Homeಅಂತರಾಷ್ಟ್ರೀಯಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್'

ಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್’

- Advertisement -
- Advertisement -

ಆತನ ಹೆಸರು ಸಲ್ಮಾನ್ ಖಾನ್. ಇಲ್ಲ, ಈತ ಬಾಲಿವುಡ್ ನಟನಲ್ಲ. ಬದಲಾಗಿ ಖ್ಯಾತ ಉದ್ಯಮಿ ಬಿಲ್ ಗೇಟ್ಸ್‌ಗೆ ಮಾತ್ರವಲ್ಲದೆ ಆತನ ಮಕ್ಕಳಿಗೂ ತನ್ನ “ಶಾಲೆ”ಯಲ್ಲಿ ಪ್ರತಿನಿತ್ಯ ‘ಪಾಠ’ ಹೇಳಿಕೊಡುತ್ತಿರುವ ‘ಶಿಕ್ಷಕ’!

ಅದಕ್ಕಿಂತ ಮುಖ್ಯವಾಗಿ ಈ ಸಲ್ಮಾನ್ ಖಾನ್ ನಡೆಸುತ್ತಿರುವ ‘ಶಾಲೆ’ಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅವರಿಗೆಲ್ಲ ಪ್ರತಿನಿತ್ಯ ನೂರಾರು ಪಾಠಗಳನ್ನು ಬೋಧಿಸಲಾಗುತ್ತಿದೆ. ಆದರೂ ಈ ಶಾಲೆಯಲ್ಲಿ ಒಬ್ಬನೇ ಒಬ್ಬ ಅಧ್ಯಾಪಕನಿದ್ದಾನೆ. ಆತನೇ ಈ ಸಲ್ಮಾನ್ ಖಾನ್!

ಅಚ್ಚರಿ ಎನಿಸುತ್ತಿದೆಯೆ? ಬನ್ನಿ ಸಲ್ಮಾನ್ ಖಾನ್ ನಡೆಸುತ್ತಿರುವ ‘ವರ್‍ಚ್ಯು ಅಲ್’ ಶಾಲೆಗೆ. ಈ ಸಲ್ಮಾನ್ ಖಾನ್‍ನ ತಾಯಿ ಭಾರತದ ಕೊಲ್ಕತ್ತಾದವರು. ತಂದೆ ಬಾಂಗ್ಲಾದೇಶದವರು. ಅಮೆರಿಕದಲ್ಲಿ ಜನಿಸಿದ ಸಲ್ಮಾನ್ ಖಾನ್ ಅಲ್ಲೇ ವಿದ್ಯಾಭ್ಯಾಸ ಮಾಡಿ ದೊಡ್ಡ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅದು ಅಂತಿಂತಹ ಕೆಲಸವಲ್ಲ. ಜನರ ಅತಿ ಆಸೆಯನ್ನೇ ಬಂಡವಾಳ ಮಾಡಿಕೊಂಡು ಅವರು ವಿವಿಧ ಕಂಪನಿಗಳ ಶೇರುಗಳಲ್ಲಿ ಹಣ ಹೂಡುವಂತೆ ಮಾಡುವ ಕೆಲಸ. ಅದಕ್ಕೆಂದು ಖಾನ್‍ಗೆ ಕೈತುಂಬ ಸಂಬಳ ಬರುತ್ತಿತ್ತು.

