Homeಕರ್ನಾಟಕಸುಳ್ಳು ಜಾತಿ ಪ್ರಮಾಣ ಪತ್ರ: ಶಿಕ್ಷಿಸಲು ಪ್ರತ್ಯೇಕ ಕಾಯ್ದೆಯಾಗಲಿ

ಸುಳ್ಳು ಜಾತಿ ಪ್ರಮಾಣ ಪತ್ರ: ಶಿಕ್ಷಿಸಲು ಪ್ರತ್ಯೇಕ ಕಾಯ್ದೆಯಾಗಲಿ

- Advertisement -
- Advertisement -

ಶಾಸಕ ರೇಣುಕಾಚಾರ್ಯ ಮಗಳು ಹಾಗೂ ಅವರ ತಮ್ಮನ ಮಕ್ಕಳು ಬೇಡ ಜಂಗಮ ಎಂದು ಸುಳ್ಳು ಜಾತಿ ದಾಖಲಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಈ ಮೂಲಕ ಸಂವಿಧಾನಬದ್ಧ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸಿ ಖಾತ್ರಿಪಡಿಸಿಕೊಳ್ಳಬೇಕಾದ ಶಾಸಕರೇ ಅನ್ಯಾಯಕ್ಕಿಳಿದಿರುವುದು ಹಾಗೂ ಕಾನೂನು ವಿರೋಧಿ ಕಾರ್ಯವೆಸಗಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕೃತ್ಯ ಅಪರಾಧವೆಂಬುದರಲ್ಲಿ ಎರಡು ಮಾತಿಲ್ಲ.

ಶಾಸಕರು ಆ ಜಾತಿಪ್ರಮಾಣ ಪತ್ರದಿಂದ ಯಾವುದೇ ಸವಲತ್ತು ಪಡೆದಿಲ್ಲವೆಂದು ಸಮಜಾಯಿಷಿ ನೀಡಿದ್ದರೂ ಅಕ್ರಮವೆಸಗಿರುವುದಂತು ಸಾಬೀತಾಗಿದೆ. ಸಾಮಾನ್ಯ ಜನತೆಗೆ ಸಾವಿರ ದಾಖಲೆ ಕೇಳುವ ತಾಲ್ಲೂಕು ಆಡಳಿತ ಅಧಿಕಾರಿ ಶಾಸಕರ ಕುಟುಂಬಕ್ಕೆ ಸುಳ್ಳು ಜಾತಿಪ್ರಮಾಣ ಪತ್ರ ನೀಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ.

ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಜಾತಿಯನ್ನು ಹೇಳಿಕೊಂಡು ಸುಳ್ಳು ಜಾತಿಪ್ರಮಾಣ ಪತ್ರ ಪಡೆಯುವುದು ಇದೇ ಮೊದಲಲ್ಲ. ಸ್ವತಂತ್ರ ಭಾರತದ ಆರಂಭಿಕ ಕಾಲದಿಂದಲೂ ಈ ಹಾವಳಿ ಹೆಚ್ಚುತ್ತಲೇ ಬಂದಿದೆ. 2018ರಲ್ಲಿ ಇಂತಹುದೇ ಕೃತ್ಯವೆಸಗಿದ ನಾಲ್ವರನ್ನು ಕರ್ನಾಟಕ ಸರ್ಕಾರ ಅಮಾನತು ಮಾಡಿತ್ತು. ಆದರೆ ಈ ಅಪರಾಧಕ್ಕೆ ಸರಿಯಾದ ಕಾನೂನಿನ ನಿರ್ಬಂಧ ಇಲ್ಲದಿರುವ ಕಾರಣ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಎಲ್ಲರಿಗೂ ಎದ್ದು ಕಾಣುವ ಶಾಸಕನ ಮಗಳೇ ಈ ಕೆಲಸ ಮಾಡಿರುವಾಗ ಕಾನೂನು ಅದೆಷ್ಟು ಸಡಿಲವಾಗಿದೆ ಎಂಬುದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದಾಗಿದೆ.

