Homeಚಳವಳಿದಮನಿಸುವವರನ್ನು ಮನೆಗೆ ಕಳಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಲಿ: ಡಾ. ದರ್ಶನ್‌ ಪಾಲ್‌

ದಮನಿಸುವವರನ್ನು ಮನೆಗೆ ಕಳಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಲಿ: ಡಾ. ದರ್ಶನ್‌ ಪಾಲ್‌

- Advertisement -
- Advertisement -

ಪ್ರಶ್ನೆ ಮಾಡುವವರನ್ನು ದಮನಿಸುವ ಅಧಿಕಾರದಲ್ಲಿರುವವರನ್ನು ಮನೆಗೆ ಕಳಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಲಿ ಎಂದು ರೈತ ಹೋರಾಟಗಾರ ಡಾ. ದರ್ಶನ್‌ ಪಾಲ್‌ ಕರೆ ನೀಡಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಮಸ್ತ ಜನ ಚಳುವಳಿಗಳ ಸಂಯುಕ್ತ ದನಿಯಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ,‌ ಅಮಿತ್‌ ಷಾ, ಅಂಬಾನಿ, ಅದಾನಿಗಳ ಅನಾಚಾರಗಳ ವಿರುದ್ಧ ದನಿ ಎತ್ತಿದ ಪತ್ರಕರ್ತರು, ಅಧಿಕಾರಿಗಳು, ವಕೀಲರು, ಮಾನವ‌ ಹಕ್ಕುಗಳ ಹೋರಾಟಗಾರರು, ರೈತರು, ಸಾಮಾಜಿಕ ಕಾರ್ಯಕರ್ತರು ಜೈಲಿನಲ್ಲಿದ್ದಾರೆ. ಇಂತಹ ಫ್ಯಾಸಿಸ್ಟ್ ಮನಸ್ಥಿತಿಯ ದುರಂಹಕಾರಿಗಳ ವಿರುದ್ಧ ಎಲ್ಲ ಜನವರ್ಗದ ಪ್ರವಾಹವನ್ನು ಸೃಷ್ಟಿಸಿ ಪಾಠ ಕಲಿಸಬೇಕು” ಎಂದರು.

“ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ನಡೆದ ದೆಹಲಿ ಹೋರಾಟವನ್ನು ಮಣಿಸಲು ಗೋಲಿಬಾರ್‌ನಿಂದ ಹಿಡಿದು, ಲಖೀಂಪುರ ಖೇರಿಯಲ್ಲಿ ರೈತರ ಹತ್ಯೆ ತನಕ ಹಲವು ರೀತಿಯಲ್ಲಿ ದಬ್ಬಾಳಿಕೆ ನಡೆಸಿದರು. ಸರ್ಕಾರದ‌ ವಿರುದ್ಧ ನಡೆದ ಐತಿಹಾಸಿಕ ಚಳವಳಿಯಲ್ಲಿ ಹೋರಾಡಿ ರಕ್ತ ಸುರಿಸಿ 740 ರೈತರು ಹುತಾತ್ಮರಾದರು. ಆ ಮೂಲಕ ನೀವು ಮನಸ್ಸಿಗೆ ಬಂದಂತೆ ದೇಶವನ್ನು ಆಳ್ವಿಕೆ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ‌ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದೇಶದ ರೈತರು, ಕಾರ್ಮಿಕರು, ಜನಸಾಮಾನ್ಯರು ಸಂದೇಶ ಕೊಟ್ಟರು” ಎಂದು ದರ್ಶನ್‌ ಪಾಲ್‌ ಐತಿಹಾಸಿಕ ಚಳವಳಿಯನ್ನು ಸ್ಮರಿಸಿದರು.

ಜನಾಂದೋಲನಗಳಿಂದಲೇ ಜನರ ಜಾಗೃತಿ ಮತ್ತು ಶಕ್ತಿ ಬೆಳೆಯಲು ಸಾಧ್ಯ. ಜನಾಂದೋಲನಗಳನ್ನು ಬೆಳೆಸುವ ಮೂಲಕ 2023 ರಲ್ಲಿ ಕರ್ನಾಟಕದಲ್ಲಿ, 2024ರಲ್ಲಿ ಕೇಂದ್ರದಲ್ಲೂ ಜನವಿರೋಧಿ ಹಾಗೂ ಫ್ಯಾಸಿವಾದಿ ಬಿಜೆಪಿಗೆ ತಕ್ಕ ಪಾಠ ಕಲಿಸೋಣ ಎಂದರು.

ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, “ಸಂಘಪರಿವಾರದ ಸರ್ಕಾರ ದೇಶವನ್ನು ಅಧೋಗತಿಗೆ ತೆಗೆದುಕೊಂಡು ಹೋಗುತ್ತಿದೆ. ಗೋಹತ್ಯೆ ನಿಷೇಧ ಕಾಯ್ದೆ ಹಿಂತೆಗೆದುಕೊಳ್ಳದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು” ಎಂದರು.

ಕರಾಳ ಕೃಷಿ ಕಾಯ್ದೆಗಳನ್ನು ಮೋದಿ ಹಿಂಪಡೆದರೂ, ರಾಜ್ಯದಲ್ಲಿ ಯಡಿಯೂರಪ್ಪ ಸಿಎಂ ಆಗದ್ದಾಗ ತಂದ ಕಾಯ್ದೆಗಳನ್ನು ಇದುವರೆಗೂ ಹಿಂಪಡೆದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್ ಕಿಡಿಕಾರಿದರು.

ಇದನ್ನೂ ಓದಿ; ಗೌರಿ ಕೊಲೆಯೂ, ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂಬ ಕರೆಯೂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...