Homeಕರ್ನಾಟಕಸುಳ್ಳು ಜಾತಿ ಪ್ರಮಾಣ ಪತ್ರ: ಶಿಕ್ಷಿಸಲು ಪ್ರತ್ಯೇಕ ಕಾಯ್ದೆಯಾಗಲಿ

ಸುಳ್ಳು ಜಾತಿ ಪ್ರಮಾಣ ಪತ್ರ: ಶಿಕ್ಷಿಸಲು ಪ್ರತ್ಯೇಕ ಕಾಯ್ದೆಯಾಗಲಿ

- Advertisement -
- Advertisement -

ಶಾಸಕ ರೇಣುಕಾಚಾರ್ಯ ಮಗಳು ಹಾಗೂ ಅವರ ತಮ್ಮನ ಮಕ್ಕಳು ಬೇಡ ಜಂಗಮ ಎಂದು ಸುಳ್ಳು ಜಾತಿ ದಾಖಲಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಈ ಮೂಲಕ ಸಂವಿಧಾನಬದ್ಧ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸಿ ಖಾತ್ರಿಪಡಿಸಿಕೊಳ್ಳಬೇಕಾದ ಶಾಸಕರೇ ಅನ್ಯಾಯಕ್ಕಿಳಿದಿರುವುದು ಹಾಗೂ ಕಾನೂನು ವಿರೋಧಿ ಕಾರ್ಯವೆಸಗಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕೃತ್ಯ ಅಪರಾಧವೆಂಬುದರಲ್ಲಿ ಎರಡು ಮಾತಿಲ್ಲ.

ಶಾಸಕರು ಆ ಜಾತಿಪ್ರಮಾಣ ಪತ್ರದಿಂದ ಯಾವುದೇ ಸವಲತ್ತು ಪಡೆದಿಲ್ಲವೆಂದು ಸಮಜಾಯಿಷಿ ನೀಡಿದ್ದರೂ ಅಕ್ರಮವೆಸಗಿರುವುದಂತು ಸಾಬೀತಾಗಿದೆ. ಸಾಮಾನ್ಯ ಜನತೆಗೆ ಸಾವಿರ ದಾಖಲೆ ಕೇಳುವ ತಾಲ್ಲೂಕು ಆಡಳಿತ ಅಧಿಕಾರಿ ಶಾಸಕರ ಕುಟುಂಬಕ್ಕೆ ಸುಳ್ಳು ಜಾತಿಪ್ರಮಾಣ ಪತ್ರ ನೀಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ.

ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಜಾತಿಯನ್ನು ಹೇಳಿಕೊಂಡು ಸುಳ್ಳು ಜಾತಿಪ್ರಮಾಣ ಪತ್ರ ಪಡೆಯುವುದು ಇದೇ ಮೊದಲಲ್ಲ. ಸ್ವತಂತ್ರ ಭಾರತದ ಆರಂಭಿಕ ಕಾಲದಿಂದಲೂ ಈ ಹಾವಳಿ ಹೆಚ್ಚುತ್ತಲೇ ಬಂದಿದೆ. 2018ರಲ್ಲಿ ಇಂತಹುದೇ ಕೃತ್ಯವೆಸಗಿದ ನಾಲ್ವರನ್ನು ಕರ್ನಾಟಕ ಸರ್ಕಾರ ಅಮಾನತು ಮಾಡಿತ್ತು. ಆದರೆ ಈ ಅಪರಾಧಕ್ಕೆ ಸರಿಯಾದ ಕಾನೂನಿನ ನಿರ್ಬಂಧ ಇಲ್ಲದಿರುವ ಕಾರಣ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಎಲ್ಲರಿಗೂ ಎದ್ದು ಕಾಣುವ ಶಾಸಕನ ಮಗಳೇ ಈ ಕೆಲಸ ಮಾಡಿರುವಾಗ ಕಾನೂನು ಅದೆಷ್ಟು ಸಡಿಲವಾಗಿದೆ ಎಂಬುದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದಾಗಿದೆ.

