Homeಮುಖಪುಟಶೀಘ್ರದಲ್ಲಿ ಬರಲಿರುವ ಕೊರೋನಾ 3ನೇ ಅಲೆಗೆ ತಯಾರಾಗೋಣ: ಆದಿತ್ಯ ಠಾಕ್ರೆ

ಶೀಘ್ರದಲ್ಲಿ ಬರಲಿರುವ ಕೊರೋನಾ 3ನೇ ಅಲೆಗೆ ತಯಾರಾಗೋಣ: ಆದಿತ್ಯ ಠಾಕ್ರೆ

ಕೊರೋನಾಕ್ಕೆ ಸಂಬಂಧಿಸಿದಂತೆ ವೈದ್ಯ-ವಿಜ್ಞಾನಿಗಳ ಸಲಹೆ ಮುಖ್ಯವೇ ಹೊರತು, ರಾಜಕಾರಣಿಗಳದ್ದಲ್ಲ ಎಂದು ಮಹಾರಾಷ್ಟ್ರ ಸಚಿವ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕೊರೋನಾ ಮೂರನೇ ಅಲೆ ಶೀಘ್ರದಲ್ಲೇ ಅಪ್ಪಳಿಸಲಿದೆ ಎಂದು ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯ ಠಾಕ್ರೆ ಹೇಳಿದ್ದು, ಈಗಿನಿಂದಲೇ ತಯಾರಿ ನಡೆಸಬೇಕು ಎಂದಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಎನ್‌ಡಿಟಿವಿ ಶೃಂಗಸಭೆಯಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಮಾತನಾಡಿ, “ಈ ಮೂರನೇ ಅಲೆ ಈಗ ದೇಶದಾದ್ಯಂತ ಹರಡುತ್ತಿರುವ ಎರಡನೇ ಅಲೆಗಿಂತ ಬಲವಾಗಿರುತ್ತದೆಯೋ ಅಥವಾ ದುರ್ಬಲವಾಗಿರುತ್ತದೆಯೋ ಎಂದು ಈಗ ನಿರ್ಧರಿಸಲಾಗುವುದಿಲ್ಲ. ವ್ಯಾಕ್ಸಿನೇಷನ್ ಈಗಿನಿಂದಲೇ ಸಹಾಯ ಮಾಡದಿದ್ದರೂ, ಇದು ಭವಿಷ್ಯದ ತಯಾರಿಗಾಗಿ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

” ಮಹಾರಾಷ್ಟ್ರ ರಾಜ್ಯವು ಇಂದು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವು ನಾವು ಕಳೆದ ವರ್ಷ ರಚಿಸಿದ ಕಾರ್ಯಪಡೆಯ ಸಲಹೆಗಳ ಮೇಲೆ ಆಧಾರಿತವಾಗಿದೆ… ವಿಜ್ಞಾನ ಮತ್ತು ವೈದ್ಯಕೀಯ ಸಂಗತಿಗಳ ಪ್ರಕಾರ ನಾವು ನಿರ್ಧಾರ ಮಾಡುತ್ತಿದ್ದೇವೆಯೇ ಹೊರತು ರಾಜಕೀಯದಿಂದಲ್ಲ” ಎಂದು ಮಹಾರಾಷ್ಟ್ರ ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆದಿತ್ಯ ಠಾಕ್ರೆ ತಿಳಿಸಿದರು.

“ಅಂಡರ್-ರಿಪೋಟಿಂಗ್ (ಬೇಕೆಂತಲೇ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ತಪ್ಪಾಗಿ ತೋರಿಸುವುದು) ಸಹಾಯ ಮಾಡುವುದಿಲ್ಲ ಎಂಬ ನಿಜವಾದ ನಂಬಿಕೆಗೆ ನಾವು ಬಂದಿದ್ದೇವೆ… ಈಗ ನಾವು ಕೊರೋನಾದ ಮೂರನೇ ಅಲೆ ಎದುರಿಸಲು ಸಿದ್ಧತೆ ನಡೆಸುತ್ತಿದ್ದೇವೆ. ನಮ್ಮಲ್ಲಿ ಐದು ಲಕ್ಷ ಹಾಸಿಗೆಗಳಿವೆ, ಅವುಗಳಲ್ಲಿ 70% ಆಮ್ಲಜನಕಯುಕ್ತವಾಗಿದೆ” ಎಂದು ಅವರು ಹೇಳಿದರು.

ಸಾಂಕ್ರಾಮಿಕ ರೋಗದಲ್ಲಿ ಮಹಾರಾಷ್ಟ್ರವು ದೇಶದ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯವಾಗಿ ಉಳಿದಿದೆ, ನಿನ್ನೆ 67,123 ಹೊಸ ಪ್ರಕರಣಗಳು ವರದಿಯಾಗಿದ್ದು, 419 ಸಾವುಗಳು ಸಂಭವಿಸಿವೆ. ಒಟ್ಟಾರೆ 37.7 ಲಕ್ಷ ಕೇಸ್‌ಲೋಡ್ ಇದ್ದು ಇಲ್ಲಿವರೆಗೆ 60 ಸಾವಿರ ಕೋವಿಡ್ ಸಾವು ಸಂಭವಿಸಿವೆ.
ಈ ಸಾಂಕ್ರಾಮಿಕ ರೋಗದಲ್ಲಿ ಸೌಲಭ್ಯಗಳು ಲಭ್ಯ ಇವೆ, ಹಾಗಾಗಿ ಭಯಪಡಬೇಡಿ ಎಂದು ಅವರು ನಾಗರಿಕರಲ್ಲಿ ಮನವಿ ಮಾಡಿದರು.

‘ಈ ಕಾಯಿಲೆಯು ರೂಪಾಂತರಗೊಂಡಿದೆ ಮತ್ತು ಕೆಲ ತಿಂಗಳುಗಳಲ್ಲಿ ಹೆಚ್ಚು ಜಟಿಲವಾಗಿದೆ. ವೈದ್ಯರು ಮತ್ತು ವಿಜ್ಞಾನಿಗಳು ಈ ವಿಷಯದ ಬಗ್ಗೆ ನಿರ್ಧಾರ ಮಾಡುತ್ತಾರೆ, ಸಲಹೆ ನೀಡುತ್ತಾರೆ. ಯಾರೋ ಒಬ್ಬ ವ್ಯಕ್ತಿಯ ಮಾತನ್ನು ನಂಬದಿರಿ. ವಿಜ್ಞಾನ- ವೈದ್ಯಶಾಸ್ತ್ರದ ತಜ್ಞರ ತಂಡ ಸಲಹೆ ಮಾಡಿದ್ದನ್ನು ನಮ್ಮ ಸರ್ಕಾರ ಜಾರಿಗೊಳಿಸುತಿದೆ’ ಎಂದು ಆದಿತ್ಯ ಠಾಕ್ರೆ ಹೇಳಿದರು.


ಇದನ್ನೂ ಓದಿ: ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...