Homeಮುಖಪುಟ'ಪಿಒಕೆ' ಯನ್ನು ಮರಳಿ ಪಡೆಯುತ್ತೇವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

‘ಪಿಒಕೆ’ ಯನ್ನು ಮರಳಿ ಪಡೆಯುತ್ತೇವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

- Advertisement -
- Advertisement -

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಕಿಸ್ತಾನದ ವಶದಲ್ಲಿರುವ ‘ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)’ವನ್ನು ಮರಳಿ ಪಡೆಯುವುದಾಗಿ ಪ್ರತಿಪಾದಿಸಿದ್ದಾರೆ. ಪಾಕಿಸ್ತಾನ ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ್ದು “ಭಾರತ ಪ್ರತಿ ನೆರೆಹೊರೆಯವರೊಂದಿಗೆ ಗಡಿ ವಿವಾದಗಳನ್ನು ಹುಟ್ಟುಹಾಕುತ್ತಿದೆ” ಎಂದು ಆರೋಪಿಸಿದೆ.

ಅವರು ಬಿಜೆಪಿಯ ಆನ್ ಲೈನ್  ಜನ-ಸಂವಾದ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಚೀನಾದೊಂದಿಗಿನ ಭಾರತದ ವಿವಾದಿತ ಗಡಿರೇಖೆ ಹಾಗೂ ನೇಪಾಳದೊಂದಿಗಿನ ತನ್ನ ಪ್ರಾದೇಶಿಕ ರೇಖೆಯ ಬಿಕ್ಕಟ್ಟು ಮುಂದುವರಿದಿದ್ದರೂ “ರಾಷ್ಟ್ರಾಭಿಮಾನದ” ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಆದರೆ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದವನನ್ನು ಮಾತುಕತೆಯ ಮೂಲಕ ಪರಿಹರಿಸಲಾಗುವುದು, ಚೀನಾ ಕೂಡಾ ಇದೇ ಆಶಯವನ್ನು ಹೊಂದಿದೆ ಎಂದರು.

“ಜಮ್ಮು ಕಾಶ್ಮೀರದ ಅಭಿವೃದ್ಧಿಯೇ ತನ್ನ ಆದ್ಯತೆ ಎಂಬ ಸಂದೇಶವನ್ನು ಕಳುಹಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ” ಎಂದು ರಕ್ಷಣಾ ಸಚಿವರು ಹೇಳಿದರು.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮರುಸಂಘಟಿಸಿದ ಕೇಂದ್ರ ಸರ್ಕಾರದ ನಿರ್ಧಾರವೂ ಅಲ್ಲಿನ ಅಭಿವೃದ್ದಿಗೆ ದಾರಿಮಾಡಿಕೊಟ್ಟಿದೆ ಎಂದ ಅವರು, ಮುಂದಿನ ಐದು ವರ್ಷಗಳಲ್ಲಿ ನಮ್ಮ ಪ್ರಯತ್ನದಿಂದ ಅಲ್ಲಿನ ಮುಖಚರ್ಯೆಯೆ ಬದಲಾಗಲಿದೆ, ಇದನ್ನು ಗಮನಿಸಿ ಪಿಒಕೆಯ ಜನರು ಕೂಡಾ ಭಾರತದ ಭಾಗವಾಗಲು ಬಯಸುತ್ತಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

“ಭವಿಷ್ಯದಲ್ಲಿ ಏನಾಗುತ್ತದೆ ಎಂದು ಕಾಯೋಣ. ಪಾಕಿಸ್ತಾನದ ಆಕ್ರಮಣದಿಂದ ಪಾರಾಗಲು ಹಾಗೂ ಭಾರತದೊಂದಿಗೆ ವಾಸಿಸಲು ಪಿಒಕೆ ಅವರಿಂದ ಬೇಡಿಕೆ ಬರುತ್ತದೆ. ಇದು ನಡೆದಾಗ ಸಂಸತ್ತಿನ ನಿರ್ಣಯ ಸಹ ಈಡೇರುತ್ತದೆ ”ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಸಂಸತ್ತು ನಿರ್ಣಯವನ್ನು ಮಾಡಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಅವರು ಚೀನಾದೊಂದಿಗೆ ಹಾಗೂ ನೇಪಾಳದೊಂದಿಗೆ ನಡೆಯುತ್ತಿರುವ ಬಿಕ್ಕಟ್ಟನ್ನು ಉಲ್ಲೇಖಿಸಿ “ಭಾರತ ವಿಸ್ತರಣಾವಾದಿ ರಾಷ್ಟ್ರದಂತೆ ವರ್ತಿಸುತ್ತಿದೆ” ಎಂದು ಹೇಳಿದ್ದಾರೆ.

 

ಪೂರ್ವ ಲಡಾಕ್‌ನ ಪಂಗೊಂಗ್ ತ್ಸೋ ಸರೋವರದ ದಂಡೆಯಲ್ಲಿ ಮೇ 5 ರಂದು ಭಾರತ ಮತ್ತು ಚೀನಾದ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಭಾರತ-ಚೀನಾದ ಗಡಿಬಿಕ್ಕಟ್ಟು ಭುಗಿಲೆದ್ದಿತ್ತು. ಅಲ್ಲದೆ ನೇಪಾಳ ಕೂಡಾ ”ಭಾರತದ ವಶದಲ್ಲಿರುವ ತನ್ನ ಪ್ರದೇಶವನ್ನು ಬಿಟ್ಟು ಕೊಡಬೇಕು ಎಂದು ಹೇಳಿತ್ತಲ್ಲದೇ, ತನ್ನ ಸಂಸತ್ತಿನಲ್ಲಿ ಭಾರತದ ಭೂಪ್ರದೇಶವಿರುವ ನಕ್ಪೆಯನ್ನು ತನ್ನ ದೇಶದ ನಕ್ಷೆ ಎಂದು ಸಂಸತ್ತಿನಲ್ಲಿ ಅನುಮೋದನೆ ಮಾಡಿದೆ.


ಓದಿ: ನಮಗೆ ಪಾಕಿಸ್ತಾನ, ಚೀನಾದ ಭೂಮಿ ಬೇಡ ಬದಲಿಗೆ ಶಾಂತಿ ಬೇಕು: ನಿತಿನ್ ಗಡ್ಕರಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...