2015ರಲ್ಲಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಆಯೋಗ ಸುಳ್ಳು ಜಾತಿಪ್ರಮಾಣ ಪತ್ರದ ಬಗೆಗಿನ 6 ಲಕ್ಷ ದೂರುಗಳನ್ನು ಸ್ವೀಕರಿಸಿತ್ತು. ಹಿಂದೆ ಸುಪ್ರೀಂಕೋರ್ಟ್‌ನಲ್ಲಿ 50 ಸಾವಿರ ಪ್ರಕರಣಗಳ ಬಗ್ಗೆ ಪ್ರಸ್ತಾಪವಾಗಿತ್ತು. ರಾಜ್ಯಸಭೆಯಲ್ಲಿಯೂ ಇಂತಹುದೇ 1000 ಪ್ರಕರಣಗಳು ಸದ್ದು ಮಾಡಿದ್ದವು. 2020ರಲ್ಲಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವು ಸುಮಾರು 591 ಸುಳ್ಳು ಜಾತಿಪ್ರಮಾಣ ಪತ್ರಗಳ ಬಗ್ಗೆ ದೂರುಗಳನ್ನು ಪಡೆದಿತ್ತು.

ಅಷ್ಟೂ ಪ್ರಕರಣಗಳಲ್ಲಿ ಮೇಲ್ಜಾತಿಗಳವರು ಪರಿಶಿಷ್ಟರ ಹಾಗೂ ಹಿಂದುಳಿದ ಜಾತಿಗಳ ಪ್ರಮಾಣಪತ್ರ ಪಡೆದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಉದ್ಯೋಗವನ್ನು ಪಡೆದಿದ್ದರು. ಆಶ್ಚರ್ಯವೆಂದರೆ ಅವರಲ್ಲಿನ ಹೆಚ್ಚಿನವರು ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಿಗಳಾಗಿದ್ದರು. ಜೊತೆಗೆ ವಿದ್ಯಾರ್ಥಿವೇತನ ಹಾಗೂ ದಲಿತರ, ಹಿಂದುಳಿದ ಜಾತಿಗಳ ಭೂಮಿ ಪಡೆಯಲೂ ಬಳಸಿಕೊಂಡಿದ್ದರು. ಈ ಪ್ರಕರಣ ವಿಚಾರಣೆಗೆ ಬರುವಷ್ಟರಲ್ಲಿ 12 ಉದ್ಯೋಗಿಗಳು ನಿವೃತ್ತಿಯನ್ನೂ ಹೊಂದಿದ್ದರು. ಹಲವರ ಮೇಲೆ ಪ್ರಕರಣ ದಾಖಲಿಸಲಾಯಿತಾದರೂ ಯಾರನ್ನೂ ಸೇವೆಯಿಂದ ವಜಾಗೊಳಿಸಿದ್ದು ಕಂಡುಬರಲಿಲ್ಲ. ಸಂಬಂಧಪಟ್ಟ ತಹಸಿಲ್ದಾರ್ ಹಾಗೂ ಉದ್ಯೋಗಿಗಳ ನಡುವಿನ ಒಳಒಪ್ಪಂದಗಳು ಹಾಗೂ ಸರ್ಕಾರದ ಬೇಜವಾಬ್ದಾರಿತನದಿಂದ ನ್ಯಾಯ ನೇಣಿಗೇರಿತು.

ಇಂದು ರಾಷ್ಟ್ರೀಯ ಹಾಗೂ ರಾಜ್ಯ ಪರಿಶಿಷ್ಟರ ಆಯೋಗಗಳು, ವಿವಿಧ ರಾಜ್ಯಗಳ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಮುಂದೆ ರಾಶಿಗಟ್ಟಲೆ ಸುಳ್ಳು ಜಾತಿಪ್ರಮಾಣ ಪತ್ರ ಪಡೆದ ಪ್ರಕರಣಗಳು ಬಿದ್ದಿವೆ. ಭಾರತದಾದ್ಯಂತ ಇಂತಹ ಕೋಟಿಗಟ್ಟಲೆ ಪ್ರಕರಣಗಳು ಕಂಡುಬರುತ್ತಿವೆ. ಆದರೆ ಸರ್ಕಾರ ಇದಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ.

