Homeಮುಖಪುಟರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು . ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನವನ್ನು ಕೊಡುತ್ತಿತ್ತು. ಈಗ ಹೊಸ ಕಾಯ್ದೆ ಜಾರಿಗೆ ತಂದು 60 ಶೇಕಡ ಕೇಂದ್ರ ಮತ್ತು 40 ಶೇಕಡ ರಾಜ್ಯ ಸರ್ಕಾರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರೀ ಹೊರೆಯನ್ನೇ ಹೊರೆಸಿದ್ದಾರೆ ಎಂದು ಸಿಎಂ ಹೇಳಿದರು.

ಗ್ರಾಮ ಪಂಚಾಯತ್‌ನಿಂದ ರಾಜ್ಯ ಮಟ್ಟದವರೆಗೆ ಜನವರಿ 5ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾರಂಭಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ

ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳವಳಿ ಮತ್ತು ಸಿದ್ಧಾಂತ. ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ, ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಂತ ನಮ್ಮದು ಎಂದು ಸಿಎಂ ಹೇಳಿದರು. ಸತ್ಯಾಗ್ರಹ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ ಎಂದರು.

ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷದವರು

ಬ್ರಿಟಿಷ್ ಅಧಿಕಾರಿ ಎ. ಒ ಹ್ಯೂಮ್ ಅವರು ಕಾಂಗ್ರೆಸ್ ಪಕ್ಷವನ್ನು 1885ರಲ್ಲಿ ಪ್ರಾರಂಭಿಸಿ 148 ವರ್ಷಗಳಾಗಿವೆ. ಬ್ರಿಟಿಷ್ ಆಡಳಿತದ ದಬ್ಬಾಳಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾರಂಭವಾದ ಕಾಂಗ್ರೆಸ್ ನಾಗರಿಕರ ಹಕ್ಕುಗಳ ರಕ್ಷಣೆ, ನ್ಯಾಯಯುತ ಆಡಳಿತಕ್ಕಾಗಿ ಒತ್ತಾಯಿಸಿತು. ಮುಂಬೈನಲ್ಲಿ ಮಾಡಲಾ ಅಧಿವೇಶನ ಪ್ರಾರಂಭವಾದ ನಂತರ ನಿಧಾನವಾಗಿ ಬೆಳಕನ್ನು ಕಾಣುವಂತಾಯಿತು. 1915ರಲ್ಲಿ ಮಹಾತ್ಮಾ ಗಾಂಧಿ ಯವರನ್ನು ಗೋಖಲೆಯವರು ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಲು ಆಹ್ವಾನಿಸಿದರು. ಡಿಸೆಂಬರ್ 28 ಐತಿಹಾಸಿಕ ದಿನವಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ಜನಸಂಘ, ಆರ್‌ಎಸ್‌ಎಸ್, ಹಿಂದೂ ಮಹಾಸಭಾ, ಬಿಜೆಪಿ ಸಂಘಟನೆಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷ ಎಂದು ಸಿಎಂ ಹೇಳಿದರು.

ಸ್ವಾತಂತ್ರ್ಯ ಚಳವಳಿ ಪ್ರಾರಂಭವಾಗಿದ್ದ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ 1915ರಿಂದ ದೇಶದ ಸಾಮಾಜಿಕ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಇಡೀ ದೇಶವನ್ನು ಸುತ್ತಿದ ನಂತರ ಕಾಂಗ್ರೆಸ್ ನೇತೃತ್ವವನ್ನು ಹೊತ್ತುಕೊಂಡರು. ಅಸಹಕಾರ ಚಳವಳಿ, ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾದಾಗ ಬಿಜೆಪಿ ಪಾಲ್ಗೊಂಡಿರಲಿಲ್ಲ ಎಂದರು.

ಬ್ರಿಟಿಷರೊಂದಿಗೆ ಸೇರಿಕೊಂಡಿದ್ದ ಬಿಜೆಪಿಯವರು ನಮಗೆ ದೇಶಭಕ್ತಿಯ ಪಾಠವನ್ನು ಹೇಳಿಕೊಡುತ್ತಾರೆ. ಅವರು ದೇಶಭಕ್ತರಂತೂ ಅಲ್ಲ. ದೇಶಭಕ್ತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿಯ ಒಬ್ಬ ನಾಯಕರೂ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿಲ್ಲ. ಈಗ ಮಹಾತ್ಮಾ ಗಾಂಧಿಯವರನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ. ಗಾಂಧಿಯನ್ನು ಕೊಂದವನು ನಾಥುರಾಮ್ ಗೋಡ್ಸೆ. ಬಿಜೆಪಿ ಕಚೇರಿಯ ಮೇಲೆ ಇತ್ತೀಚಿನವರೆಗೆ ಭಾರತದ ಧ್ವಜವೂ ಹಾರಾಡುತ್ತಿರಲಿಲ್ಲ. ಇವರಿಗೆ ದೇಶಕ್ಕೆ ಸ್ವಾತಂತ್ರ್ಯ ಬರುವುದೇ ಇಷ್ಟವಿರಲಿಲ್ಲ ಎಂದರು.

