Homeಮುಖಪುಟಹೊಸ ವರ್ಷದಂದು ಗಾಝಾದ ಸಹೋದರ, ಸಹೋದರಿಯರನ್ನು ನೆನೆಯೋಣ: ಪ್ರಿಯಾಂಕಾ ಗಾಂಧಿ

ಹೊಸ ವರ್ಷದಂದು ಗಾಝಾದ ಸಹೋದರ, ಸಹೋದರಿಯರನ್ನು ನೆನೆಯೋಣ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಹೊಸ ವರ್ಷದ ಮುನ್ನಾದಿನ ಶುಭಾಷಯ ಕೋರಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಈ ಖುಷಿಯ ಸಂದರ್ಭದಲ್ಲಿ ಗಾಝಾದ ನಮ್ಮ ಸಹೋದರರನ್ನು ನೆನೆಯೋಣ ಎಂದು ಜನತೆಗೆ ಕರೆ ನೀಡಿದ್ದಾರೆ. ಗಾಝಾದ ವಿಷಯದಲ್ಲಿ ಮೌನ ವಹಿಸಿರುವ ಜಾಗತಿಕ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ನಮ್ಮ ಮಕ್ಕಳು ಹೊಸ ವರ್ಷ ಆಚರಿಸುತ್ತಿರುವಾಗ ಗಾಝಾದ ಮಕ್ಕಳನ್ನು ನಿರ್ಧಯವಾಗಿ ಕೊಲ್ಲಲಾಗ್ತಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿ ದುಖಃ ವ್ಯಕ್ತಪಡಿಸಿದ್ದಾರೆ.

“ನಾವು ಹೊಸ ವರ್ಷದ ಆರಂಭವನ್ನು ಆಚರಿಸುತ್ತಾ ಪ್ರೀತಿ, ಶಾಂತಿ, ನಗು ಮತ್ತು ಒಳ್ಳೆಯತನವು ನಮ್ಮ ಜೀವನದಲ್ಲಿ ತುಂಬಬೇಕೆಂದು ಪರಸ್ಪರ ಹಾರೈಸುತ್ತಿರುವಾಗ, ಗಾಜಾದಲ್ಲಿ ತಮ್ಮ ಜೀವಿಸುವ ಹಕ್ಕಿನ ಮೇಲೆ ನಡೆಯುತ್ತಿರುವ ಅನ್ಯಾಯ ಮತ್ತು ಅಮಾನವೀಯ ಆಕ್ರಮಣವನ್ನು ಎದುರಿಸುತ್ತಿರುವ ನಮ್ಮ ಸಹೋದರ, ಸಹೋದರಿಯರನ್ನು ನೆನಪಿಸಿಕೊಳ್ಳೋಣ ಎಂದು ಪ್ರಿಯಾಂಕಾ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ನಮ್ಮ ಮಕ್ಕಳು ಸಂಭ್ರಮಿಸುತ್ತಿರುವಾಗ ಗಾಝಾದ ಮಕ್ಕಳನ್ನು ನಿರ್ದಯವಾಗಿ ಕೊಲ್ಲಲಾಗುತ್ತಿದೆ. ಜಾಗತಿಕ ನಾಯಕರು ಎಂದು ಕರೆಯಲ್ಪಡುವವರು ಮೌನವಾಗಿ ವೀಕ್ಷಿಸುತ್ತಿದ್ದಾರೆ. ಅಧಿಕಾರ ಮತ್ತು ದುರಾಶೆಗಾಗಿ ತಮ್ಮಷ್ಟಕ್ಕೆ ವಿಚಲಿತರಾಗದೆ ಮುಂದುವರಿಯುತ್ತಿದ್ದಾರೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಗಾಝಾದಲ್ಲಿ ನಡೆಸಲಾಗುತ್ತಿರುವ ಭೀಕರ ಹಿಂಸಾಚಾರವನ್ನು ಕೊನೆಗಾಣಿಸುವಂತೆ ಕೋಟ್ಯಾಂತರ ಸಾಮಾನ್ಯ ಜನರು ಧ್ವನಿ ಎತ್ತುತ್ತಿದ್ದಾರೆ. ಧೈರ್ಯಶಾಲಿ ಹೃದಯ ಹೊಂದಿರುವ ಲಕ್ಷಾಂತರ ಜನರು ನಮಗೆ ಹೊಸ ನಾಳೆಯ ಭರವಸೆಯನ್ನು ತಂದಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪೋಸ್ಟ್‌ ಮಾಡಿದ್ದಾರೆ.

ಅಕ್ಟೋಬರ್ 7ರಂದು ಪ್ರಾರಂಭಗೊಂಡ ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಸುಮಾರು 85 ದಿನಗಳ ಬಳಿಕ ಇಂದೂ ಕೂಡ ಮುಂದುವರೆದಿದೆ. ಇಸ್ರೇಲ್‌ನ ಆಕ್ರಮಣಕ್ಕೆ ಇದುವರೆಗೆ 21,600 ಅಮಾಯಕ ನಾಗರಿಕರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...