Homeಅಂತರಾಷ್ಟ್ರೀಯಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್'

ಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್’

- Advertisement -
- Advertisement -

ಆತನ ಹೆಸರು ಸಲ್ಮಾನ್ ಖಾನ್. ಇಲ್ಲ, ಈತ ಬಾಲಿವುಡ್ ನಟನಲ್ಲ. ಬದಲಾಗಿ ಖ್ಯಾತ ಉದ್ಯಮಿ ಬಿಲ್ ಗೇಟ್ಸ್‌ಗೆ ಮಾತ್ರವಲ್ಲದೆ ಆತನ ಮಕ್ಕಳಿಗೂ ತನ್ನ “ಶಾಲೆ”ಯಲ್ಲಿ ಪ್ರತಿನಿತ್ಯ ‘ಪಾಠ’ ಹೇಳಿಕೊಡುತ್ತಿರುವ ‘ಶಿಕ್ಷಕ’!

ಅದಕ್ಕಿಂತ ಮುಖ್ಯವಾಗಿ ಈ ಸಲ್ಮಾನ್ ಖಾನ್ ನಡೆಸುತ್ತಿರುವ ‘ಶಾಲೆ’ಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅವರಿಗೆಲ್ಲ ಪ್ರತಿನಿತ್ಯ ನೂರಾರು ಪಾಠಗಳನ್ನು ಬೋಧಿಸಲಾಗುತ್ತಿದೆ. ಆದರೂ ಈ ಶಾಲೆಯಲ್ಲಿ ಒಬ್ಬನೇ ಒಬ್ಬ ಅಧ್ಯಾಪಕನಿದ್ದಾನೆ. ಆತನೇ ಈ ಸಲ್ಮಾನ್ ಖಾನ್!

ಅಚ್ಚರಿ ಎನಿಸುತ್ತಿದೆಯೆ? ಬನ್ನಿ ಸಲ್ಮಾನ್ ಖಾನ್ ನಡೆಸುತ್ತಿರುವ ‘ವರ್‍ಚ್ಯು ಅಲ್’ ಶಾಲೆಗೆ. ಈ ಸಲ್ಮಾನ್ ಖಾನ್‍ನ ತಾಯಿ ಭಾರತದ ಕೊಲ್ಕತ್ತಾದವರು. ತಂದೆ ಬಾಂಗ್ಲಾದೇಶದವರು. ಅಮೆರಿಕದಲ್ಲಿ ಜನಿಸಿದ ಸಲ್ಮಾನ್ ಖಾನ್ ಅಲ್ಲೇ ವಿದ್ಯಾಭ್ಯಾಸ ಮಾಡಿ ದೊಡ್ಡ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅದು ಅಂತಿಂತಹ ಕೆಲಸವಲ್ಲ. ಜನರ ಅತಿ ಆಸೆಯನ್ನೇ ಬಂಡವಾಳ ಮಾಡಿಕೊಂಡು ಅವರು ವಿವಿಧ ಕಂಪನಿಗಳ ಶೇರುಗಳಲ್ಲಿ ಹಣ ಹೂಡುವಂತೆ ಮಾಡುವ ಕೆಲಸ. ಅದಕ್ಕೆಂದು ಖಾನ್‍ಗೆ ಕೈತುಂಬ ಸಂಬಳ ಬರುತ್ತಿತ್ತು.

