Homeಮುಖಪುಟನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಅನ್ನದಾತನ ಹೋರಾಟದ ಪರವಾಗಿ ಭಾರತೀಯ ಚಿತ್ರರಂಗದ ಸಂವೇದನಾಶೀಲ ನಟರು ಮಾತನಾಡುತ್ತಿದ್ದಾರೆ. ಹಿರಿಯ ರಂಗಕಲಾವಿದ, ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಕೂಡ ರೈತರ ಹೋರಾಟ ಬೆಂಬಲಿಸಿ ಮಾತನಾಡಿದ್ದಾರೆ. ಕಳೆದ ತಿಂಗಳು ಅವರು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗೆ ಅವರು ನೀಡಿದ ಸಂದರ್ಶನ ಈಗ ವೈರಲ್ ಆಗಿದೆ. ಅವರು ಹೆಸರಿನಲ್ಲಿ ಹಲವಾರು ಟ್ವಿಟರ್ ಖಾತೆಗಳಿದ್ದು ಅವುಗಳಲ್ಲಿ ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಲಾಗಿದೆ. ಆದರೆ ಅವು ಅನಧಿಕೃತ ಎಂದು ಅವರ ಪತ್ನಿ ಸ್ಪಷ್ಟೀಕರಣ ನೀಡಿದ್ದಾರೆ. ಅವರ ವೈರಲ್ ವಿಡಿಯೋದ ಪೂರ್ಣ ಪಾಠ ಇಲ್ಲಿದೆ.

ನಾಸಿರುದ್ದೀನ್‌ ಶಾ ಹೇಳಿರುವುದೇನು?

ಸಾವಿರಾರು ರೈತ ಸೋದರ-ಸೋದರಿಯರು, ಮಕ್ಕಳು ದೆಹಲಿಯ ಕೊರೆಯುವ ಚಳಿಯಲ್ಲಿ ನ್ಯಾಯ ಕೇಳಲು, ತಮ್ಮ ಹಕ್ಕನ್ನು ಪಡೆಯಲು ಸೇರಿದ್ದೀರಿ, ನಿಮಗೆಲ್ಲಾ ನನ್ನ ನಮಸ್ಕಾರಗಳು

ಈ ದೇಶದ ಆಳ್ವಿಕೆಯು ನಿಮ್ಮೊಂದಿಗೆ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೊ, ಅದು ನನಗೆ ದಬ್ಬಾಳಿಕೆಯ ತಂದೆ-ತಾಯಿಗಳ ಕತೆಯನ್ನು ನೆನಪಿಸುತ್ತದೆ.

ಅವರ ಮಕ್ಕಳು ಶಿಲ್ಪಿಯೋ, ಪ್ರವಾಸಿಯೋ ಆಗಬೇಕೆಂದು ಬಯಸಿದರೆ, ನಿಮಗೇನು ಬೇಕು ಎಂದು ನಿಮಗೆ ಗೊತ್ತಾಗೊಲ್ಲ. ನಿಮಗಿಂತ ಚೆನ್ನಾಗಿ ನಮಗೆ ಗೊತ್ತು. ನಿಮಗೆ ಯಾವುದು ಹೆಚ್ಚು ಲಾಭದಾಯಕ ಎಂಬುದು ನಮಗೆ ಗೊತ್ತು ಎನ್ನುತ್ತಾರೆ ಪೋಷಕರು.

ನಮ್ಮ ಪ್ರಕಾರ, ಯಾರು ತನ್ನ ಬಲವನ್ನು ನಂಬಿ, ನೇಗಿಲು ಹಿಡಿದು ನೆಲವನ್ನು ಉಳುತ್ತಾನೋ, ಪ್ರೀತಿ ಮತ್ತು ಪರಿಶ್ರಮದಿಂದ ಅದೇ ನೆಲದಲ್ಲಿ ಬೀಜ ಬಿತ್ತುತ್ತಾನೊ, ಆ ನೆಲವನ್ನು ಸಿಂಗರಿಸುತ್ತಾನೊ, ಬೆಳೆಯನ್ನು ತನ್ನ ಮಗುವಂತೆ ಪೊರೆಯುತ್ತಾನೋ ಆತನಿಗಿಂತ ಚೆನ್ನಾಗಿ ಬೇರೆ ಯಾರಿಗೂ ಯಾವುದೂ ಲಾಭದಾಯಕವಾದದ್ದು ಎಂಬುದು ತಿಳಿದಿರಲು ಸಾಧ್ಯವಿಲ್ಲ.

ಈ ಆಳ್ವಿಕೆಯು ಸಾವಿರಾರು ರೀತಿಯಲ್ಲಿ ಮುಗ್ದರನ್ನು ವಂಚಕರೆಂದು ಹೆಸರು ಕೆಡಿಸುವ ಪ್ರಯತ್ನ ಮಾಡಿದರೆ, ನನ್ನಂತಹ ಲಕ್ಷಾಂತರ ಜನರಿದ್ದಾರೆ, ಅವರೆಲ್ಲರ ಪ್ರಾರ್ಥನೆ ನಿಮ್ಮೊಂದಿಗಿದೆ. ಈ ಎಲ್ಲರಿಗೂ ನಿಮ್ಮ ಶಕ್ತಿ, ಸಂಯಮ, ಅಧಿಕಾರವೇ ಮಾದರಿ.

ನಿಮ್ಮಂತಹವರಿಗಾಗಿಯೇ ಕವಿಯೊಬ್ಬರು ಹೇಳಿದ್ದು, ಈ ಘಮ್ಮೆನ್ನುವ ಹೂ ರಾಶಿ, ನಳನಳಿಸುವ ಹೊಲದ ದೊರೆ ನೀನು ಎಂದು ವರ್ಣಿಸಿದ್ದಾರೆ.

ನಮ್ಮ ಅನ್ನದಾತರು ನೀವು, ನಿಮ್ಮ ಗುರಿಯನ್ನು ಮುಟ್ಟಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ನಂಬಿಕೆ ಇದೆ, ಈ ರೈತ ಹೋರಾಟ ವ್ಯಾಪಿಸುತ್ತದೆ ಮತ್ತು ಜನಸಾಮಾನ್ಯರು ಇದರಲ್ಲಿ ಭಾಗಿಯಾಗುತ್ತಾರೆ. ಆಗಲೇಬೇಕು. ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ. ನಮ್ಮ ಚಿತ್ರರಂಗದ ದೊಡ್ಡ ಮನುಷ್ಯರು ಸುಮ್ಮನೆ ಕೂತಿದ್ದಾರೆ. ತುಟಿ ಬಿಚ್ಚಿದರೆ ಬಹಳಷ್ಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅನ್ನಿಸುತ್ತಿದೆ. ಅಲ್ಲಾ, ಏಳು ತಲೆಮಾರು ಕೂತು ತಿನ್ನುವಷ್ಟು ಹಣ ಸಂಪಾದನೆ ಮಾಡಿದ್ದೀರಲ್ಲಾ, ಮಾತನಾಡುವುದಕ್ಕೆ ಏನು ತೊಂದರೆ’?


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...