2015ರಲ್ಲಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಆಯೋಗ ಸುಳ್ಳು ಜಾತಿಪ್ರಮಾಣ ಪತ್ರದ ಬಗೆಗಿನ 6 ಲಕ್ಷ ದೂರುಗಳನ್ನು ಸ್ವೀಕರಿಸಿತ್ತು. ಹಿಂದೆ ಸುಪ್ರೀಂಕೋರ್ಟ್‌ನಲ್ಲಿ 50 ಸಾವಿರ ಪ್ರಕರಣಗಳ ಬಗ್ಗೆ ಪ್ರಸ್ತಾಪವಾಗಿತ್ತು. ರಾಜ್ಯಸಭೆಯಲ್ಲಿಯೂ ಇಂತಹುದೇ 1000 ಪ್ರಕರಣಗಳು ಸದ್ದು ಮಾಡಿದ್ದವು. 2020ರಲ್ಲಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವು ಸುಮಾರು 591 ಸುಳ್ಳು ಜಾತಿಪ್ರಮಾಣ ಪತ್ರಗಳ ಬಗ್ಗೆ ದೂರುಗಳನ್ನು ಪಡೆದಿತ್ತು.

ಅಷ್ಟೂ ಪ್ರಕರಣಗಳಲ್ಲಿ ಮೇಲ್ಜಾತಿಗಳವರು ಪರಿಶಿಷ್ಟರ ಹಾಗೂ ಹಿಂದುಳಿದ ಜಾತಿಗಳ ಪ್ರಮಾಣಪತ್ರ ಪಡೆದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಉದ್ಯೋಗವನ್ನು ಪಡೆದಿದ್ದರು. ಆಶ್ಚರ್ಯವೆಂದರೆ ಅವರಲ್ಲಿನ ಹೆಚ್ಚಿನವರು ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಿಗಳಾಗಿದ್ದರು. ಜೊತೆಗೆ ವಿದ್ಯಾರ್ಥಿವೇತನ ಹಾಗೂ ದಲಿತರ, ಹಿಂದುಳಿದ ಜಾತಿಗಳ ಭೂಮಿ ಪಡೆಯಲೂ ಬಳಸಿಕೊಂಡಿದ್ದರು. ಈ ಪ್ರಕರಣ ವಿಚಾರಣೆಗೆ ಬರುವಷ್ಟರಲ್ಲಿ 12 ಉದ್ಯೋಗಿಗಳು ನಿವೃತ್ತಿಯನ್ನೂ ಹೊಂದಿದ್ದರು. ಹಲವರ ಮೇಲೆ ಪ್ರಕರಣ ದಾಖಲಿಸಲಾಯಿತಾದರೂ ಯಾರನ್ನೂ ಸೇವೆಯಿಂದ ವಜಾಗೊಳಿಸಿದ್ದು ಕಂಡುಬರಲಿಲ್ಲ. ಸಂಬಂಧಪಟ್ಟ ತಹಸಿಲ್ದಾರ್ ಹಾಗೂ ಉದ್ಯೋಗಿಗಳ ನಡುವಿನ ಒಳಒಪ್ಪಂದಗಳು ಹಾಗೂ ಸರ್ಕಾರದ ಬೇಜವಾಬ್ದಾರಿತನದಿಂದ ನ್ಯಾಯ ನೇಣಿಗೇರಿತು.

ಇಂದು ರಾಷ್ಟ್ರೀಯ ಹಾಗೂ ರಾಜ್ಯ ಪರಿಶಿಷ್ಟರ ಆಯೋಗಗಳು, ವಿವಿಧ ರಾಜ್ಯಗಳ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಮುಂದೆ ರಾಶಿಗಟ್ಟಲೆ ಸುಳ್ಳು ಜಾತಿಪ್ರಮಾಣ ಪತ್ರ ಪಡೆದ ಪ್ರಕರಣಗಳು ಬಿದ್ದಿವೆ. ಭಾರತದಾದ್ಯಂತ ಇಂತಹ ಕೋಟಿಗಟ್ಟಲೆ ಪ್ರಕರಣಗಳು ಕಂಡುಬರುತ್ತಿವೆ. ಆದರೆ ಸರ್ಕಾರ ಇದಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ.

