Homeಮುಖಪುಟನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಅನ್ನದಾತನ ಹೋರಾಟದ ಪರವಾಗಿ ಭಾರತೀಯ ಚಿತ್ರರಂಗದ ಸಂವೇದನಾಶೀಲ ನಟರು ಮಾತನಾಡುತ್ತಿದ್ದಾರೆ. ಹಿರಿಯ ರಂಗಕಲಾವಿದ, ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಕೂಡ ರೈತರ ಹೋರಾಟ ಬೆಂಬಲಿಸಿ ಮಾತನಾಡಿದ್ದಾರೆ. ಕಳೆದ ತಿಂಗಳು ಅವರು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗೆ ಅವರು ನೀಡಿದ ಸಂದರ್ಶನ ಈಗ ವೈರಲ್ ಆಗಿದೆ. ಅವರು ಹೆಸರಿನಲ್ಲಿ ಹಲವಾರು ಟ್ವಿಟರ್ ಖಾತೆಗಳಿದ್ದು ಅವುಗಳಲ್ಲಿ ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಲಾಗಿದೆ. ಆದರೆ ಅವು ಅನಧಿಕೃತ ಎಂದು ಅವರ ಪತ್ನಿ ಸ್ಪಷ್ಟೀಕರಣ ನೀಡಿದ್ದಾರೆ. ಅವರ ವೈರಲ್ ವಿಡಿಯೋದ ಪೂರ್ಣ ಪಾಠ ಇಲ್ಲಿದೆ.

ನಾಸಿರುದ್ದೀನ್‌ ಶಾ ಹೇಳಿರುವುದೇನು?

ಸಾವಿರಾರು ರೈತ ಸೋದರ-ಸೋದರಿಯರು, ಮಕ್ಕಳು ದೆಹಲಿಯ ಕೊರೆಯುವ ಚಳಿಯಲ್ಲಿ ನ್ಯಾಯ ಕೇಳಲು, ತಮ್ಮ ಹಕ್ಕನ್ನು ಪಡೆಯಲು ಸೇರಿದ್ದೀರಿ, ನಿಮಗೆಲ್ಲಾ ನನ್ನ ನಮಸ್ಕಾರಗಳು

ಈ ದೇಶದ ಆಳ್ವಿಕೆಯು ನಿಮ್ಮೊಂದಿಗೆ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೊ, ಅದು ನನಗೆ ದಬ್ಬಾಳಿಕೆಯ ತಂದೆ-ತಾಯಿಗಳ ಕತೆಯನ್ನು ನೆನಪಿಸುತ್ತದೆ.

ಅವರ ಮಕ್ಕಳು ಶಿಲ್ಪಿಯೋ, ಪ್ರವಾಸಿಯೋ ಆಗಬೇಕೆಂದು ಬಯಸಿದರೆ, ನಿಮಗೇನು ಬೇಕು ಎಂದು ನಿಮಗೆ ಗೊತ್ತಾಗೊಲ್ಲ. ನಿಮಗಿಂತ ಚೆನ್ನಾಗಿ ನಮಗೆ ಗೊತ್ತು. ನಿಮಗೆ ಯಾವುದು ಹೆಚ್ಚು ಲಾಭದಾಯಕ ಎಂಬುದು ನಮಗೆ ಗೊತ್ತು ಎನ್ನುತ್ತಾರೆ ಪೋಷಕರು.

ನಮ್ಮ ಪ್ರಕಾರ, ಯಾರು ತನ್ನ ಬಲವನ್ನು ನಂಬಿ, ನೇಗಿಲು ಹಿಡಿದು ನೆಲವನ್ನು ಉಳುತ್ತಾನೋ, ಪ್ರೀತಿ ಮತ್ತು ಪರಿಶ್ರಮದಿಂದ ಅದೇ ನೆಲದಲ್ಲಿ ಬೀಜ ಬಿತ್ತುತ್ತಾನೊ, ಆ ನೆಲವನ್ನು ಸಿಂಗರಿಸುತ್ತಾನೊ, ಬೆಳೆಯನ್ನು ತನ್ನ ಮಗುವಂತೆ ಪೊರೆಯುತ್ತಾನೋ ಆತನಿಗಿಂತ ಚೆನ್ನಾಗಿ ಬೇರೆ ಯಾರಿಗೂ ಯಾವುದೂ ಲಾಭದಾಯಕವಾದದ್ದು ಎಂಬುದು ತಿಳಿದಿರಲು ಸಾಧ್ಯವಿಲ್ಲ.

ಈ ಆಳ್ವಿಕೆಯು ಸಾವಿರಾರು ರೀತಿಯಲ್ಲಿ ಮುಗ್ದರನ್ನು ವಂಚಕರೆಂದು ಹೆಸರು ಕೆಡಿಸುವ ಪ್ರಯತ್ನ ಮಾಡಿದರೆ, ನನ್ನಂತಹ ಲಕ್ಷಾಂತರ ಜನರಿದ್ದಾರೆ, ಅವರೆಲ್ಲರ ಪ್ರಾರ್ಥನೆ ನಿಮ್ಮೊಂದಿಗಿದೆ. ಈ ಎಲ್ಲರಿಗೂ ನಿಮ್ಮ ಶಕ್ತಿ, ಸಂಯಮ, ಅಧಿಕಾರವೇ ಮಾದರಿ.

ನಿಮ್ಮಂತಹವರಿಗಾಗಿಯೇ ಕವಿಯೊಬ್ಬರು ಹೇಳಿದ್ದು, ಈ ಘಮ್ಮೆನ್ನುವ ಹೂ ರಾಶಿ, ನಳನಳಿಸುವ ಹೊಲದ ದೊರೆ ನೀನು ಎಂದು ವರ್ಣಿಸಿದ್ದಾರೆ.

ನಮ್ಮ ಅನ್ನದಾತರು ನೀವು, ನಿಮ್ಮ ಗುರಿಯನ್ನು ಮುಟ್ಟಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ನಂಬಿಕೆ ಇದೆ, ಈ ರೈತ ಹೋರಾಟ ವ್ಯಾಪಿಸುತ್ತದೆ ಮತ್ತು ಜನಸಾಮಾನ್ಯರು ಇದರಲ್ಲಿ ಭಾಗಿಯಾಗುತ್ತಾರೆ. ಆಗಲೇಬೇಕು. ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ. ನಮ್ಮ ಚಿತ್ರರಂಗದ ದೊಡ್ಡ ಮನುಷ್ಯರು ಸುಮ್ಮನೆ ಕೂತಿದ್ದಾರೆ. ತುಟಿ ಬಿಚ್ಚಿದರೆ ಬಹಳಷ್ಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅನ್ನಿಸುತ್ತಿದೆ. ಅಲ್ಲಾ, ಏಳು ತಲೆಮಾರು ಕೂತು ತಿನ್ನುವಷ್ಟು ಹಣ ಸಂಪಾದನೆ ಮಾಡಿದ್ದೀರಲ್ಲಾ, ಮಾತನಾಡುವುದಕ್ಕೆ ಏನು ತೊಂದರೆ’?


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...