ಆರು ವರ್ಷಗಳ ಹಿಂದೆ ಒಮ್ಮೆ ಏನಾಯಿತೆಂದರೆ, ಖಾನ್‍ನ ಚಿಕ್ಕಮ್ಮನ ಮಗಳಾದ ನಾಡಿಯಾ ಶಾಲೆಯಲ್ಲಿ ಗಣಿತದಲ್ಲಿ ಬೇರೆ ವಿದ್ಯಾರ್ಥಿಗಳಿಗಿಂತ ಹಿಂದೆ ಬಿದ್ದಿದ್ದಾಳೆ ಎಂದು ಖಾನ್‍ಗೆ ಗೊತ್ತಾಯಿತು. ಆದರೆ ಆಗ ಖಾನ್ ಅಮೆರಿಕದ ಪೂರ್ವ ಕಡಲತೀರದಲ್ಲಿರುವ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿದ್ದರೆ, ನಾಡಿಯಾ ಪಶ್ಚಿಮ ಕಡಲತೀರದಲ್ಲಿರುವ ಮತ್ತೊಂದು ನಗರದಲ್ಲಿ ವಾಸಿಸುತ್ತಿದ್ದಳು. ಆದರೂ ಆಕೆಗೆ ಪ್ರತಿದಿನ ಫೋನ್ ಮೂಲಕವೇ ಗಣಿತದಲ್ಲಿ ಪಾಠ ಹೇಳಿಕೊಡಲು ಖಾನ್ ಪ್ರಾರಂಭಿಸಿದ. ಆದರೆ ಸ್ವಲ್ಪ ದಿನಗಳಲ್ಲೇ ಇದು ಕಷ್ಟವಾಗಲಾರಂಭಿಸಿತು. ಎರಡೂ ನಗರಗಳ ನಡುವೆ ನಾಲ್ಕು ಗಂಟೆಗಳ ವ್ಯತ್ಯಾಸ ಇತ್ತಲ್ಲದೆ, ಈತನ ಕೆಲಸದ ಸಮಯ-ನಾಡಿಯಾಳ ಶಾಲೆಯ ಸಮಯ ಇತ್ಯಾದಿಗಳು ನಿತ್ಯದ ಪಾಠಕ್ಕೆ ಅಡ್ಡಬರಲಾರಂಭಿಸಿದವು.

ಆಗ ಖಾನ್‍ಗೆ ಹೊಳೆದದ್ದೇ ಈ ವೀಡಿಯೋ ಪಾಠಕ್ರಮ. ನಾಡಿಯಾ ಎದುರಿಸುತ್ತಿದ್ದ ಗಣಿತದ ಸಮಸ್ಯೆಗೆ ಹೇಗೆ ಉತ್ತರವನ್ನು ಕಂಡುಹಿಡಿಯಬೇಕೆಂಬುದನ್ನು ಕುರಿತು ಖಾನ್ ಪುಟ್ಟ ವೀಡಿಯೋಗಳನ್ನು ತಯಾರಿಸಿ ಅವುಗಳನ್ನು ‘ಯೂಟ್ಯೂಬ್’ ಎಂಬ ವೆಬ್‍ಸೈಟಿನಲ್ಲಿ ಹಾಕಲಾರಂಭಿಸಿದ. ಅದರಿಂದಾಗಿ ನಾಡಿಯಾ ಯಾವಾಗ ಬೇಕಾದರೂ ಅವುಗಳನ್ನು ನೋಡಬಹುದಿತ್ತು ಮತ್ತು ಅಗತ್ಯವಿದ್ದರೆ ಹಳೆ ಪಾಠಗಳಿಗೂ ಮತ್ತೆ ಭೇಟಿ ನೀಡಬಹುದಿತ್ತು. ಇದರಿಂದಾಗಿ ನಾಡಿಯಾಳಿಗೆ ಎಷ್ಟು ಉಪಯೋಗವಾಯಿತೆಂದರೆ ಆಕೆ ಗಣಿತದಲ್ಲಿ ಉತ್ತಮ ಅಂಕಗಳನ್ನು ಪಡೆದಳು.

ಇದನ್ನೂ ಓದಿ: ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

ನಾಡಿಯಾಳ ನಂತರ ಆಕೆಯ ಸಹೋದರರಾದ ಆರ್ಮನ್ ಮತ್ತು ಆಲಿಗೂ ಖಾನ್ ಇದೇರೀತಿ ಪಾಠ ಮಾಡಲಾರಂಭಿಸಿದ. ಆದರೆ ಅಷ್ಟು ಹೊತ್ತಿಗೆ ಖಾನ್‍ನ ಇತರೆ ಸಂಬಂಧಿಕರ ಮಕ್ಕಳು ಮತ್ತು ಆ ಮಕ್ಕಳ ಸ್ನೇಹಿತರೂ ಈ ಪಾಠಗಳನ್ನು ನೋಡಿ ಕಲಿಯಲಾರಂಭಿಸಿದ್ದರು. ಇದಕ್ಕೆಲ್ಲ ಖಾನ್ ಬಳಸಿದ್ದು ತನ್ನ ಕಂಪ್ಯೂಟರ್ ಮತ್ತು ಅದಕ್ಕೆ ಅಳವಡಿಸಿದ್ದ 200 ಡಾಲರ್‌ಗಳ ಕ್ಯಾಮೆರಾ, 80 ಡಾಲರ್‌ಗಳ ಪ್ಯಾಡ್ ಮತ್ತು 20 ಡಾಲರ್‌ಗಳ ವೀಡಿಯೋ ರೆಕಾರ್ಡರ್ ಹಾಗೂ ಪುಕ್ಕಟೆ ಸಿಗುವ ಹಲವು ಸಾಫ್ಟ್‍ವೇರ್‌ಗಳನ್ನು.

