Homeಅಂತರಾಷ್ಟ್ರೀಯಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್'

ಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್’

- Advertisement -
- Advertisement -

ಆತನ ಹೆಸರು ಸಲ್ಮಾನ್ ಖಾನ್. ಇಲ್ಲ, ಈತ ಬಾಲಿವುಡ್ ನಟನಲ್ಲ. ಬದಲಾಗಿ ಖ್ಯಾತ ಉದ್ಯಮಿ ಬಿಲ್ ಗೇಟ್ಸ್‌ಗೆ ಮಾತ್ರವಲ್ಲದೆ ಆತನ ಮಕ್ಕಳಿಗೂ ತನ್ನ “ಶಾಲೆ”ಯಲ್ಲಿ ಪ್ರತಿನಿತ್ಯ ‘ಪಾಠ’ ಹೇಳಿಕೊಡುತ್ತಿರುವ ‘ಶಿಕ್ಷಕ’!

ಅದಕ್ಕಿಂತ ಮುಖ್ಯವಾಗಿ ಈ ಸಲ್ಮಾನ್ ಖಾನ್ ನಡೆಸುತ್ತಿರುವ ‘ಶಾಲೆ’ಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅವರಿಗೆಲ್ಲ ಪ್ರತಿನಿತ್ಯ ನೂರಾರು ಪಾಠಗಳನ್ನು ಬೋಧಿಸಲಾಗುತ್ತಿದೆ. ಆದರೂ ಈ ಶಾಲೆಯಲ್ಲಿ ಒಬ್ಬನೇ ಒಬ್ಬ ಅಧ್ಯಾಪಕನಿದ್ದಾನೆ. ಆತನೇ ಈ ಸಲ್ಮಾನ್ ಖಾನ್!

ಅಚ್ಚರಿ ಎನಿಸುತ್ತಿದೆಯೆ? ಬನ್ನಿ ಸಲ್ಮಾನ್ ಖಾನ್ ನಡೆಸುತ್ತಿರುವ ‘ವರ್‍ಚ್ಯು ಅಲ್’ ಶಾಲೆಗೆ. ಈ ಸಲ್ಮಾನ್ ಖಾನ್‍ನ ತಾಯಿ ಭಾರತದ ಕೊಲ್ಕತ್ತಾದವರು. ತಂದೆ ಬಾಂಗ್ಲಾದೇಶದವರು. ಅಮೆರಿಕದಲ್ಲಿ ಜನಿಸಿದ ಸಲ್ಮಾನ್ ಖಾನ್ ಅಲ್ಲೇ ವಿದ್ಯಾಭ್ಯಾಸ ಮಾಡಿ ದೊಡ್ಡ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅದು ಅಂತಿಂತಹ ಕೆಲಸವಲ್ಲ. ಜನರ ಅತಿ ಆಸೆಯನ್ನೇ ಬಂಡವಾಳ ಮಾಡಿಕೊಂಡು ಅವರು ವಿವಿಧ ಕಂಪನಿಗಳ ಶೇರುಗಳಲ್ಲಿ ಹಣ ಹೂಡುವಂತೆ ಮಾಡುವ ಕೆಲಸ. ಅದಕ್ಕೆಂದು ಖಾನ್‍ಗೆ ಕೈತುಂಬ ಸಂಬಳ ಬರುತ್ತಿತ್ತು.

ಆರು ವರ್ಷಗಳ ಹಿಂದೆ ಒಮ್ಮೆ ಏನಾಯಿತೆಂದರೆ, ಖಾನ್‍ನ ಚಿಕ್ಕಮ್ಮನ ಮಗಳಾದ ನಾಡಿಯಾ ಶಾಲೆಯಲ್ಲಿ ಗಣಿತದಲ್ಲಿ ಬೇರೆ ವಿದ್ಯಾರ್ಥಿಗಳಿಗಿಂತ ಹಿಂದೆ ಬಿದ್ದಿದ್ದಾಳೆ ಎಂದು ಖಾನ್‍ಗೆ ಗೊತ್ತಾಯಿತು. ಆದರೆ ಆಗ ಖಾನ್ ಅಮೆರಿಕದ ಪೂರ್ವ ಕಡಲತೀರದಲ್ಲಿರುವ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿದ್ದರೆ, ನಾಡಿಯಾ ಪಶ್ಚಿಮ ಕಡಲತೀರದಲ್ಲಿರುವ ಮತ್ತೊಂದು ನಗರದಲ್ಲಿ ವಾಸಿಸುತ್ತಿದ್ದಳು. ಆದರೂ ಆಕೆಗೆ ಪ್ರತಿದಿನ ಫೋನ್ ಮೂಲಕವೇ ಗಣಿತದಲ್ಲಿ ಪಾಠ ಹೇಳಿಕೊಡಲು ಖಾನ್ ಪ್ರಾರಂಭಿಸಿದ. ಆದರೆ ಸ್ವಲ್ಪ ದಿನಗಳಲ್ಲೇ ಇದು ಕಷ್ಟವಾಗಲಾರಂಭಿಸಿತು. ಎರಡೂ ನಗರಗಳ ನಡುವೆ ನಾಲ್ಕು ಗಂಟೆಗಳ ವ್ಯತ್ಯಾಸ ಇತ್ತಲ್ಲದೆ, ಈತನ ಕೆಲಸದ ಸಮಯ-ನಾಡಿಯಾಳ ಶಾಲೆಯ ಸಮಯ ಇತ್ಯಾದಿಗಳು ನಿತ್ಯದ ಪಾಠಕ್ಕೆ ಅಡ್ಡಬರಲಾರಂಭಿಸಿದವು.

