Homeಮುಖಪುಟರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು . ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನವನ್ನು ಕೊಡುತ್ತಿತ್ತು. ಈಗ ಹೊಸ ಕಾಯ್ದೆ ಜಾರಿಗೆ ತಂದು 60 ಶೇಕಡ ಕೇಂದ್ರ ಮತ್ತು 40 ಶೇಕಡ ರಾಜ್ಯ ಸರ್ಕಾರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರೀ ಹೊರೆಯನ್ನೇ ಹೊರೆಸಿದ್ದಾರೆ ಎಂದು ಸಿಎಂ ಹೇಳಿದರು.

ಗ್ರಾಮ ಪಂಚಾಯತ್‌ನಿಂದ ರಾಜ್ಯ ಮಟ್ಟದವರೆಗೆ ಜನವರಿ 5ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾರಂಭಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ

ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳವಳಿ ಮತ್ತು ಸಿದ್ಧಾಂತ. ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ, ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಂತ ನಮ್ಮದು ಎಂದು ಸಿಎಂ ಹೇಳಿದರು. ಸತ್ಯಾಗ್ರಹ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ ಎಂದರು.

ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷದವರು

ಬ್ರಿಟಿಷ್ ಅಧಿಕಾರಿ ಎ. ಒ ಹ್ಯೂಮ್ ಅವರು ಕಾಂಗ್ರೆಸ್ ಪಕ್ಷವನ್ನು 1885ರಲ್ಲಿ ಪ್ರಾರಂಭಿಸಿ 148 ವರ್ಷಗಳಾಗಿವೆ. ಬ್ರಿಟಿಷ್ ಆಡಳಿತದ ದಬ್ಬಾಳಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾರಂಭವಾದ ಕಾಂಗ್ರೆಸ್ ನಾಗರಿಕರ ಹಕ್ಕುಗಳ ರಕ್ಷಣೆ, ನ್ಯಾಯಯುತ ಆಡಳಿತಕ್ಕಾಗಿ ಒತ್ತಾಯಿಸಿತು. ಮುಂಬೈನಲ್ಲಿ ಮಾಡಲಾ ಅಧಿವೇಶನ ಪ್ರಾರಂಭವಾದ ನಂತರ ನಿಧಾನವಾಗಿ ಬೆಳಕನ್ನು ಕಾಣುವಂತಾಯಿತು. 1915ರಲ್ಲಿ ಮಹಾತ್ಮಾ ಗಾಂಧಿ ಯವರನ್ನು ಗೋಖಲೆಯವರು ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಲು ಆಹ್ವಾನಿಸಿದರು. ಡಿಸೆಂಬರ್ 28 ಐತಿಹಾಸಿಕ ದಿನವಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ಜನಸಂಘ, ಆರ್‌ಎಸ್‌ಎಸ್, ಹಿಂದೂ ಮಹಾಸಭಾ, ಬಿಜೆಪಿ ಸಂಘಟನೆಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷ ಎಂದು ಸಿಎಂ ಹೇಳಿದರು.

ಸ್ವಾತಂತ್ರ್ಯ ಚಳವಳಿ ಪ್ರಾರಂಭವಾಗಿದ್ದ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ 1915ರಿಂದ ದೇಶದ ಸಾಮಾಜಿಕ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಇಡೀ ದೇಶವನ್ನು ಸುತ್ತಿದ ನಂತರ ಕಾಂಗ್ರೆಸ್ ನೇತೃತ್ವವನ್ನು ಹೊತ್ತುಕೊಂಡರು. ಅಸಹಕಾರ ಚಳವಳಿ, ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾದಾಗ ಬಿಜೆಪಿ ಪಾಲ್ಗೊಂಡಿರಲಿಲ್ಲ ಎಂದರು.

ಬ್ರಿಟಿಷರೊಂದಿಗೆ ಸೇರಿಕೊಂಡಿದ್ದ ಬಿಜೆಪಿಯವರು ನಮಗೆ ದೇಶಭಕ್ತಿಯ ಪಾಠವನ್ನು ಹೇಳಿಕೊಡುತ್ತಾರೆ. ಅವರು ದೇಶಭಕ್ತರಂತೂ ಅಲ್ಲ. ದೇಶಭಕ್ತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿಯ ಒಬ್ಬ ನಾಯಕರೂ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿಲ್ಲ. ಈಗ ಮಹಾತ್ಮಾ ಗಾಂಧಿಯವರನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ. ಗಾಂಧಿಯನ್ನು ಕೊಂದವನು ನಾಥುರಾಮ್ ಗೋಡ್ಸೆ. ಬಿಜೆಪಿ ಕಚೇರಿಯ ಮೇಲೆ ಇತ್ತೀಚಿನವರೆಗೆ ಭಾರತದ ಧ್ವಜವೂ ಹಾರಾಡುತ್ತಿರಲಿಲ್ಲ. ಇವರಿಗೆ ದೇಶಕ್ಕೆ ಸ್ವಾತಂತ್ರ್ಯ ಬರುವುದೇ ಇಷ್ಟವಿರಲಿಲ್ಲ ಎಂದರು.