ಶಾಸಕನೇ ಇಂತಹ ಕೆಲಸ ಮಾಡಿರುವುದು ಸರ್ಕಾರದ ಮೇಲಿನ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿದೆ. ತನ್ನ ಘನತೆಯನ್ನು ಉಳಿಸಿಕೊಳ್ಳಲು ಸರ್ಕಾರ ಈ ಕೂಡಲೇ ಶಾಸಕರನ್ನು ಹಾಗೂ ಸಂಬಂಧಪಟ್ಟ ತಹಸೀಲ್ದಾರರನ್ನು ಅಮಾನತುಗೊಳಿಸಬೇಕಿದೆ. ಬಹುಮುಖ್ಯವಾಗಿ ಇದೇ ಜನವರಿಯಲ್ಲಿ ಕರ್ನಾಟಕ ಹೈಕೋರ್ಟ್ ಅಟ್ರಾಸಿಟಿ ಕಾಯ್ದೆಯನ್ವಯ ಶಿಕ್ಷೆ ನೀಡಲು ಸಾಧ್ಯಲ್ಲವೆಂದು ತೀರ್ಪಿತ್ತಿರುವುದರಿಂದ ಅಟ್ರಾಸಿಟಿ ಕಾಯ್ದೆಯನ್ನು ತಿದ್ದುಪಡಿ ಮಾಡಲು ಒಕ್ಕೂಟ ಸರ್ಕಾರಕ್ಕೆ ಮನವಿ ಸಲ್ಲಿಸಿ ತಿದ್ದುಪಡಿಯಾಗುವವರೆಗೆ ಸುಳ್ಳು ಜಾತಿಪ್ರಮಾಣ ಪತ್ರದ ಅನ್ಯಾಯ ತಡೆಯಲು ಈ ಕೂಡಲೇ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯೊಂದನ್ನು ಜಾರಿಗೊಳಿಸಬೇಕಿದೆ. ಬಡವರ ತಟ್ಟೆಗೂ ಕೈ ಹಾಕುವ ಮೋಸಗಾರರಿಗೆ ತಕ್ಕ ಶಿಕ್ಷೆ ವಿಧಿಸಬೇಕಿದೆ.

ಸಿದ್ಧಾರ್ಥ ಎಂ.
ಸಾಮಾಜಿಕ ಕಾರ್ಯಕರ್ತರು


ಇದನ್ನೂ ಓದಿ: ನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತಾಯಿ ಲಿಂಗಾಯತ ಆಗಿದ್ದರೂ ಮಕ್ಕಳು ದಲಿತ ಗಂಡನಿಗೆ ಹುಟ್ಟಿದ್ದರೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರೆ ಸಿಂಧುತ್ವಕ್ಕೆ ಅಡ್ಡಿಯಿಲ್ಲ ಎಂದೆನಿಸುತ್ತದೆ. ನನ್ನ ಅಭಿಪ್ರಾಯ.

  2. ತಾಯಿ ಲಿಂಗಾಯತ ಆಗಿದ್ದರೂ ಮಕ್ಕಳು ದಲಿತ ಗಂಡನಿಗೆ ಹುಟ್ಟಿದ್ದರೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರೆ ಸಿಂಧುತ್ವಕ್ಕೆ ಅಡ್ಡಿಯಿಲ್ಲ ಎಂದೆನಿಸುತ್ತದೆ. ಇದು ನನ್ನ ಅಭಿಪ್ರಾಯ. ಕಾನೂನು ಏನು ಹೇಳುತ್ತೋ ಗೊತ್ತಿಲ್ಲ.

