Homeಕರ್ನಾಟಕಸುಳ್ಳು ಜಾತಿ ಪ್ರಮಾಣ ಪತ್ರ: ಶಿಕ್ಷಿಸಲು ಪ್ರತ್ಯೇಕ ಕಾಯ್ದೆಯಾಗಲಿ

ಸುಳ್ಳು ಜಾತಿ ಪ್ರಮಾಣ ಪತ್ರ: ಶಿಕ್ಷಿಸಲು ಪ್ರತ್ಯೇಕ ಕಾಯ್ದೆಯಾಗಲಿ

- Advertisement -
- Advertisement -

ಶಾಸಕ ರೇಣುಕಾಚಾರ್ಯ ಮಗಳು ಹಾಗೂ ಅವರ ತಮ್ಮನ ಮಕ್ಕಳು ಬೇಡ ಜಂಗಮ ಎಂದು ಸುಳ್ಳು ಜಾತಿ ದಾಖಲಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಈ ಮೂಲಕ ಸಂವಿಧಾನಬದ್ಧ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸಿ ಖಾತ್ರಿಪಡಿಸಿಕೊಳ್ಳಬೇಕಾದ ಶಾಸಕರೇ ಅನ್ಯಾಯಕ್ಕಿಳಿದಿರುವುದು ಹಾಗೂ ಕಾನೂನು ವಿರೋಧಿ ಕಾರ್ಯವೆಸಗಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕೃತ್ಯ ಅಪರಾಧವೆಂಬುದರಲ್ಲಿ ಎರಡು ಮಾತಿಲ್ಲ.

ಶಾಸಕರು ಆ ಜಾತಿಪ್ರಮಾಣ ಪತ್ರದಿಂದ ಯಾವುದೇ ಸವಲತ್ತು ಪಡೆದಿಲ್ಲವೆಂದು ಸಮಜಾಯಿಷಿ ನೀಡಿದ್ದರೂ ಅಕ್ರಮವೆಸಗಿರುವುದಂತು ಸಾಬೀತಾಗಿದೆ. ಸಾಮಾನ್ಯ ಜನತೆಗೆ ಸಾವಿರ ದಾಖಲೆ ಕೇಳುವ ತಾಲ್ಲೂಕು ಆಡಳಿತ ಅಧಿಕಾರಿ ಶಾಸಕರ ಕುಟುಂಬಕ್ಕೆ ಸುಳ್ಳು ಜಾತಿಪ್ರಮಾಣ ಪತ್ರ ನೀಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ.

ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಜಾತಿಯನ್ನು ಹೇಳಿಕೊಂಡು ಸುಳ್ಳು ಜಾತಿಪ್ರಮಾಣ ಪತ್ರ ಪಡೆಯುವುದು ಇದೇ ಮೊದಲಲ್ಲ. ಸ್ವತಂತ್ರ ಭಾರತದ ಆರಂಭಿಕ ಕಾಲದಿಂದಲೂ ಈ ಹಾವಳಿ ಹೆಚ್ಚುತ್ತಲೇ ಬಂದಿದೆ. 2018ರಲ್ಲಿ ಇಂತಹುದೇ ಕೃತ್ಯವೆಸಗಿದ ನಾಲ್ವರನ್ನು ಕರ್ನಾಟಕ ಸರ್ಕಾರ ಅಮಾನತು ಮಾಡಿತ್ತು. ಆದರೆ ಈ ಅಪರಾಧಕ್ಕೆ ಸರಿಯಾದ ಕಾನೂನಿನ ನಿರ್ಬಂಧ ಇಲ್ಲದಿರುವ ಕಾರಣ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಎಲ್ಲರಿಗೂ ಎದ್ದು ಕಾಣುವ ಶಾಸಕನ ಮಗಳೇ ಈ ಕೆಲಸ ಮಾಡಿರುವಾಗ ಕಾನೂನು ಅದೆಷ್ಟು ಸಡಿಲವಾಗಿದೆ ಎಂಬುದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದಾಗಿದೆ.

