Homeಮುಖಪುಟನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಅನ್ನದಾತನ ಹೋರಾಟದ ಪರವಾಗಿ ಭಾರತೀಯ ಚಿತ್ರರಂಗದ ಸಂವೇದನಾಶೀಲ ನಟರು ಮಾತನಾಡುತ್ತಿದ್ದಾರೆ. ಹಿರಿಯ ರಂಗಕಲಾವಿದ, ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಕೂಡ ರೈತರ ಹೋರಾಟ ಬೆಂಬಲಿಸಿ ಮಾತನಾಡಿದ್ದಾರೆ. ಕಳೆದ ತಿಂಗಳು ಅವರು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗೆ ಅವರು ನೀಡಿದ ಸಂದರ್ಶನ ಈಗ ವೈರಲ್ ಆಗಿದೆ. ಅವರು ಹೆಸರಿನಲ್ಲಿ ಹಲವಾರು ಟ್ವಿಟರ್ ಖಾತೆಗಳಿದ್ದು ಅವುಗಳಲ್ಲಿ ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಲಾಗಿದೆ. ಆದರೆ ಅವು ಅನಧಿಕೃತ ಎಂದು ಅವರ ಪತ್ನಿ ಸ್ಪಷ್ಟೀಕರಣ ನೀಡಿದ್ದಾರೆ. ಅವರ ವೈರಲ್ ವಿಡಿಯೋದ ಪೂರ್ಣ ಪಾಠ ಇಲ್ಲಿದೆ.

ನಾಸಿರುದ್ದೀನ್‌ ಶಾ ಹೇಳಿರುವುದೇನು?

ಸಾವಿರಾರು ರೈತ ಸೋದರ-ಸೋದರಿಯರು, ಮಕ್ಕಳು ದೆಹಲಿಯ ಕೊರೆಯುವ ಚಳಿಯಲ್ಲಿ ನ್ಯಾಯ ಕೇಳಲು, ತಮ್ಮ ಹಕ್ಕನ್ನು ಪಡೆಯಲು ಸೇರಿದ್ದೀರಿ, ನಿಮಗೆಲ್ಲಾ ನನ್ನ ನಮಸ್ಕಾರಗಳು

ಈ ದೇಶದ ಆಳ್ವಿಕೆಯು ನಿಮ್ಮೊಂದಿಗೆ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೊ, ಅದು ನನಗೆ ದಬ್ಬಾಳಿಕೆಯ ತಂದೆ-ತಾಯಿಗಳ ಕತೆಯನ್ನು ನೆನಪಿಸುತ್ತದೆ.

ಅವರ ಮಕ್ಕಳು ಶಿಲ್ಪಿಯೋ, ಪ್ರವಾಸಿಯೋ ಆಗಬೇಕೆಂದು ಬಯಸಿದರೆ, ನಿಮಗೇನು ಬೇಕು ಎಂದು ನಿಮಗೆ ಗೊತ್ತಾಗೊಲ್ಲ. ನಿಮಗಿಂತ ಚೆನ್ನಾಗಿ ನಮಗೆ ಗೊತ್ತು. ನಿಮಗೆ ಯಾವುದು ಹೆಚ್ಚು ಲಾಭದಾಯಕ ಎಂಬುದು ನಮಗೆ ಗೊತ್ತು ಎನ್ನುತ್ತಾರೆ ಪೋಷಕರು.

ನಮ್ಮ ಪ್ರಕಾರ, ಯಾರು ತನ್ನ ಬಲವನ್ನು ನಂಬಿ, ನೇಗಿಲು ಹಿಡಿದು ನೆಲವನ್ನು ಉಳುತ್ತಾನೋ, ಪ್ರೀತಿ ಮತ್ತು ಪರಿಶ್ರಮದಿಂದ ಅದೇ ನೆಲದಲ್ಲಿ ಬೀಜ ಬಿತ್ತುತ್ತಾನೊ, ಆ ನೆಲವನ್ನು ಸಿಂಗರಿಸುತ್ತಾನೊ, ಬೆಳೆಯನ್ನು ತನ್ನ ಮಗುವಂತೆ ಪೊರೆಯುತ್ತಾನೋ ಆತನಿಗಿಂತ ಚೆನ್ನಾಗಿ ಬೇರೆ ಯಾರಿಗೂ ಯಾವುದೂ ಲಾಭದಾಯಕವಾದದ್ದು ಎಂಬುದು ತಿಳಿದಿರಲು ಸಾಧ್ಯವಿಲ್ಲ.

ಈ ಆಳ್ವಿಕೆಯು ಸಾವಿರಾರು ರೀತಿಯಲ್ಲಿ ಮುಗ್ದರನ್ನು ವಂಚಕರೆಂದು ಹೆಸರು ಕೆಡಿಸುವ ಪ್ರಯತ್ನ ಮಾಡಿದರೆ, ನನ್ನಂತಹ ಲಕ್ಷಾಂತರ ಜನರಿದ್ದಾರೆ, ಅವರೆಲ್ಲರ ಪ್ರಾರ್ಥನೆ ನಿಮ್ಮೊಂದಿಗಿದೆ. ಈ ಎಲ್ಲರಿಗೂ ನಿಮ್ಮ ಶಕ್ತಿ, ಸಂಯಮ, ಅಧಿಕಾರವೇ ಮಾದರಿ.

ನಿಮ್ಮಂತಹವರಿಗಾಗಿಯೇ ಕವಿಯೊಬ್ಬರು ಹೇಳಿದ್ದು, ಈ ಘಮ್ಮೆನ್ನುವ ಹೂ ರಾಶಿ, ನಳನಳಿಸುವ ಹೊಲದ ದೊರೆ ನೀನು ಎಂದು ವರ್ಣಿಸಿದ್ದಾರೆ.

ನಮ್ಮ ಅನ್ನದಾತರು ನೀವು, ನಿಮ್ಮ ಗುರಿಯನ್ನು ಮುಟ್ಟಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ನಂಬಿಕೆ ಇದೆ, ಈ ರೈತ ಹೋರಾಟ ವ್ಯಾಪಿಸುತ್ತದೆ ಮತ್ತು ಜನಸಾಮಾನ್ಯರು ಇದರಲ್ಲಿ ಭಾಗಿಯಾಗುತ್ತಾರೆ. ಆಗಲೇಬೇಕು. ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ. ನಮ್ಮ ಚಿತ್ರರಂಗದ ದೊಡ್ಡ ಮನುಷ್ಯರು ಸುಮ್ಮನೆ ಕೂತಿದ್ದಾರೆ. ತುಟಿ ಬಿಚ್ಚಿದರೆ ಬಹಳಷ್ಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅನ್ನಿಸುತ್ತಿದೆ. ಅಲ್ಲಾ, ಏಳು ತಲೆಮಾರು ಕೂತು ತಿನ್ನುವಷ್ಟು ಹಣ ಸಂಪಾದನೆ ಮಾಡಿದ್ದೀರಲ್ಲಾ, ಮಾತನಾಡುವುದಕ್ಕೆ ಏನು ತೊಂದರೆ’?


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...