Homeಮುಖಪುಟರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು . ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನವನ್ನು ಕೊಡುತ್ತಿತ್ತು. ಈಗ ಹೊಸ ಕಾಯ್ದೆ ಜಾರಿಗೆ ತಂದು 60 ಶೇಕಡ ಕೇಂದ್ರ ಮತ್ತು 40 ಶೇಕಡ ರಾಜ್ಯ ಸರ್ಕಾರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರೀ ಹೊರೆಯನ್ನೇ ಹೊರೆಸಿದ್ದಾರೆ ಎಂದು ಸಿಎಂ ಹೇಳಿದರು.

ಗ್ರಾಮ ಪಂಚಾಯತ್‌ನಿಂದ ರಾಜ್ಯ ಮಟ್ಟದವರೆಗೆ ಜನವರಿ 5ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾರಂಭಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ

ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳವಳಿ ಮತ್ತು ಸಿದ್ಧಾಂತ. ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ, ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಂತ ನಮ್ಮದು ಎಂದು ಸಿಎಂ ಹೇಳಿದರು. ಸತ್ಯಾಗ್ರಹ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ ಎಂದರು.

ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷದವರು

ಬ್ರಿಟಿಷ್ ಅಧಿಕಾರಿ ಎ. ಒ ಹ್ಯೂಮ್ ಅವರು ಕಾಂಗ್ರೆಸ್ ಪಕ್ಷವನ್ನು 1885ರಲ್ಲಿ ಪ್ರಾರಂಭಿಸಿ 148 ವರ್ಷಗಳಾಗಿವೆ. ಬ್ರಿಟಿಷ್ ಆಡಳಿತದ ದಬ್ಬಾಳಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾರಂಭವಾದ ಕಾಂಗ್ರೆಸ್ ನಾಗರಿಕರ ಹಕ್ಕುಗಳ ರಕ್ಷಣೆ, ನ್ಯಾಯಯುತ ಆಡಳಿತಕ್ಕಾಗಿ ಒತ್ತಾಯಿಸಿತು. ಮುಂಬೈನಲ್ಲಿ ಮಾಡಲಾ ಅಧಿವೇಶನ ಪ್ರಾರಂಭವಾದ ನಂತರ ನಿಧಾನವಾಗಿ ಬೆಳಕನ್ನು ಕಾಣುವಂತಾಯಿತು. 1915ರಲ್ಲಿ ಮಹಾತ್ಮಾ ಗಾಂಧಿ ಯವರನ್ನು ಗೋಖಲೆಯವರು ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಲು ಆಹ್ವಾನಿಸಿದರು. ಡಿಸೆಂಬರ್ 28 ಐತಿಹಾಸಿಕ ದಿನವಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ಜನಸಂಘ, ಆರ್‌ಎಸ್‌ಎಸ್, ಹಿಂದೂ ಮಹಾಸಭಾ, ಬಿಜೆಪಿ ಸಂಘಟನೆಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷ ಎಂದು ಸಿಎಂ ಹೇಳಿದರು.

ಸ್ವಾತಂತ್ರ್ಯ ಚಳವಳಿ ಪ್ರಾರಂಭವಾಗಿದ್ದ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ 1915ರಿಂದ ದೇಶದ ಸಾಮಾಜಿಕ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಇಡೀ ದೇಶವನ್ನು ಸುತ್ತಿದ ನಂತರ ಕಾಂಗ್ರೆಸ್ ನೇತೃತ್ವವನ್ನು ಹೊತ್ತುಕೊಂಡರು. ಅಸಹಕಾರ ಚಳವಳಿ, ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾದಾಗ ಬಿಜೆಪಿ ಪಾಲ್ಗೊಂಡಿರಲಿಲ್ಲ ಎಂದರು.

ಬ್ರಿಟಿಷರೊಂದಿಗೆ ಸೇರಿಕೊಂಡಿದ್ದ ಬಿಜೆಪಿಯವರು ನಮಗೆ ದೇಶಭಕ್ತಿಯ ಪಾಠವನ್ನು ಹೇಳಿಕೊಡುತ್ತಾರೆ. ಅವರು ದೇಶಭಕ್ತರಂತೂ ಅಲ್ಲ. ದೇಶಭಕ್ತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿಯ ಒಬ್ಬ ನಾಯಕರೂ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿಲ್ಲ. ಈಗ ಮಹಾತ್ಮಾ ಗಾಂಧಿಯವರನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ. ಗಾಂಧಿಯನ್ನು ಕೊಂದವನು ನಾಥುರಾಮ್ ಗೋಡ್ಸೆ. ಬಿಜೆಪಿ ಕಚೇರಿಯ ಮೇಲೆ ಇತ್ತೀಚಿನವರೆಗೆ ಭಾರತದ ಧ್ವಜವೂ ಹಾರಾಡುತ್ತಿರಲಿಲ್ಲ. ಇವರಿಗೆ ದೇಶಕ್ಕೆ ಸ್ವಾತಂತ್ರ್ಯ ಬರುವುದೇ ಇಷ್ಟವಿರಲಿಲ್ಲ ಎಂದರು.

