Homeಮುಖಪುಟನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಅನ್ನದಾತನ ಹೋರಾಟದ ಪರವಾಗಿ ಭಾರತೀಯ ಚಿತ್ರರಂಗದ ಸಂವೇದನಾಶೀಲ ನಟರು ಮಾತನಾಡುತ್ತಿದ್ದಾರೆ. ಹಿರಿಯ ರಂಗಕಲಾವಿದ, ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಕೂಡ ರೈತರ ಹೋರಾಟ ಬೆಂಬಲಿಸಿ ಮಾತನಾಡಿದ್ದಾರೆ. ಕಳೆದ ತಿಂಗಳು ಅವರು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗೆ ಅವರು ನೀಡಿದ ಸಂದರ್ಶನ ಈಗ ವೈರಲ್ ಆಗಿದೆ. ಅವರು ಹೆಸರಿನಲ್ಲಿ ಹಲವಾರು ಟ್ವಿಟರ್ ಖಾತೆಗಳಿದ್ದು ಅವುಗಳಲ್ಲಿ ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಲಾಗಿದೆ. ಆದರೆ ಅವು ಅನಧಿಕೃತ ಎಂದು ಅವರ ಪತ್ನಿ ಸ್ಪಷ್ಟೀಕರಣ ನೀಡಿದ್ದಾರೆ. ಅವರ ವೈರಲ್ ವಿಡಿಯೋದ ಪೂರ್ಣ ಪಾಠ ಇಲ್ಲಿದೆ.

ನಾಸಿರುದ್ದೀನ್‌ ಶಾ ಹೇಳಿರುವುದೇನು?

ಸಾವಿರಾರು ರೈತ ಸೋದರ-ಸೋದರಿಯರು, ಮಕ್ಕಳು ದೆಹಲಿಯ ಕೊರೆಯುವ ಚಳಿಯಲ್ಲಿ ನ್ಯಾಯ ಕೇಳಲು, ತಮ್ಮ ಹಕ್ಕನ್ನು ಪಡೆಯಲು ಸೇರಿದ್ದೀರಿ, ನಿಮಗೆಲ್ಲಾ ನನ್ನ ನಮಸ್ಕಾರಗಳು

ಈ ದೇಶದ ಆಳ್ವಿಕೆಯು ನಿಮ್ಮೊಂದಿಗೆ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೊ, ಅದು ನನಗೆ ದಬ್ಬಾಳಿಕೆಯ ತಂದೆ-ತಾಯಿಗಳ ಕತೆಯನ್ನು ನೆನಪಿಸುತ್ತದೆ.

ಅವರ ಮಕ್ಕಳು ಶಿಲ್ಪಿಯೋ, ಪ್ರವಾಸಿಯೋ ಆಗಬೇಕೆಂದು ಬಯಸಿದರೆ, ನಿಮಗೇನು ಬೇಕು ಎಂದು ನಿಮಗೆ ಗೊತ್ತಾಗೊಲ್ಲ. ನಿಮಗಿಂತ ಚೆನ್ನಾಗಿ ನಮಗೆ ಗೊತ್ತು. ನಿಮಗೆ ಯಾವುದು ಹೆಚ್ಚು ಲಾಭದಾಯಕ ಎಂಬುದು ನಮಗೆ ಗೊತ್ತು ಎನ್ನುತ್ತಾರೆ ಪೋಷಕರು.

ನಮ್ಮ ಪ್ರಕಾರ, ಯಾರು ತನ್ನ ಬಲವನ್ನು ನಂಬಿ, ನೇಗಿಲು ಹಿಡಿದು ನೆಲವನ್ನು ಉಳುತ್ತಾನೋ, ಪ್ರೀತಿ ಮತ್ತು ಪರಿಶ್ರಮದಿಂದ ಅದೇ ನೆಲದಲ್ಲಿ ಬೀಜ ಬಿತ್ತುತ್ತಾನೊ, ಆ ನೆಲವನ್ನು ಸಿಂಗರಿಸುತ್ತಾನೊ, ಬೆಳೆಯನ್ನು ತನ್ನ ಮಗುವಂತೆ ಪೊರೆಯುತ್ತಾನೋ ಆತನಿಗಿಂತ ಚೆನ್ನಾಗಿ ಬೇರೆ ಯಾರಿಗೂ ಯಾವುದೂ ಲಾಭದಾಯಕವಾದದ್ದು ಎಂಬುದು ತಿಳಿದಿರಲು ಸಾಧ್ಯವಿಲ್ಲ.

ಈ ಆಳ್ವಿಕೆಯು ಸಾವಿರಾರು ರೀತಿಯಲ್ಲಿ ಮುಗ್ದರನ್ನು ವಂಚಕರೆಂದು ಹೆಸರು ಕೆಡಿಸುವ ಪ್ರಯತ್ನ ಮಾಡಿದರೆ, ನನ್ನಂತಹ ಲಕ್ಷಾಂತರ ಜನರಿದ್ದಾರೆ, ಅವರೆಲ್ಲರ ಪ್ರಾರ್ಥನೆ ನಿಮ್ಮೊಂದಿಗಿದೆ. ಈ ಎಲ್ಲರಿಗೂ ನಿಮ್ಮ ಶಕ್ತಿ, ಸಂಯಮ, ಅಧಿಕಾರವೇ ಮಾದರಿ.

ನಿಮ್ಮಂತಹವರಿಗಾಗಿಯೇ ಕವಿಯೊಬ್ಬರು ಹೇಳಿದ್ದು, ಈ ಘಮ್ಮೆನ್ನುವ ಹೂ ರಾಶಿ, ನಳನಳಿಸುವ ಹೊಲದ ದೊರೆ ನೀನು ಎಂದು ವರ್ಣಿಸಿದ್ದಾರೆ.

ನಮ್ಮ ಅನ್ನದಾತರು ನೀವು, ನಿಮ್ಮ ಗುರಿಯನ್ನು ಮುಟ್ಟಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ನಂಬಿಕೆ ಇದೆ, ಈ ರೈತ ಹೋರಾಟ ವ್ಯಾಪಿಸುತ್ತದೆ ಮತ್ತು ಜನಸಾಮಾನ್ಯರು ಇದರಲ್ಲಿ ಭಾಗಿಯಾಗುತ್ತಾರೆ. ಆಗಲೇಬೇಕು. ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ. ನಮ್ಮ ಚಿತ್ರರಂಗದ ದೊಡ್ಡ ಮನುಷ್ಯರು ಸುಮ್ಮನೆ ಕೂತಿದ್ದಾರೆ. ತುಟಿ ಬಿಚ್ಚಿದರೆ ಬಹಳಷ್ಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅನ್ನಿಸುತ್ತಿದೆ. ಅಲ್ಲಾ, ಏಳು ತಲೆಮಾರು ಕೂತು ತಿನ್ನುವಷ್ಟು ಹಣ ಸಂಪಾದನೆ ಮಾಡಿದ್ದೀರಲ್ಲಾ, ಮಾತನಾಡುವುದಕ್ಕೆ ಏನು ತೊಂದರೆ’?


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...