2015ರಲ್ಲಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಆಯೋಗ ಸುಳ್ಳು ಜಾತಿಪ್ರಮಾಣ ಪತ್ರದ ಬಗೆಗಿನ 6 ಲಕ್ಷ ದೂರುಗಳನ್ನು ಸ್ವೀಕರಿಸಿತ್ತು. ಹಿಂದೆ ಸುಪ್ರೀಂಕೋರ್ಟ್‌ನಲ್ಲಿ 50 ಸಾವಿರ ಪ್ರಕರಣಗಳ ಬಗ್ಗೆ ಪ್ರಸ್ತಾಪವಾಗಿತ್ತು. ರಾಜ್ಯಸಭೆಯಲ್ಲಿಯೂ ಇಂತಹುದೇ 1000 ಪ್ರಕರಣಗಳು ಸದ್ದು ಮಾಡಿದ್ದವು. 2020ರಲ್ಲಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವು ಸುಮಾರು 591 ಸುಳ್ಳು ಜಾತಿಪ್ರಮಾಣ ಪತ್ರಗಳ ಬಗ್ಗೆ ದೂರುಗಳನ್ನು ಪಡೆದಿತ್ತು.

ಅಷ್ಟೂ ಪ್ರಕರಣಗಳಲ್ಲಿ ಮೇಲ್ಜಾತಿಗಳವರು ಪರಿಶಿಷ್ಟರ ಹಾಗೂ ಹಿಂದುಳಿದ ಜಾತಿಗಳ ಪ್ರಮಾಣಪತ್ರ ಪಡೆದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಉದ್ಯೋಗವನ್ನು ಪಡೆದಿದ್ದರು. ಆಶ್ಚರ್ಯವೆಂದರೆ ಅವರಲ್ಲಿನ ಹೆಚ್ಚಿನವರು ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಿಗಳಾಗಿದ್ದರು. ಜೊತೆಗೆ ವಿದ್ಯಾರ್ಥಿವೇತನ ಹಾಗೂ ದಲಿತರ, ಹಿಂದುಳಿದ ಜಾತಿಗಳ ಭೂಮಿ ಪಡೆಯಲೂ ಬಳಸಿಕೊಂಡಿದ್ದರು. ಈ ಪ್ರಕರಣ ವಿಚಾರಣೆಗೆ ಬರುವಷ್ಟರಲ್ಲಿ 12 ಉದ್ಯೋಗಿಗಳು ನಿವೃತ್ತಿಯನ್ನೂ ಹೊಂದಿದ್ದರು. ಹಲವರ ಮೇಲೆ ಪ್ರಕರಣ ದಾಖಲಿಸಲಾಯಿತಾದರೂ ಯಾರನ್ನೂ ಸೇವೆಯಿಂದ ವಜಾಗೊಳಿಸಿದ್ದು ಕಂಡುಬರಲಿಲ್ಲ. ಸಂಬಂಧಪಟ್ಟ ತಹಸಿಲ್ದಾರ್ ಹಾಗೂ ಉದ್ಯೋಗಿಗಳ ನಡುವಿನ ಒಳಒಪ್ಪಂದಗಳು ಹಾಗೂ ಸರ್ಕಾರದ ಬೇಜವಾಬ್ದಾರಿತನದಿಂದ ನ್ಯಾಯ ನೇಣಿಗೇರಿತು.

ಇಂದು ರಾಷ್ಟ್ರೀಯ ಹಾಗೂ ರಾಜ್ಯ ಪರಿಶಿಷ್ಟರ ಆಯೋಗಗಳು, ವಿವಿಧ ರಾಜ್ಯಗಳ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಮುಂದೆ ರಾಶಿಗಟ್ಟಲೆ ಸುಳ್ಳು ಜಾತಿಪ್ರಮಾಣ ಪತ್ರ ಪಡೆದ ಪ್ರಕರಣಗಳು ಬಿದ್ದಿವೆ. ಭಾರತದಾದ್ಯಂತ ಇಂತಹ ಕೋಟಿಗಟ್ಟಲೆ ಪ್ರಕರಣಗಳು ಕಂಡುಬರುತ್ತಿವೆ. ಆದರೆ ಸರ್ಕಾರ ಇದಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ.