ದೇಶ ಮತ್ತು ಸಮಾಜ ಒಡೆಯುದೇ ಬಿಜೆಪಿಯ ಸಾಧನೆ

ಕಾಂಗ್ರೆಸ್‌ನವರು ಎನ್ನುವುದೇ ನಮಗೆ ಹೆಮ್ಮೆಯ ಸಂಗತಿ. ಆಧುನಿಕ ಭಾರತದ ರೂವಾರಿ ಜವಾಹರ್‌ಲಾಲ್ ನೆಹರೂ ಅವರು. ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ, ಸಾಮಾಜಿಕ ನ್ಯಾಯದ ರೂವಾರಿ ಶ್ರೀಮತಿ ಇಂದಿರಾ ಗಾಂಧಿ, ಗರೀಬಿ ಹಠಾವೋ ಎನ್ನುವುದು ಕೇವಲ ಘೋಷಣೆಯಲ್ಲ. ಅದಕ್ಕೆ ಪೂರಕವಾಗಿ 20 ಅಂಶದ ಕಾರ್ಯಕ್ರಮವನ್ನು ನೀಡಿದರು. ಆಹಾರದಲ್ಲಿ ಸ್ವಾವಲಂಬನೆ ಬರಲು ಇಂದಿರಾ ಗಾಂಧಿ ಹಾಗೂ ಜಗಜೀವನ ರಾಮ್ ಅವರು ಕಾರಣ. 21ನೇ ಶತಮಾನಕ್ಕೆ ಸೂಕ್ತ ಕೊಡುಗೆಗಳನ್ನು ನೀಡಿದ್ದು ರಾಜೀವ್ ಗಾಂಧಿ. ಬಿಜೆಪಿಯ ಸಾಧನೆ ಏನೆಂದರೆ, ದೇಶ ಮತ್ತು ಸಮಾಜ ಒಡೆಯುವ ಕೆಲಸ. ಜಾತಿ ವ್ಯವಸ್ಥೆಯನ್ನು ಹುಟ್ಟುಹಾಕಿದ್ದು ಮನುವಾದಿಗಳು. ಚಾತುರ್ವರ್ಣ ವ್ಯವಸ್ಥೆಯನ್ನು ಹುಟ್ಟುಹಾಕಿದ್ದೆ ಬಿಜೆಪಿ. ಸಂವಿಧಾನ ರಚನೆಯಾದ ಮೇಲೆ ಸಮಾನ ಅವಕಾಶಗಳು ದೊರಕುವಂತಾಯಿತು ಎಂದು ಸಿಎಂ ಹೇಳಿದರು.

ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರಾಜಕೀಯ ಪ್ರಜಾಪ್ರಭುತ್ವ ನಿಂತಿದೆ. ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂಬ ತತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆಯಿದೆ. ಅದಕ್ಕಾಗಿಯೇ ನಾವು ಅಸಮಾನತೆ ಹೋಗಲಾಡಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದರು. ಶಿಕ್ಷಣ, ಉದ್ಯೋಗ ಖಾತರಿ ಮುಂತಾದ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಯಾರಿಗೂ ಈ ಪ್ರಮಾಣದ ದ್ವೇಷ ಇರಬಾರದು. ಮಹಾತ್ಮಾ ಗಾಂಧಿಯವರನ್ನು ಕೊಂದ ನಂತರವೂ ಇದನ್ನು ಮುಂದುವರೆಸಿದ್ದಾರೆ. ನೆಹರೂ, ಇಂದಿರಾ ಗಾಂಧಿ , ರಾಜೀವ್ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಕಂಡರೆ ಅವರಿಗೆ ಆಗುವುದೇ ಇಲ್ಲ. ನರೇಗಾ ಯೋಜನೆ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕರೆದಿದ್ದು, ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯನ್ನೇ ಮಾಡಿಲ್ಲ. ಇವರು ಹೇಳುವ ರಾಮ ದಶರಥ ಮಗ ರಾಮನಲ್ಲ, ಬಿಜೆಪಿಯ ರಾಮ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...