Homeಕರ್ನಾಟಕಹತ್ರಾಸ್ ದಲಿತ ಹೆಣ್ಣು ಮಗಳ ನ್ಯಾಯಕ್ಕಾಗಿ ಹೋರಾಡೋಣ- ಡಿ.ಕೆ ಶಿವಕುಮಾರ್

ಹತ್ರಾಸ್ ದಲಿತ ಹೆಣ್ಣು ಮಗಳ ನ್ಯಾಯಕ್ಕಾಗಿ ಹೋರಾಡೋಣ- ಡಿ.ಕೆ ಶಿವಕುಮಾರ್

ನಿರ್ಭಯ ಘಟನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ಮಾಡಿದವರು, ಹತ್ರಾಸ್ ಘಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಎಲ್ಲಿದ್ದಾರೆ ಅವರೆಲ್ಲ? ಎಂದು ಕಾಂಗ್ರೆಸ್ ಪಕ್ಷ ಪ್ರಶ್ನಿಸಿದೆ.

- Advertisement -
- Advertisement -

ಹತ್ರಾಸ್‍ನ ಯುವತಿಯ ಮೇಲೆ ನಡೆದ ಅತ್ಯಾಚಾರ, ದಲಿತ ಹೆಣ್ಣು ಮಗಳಿಗಾದ ನೋವು, ಸಂಸ್ರಸ್ತೆಯ ಕುಟುಂಬಕ್ಕೆ ಮಗಳ ಮುಖ ನೋಡಲೂ ಸಿಗದ ಅವಕಾಶ, ಎಲ್ಲದರ ವಿರುದ್ಧ ನಾವು-ನೀವೆಲ್ಲಾ ಧ್ವನಿ ಎತ್ತಬೇಕಿದೆ, ಹೋರಾಟ ಮಾಡಬೇಕಿದೆ. ಇಲ್ಲದಿದ್ದರೆ ನಮ್ಮ ತಾಯಂದಿರಿಗೆ, ಈ ಭೂಮಿ ತಾಯಿಗೆ ಯಾರು ಗೌರವ ಕೊಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ದೇಶದ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸಬೇಕೇಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷ ಪ್ರಾರಂಭಿಸಿರುವ SpeakUpForWomenSafety ಅಭಿಯಾನಕ್ಕೆ ದನಿಗೂಡಿಸಿರುವ ಅವರು, ಭೂಮಿಯನ್ನೂ ತಾಯಿ ಎಂದು ಕರೆಯುವ ಸಂಸ್ಕೃತಿ ನಮ್ಮದು. ನಾವು ಮಹಿಳೆಯರನ್ನು ಗೌರವಿಸುತ್ತೇವೆ. ಇಂಥಹ ದೇಶದಲ್ಲಿ ಮಹಿಳೆಯರಿಗೆ ಆಗುತ್ತಿರುವ ಅನ್ಯಾಯಗಳನ್ನ ನಾವು, ನೀವೆಲ್ಲಾ ಸೇರಿ ವಿರೋಧಿಸಬೇಕಿದೆ. ಈ ಮೂಲಕ ನಮ್ಮ ತಾಯಂದಿರು, ಸಹೋದರಿಯರು, ಮಕ್ಕಳಲ್ಲಿ ಸುರಕ್ಷತೆಯ ಭಾವನೆಯನ್ನು ನೆಲೆಗೊಳಿಸಬೇಕಿದೆ ಎಂದು ಕರೆ ನೀಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶದ ಮಹಿಳೆಯರು ಹಗಲು ಹೊತ್ತಿನಲ್ಲೂ ಸುರಕ್ಷಿತವಾಗಿ ಓಡಾಡುವ ಪರಿಸ್ಥಿತಿ ಇಲ್ಲ. ಬಿಜೆಪಿ ಆಡಳಿತದ ರಾಜ್ಯಗಳಲ್ಲೂ ಇಂಥಹದೇ ಸ್ಥಿತಿ ಇದೆ. ನಿರ್ಭಯ ಘಟನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ಮಾಡಿದವರು, ಹತ್ರಾಸ್ ಘಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಎಲ್ಲಿದ್ದಾರೆ ಅವರೆಲ್ಲ? ಎಂದು ಕಾಂಗ್ರೆಸ್ ಪಕ್ಷ ಪ್ರಶ್ನಿಸಿದೆ.

ಪ್ರತಿ 16 ನಿಮಿಷಕ್ಕೆ ಓರ್ವ ಮಹಿಳೆಯ ಮೇಲೆ ಅತ್ಯಾಚಾರವಾಗುತ್ತಿದೆ. ಪ್ರತಿ 1 ಗಂಟೆ 13 ನಿಮಿಷಕ್ಕೆ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯರು ಬಲಿಯಾಗುತ್ತಿದ್ದಾರೆ. ಹೀಗಿದ್ದರೂ ಸಹ ನರೇಂದ್ರ ಮೋದಿ ಸರ್ಕಾರವು ಸರಿಯಾದ ರಕ್ಷಣಾ ವ್ಯವಸ್ಥೆಯನ್ನು ರೂಪಿಸದೇ ಜನರ ಕಣ್ಣಿಗೆ ಮಣ್ಣೆರಚುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಮಹಿಳಾ ಸಬಲೀಕರಣ, ಸ್ತ್ರೀಯರ ಸುರಕ್ಷತೆಯ ಬಗ್ಗೆ ಇಡೀ ಪ್ರಪಂಚವೇ ಮಾತನಾಡುತ್ತಿರುವಾಗ ಭಾರತದಲ್ಲಿ ಏನಾಗುತ್ತಿದೆ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳಾ ಸಬಲೀಕರಣ, ಸ್ತ್ರೀಯರ ಸುರಕ್ಷತೆ ಎನ್ನುವುದು ಚರ್ಚಾರ್ಹ ಹಾಗೂ ಆದ್ಯತೆಯ ವಿಚಾರಗಳೇ ಅಲ್ಲ. ಇದು ಅತ್ಯಂತ ನಾಚಿಕೆಗೇಡು ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ನಿರ್ಭಯ ಅತ್ಯಾಚಾರ ಪ್ರಕರಣ ನಂತರ 2013-2019 ರ ಅವಧಿಯಲ್ಲಿ ಒಟ್ಟು 2.42 ಲಕ್ಷ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಈ ಅವಧಿಯಲ್ಲಿ ದೇಶದಲ್ಲಿ ಪ್ರತಿ ನಿತ್ಯ 95 ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ ಆದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...