ಶಾಸಕನೇ ಇಂತಹ ಕೆಲಸ ಮಾಡಿರುವುದು ಸರ್ಕಾರದ ಮೇಲಿನ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿದೆ. ತನ್ನ ಘನತೆಯನ್ನು ಉಳಿಸಿಕೊಳ್ಳಲು ಸರ್ಕಾರ ಈ ಕೂಡಲೇ ಶಾಸಕರನ್ನು ಹಾಗೂ ಸಂಬಂಧಪಟ್ಟ ತಹಸೀಲ್ದಾರರನ್ನು ಅಮಾನತುಗೊಳಿಸಬೇಕಿದೆ. ಬಹುಮುಖ್ಯವಾಗಿ ಇದೇ ಜನವರಿಯಲ್ಲಿ ಕರ್ನಾಟಕ ಹೈಕೋರ್ಟ್ ಅಟ್ರಾಸಿಟಿ ಕಾಯ್ದೆಯನ್ವಯ ಶಿಕ್ಷೆ ನೀಡಲು ಸಾಧ್ಯಲ್ಲವೆಂದು ತೀರ್ಪಿತ್ತಿರುವುದರಿಂದ ಅಟ್ರಾಸಿಟಿ ಕಾಯ್ದೆಯನ್ನು ತಿದ್ದುಪಡಿ ಮಾಡಲು ಒಕ್ಕೂಟ ಸರ್ಕಾರಕ್ಕೆ ಮನವಿ ಸಲ್ಲಿಸಿ ತಿದ್ದುಪಡಿಯಾಗುವವರೆಗೆ ಸುಳ್ಳು ಜಾತಿಪ್ರಮಾಣ ಪತ್ರದ ಅನ್ಯಾಯ ತಡೆಯಲು ಈ ಕೂಡಲೇ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯೊಂದನ್ನು ಜಾರಿಗೊಳಿಸಬೇಕಿದೆ. ಬಡವರ ತಟ್ಟೆಗೂ ಕೈ ಹಾಕುವ ಮೋಸಗಾರರಿಗೆ ತಕ್ಕ ಶಿಕ್ಷೆ ವಿಧಿಸಬೇಕಿದೆ.

ಸಿದ್ಧಾರ್ಥ ಎಂ.
ಸಾಮಾಜಿಕ ಕಾರ್ಯಕರ್ತರು


ಇದನ್ನೂ ಓದಿ: ನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತಾಯಿ ಲಿಂಗಾಯತ ಆಗಿದ್ದರೂ ಮಕ್ಕಳು ದಲಿತ ಗಂಡನಿಗೆ ಹುಟ್ಟಿದ್ದರೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರೆ ಸಿಂಧುತ್ವಕ್ಕೆ ಅಡ್ಡಿಯಿಲ್ಲ ಎಂದೆನಿಸುತ್ತದೆ. ನನ್ನ ಅಭಿಪ್ರಾಯ.

  2. ತಾಯಿ ಲಿಂಗಾಯತ ಆಗಿದ್ದರೂ ಮಕ್ಕಳು ದಲಿತ ಗಂಡನಿಗೆ ಹುಟ್ಟಿದ್ದರೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರೆ ಸಿಂಧುತ್ವಕ್ಕೆ ಅಡ್ಡಿಯಿಲ್ಲ ಎಂದೆನಿಸುತ್ತದೆ. ಇದು ನನ್ನ ಅಭಿಪ್ರಾಯ. ಕಾನೂನು ಏನು ಹೇಳುತ್ತೋ ಗೊತ್ತಿಲ್ಲ.