ಇದು ಹೆಚ್ಚು ಜನಪ್ರಿಯತೆ ಪಡೆಯುತ್ತಿದ್ದಂತೆ ಖಾನ್ ತನ್ನದೇ ಒಂದು ವೆಬ್‍ಸೈಟ್ ಶುರು ಮಾಡಿ ಅವುಗಳನ್ನೆಲ್ಲ ಅದರಲ್ಲಿ ಸೇರಿಸಲಾರಂಭಿಸಿದ. ಕಾಲಕ್ರಮೇಣ ಇದು ಎಷ್ಟು ದೊಡ್ಡದಾಯಿತು ಎಂದರೆ ಇದರಲ್ಲಿ ಪಾಠಗಳನ್ನು ಹೇಳಿಕೊಡುವುದಕ್ಕೆ ಆತನಿಗೆ ದಿನದ ಇಪ್ಪತ್ತನಾಲ್ಕು ಗಂಟೆಗಳು ಸಾಲದಾಯಿತು. ಆಗ ಖಾನ್ ಯೋಚಿಸಿದ: “ನನಗೆ ಒಬ್ಬಳು ಸುಂದರ ಹೆಂಡತಿ ಇದ್ದಾಳೆ, ಇಬ್ಬರು ಮುದ್ದಿನ ಮಕ್ಕಳಿದ್ದಾರೆ, ವಾಸಿಸಲು ಒಂದು ಮನೆ ಇದೆ, ಎರಡು ಕಾರ್‌ಗಳಿವೆ, ಸಾಕಷ್ಟು ಉಳಿತಾಯವಿದೆ. ಇದಕ್ಕಿಂತ ಒಬ್ಬ ಮನುಷ್ಯನಿಗೆ ಜೀವನದಲ್ಲಿ ಇನ್ನೇನು ಬೇಕು? ನನಗೆ 80 ವರ್ಷ ವಯಸ್ಸಾದಾಗ ನನ್ನ ಹತ್ತಿರ ಎಷ್ಟು ದುಡ್ಡಿದೆ ಎಂಬುದಕ್ಕಿಂತ ನಾನು ಸಮಾಜಕ್ಕಾಗಿ ಏನನ್ನು ಮಾಡಿದೆ ಎಂಬುದು ಮುಖ್ಯವಾಗುತ್ತದೆ. ಈ ನನ್ನ ಪಾಠಗಳಿಂದ ಜನರಿಗೆ ಉಪಯೋಗವಾದರೆ ಅದಕ್ಕಿಂತ ಉತ್ತಮವಾದದ್ದೇನಿದೆ? ಬದುಕಿನಲ್ಲಿ ನೆಮ್ಮದಿ ಮತ್ತು ಸಂತೋಷ ಎಲ್ಲದಕ್ಕಿಂತ ಮುಖ್ಯ” ಎಂದು ಖಾನ್ ನಿರ್ಧರಿಸಿದ.

ಆಗ ಖಾನ್ ವರ್ಷಕ್ಕೆ ಮಿಲಿಯನ್ ಡಾಲರ್ ಸಂಬಳ ನೀಡುತ್ತಿದ್ದ ಬ್ಯಾಂಕ್ ಕೆಲಸಕ್ಕೆ ರಾಜೀನಾಮೆ ನೀಡಿ ‘ಖಾನ್ ಅಕಾಡೆಮಿ’ಗೆ ತನ್ನನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡ. ಈತ ತನ್ನ ಪಾಠಗಳಿಗೆ ಶುಲ್ಕವನ್ನು ವಿಧಿಸದೆ ಬಿಟ್ಟಿಯಾಗಿ ಹೇಳಿಕೊಡುತ್ತಿದ್ದರಿಂದ ನಿಧಾನವಾಗಿ ಆತನ ಉಳಿತಾಯದ ಹಣವೆಲ್ಲ ಕರಗಲಾರಂಭಿಸಿತು. ಆದರೂ ಈತನ ಅಕಾಡೆಮಿಯ ಜನಪ್ರಿಯತೆಯನ್ನು ಕಂಡು ಅದೆಷ್ಟೋ ಉದ್ಯಮಿಗಳು ಅದನ್ನು ಆತನಿಂದ ಖರೀದಿಸಲು ಮುಂದಾದರು. ಆದರೆ ಅದನ್ನು ಕೊಂಡವರು ತನ್ನಂತೆ ಪುಕ್ಕಟೆಯಾಗಿ ಪಾಠ ಹೇಳಿಕೊಡುವುದಿಲ್ಲ ಎಂದು ಗೊತ್ತಿದ್ದರಿಂದ ಖಾನ್ ಅದನ್ನು ಮಾರಲು ನಿರಾಕರಿಸಿದ್ದ.