ದೇಶ ಮತ್ತು ಸಮಾಜ ಒಡೆಯುದೇ ಬಿಜೆಪಿಯ ಸಾಧನೆ

ಕಾಂಗ್ರೆಸ್‌ನವರು ಎನ್ನುವುದೇ ನಮಗೆ ಹೆಮ್ಮೆಯ ಸಂಗತಿ. ಆಧುನಿಕ ಭಾರತದ ರೂವಾರಿ ಜವಾಹರ್‌ಲಾಲ್ ನೆಹರೂ ಅವರು. ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ, ಸಾಮಾಜಿಕ ನ್ಯಾಯದ ರೂವಾರಿ ಶ್ರೀಮತಿ ಇಂದಿರಾ ಗಾಂಧಿ, ಗರೀಬಿ ಹಠಾವೋ ಎನ್ನುವುದು ಕೇವಲ ಘೋಷಣೆಯಲ್ಲ. ಅದಕ್ಕೆ ಪೂರಕವಾಗಿ 20 ಅಂಶದ ಕಾರ್ಯಕ್ರಮವನ್ನು ನೀಡಿದರು. ಆಹಾರದಲ್ಲಿ ಸ್ವಾವಲಂಬನೆ ಬರಲು ಇಂದಿರಾ ಗಾಂಧಿ ಹಾಗೂ ಜಗಜೀವನ ರಾಮ್ ಅವರು ಕಾರಣ. 21ನೇ ಶತಮಾನಕ್ಕೆ ಸೂಕ್ತ ಕೊಡುಗೆಗಳನ್ನು ನೀಡಿದ್ದು ರಾಜೀವ್ ಗಾಂಧಿ. ಬಿಜೆಪಿಯ ಸಾಧನೆ ಏನೆಂದರೆ, ದೇಶ ಮತ್ತು ಸಮಾಜ ಒಡೆಯುವ ಕೆಲಸ. ಜಾತಿ ವ್ಯವಸ್ಥೆಯನ್ನು ಹುಟ್ಟುಹಾಕಿದ್ದು ಮನುವಾದಿಗಳು. ಚಾತುರ್ವರ್ಣ ವ್ಯವಸ್ಥೆಯನ್ನು ಹುಟ್ಟುಹಾಕಿದ್ದೆ ಬಿಜೆಪಿ. ಸಂವಿಧಾನ ರಚನೆಯಾದ ಮೇಲೆ ಸಮಾನ ಅವಕಾಶಗಳು ದೊರಕುವಂತಾಯಿತು ಎಂದು ಸಿಎಂ ಹೇಳಿದರು.

ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರಾಜಕೀಯ ಪ್ರಜಾಪ್ರಭುತ್ವ ನಿಂತಿದೆ. ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂಬ ತತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆಯಿದೆ. ಅದಕ್ಕಾಗಿಯೇ ನಾವು ಅಸಮಾನತೆ ಹೋಗಲಾಡಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದರು. ಶಿಕ್ಷಣ, ಉದ್ಯೋಗ ಖಾತರಿ ಮುಂತಾದ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಯಾರಿಗೂ ಈ ಪ್ರಮಾಣದ ದ್ವೇಷ ಇರಬಾರದು. ಮಹಾತ್ಮಾ ಗಾಂಧಿಯವರನ್ನು ಕೊಂದ ನಂತರವೂ ಇದನ್ನು ಮುಂದುವರೆಸಿದ್ದಾರೆ. ನೆಹರೂ, ಇಂದಿರಾ ಗಾಂಧಿ , ರಾಜೀವ್ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಕಂಡರೆ ಅವರಿಗೆ ಆಗುವುದೇ ಇಲ್ಲ. ನರೇಗಾ ಯೋಜನೆ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕರೆದಿದ್ದು, ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯನ್ನೇ ಮಾಡಿಲ್ಲ. ಇವರು ಹೇಳುವ ರಾಮ ದಶರಥ ಮಗ ರಾಮನಲ್ಲ, ಬಿಜೆಪಿಯ ರಾಮ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...