ಆರು ವರ್ಷಗಳ ಹಿಂದೆ ಒಮ್ಮೆ ಏನಾಯಿತೆಂದರೆ, ಖಾನ್‍ನ ಚಿಕ್ಕಮ್ಮನ ಮಗಳಾದ ನಾಡಿಯಾ ಶಾಲೆಯಲ್ಲಿ ಗಣಿತದಲ್ಲಿ ಬೇರೆ ವಿದ್ಯಾರ್ಥಿಗಳಿಗಿಂತ ಹಿಂದೆ ಬಿದ್ದಿದ್ದಾಳೆ ಎಂದು ಖಾನ್‍ಗೆ ಗೊತ್ತಾಯಿತು. ಆದರೆ ಆಗ ಖಾನ್ ಅಮೆರಿಕದ ಪೂರ್ವ ಕಡಲತೀರದಲ್ಲಿರುವ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿದ್ದರೆ, ನಾಡಿಯಾ ಪಶ್ಚಿಮ ಕಡಲತೀರದಲ್ಲಿರುವ ಮತ್ತೊಂದು ನಗರದಲ್ಲಿ ವಾಸಿಸುತ್ತಿದ್ದಳು. ಆದರೂ ಆಕೆಗೆ ಪ್ರತಿದಿನ ಫೋನ್ ಮೂಲಕವೇ ಗಣಿತದಲ್ಲಿ ಪಾಠ ಹೇಳಿಕೊಡಲು ಖಾನ್ ಪ್ರಾರಂಭಿಸಿದ. ಆದರೆ ಸ್ವಲ್ಪ ದಿನಗಳಲ್ಲೇ ಇದು ಕಷ್ಟವಾಗಲಾರಂಭಿಸಿತು. ಎರಡೂ ನಗರಗಳ ನಡುವೆ ನಾಲ್ಕು ಗಂಟೆಗಳ ವ್ಯತ್ಯಾಸ ಇತ್ತಲ್ಲದೆ, ಈತನ ಕೆಲಸದ ಸಮಯ-ನಾಡಿಯಾಳ ಶಾಲೆಯ ಸಮಯ ಇತ್ಯಾದಿಗಳು ನಿತ್ಯದ ಪಾಠಕ್ಕೆ ಅಡ್ಡಬರಲಾರಂಭಿಸಿದವು.

ಆಗ ಖಾನ್‍ಗೆ ಹೊಳೆದದ್ದೇ ಈ ವೀಡಿಯೋ ಪಾಠಕ್ರಮ. ನಾಡಿಯಾ ಎದುರಿಸುತ್ತಿದ್ದ ಗಣಿತದ ಸಮಸ್ಯೆಗೆ ಹೇಗೆ ಉತ್ತರವನ್ನು ಕಂಡುಹಿಡಿಯಬೇಕೆಂಬುದನ್ನು ಕುರಿತು ಖಾನ್ ಪುಟ್ಟ ವೀಡಿಯೋಗಳನ್ನು ತಯಾರಿಸಿ ಅವುಗಳನ್ನು ‘ಯೂಟ್ಯೂಬ್’ ಎಂಬ ವೆಬ್‍ಸೈಟಿನಲ್ಲಿ ಹಾಕಲಾರಂಭಿಸಿದ. ಅದರಿಂದಾಗಿ ನಾಡಿಯಾ ಯಾವಾಗ ಬೇಕಾದರೂ ಅವುಗಳನ್ನು ನೋಡಬಹುದಿತ್ತು ಮತ್ತು ಅಗತ್ಯವಿದ್ದರೆ ಹಳೆ ಪಾಠಗಳಿಗೂ ಮತ್ತೆ ಭೇಟಿ ನೀಡಬಹುದಿತ್ತು. ಇದರಿಂದಾಗಿ ನಾಡಿಯಾಳಿಗೆ ಎಷ್ಟು ಉಪಯೋಗವಾಯಿತೆಂದರೆ ಆಕೆ ಗಣಿತದಲ್ಲಿ ಉತ್ತಮ ಅಂಕಗಳನ್ನು ಪಡೆದಳು.

ಇದನ್ನೂ ಓದಿ: ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

ನಾಡಿಯಾಳ ನಂತರ ಆಕೆಯ ಸಹೋದರರಾದ ಆರ್ಮನ್ ಮತ್ತು ಆಲಿಗೂ ಖಾನ್ ಇದೇರೀತಿ ಪಾಠ ಮಾಡಲಾರಂಭಿಸಿದ. ಆದರೆ ಅಷ್ಟು ಹೊತ್ತಿಗೆ ಖಾನ್‍ನ ಇತರೆ ಸಂಬಂಧಿಕರ ಮಕ್ಕಳು ಮತ್ತು ಆ ಮಕ್ಕಳ ಸ್ನೇಹಿತರೂ ಈ ಪಾಠಗಳನ್ನು ನೋಡಿ ಕಲಿಯಲಾರಂಭಿಸಿದ್ದರು. ಇದಕ್ಕೆಲ್ಲ ಖಾನ್ ಬಳಸಿದ್ದು ತನ್ನ ಕಂಪ್ಯೂಟರ್ ಮತ್ತು ಅದಕ್ಕೆ ಅಳವಡಿಸಿದ್ದ 200 ಡಾಲರ್‌ಗಳ ಕ್ಯಾಮೆರಾ, 80 ಡಾಲರ್‌ಗಳ ಪ್ಯಾಡ್ ಮತ್ತು 20 ಡಾಲರ್‌ಗಳ ವೀಡಿಯೋ ರೆಕಾರ್ಡರ್ ಹಾಗೂ ಪುಕ್ಕಟೆ ಸಿಗುವ ಹಲವು ಸಾಫ್ಟ್‍ವೇರ್‌ಗಳನ್ನು.