ಶಾಸಕನೇ ಇಂತಹ ಕೆಲಸ ಮಾಡಿರುವುದು ಸರ್ಕಾರದ ಮೇಲಿನ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿದೆ. ತನ್ನ ಘನತೆಯನ್ನು ಉಳಿಸಿಕೊಳ್ಳಲು ಸರ್ಕಾರ ಈ ಕೂಡಲೇ ಶಾಸಕರನ್ನು ಹಾಗೂ ಸಂಬಂಧಪಟ್ಟ ತಹಸೀಲ್ದಾರರನ್ನು ಅಮಾನತುಗೊಳಿಸಬೇಕಿದೆ. ಬಹುಮುಖ್ಯವಾಗಿ ಇದೇ ಜನವರಿಯಲ್ಲಿ ಕರ್ನಾಟಕ ಹೈಕೋರ್ಟ್ ಅಟ್ರಾಸಿಟಿ ಕಾಯ್ದೆಯನ್ವಯ ಶಿಕ್ಷೆ ನೀಡಲು ಸಾಧ್ಯಲ್ಲವೆಂದು ತೀರ್ಪಿತ್ತಿರುವುದರಿಂದ ಅಟ್ರಾಸಿಟಿ ಕಾಯ್ದೆಯನ್ನು ತಿದ್ದುಪಡಿ ಮಾಡಲು ಒಕ್ಕೂಟ ಸರ್ಕಾರಕ್ಕೆ ಮನವಿ ಸಲ್ಲಿಸಿ ತಿದ್ದುಪಡಿಯಾಗುವವರೆಗೆ ಸುಳ್ಳು ಜಾತಿಪ್ರಮಾಣ ಪತ್ರದ ಅನ್ಯಾಯ ತಡೆಯಲು ಈ ಕೂಡಲೇ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯೊಂದನ್ನು ಜಾರಿಗೊಳಿಸಬೇಕಿದೆ. ಬಡವರ ತಟ್ಟೆಗೂ ಕೈ ಹಾಕುವ ಮೋಸಗಾರರಿಗೆ ತಕ್ಕ ಶಿಕ್ಷೆ ವಿಧಿಸಬೇಕಿದೆ.

ಸಿದ್ಧಾರ್ಥ ಎಂ.
ಸಾಮಾಜಿಕ ಕಾರ್ಯಕರ್ತರು


ಇದನ್ನೂ ಓದಿ: ನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತಾಯಿ ಲಿಂಗಾಯತ ಆಗಿದ್ದರೂ ಮಕ್ಕಳು ದಲಿತ ಗಂಡನಿಗೆ ಹುಟ್ಟಿದ್ದರೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರೆ ಸಿಂಧುತ್ವಕ್ಕೆ ಅಡ್ಡಿಯಿಲ್ಲ ಎಂದೆನಿಸುತ್ತದೆ. ನನ್ನ ಅಭಿಪ್ರಾಯ.

  2. ತಾಯಿ ಲಿಂಗಾಯತ ಆಗಿದ್ದರೂ ಮಕ್ಕಳು ದಲಿತ ಗಂಡನಿಗೆ ಹುಟ್ಟಿದ್ದರೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರೆ ಸಿಂಧುತ್ವಕ್ಕೆ ಅಡ್ಡಿಯಿಲ್ಲ ಎಂದೆನಿಸುತ್ತದೆ. ಇದು ನನ್ನ ಅಭಿಪ್ರಾಯ. ಕಾನೂನು ಏನು ಹೇಳುತ್ತೋ ಗೊತ್ತಿಲ್ಲ.

