Homeಮುಖಪುಟವಿಕಾಸ್ ದುಬೆ ಪ್ರಕರಣ: ತೆಲಂಗಾಣದಂತೆ ಏನಾದರೂ ಮಾಡುತ್ತೇವೆ- ಸುಪ್ರೀಂ

ವಿಕಾಸ್ ದುಬೆ ಪ್ರಕರಣ: ತೆಲಂಗಾಣದಂತೆ ಏನಾದರೂ ಮಾಡುತ್ತೇವೆ- ಸುಪ್ರೀಂ

ಎರಡೂ ಘಟನೆಗಳ ಬಗ್ಗೆ ನ್ಯಾಯಾಲಯವು ಪಿಐಎಲ್‌ಗಳಿಗೆ ಪ್ರತಿಕ್ರಿಯಿಸಿ, ಯುಪಿ ಸರ್ಕಾರಕ್ಕೆ "ಯಾವ ರೀತಿಯ ಸಮಿತಿ" ಬೇಕು ಎಂದು ತಿಳಿಸುವಂತೆ ಗುರುವಾರದ ತನಕ ಕಾಲಾವಕಾಶ ನೀಡಿದೆ. 

- Advertisement -
- Advertisement -

8 ಪೊಲೀಸರ ಹತ್ಯೆ ಮತ್ತು ಉತ್ತರ ಪ್ರದೇಶದ ಕ್ರಿಮಿನಲ್ ವಿಕಾಸ್ ದುಬೆ ಮತ್ತು ಅವನ ಸಹಚರರನ್ನು ಕಾನ್ಪುರ ಪೊಲೀಸರು ಹತ್ಯೆ ಮಾಡಿರುವುದರ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸುವುದಾಗಿ ತಿಳಿಸಿದೆ.

ಎರಡೂ ಘಟನೆಗಳ ಬಗ್ಗೆ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ಎನ್‌ಐಎ ತನಿಖೆ ನಡೆಸಬೇಕೆಂಬ ಪಿಐಎಲ್‌ಗಳಿಗೆ ಪ್ರತಿಕ್ರಿಯಿಸಿದ ನ್ಯಾಯಾಲಯ “ಯುಪಿ ಸರ್ಕಾರಕ್ಕೆ ಯಾವ ರೀತಿಯ ಸಮಿತಿ ಬೇಕು” ಎಂದು ತಿಳಿಸುವಂತೆ ಗುರುವಾರದ ತನಕ ಕಾಲಾವಕಾಶ ನೀಡಿದೆ. ಈ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ.

ತೆಲಂಗಾಣದಲ್ಲಿ ನಡೆದ ದಿಶಾ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳಾದ ನಾಲ್ವರನ್ನು ಎನ್‌ಕೌಂಟರ್ ಹತ್ಯೆ ಮಾಡಿರುವುದನ್ನು ಉಲ್ಲೇಖಿಸಿದ ಕೋರ್ಟ್ “ತೆಲಂಗಾಣ ಪ್ರಕರಣದಲ್ಲಿ ನಾವು ಏನು ಮಾಡಿದ್ದೇವೆಯೋ, ಈಗಲೂ ಹಾಗೆಯೇ ಮಾಡುತ್ತೇವೆ. ನಿಮಗೆ ಯಾವ ರೀತಿಯ ಸಮಿತಿ ಬೇಕು ಎಂದು ತಿಳಿಸಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದರು.

ತೆಲಂಗಾಣ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ನೇಮಿಸಿದ್ದು, ಕೊರೊನಾ ವೈರಸ್‌ ಸಾಂಕ್ರಾಮಿಕ ಕಾರಣದಿಂದ ಅದು ಇನ್ನು ವರದಿಯನ್ನು ಸಲ್ಲಿಸಿಲ್ಲ.

ಈ ನಡುವೆ ಯೋಗಿ ಆದಿತ್ಯನಾಥ್ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯದ ಪ್ರತಿಕ್ರಿಯೆಯನ್ನು ತಿಳಿಸಲು “ದಯವಿಟ್ಟು ನಮಗೆ ಸಮಯ ನೀಡಿ. ನಾವು ಈ ವಿಷಯವನ್ನು ಅರಿತುಕೊಂಡಿದ್ದೇವೆ. ಈ ಪ್ರಕರಣದ ಕುರಿತು ಹಲವಾರು ಸಂಗತಿಗಳು ಸಾರ್ವಜನಿಕ ವಲಯದಲ್ಲಿವೆ” ಎಂದರು.

ಎಂಟು ಪೊಲೀಸರು ಸಾವು ಮತ್ತು ಇತರ ಏಳು ಮಂದಿ ಪೊಲೀಸರು ಗಾಯಗೊಂಡ ಕಾನ್ಪುರ ಪ್ರಕರಣದ ಕ್ರೂರ ದಾಳಿಯ ಮುಖ್ಯ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಿಂದ ಕರೆತರುವಾಗ ಪೊಲೀಸರು ಹತ್ಯೆಗೈದಿದ್ದರು.

ವಿಕಾಸ್ ದುಬೆ ಪ್ರಕರಣದಲ್ಲಿ ಪೊಲೀಸರು ನೀಡಿರುವ ಹೇಳಿಕೆಯು ತೆಲಂಗಾಣ ಎನ್ಕೌಂಟರ್ ಅನ್ನು ಪ್ರತಿಧ್ವನಿಸುತ್ತಿದೆ. ಹಾಗಾಗಿ ದುಬೆ ಸಾವಿನ ಕುರಿತು ಹಲವಾರು ಪ್ರಶ್ನೆಗಳು ಹೊರಬಿದ್ದಿವೆ.

ಘಟನೆಯ ತನಿಖೆಗಾಗಿ ಯುಪಿ ಸರ್ಕಾರ ಈಗಾಗಲೇ ಸ್ವತಂತ್ರ ಏಕ ಸದಸ್ಯ ಆಯೋಗವನ್ನು ನೇಮಿಸಿದೆ; ಇದು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡಿರುತ್ತದೆ ಮತ್ತು ಎರಡು ತಿಂಗಳೊಳಗೆ ವರದಿಯನ್ನು ಸಲ್ಲಿಸಬೇಕಾಗಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ ಬಾಬ್ಡೆಯವರೊಂದಿಗೆ ನ್ಯಾಯಮೂರ್ತಿಗಳಾದ ಆರ್. ಸುಭಾಷ್ ರೆಡ್ಡಿ ಮತ್ತು ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಮೂರ್ತಿ ಪೀಠವು ಈ ಅರ್ಜಿಯನ್ನು ಆಲಿಸಲಿದೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್ ಸದಸ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...