ಇದು ಹೆಚ್ಚು ಜನಪ್ರಿಯತೆ ಪಡೆಯುತ್ತಿದ್ದಂತೆ ಖಾನ್ ತನ್ನದೇ ಒಂದು ವೆಬ್‍ಸೈಟ್ ಶುರು ಮಾಡಿ ಅವುಗಳನ್ನೆಲ್ಲ ಅದರಲ್ಲಿ ಸೇರಿಸಲಾರಂಭಿಸಿದ. ಕಾಲಕ್ರಮೇಣ ಇದು ಎಷ್ಟು ದೊಡ್ಡದಾಯಿತು ಎಂದರೆ ಇದರಲ್ಲಿ ಪಾಠಗಳನ್ನು ಹೇಳಿಕೊಡುವುದಕ್ಕೆ ಆತನಿಗೆ ದಿನದ ಇಪ್ಪತ್ತನಾಲ್ಕು ಗಂಟೆಗಳು ಸಾಲದಾಯಿತು. ಆಗ ಖಾನ್ ಯೋಚಿಸಿದ: “ನನಗೆ ಒಬ್ಬಳು ಸುಂದರ ಹೆಂಡತಿ ಇದ್ದಾಳೆ, ಇಬ್ಬರು ಮುದ್ದಿನ ಮಕ್ಕಳಿದ್ದಾರೆ, ವಾಸಿಸಲು ಒಂದು ಮನೆ ಇದೆ, ಎರಡು ಕಾರ್‌ಗಳಿವೆ, ಸಾಕಷ್ಟು ಉಳಿತಾಯವಿದೆ. ಇದಕ್ಕಿಂತ ಒಬ್ಬ ಮನುಷ್ಯನಿಗೆ ಜೀವನದಲ್ಲಿ ಇನ್ನೇನು ಬೇಕು? ನನಗೆ 80 ವರ್ಷ ವಯಸ್ಸಾದಾಗ ನನ್ನ ಹತ್ತಿರ ಎಷ್ಟು ದುಡ್ಡಿದೆ ಎಂಬುದಕ್ಕಿಂತ ನಾನು ಸಮಾಜಕ್ಕಾಗಿ ಏನನ್ನು ಮಾಡಿದೆ ಎಂಬುದು ಮುಖ್ಯವಾಗುತ್ತದೆ. ಈ ನನ್ನ ಪಾಠಗಳಿಂದ ಜನರಿಗೆ ಉಪಯೋಗವಾದರೆ ಅದಕ್ಕಿಂತ ಉತ್ತಮವಾದದ್ದೇನಿದೆ? ಬದುಕಿನಲ್ಲಿ ನೆಮ್ಮದಿ ಮತ್ತು ಸಂತೋಷ ಎಲ್ಲದಕ್ಕಿಂತ ಮುಖ್ಯ” ಎಂದು ಖಾನ್ ನಿರ್ಧರಿಸಿದ.

ಆಗ ಖಾನ್ ವರ್ಷಕ್ಕೆ ಮಿಲಿಯನ್ ಡಾಲರ್ ಸಂಬಳ ನೀಡುತ್ತಿದ್ದ ಬ್ಯಾಂಕ್ ಕೆಲಸಕ್ಕೆ ರಾಜೀನಾಮೆ ನೀಡಿ ‘ಖಾನ್ ಅಕಾಡೆಮಿ’ಗೆ ತನ್ನನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡ. ಈತ ತನ್ನ ಪಾಠಗಳಿಗೆ ಶುಲ್ಕವನ್ನು ವಿಧಿಸದೆ ಬಿಟ್ಟಿಯಾಗಿ ಹೇಳಿಕೊಡುತ್ತಿದ್ದರಿಂದ ನಿಧಾನವಾಗಿ ಆತನ ಉಳಿತಾಯದ ಹಣವೆಲ್ಲ ಕರಗಲಾರಂಭಿಸಿತು. ಆದರೂ ಈತನ ಅಕಾಡೆಮಿಯ ಜನಪ್ರಿಯತೆಯನ್ನು ಕಂಡು ಅದೆಷ್ಟೋ ಉದ್ಯಮಿಗಳು ಅದನ್ನು ಆತನಿಂದ ಖರೀದಿಸಲು ಮುಂದಾದರು. ಆದರೆ ಅದನ್ನು ಕೊಂಡವರು ತನ್ನಂತೆ ಪುಕ್ಕಟೆಯಾಗಿ ಪಾಠ ಹೇಳಿಕೊಡುವುದಿಲ್ಲ ಎಂದು ಗೊತ್ತಿದ್ದರಿಂದ ಖಾನ್ ಅದನ್ನು ಮಾರಲು ನಿರಾಕರಿಸಿದ್ದ.