  3. ಈ ದೇಶದ ಸಂವಿಧಾನದ ಮೂಲವೇ  ಬ್ರಿಟಿಷ್ ರ Govt. of India Act 1935. ಅದರ ಪೂರ್ವದ 1921 ರ ಹೈದರಾಬಾದ್ ನಿಜಾಮರ Depressed Class ಪಟ್ಟಿಯಲ್ಲಿ Jangam ಬರುತ್ತದೆ. 1936 ರ ಭಂಡಾರ ಜಿಲ್ಲೆಗೆ ಸಂಬಂಧಿಸಿದಂತೆ Schedule Caste ಪಟ್ಟಿಯಲ್ಲೂ ಜಂಗಮ ಜಾತಿ ಇರುತ್ತದೆ. ಮರಾಠರ ಆಳ್ವಿಕೆಯಲ್ಲಿ ಮುಂಬೈ ಕರ್ನಾಟಕದ ಪ್ರದೇಶಗಳೂ ಸೇರಿದಂತೆ ಜಂಗಮ ಜಾತಿಯು Beggers ಪಟ್ಟಿಯಲ್ಲಿ, ಮೈಸೂರು ಸಂಸ್ಥಾನದಲ್ಲಿ Inferior Religious Mendicants ಪಟ್ಟಿಯಲ್ಲೂ ಜಂಗಮ ಜಾತಿ ಗುರ್ತಿಸಲ್ಪಟ್ಟಿದೆ. ಜಂಗಮರು ಯಾರು ಎಂಬುದು ಬ್ರಿಟಿಷ್ ಚಿಂತಕ C.P. Brown ಇವರ ಗ್ರಂಥದಲ್ಲಿ ವಿವರಿಸಲ್ಪಟ್ಟಿದೆ. ಇದೆಲ್ಲವೂ ಸ್ವತಂತ್ರ ಪೂರ್ವ ದಾಖಲೆಗಳು. ಇವು ಪ್ರಮಾಣೀಕೃತ ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯ ಹಲವು ತೀರ್ಪುಗಳಲ್ಲಿ ವಿವರಿಸಿದೆ. “Pre-independent Documents are more reliable and they have got Probative Value”  ಎಂದಿದೆ. ಸರ್ಕಾರದ ಈವರೆಗಿನ ಎಲ್ಲ ಸುತ್ತೋಲೆಗಳು ವೀರಶೈವ ಜಂಗಮರೇ ಬೇಡಜಂಗಮರು ಎನ್ನುತ್ತವೆ. ಸೂರ್ಯನಾಥ ಕಾಮತರ ಅಧ್ಯಯನ ವರದಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಪ್ರಮುಖ ಸಾಕ್ಷ್ಯವಾಗಿದೆ.

    ಜಂಗಮರು ಬೇಡಜಂಗಮರಲ್ಲದಿದ್ದರೆ, ಜಂಗಮ ಜಾತಿಯನ್ನು ಕೇಂದ್ರದ OBC ಮತ್ತು ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಕೊಡಲು ಸಂವಿಧಾನದ ಸದಾಶಯ ಜಾರಿ ವಿರೋಧಿಗಳು ಕ್ರಮವಹಿಸಬೇಕು.

    Article 147 ಅನುಸಾರ ಪ್ರಸ್ತುತ ಸಂವಿಧಾನದ ಜಾರಿಯ ತೊಂದರೆಯಲ್ಲಿ , ಅನುಸರಿಸಲು ದಾರಿ ತೋರಿದೆ. ಅದನ್ನು ಗ್ರಹಿಸಿ.

    ಜಂಗಮ ತನ್ನ ಹಕ್ಕುಗಳಿಂದ ವಂಚಿತನಾಗಿದ್ದು, ಯಾರ ಹಕ್ಕನ್ನೂ ಕಸಿಯುವ ಪ್ರಶ್ನೆ ಉದ್ಭವಿಸಿಯೇ ಇಲ್ಲ.

    ಕೇಂದ್ರ ಸರ್ಕಾರಕ್ಕೆ ಬರೆದ ಪತ್ರದಲ್ಲಿ, ಕೇಂದ್ರವು ರಾಜ್ಯಕ್ಕೆ ಪ್ರತಿಕ್ರಿಯಿಸಲು ನಿರ್ದೇಶನ ನೀಡಿದರೂ, 6-7 ತಿಂಗಳಿನಿಂದ ರಾಜ್ಯ ಕೇಂದ್ರಕ್ಕೇ ಪ್ರತಿಕ್ರಿಯಿಸಿಲ್ಲ. ಇನ್ನು ಸಾಮಾನ್ಯರಿಗೆ ಏನು ಉತ್ತರ ಕೊಡುತ್ತಾರೆ..!?

    ಪರಿಶಿಷ್ಟ ಜಾತಿ ಪಟ್ಟಿ ಅನುಸೂಚಿತ ಜಾತಿಗಳ ಪಟ್ಟಿ ಮಾತ್ರವಾಗಿದ್ದು, ಅದಕ್ಕೆ ವಿಪರೀತ ಅರ್ಥವನ್ನು ಮಾನ್ಯ ಸಂವಿಧಾನ ಕೊಟ್ಟಿರುವುದಿಲ್ಲ.

    ಜಂಗಮರು, ಬೇಡಜಂಗಮರಲ್ಲ ಎಂದು ಮಾನ್ಯ ಸುಪ್ರೀಂ ಮುಂದೆ ಹೋಗಿ ವಾದ ಮಂಡಿಸಿದರೆ, ಸುಲಭದಲ್ಲಿ ಸಮಸ್ಯೆ ಪರಿಹಾರವಾಗಬಹುದಲ್ಲವೇ..!?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...