Homeಮುಖಪುಟರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು . ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನವನ್ನು ಕೊಡುತ್ತಿತ್ತು. ಈಗ ಹೊಸ ಕಾಯ್ದೆ ಜಾರಿಗೆ ತಂದು 60 ಶೇಕಡ ಕೇಂದ್ರ ಮತ್ತು 40 ಶೇಕಡ ರಾಜ್ಯ ಸರ್ಕಾರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರೀ ಹೊರೆಯನ್ನೇ ಹೊರೆಸಿದ್ದಾರೆ ಎಂದು ಸಿಎಂ ಹೇಳಿದರು.

ಗ್ರಾಮ ಪಂಚಾಯತ್‌ನಿಂದ ರಾಜ್ಯ ಮಟ್ಟದವರೆಗೆ ಜನವರಿ 5ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾರಂಭಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ

ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳವಳಿ ಮತ್ತು ಸಿದ್ಧಾಂತ. ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ, ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಂತ ನಮ್ಮದು ಎಂದು ಸಿಎಂ ಹೇಳಿದರು. ಸತ್ಯಾಗ್ರಹ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ ಎಂದರು.

ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷದವರು

ಬ್ರಿಟಿಷ್ ಅಧಿಕಾರಿ ಎ. ಒ ಹ್ಯೂಮ್ ಅವರು ಕಾಂಗ್ರೆಸ್ ಪಕ್ಷವನ್ನು 1885ರಲ್ಲಿ ಪ್ರಾರಂಭಿಸಿ 148 ವರ್ಷಗಳಾಗಿವೆ. ಬ್ರಿಟಿಷ್ ಆಡಳಿತದ ದಬ್ಬಾಳಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾರಂಭವಾದ ಕಾಂಗ್ರೆಸ್ ನಾಗರಿಕರ ಹಕ್ಕುಗಳ ರಕ್ಷಣೆ, ನ್ಯಾಯಯುತ ಆಡಳಿತಕ್ಕಾಗಿ ಒತ್ತಾಯಿಸಿತು. ಮುಂಬೈನಲ್ಲಿ ಮಾಡಲಾ ಅಧಿವೇಶನ ಪ್ರಾರಂಭವಾದ ನಂತರ ನಿಧಾನವಾಗಿ ಬೆಳಕನ್ನು ಕಾಣುವಂತಾಯಿತು. 1915ರಲ್ಲಿ ಮಹಾತ್ಮಾ ಗಾಂಧಿ ಯವರನ್ನು ಗೋಖಲೆಯವರು ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಲು ಆಹ್ವಾನಿಸಿದರು. ಡಿಸೆಂಬರ್ 28 ಐತಿಹಾಸಿಕ ದಿನವಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ಜನಸಂಘ, ಆರ್‌ಎಸ್‌ಎಸ್, ಹಿಂದೂ ಮಹಾಸಭಾ, ಬಿಜೆಪಿ ಸಂಘಟನೆಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷ ಎಂದು ಸಿಎಂ ಹೇಳಿದರು.

ಸ್ವಾತಂತ್ರ್ಯ ಚಳವಳಿ ಪ್ರಾರಂಭವಾಗಿದ್ದ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ 1915ರಿಂದ ದೇಶದ ಸಾಮಾಜಿಕ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಇಡೀ ದೇಶವನ್ನು ಸುತ್ತಿದ ನಂತರ ಕಾಂಗ್ರೆಸ್ ನೇತೃತ್ವವನ್ನು ಹೊತ್ತುಕೊಂಡರು. ಅಸಹಕಾರ ಚಳವಳಿ, ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾದಾಗ ಬಿಜೆಪಿ ಪಾಲ್ಗೊಂಡಿರಲಿಲ್ಲ ಎಂದರು.

ಬ್ರಿಟಿಷರೊಂದಿಗೆ ಸೇರಿಕೊಂಡಿದ್ದ ಬಿಜೆಪಿಯವರು ನಮಗೆ ದೇಶಭಕ್ತಿಯ ಪಾಠವನ್ನು ಹೇಳಿಕೊಡುತ್ತಾರೆ. ಅವರು ದೇಶಭಕ್ತರಂತೂ ಅಲ್ಲ. ದೇಶಭಕ್ತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿಯ ಒಬ್ಬ ನಾಯಕರೂ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿಲ್ಲ. ಈಗ ಮಹಾತ್ಮಾ ಗಾಂಧಿಯವರನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ. ಗಾಂಧಿಯನ್ನು ಕೊಂದವನು ನಾಥುರಾಮ್ ಗೋಡ್ಸೆ. ಬಿಜೆಪಿ ಕಚೇರಿಯ ಮೇಲೆ ಇತ್ತೀಚಿನವರೆಗೆ ಭಾರತದ ಧ್ವಜವೂ ಹಾರಾಡುತ್ತಿರಲಿಲ್ಲ. ಇವರಿಗೆ ದೇಶಕ್ಕೆ ಸ್ವಾತಂತ್ರ್ಯ ಬರುವುದೇ ಇಷ್ಟವಿರಲಿಲ್ಲ ಎಂದರು.