ಅದೃಷ್ಟವಶಾತ್ ಅದೇಹೊತ್ತಿಗೆ ಈ ಖಾನ್ ಅಕಾಡೆಮಿ ಬಗ್ಗೆ ಬಿಲ್ ಗೇಟ್ಸ್‌ನ ಮಕ್ಕಳಿಗೂ ಗೊತ್ತಾಗಿ ಅವರೂ ಇಲ್ಲಿದ್ದ ಮಾಹಿತಿಯನ್ನು ಆಧರಿಸಿ ಕಲಿಯಲಾರಂಭಿಸಿದ್ದರು. ಒಮ್ಮೆ ಇದರ ಬಗ್ಗೆ ತಮ್ಮ ತಂದೆಗೂ ಹೇಳಿದರು. ಆತ ಕೂಡ ಇದನ್ನು ನೋಡಿ ಮೆಚ್ಚಿಕೊಂಡ. ಎಷ್ಟರಮಟ್ಟಿಗೆ ಅಂದರೆ ಖಾನ್ ಅಕಾಡೆಮಿಗೆ ಬಿಲ್ ಗೇಟ್ಸ್ ಫೌಂಡೇಷನ್‍ನಿಂದ ದೊಡ್ಡಮೊತ್ತದ ದೇಣಿಗೆಯನ್ನು ನೀಡಿದೆ. ಬಿಲ್ ಗೇಟ್ಸ್ ಅಲ್ಲದೆ ಗೂಗಲ್ ಸಂಸ್ಥೆಯವರೂ ಖಾನ್ ಅಕಾಡೆಮಿಯ ಸಾಧನೆಯನ್ನು ಮೆಚ್ಚಿ ಅದಕ್ಕೆ ದೊಡ್ಡ ಮೊತ್ತದ ಪ್ರಶಸ್ತಿಯನ್ನು ನೀಡಿದರಲ್ಲದೆ ಅವರೂ ದೇಣಿಗೆಯನ್ನು ನೀಡಿದರು. ಇವತ್ತು ಅದಷ್ಟೋ ಅಭಿಮಾನಿಗಳು ತಮ್ಮ ಶಕ್ತಾನುಸಾರ ಖಾನ್‍ನ ಈ ವಿದ್ಯಾಸಂಸ್ಥೆಗೆ ಹಣ ಸಹಾಯವನ್ನು ಮಾಡುತ್ತಿದ್ದಾರೆ.

ಇದರ ಬಗ್ಗೆ ಇಷ್ಟೆಲ್ಲ ಹೇಳಿದ್ದಕ್ಕೆ ಕಾರಣವಿದೆ. ನಮ್ಮ ಪತ್ರಿಕೆಯ ಓದುಗರಲ್ಲಿ ಬಹಳಷ್ಟು ಜನ ಶಾಲಾ ಅಧ್ಯಾಪಕರಿದ್ದಾರೆ. ಅವರೆಲ್ಲರೂ ಸಲ್ಮಾನ್ ಖಾನ್ ಅವರ khanacademy.org ಎಂಬ ವೆಬ್‍ಸೈಟಿಗೆ ಭೇಟಿ ನೀಡಿದರೆ ನಮ್ಮ ರಾಜ್ಯದ ಶಾಲಾಮಕ್ಕಳಿಗೆ ಇವತ್ತು ಕಷ್ಟದ ಸಬ್ಜೆಕ್ಟ್ ಆಗಿರುವ ಗಣಿತವನ್ನು ಇನ್ನೂ ಚೆನ್ನಾಗಿ ಹೇಳಿಕೊಟ್ಟು ಅವರೆಲ್ಲ ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚು ಯಶಸ್ವಿಯಾಗುವಂತೆ ಮಾಡಬಹುದಾಗಿದೆ. ಓರ್ವ ಗುರುವಿನ ಕರ್ತವ್ಯ ಅದೇ ಅಲ್ಲವೇ?

 ಗೌರಿ ಲಂಕೇಶ್
13 ಜುಲೈ, 2011 (ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...