ದೇಶ ಮತ್ತು ಸಮಾಜ ಒಡೆಯುದೇ ಬಿಜೆಪಿಯ ಸಾಧನೆ

ಕಾಂಗ್ರೆಸ್‌ನವರು ಎನ್ನುವುದೇ ನಮಗೆ ಹೆಮ್ಮೆಯ ಸಂಗತಿ. ಆಧುನಿಕ ಭಾರತದ ರೂವಾರಿ ಜವಾಹರ್‌ಲಾಲ್ ನೆಹರೂ ಅವರು. ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ, ಸಾಮಾಜಿಕ ನ್ಯಾಯದ ರೂವಾರಿ ಶ್ರೀಮತಿ ಇಂದಿರಾ ಗಾಂಧಿ, ಗರೀಬಿ ಹಠಾವೋ ಎನ್ನುವುದು ಕೇವಲ ಘೋಷಣೆಯಲ್ಲ. ಅದಕ್ಕೆ ಪೂರಕವಾಗಿ 20 ಅಂಶದ ಕಾರ್ಯಕ್ರಮವನ್ನು ನೀಡಿದರು. ಆಹಾರದಲ್ಲಿ ಸ್ವಾವಲಂಬನೆ ಬರಲು ಇಂದಿರಾ ಗಾಂಧಿ ಹಾಗೂ ಜಗಜೀವನ ರಾಮ್ ಅವರು ಕಾರಣ. 21ನೇ ಶತಮಾನಕ್ಕೆ ಸೂಕ್ತ ಕೊಡುಗೆಗಳನ್ನು ನೀಡಿದ್ದು ರಾಜೀವ್ ಗಾಂಧಿ. ಬಿಜೆಪಿಯ ಸಾಧನೆ ಏನೆಂದರೆ, ದೇಶ ಮತ್ತು ಸಮಾಜ ಒಡೆಯುವ ಕೆಲಸ. ಜಾತಿ ವ್ಯವಸ್ಥೆಯನ್ನು ಹುಟ್ಟುಹಾಕಿದ್ದು ಮನುವಾದಿಗಳು. ಚಾತುರ್ವರ್ಣ ವ್ಯವಸ್ಥೆಯನ್ನು ಹುಟ್ಟುಹಾಕಿದ್ದೆ ಬಿಜೆಪಿ. ಸಂವಿಧಾನ ರಚನೆಯಾದ ಮೇಲೆ ಸಮಾನ ಅವಕಾಶಗಳು ದೊರಕುವಂತಾಯಿತು ಎಂದು ಸಿಎಂ ಹೇಳಿದರು.

ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರಾಜಕೀಯ ಪ್ರಜಾಪ್ರಭುತ್ವ ನಿಂತಿದೆ. ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂಬ ತತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆಯಿದೆ. ಅದಕ್ಕಾಗಿಯೇ ನಾವು ಅಸಮಾನತೆ ಹೋಗಲಾಡಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದರು. ಶಿಕ್ಷಣ, ಉದ್ಯೋಗ ಖಾತರಿ ಮುಂತಾದ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಯಾರಿಗೂ ಈ ಪ್ರಮಾಣದ ದ್ವೇಷ ಇರಬಾರದು. ಮಹಾತ್ಮಾ ಗಾಂಧಿಯವರನ್ನು ಕೊಂದ ನಂತರವೂ ಇದನ್ನು ಮುಂದುವರೆಸಿದ್ದಾರೆ. ನೆಹರೂ, ಇಂದಿರಾ ಗಾಂಧಿ , ರಾಜೀವ್ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಕಂಡರೆ ಅವರಿಗೆ ಆಗುವುದೇ ಇಲ್ಲ. ನರೇಗಾ ಯೋಜನೆ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕರೆದಿದ್ದು, ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯನ್ನೇ ಮಾಡಿಲ್ಲ. ಇವರು ಹೇಳುವ ರಾಮ ದಶರಥ ಮಗ ರಾಮನಲ್ಲ, ಬಿಜೆಪಿಯ ರಾಮ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...