ದೇಶ ಮತ್ತು ಸಮಾಜ ಒಡೆಯುದೇ ಬಿಜೆಪಿಯ ಸಾಧನೆ

ಕಾಂಗ್ರೆಸ್‌ನವರು ಎನ್ನುವುದೇ ನಮಗೆ ಹೆಮ್ಮೆಯ ಸಂಗತಿ. ಆಧುನಿಕ ಭಾರತದ ರೂವಾರಿ ಜವಾಹರ್‌ಲಾಲ್ ನೆಹರೂ ಅವರು. ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ, ಸಾಮಾಜಿಕ ನ್ಯಾಯದ ರೂವಾರಿ ಶ್ರೀಮತಿ ಇಂದಿರಾ ಗಾಂಧಿ, ಗರೀಬಿ ಹಠಾವೋ ಎನ್ನುವುದು ಕೇವಲ ಘೋಷಣೆಯಲ್ಲ. ಅದಕ್ಕೆ ಪೂರಕವಾಗಿ 20 ಅಂಶದ ಕಾರ್ಯಕ್ರಮವನ್ನು ನೀಡಿದರು. ಆಹಾರದಲ್ಲಿ ಸ್ವಾವಲಂಬನೆ ಬರಲು ಇಂದಿರಾ ಗಾಂಧಿ ಹಾಗೂ ಜಗಜೀವನ ರಾಮ್ ಅವರು ಕಾರಣ. 21ನೇ ಶತಮಾನಕ್ಕೆ ಸೂಕ್ತ ಕೊಡುಗೆಗಳನ್ನು ನೀಡಿದ್ದು ರಾಜೀವ್ ಗಾಂಧಿ. ಬಿಜೆಪಿಯ ಸಾಧನೆ ಏನೆಂದರೆ, ದೇಶ ಮತ್ತು ಸಮಾಜ ಒಡೆಯುವ ಕೆಲಸ. ಜಾತಿ ವ್ಯವಸ್ಥೆಯನ್ನು ಹುಟ್ಟುಹಾಕಿದ್ದು ಮನುವಾದಿಗಳು. ಚಾತುರ್ವರ್ಣ ವ್ಯವಸ್ಥೆಯನ್ನು ಹುಟ್ಟುಹಾಕಿದ್ದೆ ಬಿಜೆಪಿ. ಸಂವಿಧಾನ ರಚನೆಯಾದ ಮೇಲೆ ಸಮಾನ ಅವಕಾಶಗಳು ದೊರಕುವಂತಾಯಿತು ಎಂದು ಸಿಎಂ ಹೇಳಿದರು.

ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರಾಜಕೀಯ ಪ್ರಜಾಪ್ರಭುತ್ವ ನಿಂತಿದೆ. ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂಬ ತತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆಯಿದೆ. ಅದಕ್ಕಾಗಿಯೇ ನಾವು ಅಸಮಾನತೆ ಹೋಗಲಾಡಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದರು. ಶಿಕ್ಷಣ, ಉದ್ಯೋಗ ಖಾತರಿ ಮುಂತಾದ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಯಾರಿಗೂ ಈ ಪ್ರಮಾಣದ ದ್ವೇಷ ಇರಬಾರದು. ಮಹಾತ್ಮಾ ಗಾಂಧಿಯವರನ್ನು ಕೊಂದ ನಂತರವೂ ಇದನ್ನು ಮುಂದುವರೆಸಿದ್ದಾರೆ. ನೆಹರೂ, ಇಂದಿರಾ ಗಾಂಧಿ , ರಾಜೀವ್ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಕಂಡರೆ ಅವರಿಗೆ ಆಗುವುದೇ ಇಲ್ಲ. ನರೇಗಾ ಯೋಜನೆ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕರೆದಿದ್ದು, ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯನ್ನೇ ಮಾಡಿಲ್ಲ. ಇವರು ಹೇಳುವ ರಾಮ ದಶರಥ ಮಗ ರಾಮನಲ್ಲ, ಬಿಜೆಪಿಯ ರಾಮ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...