  3. ಈ ದೇಶದ ಸಂವಿಧಾನದ ಮೂಲವೇ  ಬ್ರಿಟಿಷ್ ರ Govt. of India Act 1935. ಅದರ ಪೂರ್ವದ 1921 ರ ಹೈದರಾಬಾದ್ ನಿಜಾಮರ Depressed Class ಪಟ್ಟಿಯಲ್ಲಿ Jangam ಬರುತ್ತದೆ. 1936 ರ ಭಂಡಾರ ಜಿಲ್ಲೆಗೆ ಸಂಬಂಧಿಸಿದಂತೆ Schedule Caste ಪಟ್ಟಿಯಲ್ಲೂ ಜಂಗಮ ಜಾತಿ ಇರುತ್ತದೆ. ಮರಾಠರ ಆಳ್ವಿಕೆಯಲ್ಲಿ ಮುಂಬೈ ಕರ್ನಾಟಕದ ಪ್ರದೇಶಗಳೂ ಸೇರಿದಂತೆ ಜಂಗಮ ಜಾತಿಯು Beggers ಪಟ್ಟಿಯಲ್ಲಿ, ಮೈಸೂರು ಸಂಸ್ಥಾನದಲ್ಲಿ Inferior Religious Mendicants ಪಟ್ಟಿಯಲ್ಲೂ ಜಂಗಮ ಜಾತಿ ಗುರ್ತಿಸಲ್ಪಟ್ಟಿದೆ. ಜಂಗಮರು ಯಾರು ಎಂಬುದು ಬ್ರಿಟಿಷ್ ಚಿಂತಕ C.P. Brown ಇವರ ಗ್ರಂಥದಲ್ಲಿ ವಿವರಿಸಲ್ಪಟ್ಟಿದೆ. ಇದೆಲ್ಲವೂ ಸ್ವತಂತ್ರ ಪೂರ್ವ ದಾಖಲೆಗಳು. ಇವು ಪ್ರಮಾಣೀಕೃತ ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯ ಹಲವು ತೀರ್ಪುಗಳಲ್ಲಿ ವಿವರಿಸಿದೆ. “Pre-independent Documents are more reliable and they have got Probative Value”  ಎಂದಿದೆ. ಸರ್ಕಾರದ ಈವರೆಗಿನ ಎಲ್ಲ ಸುತ್ತೋಲೆಗಳು ವೀರಶೈವ ಜಂಗಮರೇ ಬೇಡಜಂಗಮರು ಎನ್ನುತ್ತವೆ. ಸೂರ್ಯನಾಥ ಕಾಮತರ ಅಧ್ಯಯನ ವರದಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಪ್ರಮುಖ ಸಾಕ್ಷ್ಯವಾಗಿದೆ.

    ಜಂಗಮರು ಬೇಡಜಂಗಮರಲ್ಲದಿದ್ದರೆ, ಜಂಗಮ ಜಾತಿಯನ್ನು ಕೇಂದ್ರದ OBC ಮತ್ತು ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಕೊಡಲು ಸಂವಿಧಾನದ ಸದಾಶಯ ಜಾರಿ ವಿರೋಧಿಗಳು ಕ್ರಮವಹಿಸಬೇಕು.

    Article 147 ಅನುಸಾರ ಪ್ರಸ್ತುತ ಸಂವಿಧಾನದ ಜಾರಿಯ ತೊಂದರೆಯಲ್ಲಿ , ಅನುಸರಿಸಲು ದಾರಿ ತೋರಿದೆ. ಅದನ್ನು ಗ್ರಹಿಸಿ.

    ಜಂಗಮ ತನ್ನ ಹಕ್ಕುಗಳಿಂದ ವಂಚಿತನಾಗಿದ್ದು, ಯಾರ ಹಕ್ಕನ್ನೂ ಕಸಿಯುವ ಪ್ರಶ್ನೆ ಉದ್ಭವಿಸಿಯೇ ಇಲ್ಲ.

    ಕೇಂದ್ರ ಸರ್ಕಾರಕ್ಕೆ ಬರೆದ ಪತ್ರದಲ್ಲಿ, ಕೇಂದ್ರವು ರಾಜ್ಯಕ್ಕೆ ಪ್ರತಿಕ್ರಿಯಿಸಲು ನಿರ್ದೇಶನ ನೀಡಿದರೂ, 6-7 ತಿಂಗಳಿನಿಂದ ರಾಜ್ಯ ಕೇಂದ್ರಕ್ಕೇ ಪ್ರತಿಕ್ರಿಯಿಸಿಲ್ಲ. ಇನ್ನು ಸಾಮಾನ್ಯರಿಗೆ ಏನು ಉತ್ತರ ಕೊಡುತ್ತಾರೆ..!?

    ಪರಿಶಿಷ್ಟ ಜಾತಿ ಪಟ್ಟಿ ಅನುಸೂಚಿತ ಜಾತಿಗಳ ಪಟ್ಟಿ ಮಾತ್ರವಾಗಿದ್ದು, ಅದಕ್ಕೆ ವಿಪರೀತ ಅರ್ಥವನ್ನು ಮಾನ್ಯ ಸಂವಿಧಾನ ಕೊಟ್ಟಿರುವುದಿಲ್ಲ.

    ಜಂಗಮರು, ಬೇಡಜಂಗಮರಲ್ಲ ಎಂದು ಮಾನ್ಯ ಸುಪ್ರೀಂ ಮುಂದೆ ಹೋಗಿ ವಾದ ಮಂಡಿಸಿದರೆ, ಸುಲಭದಲ್ಲಿ ಸಮಸ್ಯೆ ಪರಿಹಾರವಾಗಬಹುದಲ್ಲವೇ..!?

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...