  3. ಈ ದೇಶದ ಸಂವಿಧಾನದ ಮೂಲವೇ  ಬ್ರಿಟಿಷ್ ರ Govt. of India Act 1935. ಅದರ ಪೂರ್ವದ 1921 ರ ಹೈದರಾಬಾದ್ ನಿಜಾಮರ Depressed Class ಪಟ್ಟಿಯಲ್ಲಿ Jangam ಬರುತ್ತದೆ. 1936 ರ ಭಂಡಾರ ಜಿಲ್ಲೆಗೆ ಸಂಬಂಧಿಸಿದಂತೆ Schedule Caste ಪಟ್ಟಿಯಲ್ಲೂ ಜಂಗಮ ಜಾತಿ ಇರುತ್ತದೆ. ಮರಾಠರ ಆಳ್ವಿಕೆಯಲ್ಲಿ ಮುಂಬೈ ಕರ್ನಾಟಕದ ಪ್ರದೇಶಗಳೂ ಸೇರಿದಂತೆ ಜಂಗಮ ಜಾತಿಯು Beggers ಪಟ್ಟಿಯಲ್ಲಿ, ಮೈಸೂರು ಸಂಸ್ಥಾನದಲ್ಲಿ Inferior Religious Mendicants ಪಟ್ಟಿಯಲ್ಲೂ ಜಂಗಮ ಜಾತಿ ಗುರ್ತಿಸಲ್ಪಟ್ಟಿದೆ. ಜಂಗಮರು ಯಾರು ಎಂಬುದು ಬ್ರಿಟಿಷ್ ಚಿಂತಕ C.P. Brown ಇವರ ಗ್ರಂಥದಲ್ಲಿ ವಿವರಿಸಲ್ಪಟ್ಟಿದೆ. ಇದೆಲ್ಲವೂ ಸ್ವತಂತ್ರ ಪೂರ್ವ ದಾಖಲೆಗಳು. ಇವು ಪ್ರಮಾಣೀಕೃತ ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯ ಹಲವು ತೀರ್ಪುಗಳಲ್ಲಿ ವಿವರಿಸಿದೆ. “Pre-independent Documents are more reliable and they have got Probative Value”  ಎಂದಿದೆ. ಸರ್ಕಾರದ ಈವರೆಗಿನ ಎಲ್ಲ ಸುತ್ತೋಲೆಗಳು ವೀರಶೈವ ಜಂಗಮರೇ ಬೇಡಜಂಗಮರು ಎನ್ನುತ್ತವೆ. ಸೂರ್ಯನಾಥ ಕಾಮತರ ಅಧ್ಯಯನ ವರದಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಪ್ರಮುಖ ಸಾಕ್ಷ್ಯವಾಗಿದೆ.

    ಜಂಗಮರು ಬೇಡಜಂಗಮರಲ್ಲದಿದ್ದರೆ, ಜಂಗಮ ಜಾತಿಯನ್ನು ಕೇಂದ್ರದ OBC ಮತ್ತು ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಕೊಡಲು ಸಂವಿಧಾನದ ಸದಾಶಯ ಜಾರಿ ವಿರೋಧಿಗಳು ಕ್ರಮವಹಿಸಬೇಕು.

    Article 147 ಅನುಸಾರ ಪ್ರಸ್ತುತ ಸಂವಿಧಾನದ ಜಾರಿಯ ತೊಂದರೆಯಲ್ಲಿ , ಅನುಸರಿಸಲು ದಾರಿ ತೋರಿದೆ. ಅದನ್ನು ಗ್ರಹಿಸಿ.

    ಜಂಗಮ ತನ್ನ ಹಕ್ಕುಗಳಿಂದ ವಂಚಿತನಾಗಿದ್ದು, ಯಾರ ಹಕ್ಕನ್ನೂ ಕಸಿಯುವ ಪ್ರಶ್ನೆ ಉದ್ಭವಿಸಿಯೇ ಇಲ್ಲ.

    ಕೇಂದ್ರ ಸರ್ಕಾರಕ್ಕೆ ಬರೆದ ಪತ್ರದಲ್ಲಿ, ಕೇಂದ್ರವು ರಾಜ್ಯಕ್ಕೆ ಪ್ರತಿಕ್ರಿಯಿಸಲು ನಿರ್ದೇಶನ ನೀಡಿದರೂ, 6-7 ತಿಂಗಳಿನಿಂದ ರಾಜ್ಯ ಕೇಂದ್ರಕ್ಕೇ ಪ್ರತಿಕ್ರಿಯಿಸಿಲ್ಲ. ಇನ್ನು ಸಾಮಾನ್ಯರಿಗೆ ಏನು ಉತ್ತರ ಕೊಡುತ್ತಾರೆ..!?

    ಪರಿಶಿಷ್ಟ ಜಾತಿ ಪಟ್ಟಿ ಅನುಸೂಚಿತ ಜಾತಿಗಳ ಪಟ್ಟಿ ಮಾತ್ರವಾಗಿದ್ದು, ಅದಕ್ಕೆ ವಿಪರೀತ ಅರ್ಥವನ್ನು ಮಾನ್ಯ ಸಂವಿಧಾನ ಕೊಟ್ಟಿರುವುದಿಲ್ಲ.

    ಜಂಗಮರು, ಬೇಡಜಂಗಮರಲ್ಲ ಎಂದು ಮಾನ್ಯ ಸುಪ್ರೀಂ ಮುಂದೆ ಹೋಗಿ ವಾದ ಮಂಡಿಸಿದರೆ, ಸುಲಭದಲ್ಲಿ ಸಮಸ್ಯೆ ಪರಿಹಾರವಾಗಬಹುದಲ್ಲವೇ..!?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...