Homeಮುಖಪುಟನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಅನ್ನದಾತನ ಹೋರಾಟದ ಪರವಾಗಿ ಭಾರತೀಯ ಚಿತ್ರರಂಗದ ಸಂವೇದನಾಶೀಲ ನಟರು ಮಾತನಾಡುತ್ತಿದ್ದಾರೆ. ಹಿರಿಯ ರಂಗಕಲಾವಿದ, ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಕೂಡ ರೈತರ ಹೋರಾಟ ಬೆಂಬಲಿಸಿ ಮಾತನಾಡಿದ್ದಾರೆ. ಕಳೆದ ತಿಂಗಳು ಅವರು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗೆ ಅವರು ನೀಡಿದ ಸಂದರ್ಶನ ಈಗ ವೈರಲ್ ಆಗಿದೆ. ಅವರು ಹೆಸರಿನಲ್ಲಿ ಹಲವಾರು ಟ್ವಿಟರ್ ಖಾತೆಗಳಿದ್ದು ಅವುಗಳಲ್ಲಿ ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಲಾಗಿದೆ. ಆದರೆ ಅವು ಅನಧಿಕೃತ ಎಂದು ಅವರ ಪತ್ನಿ ಸ್ಪಷ್ಟೀಕರಣ ನೀಡಿದ್ದಾರೆ. ಅವರ ವೈರಲ್ ವಿಡಿಯೋದ ಪೂರ್ಣ ಪಾಠ ಇಲ್ಲಿದೆ.

ನಾಸಿರುದ್ದೀನ್‌ ಶಾ ಹೇಳಿರುವುದೇನು?

ಸಾವಿರಾರು ರೈತ ಸೋದರ-ಸೋದರಿಯರು, ಮಕ್ಕಳು ದೆಹಲಿಯ ಕೊರೆಯುವ ಚಳಿಯಲ್ಲಿ ನ್ಯಾಯ ಕೇಳಲು, ತಮ್ಮ ಹಕ್ಕನ್ನು ಪಡೆಯಲು ಸೇರಿದ್ದೀರಿ, ನಿಮಗೆಲ್ಲಾ ನನ್ನ ನಮಸ್ಕಾರಗಳು

ಈ ದೇಶದ ಆಳ್ವಿಕೆಯು ನಿಮ್ಮೊಂದಿಗೆ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೊ, ಅದು ನನಗೆ ದಬ್ಬಾಳಿಕೆಯ ತಂದೆ-ತಾಯಿಗಳ ಕತೆಯನ್ನು ನೆನಪಿಸುತ್ತದೆ.

ಅವರ ಮಕ್ಕಳು ಶಿಲ್ಪಿಯೋ, ಪ್ರವಾಸಿಯೋ ಆಗಬೇಕೆಂದು ಬಯಸಿದರೆ, ನಿಮಗೇನು ಬೇಕು ಎಂದು ನಿಮಗೆ ಗೊತ್ತಾಗೊಲ್ಲ. ನಿಮಗಿಂತ ಚೆನ್ನಾಗಿ ನಮಗೆ ಗೊತ್ತು. ನಿಮಗೆ ಯಾವುದು ಹೆಚ್ಚು ಲಾಭದಾಯಕ ಎಂಬುದು ನಮಗೆ ಗೊತ್ತು ಎನ್ನುತ್ತಾರೆ ಪೋಷಕರು.

ನಮ್ಮ ಪ್ರಕಾರ, ಯಾರು ತನ್ನ ಬಲವನ್ನು ನಂಬಿ, ನೇಗಿಲು ಹಿಡಿದು ನೆಲವನ್ನು ಉಳುತ್ತಾನೋ, ಪ್ರೀತಿ ಮತ್ತು ಪರಿಶ್ರಮದಿಂದ ಅದೇ ನೆಲದಲ್ಲಿ ಬೀಜ ಬಿತ್ತುತ್ತಾನೊ, ಆ ನೆಲವನ್ನು ಸಿಂಗರಿಸುತ್ತಾನೊ, ಬೆಳೆಯನ್ನು ತನ್ನ ಮಗುವಂತೆ ಪೊರೆಯುತ್ತಾನೋ ಆತನಿಗಿಂತ ಚೆನ್ನಾಗಿ ಬೇರೆ ಯಾರಿಗೂ ಯಾವುದೂ ಲಾಭದಾಯಕವಾದದ್ದು ಎಂಬುದು ತಿಳಿದಿರಲು ಸಾಧ್ಯವಿಲ್ಲ.

ಈ ಆಳ್ವಿಕೆಯು ಸಾವಿರಾರು ರೀತಿಯಲ್ಲಿ ಮುಗ್ದರನ್ನು ವಂಚಕರೆಂದು ಹೆಸರು ಕೆಡಿಸುವ ಪ್ರಯತ್ನ ಮಾಡಿದರೆ, ನನ್ನಂತಹ ಲಕ್ಷಾಂತರ ಜನರಿದ್ದಾರೆ, ಅವರೆಲ್ಲರ ಪ್ರಾರ್ಥನೆ ನಿಮ್ಮೊಂದಿಗಿದೆ. ಈ ಎಲ್ಲರಿಗೂ ನಿಮ್ಮ ಶಕ್ತಿ, ಸಂಯಮ, ಅಧಿಕಾರವೇ ಮಾದರಿ.

ನಿಮ್ಮಂತಹವರಿಗಾಗಿಯೇ ಕವಿಯೊಬ್ಬರು ಹೇಳಿದ್ದು, ಈ ಘಮ್ಮೆನ್ನುವ ಹೂ ರಾಶಿ, ನಳನಳಿಸುವ ಹೊಲದ ದೊರೆ ನೀನು ಎಂದು ವರ್ಣಿಸಿದ್ದಾರೆ.

ನಮ್ಮ ಅನ್ನದಾತರು ನೀವು, ನಿಮ್ಮ ಗುರಿಯನ್ನು ಮುಟ್ಟಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ನಂಬಿಕೆ ಇದೆ, ಈ ರೈತ ಹೋರಾಟ ವ್ಯಾಪಿಸುತ್ತದೆ ಮತ್ತು ಜನಸಾಮಾನ್ಯರು ಇದರಲ್ಲಿ ಭಾಗಿಯಾಗುತ್ತಾರೆ. ಆಗಲೇಬೇಕು. ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ. ನಮ್ಮ ಚಿತ್ರರಂಗದ ದೊಡ್ಡ ಮನುಷ್ಯರು ಸುಮ್ಮನೆ ಕೂತಿದ್ದಾರೆ. ತುಟಿ ಬಿಚ್ಚಿದರೆ ಬಹಳಷ್ಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅನ್ನಿಸುತ್ತಿದೆ. ಅಲ್ಲಾ, ಏಳು ತಲೆಮಾರು ಕೂತು ತಿನ್ನುವಷ್ಟು ಹಣ ಸಂಪಾದನೆ ಮಾಡಿದ್ದೀರಲ್ಲಾ, ಮಾತನಾಡುವುದಕ್ಕೆ ಏನು ತೊಂದರೆ’?


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...