Homeಮುಖಪುಟನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಅನ್ನದಾತನ ಹೋರಾಟದ ಪರವಾಗಿ ಭಾರತೀಯ ಚಿತ್ರರಂಗದ ಸಂವೇದನಾಶೀಲ ನಟರು ಮಾತನಾಡುತ್ತಿದ್ದಾರೆ. ಹಿರಿಯ ರಂಗಕಲಾವಿದ, ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಕೂಡ ರೈತರ ಹೋರಾಟ ಬೆಂಬಲಿಸಿ ಮಾತನಾಡಿದ್ದಾರೆ. ಕಳೆದ ತಿಂಗಳು ಅವರು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗೆ ಅವರು ನೀಡಿದ ಸಂದರ್ಶನ ಈಗ ವೈರಲ್ ಆಗಿದೆ. ಅವರು ಹೆಸರಿನಲ್ಲಿ ಹಲವಾರು ಟ್ವಿಟರ್ ಖಾತೆಗಳಿದ್ದು ಅವುಗಳಲ್ಲಿ ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಲಾಗಿದೆ. ಆದರೆ ಅವು ಅನಧಿಕೃತ ಎಂದು ಅವರ ಪತ್ನಿ ಸ್ಪಷ್ಟೀಕರಣ ನೀಡಿದ್ದಾರೆ. ಅವರ ವೈರಲ್ ವಿಡಿಯೋದ ಪೂರ್ಣ ಪಾಠ ಇಲ್ಲಿದೆ.

ನಾಸಿರುದ್ದೀನ್‌ ಶಾ ಹೇಳಿರುವುದೇನು?

ಸಾವಿರಾರು ರೈತ ಸೋದರ-ಸೋದರಿಯರು, ಮಕ್ಕಳು ದೆಹಲಿಯ ಕೊರೆಯುವ ಚಳಿಯಲ್ಲಿ ನ್ಯಾಯ ಕೇಳಲು, ತಮ್ಮ ಹಕ್ಕನ್ನು ಪಡೆಯಲು ಸೇರಿದ್ದೀರಿ, ನಿಮಗೆಲ್ಲಾ ನನ್ನ ನಮಸ್ಕಾರಗಳು

ಈ ದೇಶದ ಆಳ್ವಿಕೆಯು ನಿಮ್ಮೊಂದಿಗೆ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೊ, ಅದು ನನಗೆ ದಬ್ಬಾಳಿಕೆಯ ತಂದೆ-ತಾಯಿಗಳ ಕತೆಯನ್ನು ನೆನಪಿಸುತ್ತದೆ.

ಅವರ ಮಕ್ಕಳು ಶಿಲ್ಪಿಯೋ, ಪ್ರವಾಸಿಯೋ ಆಗಬೇಕೆಂದು ಬಯಸಿದರೆ, ನಿಮಗೇನು ಬೇಕು ಎಂದು ನಿಮಗೆ ಗೊತ್ತಾಗೊಲ್ಲ. ನಿಮಗಿಂತ ಚೆನ್ನಾಗಿ ನಮಗೆ ಗೊತ್ತು. ನಿಮಗೆ ಯಾವುದು ಹೆಚ್ಚು ಲಾಭದಾಯಕ ಎಂಬುದು ನಮಗೆ ಗೊತ್ತು ಎನ್ನುತ್ತಾರೆ ಪೋಷಕರು.

ನಮ್ಮ ಪ್ರಕಾರ, ಯಾರು ತನ್ನ ಬಲವನ್ನು ನಂಬಿ, ನೇಗಿಲು ಹಿಡಿದು ನೆಲವನ್ನು ಉಳುತ್ತಾನೋ, ಪ್ರೀತಿ ಮತ್ತು ಪರಿಶ್ರಮದಿಂದ ಅದೇ ನೆಲದಲ್ಲಿ ಬೀಜ ಬಿತ್ತುತ್ತಾನೊ, ಆ ನೆಲವನ್ನು ಸಿಂಗರಿಸುತ್ತಾನೊ, ಬೆಳೆಯನ್ನು ತನ್ನ ಮಗುವಂತೆ ಪೊರೆಯುತ್ತಾನೋ ಆತನಿಗಿಂತ ಚೆನ್ನಾಗಿ ಬೇರೆ ಯಾರಿಗೂ ಯಾವುದೂ ಲಾಭದಾಯಕವಾದದ್ದು ಎಂಬುದು ತಿಳಿದಿರಲು ಸಾಧ್ಯವಿಲ್ಲ.

ಈ ಆಳ್ವಿಕೆಯು ಸಾವಿರಾರು ರೀತಿಯಲ್ಲಿ ಮುಗ್ದರನ್ನು ವಂಚಕರೆಂದು ಹೆಸರು ಕೆಡಿಸುವ ಪ್ರಯತ್ನ ಮಾಡಿದರೆ, ನನ್ನಂತಹ ಲಕ್ಷಾಂತರ ಜನರಿದ್ದಾರೆ, ಅವರೆಲ್ಲರ ಪ್ರಾರ್ಥನೆ ನಿಮ್ಮೊಂದಿಗಿದೆ. ಈ ಎಲ್ಲರಿಗೂ ನಿಮ್ಮ ಶಕ್ತಿ, ಸಂಯಮ, ಅಧಿಕಾರವೇ ಮಾದರಿ.

ನಿಮ್ಮಂತಹವರಿಗಾಗಿಯೇ ಕವಿಯೊಬ್ಬರು ಹೇಳಿದ್ದು, ಈ ಘಮ್ಮೆನ್ನುವ ಹೂ ರಾಶಿ, ನಳನಳಿಸುವ ಹೊಲದ ದೊರೆ ನೀನು ಎಂದು ವರ್ಣಿಸಿದ್ದಾರೆ.

ನಮ್ಮ ಅನ್ನದಾತರು ನೀವು, ನಿಮ್ಮ ಗುರಿಯನ್ನು ಮುಟ್ಟಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ನಂಬಿಕೆ ಇದೆ, ಈ ರೈತ ಹೋರಾಟ ವ್ಯಾಪಿಸುತ್ತದೆ ಮತ್ತು ಜನಸಾಮಾನ್ಯರು ಇದರಲ್ಲಿ ಭಾಗಿಯಾಗುತ್ತಾರೆ. ಆಗಲೇಬೇಕು. ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ. ನಮ್ಮ ಚಿತ್ರರಂಗದ ದೊಡ್ಡ ಮನುಷ್ಯರು ಸುಮ್ಮನೆ ಕೂತಿದ್ದಾರೆ. ತುಟಿ ಬಿಚ್ಚಿದರೆ ಬಹಳಷ್ಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅನ್ನಿಸುತ್ತಿದೆ. ಅಲ್ಲಾ, ಏಳು ತಲೆಮಾರು ಕೂತು ತಿನ್ನುವಷ್ಟು ಹಣ ಸಂಪಾದನೆ ಮಾಡಿದ್ದೀರಲ್ಲಾ, ಮಾತನಾಡುವುದಕ್ಕೆ ಏನು ತೊಂದರೆ’?


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....