ಅದೃಷ್ಟವಶಾತ್ ಅದೇಹೊತ್ತಿಗೆ ಈ ಖಾನ್ ಅಕಾಡೆಮಿ ಬಗ್ಗೆ ಬಿಲ್ ಗೇಟ್ಸ್‌ನ ಮಕ್ಕಳಿಗೂ ಗೊತ್ತಾಗಿ ಅವರೂ ಇಲ್ಲಿದ್ದ ಮಾಹಿತಿಯನ್ನು ಆಧರಿಸಿ ಕಲಿಯಲಾರಂಭಿಸಿದ್ದರು. ಒಮ್ಮೆ ಇದರ ಬಗ್ಗೆ ತಮ್ಮ ತಂದೆಗೂ ಹೇಳಿದರು. ಆತ ಕೂಡ ಇದನ್ನು ನೋಡಿ ಮೆಚ್ಚಿಕೊಂಡ. ಎಷ್ಟರಮಟ್ಟಿಗೆ ಅಂದರೆ ಖಾನ್ ಅಕಾಡೆಮಿಗೆ ಬಿಲ್ ಗೇಟ್ಸ್ ಫೌಂಡೇಷನ್‍ನಿಂದ ದೊಡ್ಡಮೊತ್ತದ ದೇಣಿಗೆಯನ್ನು ನೀಡಿದೆ. ಬಿಲ್ ಗೇಟ್ಸ್ ಅಲ್ಲದೆ ಗೂಗಲ್ ಸಂಸ್ಥೆಯವರೂ ಖಾನ್ ಅಕಾಡೆಮಿಯ ಸಾಧನೆಯನ್ನು ಮೆಚ್ಚಿ ಅದಕ್ಕೆ ದೊಡ್ಡ ಮೊತ್ತದ ಪ್ರಶಸ್ತಿಯನ್ನು ನೀಡಿದರಲ್ಲದೆ ಅವರೂ ದೇಣಿಗೆಯನ್ನು ನೀಡಿದರು. ಇವತ್ತು ಅದಷ್ಟೋ ಅಭಿಮಾನಿಗಳು ತಮ್ಮ ಶಕ್ತಾನುಸಾರ ಖಾನ್‍ನ ಈ ವಿದ್ಯಾಸಂಸ್ಥೆಗೆ ಹಣ ಸಹಾಯವನ್ನು ಮಾಡುತ್ತಿದ್ದಾರೆ.

ಇದರ ಬಗ್ಗೆ ಇಷ್ಟೆಲ್ಲ ಹೇಳಿದ್ದಕ್ಕೆ ಕಾರಣವಿದೆ. ನಮ್ಮ ಪತ್ರಿಕೆಯ ಓದುಗರಲ್ಲಿ ಬಹಳಷ್ಟು ಜನ ಶಾಲಾ ಅಧ್ಯಾಪಕರಿದ್ದಾರೆ. ಅವರೆಲ್ಲರೂ ಸಲ್ಮಾನ್ ಖಾನ್ ಅವರ khanacademy.org ಎಂಬ ವೆಬ್‍ಸೈಟಿಗೆ ಭೇಟಿ ನೀಡಿದರೆ ನಮ್ಮ ರಾಜ್ಯದ ಶಾಲಾಮಕ್ಕಳಿಗೆ ಇವತ್ತು ಕಷ್ಟದ ಸಬ್ಜೆಕ್ಟ್ ಆಗಿರುವ ಗಣಿತವನ್ನು ಇನ್ನೂ ಚೆನ್ನಾಗಿ ಹೇಳಿಕೊಟ್ಟು ಅವರೆಲ್ಲ ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚು ಯಶಸ್ವಿಯಾಗುವಂತೆ ಮಾಡಬಹುದಾಗಿದೆ. ಓರ್ವ ಗುರುವಿನ ಕರ್ತವ್ಯ ಅದೇ ಅಲ್ಲವೇ?

 ಗೌರಿ ಲಂಕೇಶ್
13 ಜುಲೈ, 2011 (ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...