ಒಂದೆಡೆ, ಮಾವೋವಾದಿ ಪಕ್ಷವು ಶಾಂತಿ ಮಾತುಕತೆಗಳಿಗೆ ಸಿದ್ಧವಿರುವುದಾಗಿ ಘೋಷಿಸಿ, ಅಖಿಲ ಭಾರತ ಮತ್ತು ರಾಜ್ಯ ಮಟ್ಟದಲ್ಲಿ ಶಾಂತಿ ಸಮಿತಿಗಳನ್ನು ರಚಿಸಲು ಪ್ರಯತ್ನಿಸುತ್ತಿದೆ. ಆದರೆ ಸರ್ಕಾರವು ‘ಹತ್ಯೆ ಮಾಡುತ್ತೇವೆ, ನಿರ್ಮೂಲನೆ ಮಾಡುತ್ತೇವೆ’ ಎಂಬ ಧೋರಣೆ ಹೊಂದಿದೆ. ಈ ನಿರ್ದಯಿ ನಿಲುವಿನಿಂದಾಗಿ ಶಾಂತಿಯುತ ಪರಿಹಾರದ ಅವಕಾಶಗಳು ಕಳೆದುಹೋಗುತ್ತಿವೆ,” ಎಂದು ವಿಷಾದ ವ್ಯಕ್ತಪಡಿಸಿದರು. ಹಲವಾರು ರಾಜಕೀಯ ವಿರೋಧ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಶಾಂತಿ ಮಾತುಕತೆ ನಡೆಸುವಂತೆ ಒತ್ತಾಯಿಸಿದರೂ, ಹತ್ಯಾಕಾಂಡಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ನಮ್ಮ ಜವಾಬ್ದಾರಿ

ಕೊನೆಯಲ್ಲಿ, ಸೋನಿ ಸೋರಿ ಅವರು ಎಲ್ಲರಿಗೂ ಒಂದು ಪ್ರಮುಖ ಕರೆ ನೀಡಿದರು. “ಸಂವಿಧಾನದ ಐದನೇ ಮತ್ತು ಆರನೇ ಶೆಡ್ಯೂಲ್‌ಗಳ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಮಾತ್ರ ಬುಡಕಟ್ಟು ಜನಾಂಗದವರ ಪರಿಸ್ಥಿತಿ ಸುಧಾರಿಸಬಹುದು. ಆದರೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಇರುವ ವಿಶೇಷ ಅಧಿಕಾರಗಳನ್ನು ಸರಿಯಾಗಿ ಬಳಸುತ್ತಿಲ್ಲ. ಈ ಎಲ್ಲಾ ಅಧಿಕಾರಗಳನ್ನು ಪ್ರಸ್ತುತ ಸರ್ಕಾರವು ತನ್ನ ಕೈಯಲ್ಲಿ ಹಿಡಿದಿಟ್ಟುಕೊಂಡಿದೆ,” ಎಂದರು.

“ಆಪರೇಷನ್ ಕಾಗರ್ ಅನ್ನು ತಕ್ಷಣವೇ ನಿಲ್ಲಿಸಿ, ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಈ ಯುದ್ಧವು ಬುಡಕಟ್ಟು ಜನರ ಬದುಕನ್ನು ಮಾತ್ರವಲ್ಲದೆ, ದೇಶದ ಪ್ರಜಾಪ್ರಭುತ್ವ ಮತ್ತು ಮಾನವೀಯತೆಯ ಮೌಲ್ಯಗಳನ್ನೂ ನಾಶ ಮಾಡುತ್ತಿದೆ. ಸರ್ಕಾರಗಳು ಸರ್ವಾಧಿಕಾರಿ ಪ್ರವೃತ್ತಿಗಳನ್ನು ಬಿಟ್ಟು, ಶಾಂತಿ ಮತ್ತು ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಅನುಸರಿಸಬೇಕು. ಆದಿವಾಸಿಗಳ ಹಕ್ಕುಗಳು ಮತ್ತು ಜೀವಗಳನ್ನು ರಕ್ಷಿಸಲು, ಶಾಂತಿ ಮಾತುಕತೆಯ ಮೂಲಕ ಕದನ ವಿರಾಮ ಘೋಷಿಸುವುದು ಪ್ರಜಾಪ್ರಭುತ್ವದ ಕರ್ತವ್ಯ. ಈ ಚಳುವಳಿಯನ್ನು ನಿರ್ಮಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ,” ಎಂದು ಸೋನಿ ಸೋರಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ಪ್ರತ್ಯೇಕ ಒಳಮೀಸಲಾತಿ ಇಲ್ಲ ಎಂದಿದ್ದಕ್ಕೆ ಫ್ರೀಡಂ ಪಾರ್ಕಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಲೆಮಾರಿ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...