ಆಗ ಖಾನ್‍ಗೆ ಹೊಳೆದದ್ದೇ ಈ ವೀಡಿಯೋ ಪಾಠಕ್ರಮ. ನಾಡಿಯಾ ಎದುರಿಸುತ್ತಿದ್ದ ಗಣಿತದ ಸಮಸ್ಯೆಗೆ ಹೇಗೆ ಉತ್ತರವನ್ನು ಕಂಡುಹಿಡಿಯಬೇಕೆಂಬುದನ್ನು ಕುರಿತು ಖಾನ್ ಪುಟ್ಟ ವೀಡಿಯೋಗಳನ್ನು ತಯಾರಿಸಿ ಅವುಗಳನ್ನು ‘ಯೂಟ್ಯೂಬ್’ ಎಂಬ ವೆಬ್‍ಸೈಟಿನಲ್ಲಿ ಹಾಕಲಾರಂಭಿಸಿದ. ಅದರಿಂದಾಗಿ ನಾಡಿಯಾ ಯಾವಾಗ ಬೇಕಾದರೂ ಅವುಗಳನ್ನು ನೋಡಬಹುದಿತ್ತು ಮತ್ತು ಅಗತ್ಯವಿದ್ದರೆ ಹಳೆ ಪಾಠಗಳಿಗೂ ಮತ್ತೆ ಭೇಟಿ ನೀಡಬಹುದಿತ್ತು. ಇದರಿಂದಾಗಿ ನಾಡಿಯಾಳಿಗೆ ಎಷ್ಟು ಉಪಯೋಗವಾಯಿತೆಂದರೆ ಆಕೆ ಗಣಿತದಲ್ಲಿ ಉತ್ತಮ ಅಂಕಗಳನ್ನು ಪಡೆದಳು.

ಇದನ್ನೂ ಓದಿ: ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

ನಾಡಿಯಾಳ ನಂತರ ಆಕೆಯ ಸಹೋದರರಾದ ಆರ್ಮನ್ ಮತ್ತು ಆಲಿಗೂ ಖಾನ್ ಇದೇರೀತಿ ಪಾಠ ಮಾಡಲಾರಂಭಿಸಿದ. ಆದರೆ ಅಷ್ಟು ಹೊತ್ತಿಗೆ ಖಾನ್‍ನ ಇತರೆ ಸಂಬಂಧಿಕರ ಮಕ್ಕಳು ಮತ್ತು ಆ ಮಕ್ಕಳ ಸ್ನೇಹಿತರೂ ಈ ಪಾಠಗಳನ್ನು ನೋಡಿ ಕಲಿಯಲಾರಂಭಿಸಿದ್ದರು. ಇದಕ್ಕೆಲ್ಲ ಖಾನ್ ಬಳಸಿದ್ದು ತನ್ನ ಕಂಪ್ಯೂಟರ್ ಮತ್ತು ಅದಕ್ಕೆ ಅಳವಡಿಸಿದ್ದ 200 ಡಾಲರ್‌ಗಳ ಕ್ಯಾಮೆರಾ, 80 ಡಾಲರ್‌ಗಳ ಪ್ಯಾಡ್ ಮತ್ತು 20 ಡಾಲರ್‌ಗಳ ವೀಡಿಯೋ ರೆಕಾರ್ಡರ್ ಹಾಗೂ ಪುಕ್ಕಟೆ ಸಿಗುವ ಹಲವು ಸಾಫ್ಟ್‍ವೇರ್‌ಗಳನ್ನು.

ಇದು ಹೆಚ್ಚು ಜನಪ್ರಿಯತೆ ಪಡೆಯುತ್ತಿದ್ದಂತೆ ಖಾನ್ ತನ್ನದೇ ಒಂದು ವೆಬ್‍ಸೈಟ್ ಶುರು ಮಾಡಿ ಅವುಗಳನ್ನೆಲ್ಲ ಅದರಲ್ಲಿ ಸೇರಿಸಲಾರಂಭಿಸಿದ. ಕಾಲಕ್ರಮೇಣ ಇದು ಎಷ್ಟು ದೊಡ್ಡದಾಯಿತು ಎಂದರೆ ಇದರಲ್ಲಿ ಪಾಠಗಳನ್ನು ಹೇಳಿಕೊಡುವುದಕ್ಕೆ ಆತನಿಗೆ ದಿನದ ಇಪ್ಪತ್ತನಾಲ್ಕು ಗಂಟೆಗಳು ಸಾಲದಾಯಿತು. ಆಗ ಖಾನ್ ಯೋಚಿಸಿದ: “ನನಗೆ ಒಬ್ಬಳು ಸುಂದರ ಹೆಂಡತಿ ಇದ್ದಾಳೆ, ಇಬ್ಬರು ಮುದ್ದಿನ ಮಕ್ಕಳಿದ್ದಾರೆ, ವಾಸಿಸಲು ಒಂದು ಮನೆ ಇದೆ, ಎರಡು ಕಾರ್‌ಗಳಿವೆ, ಸಾಕಷ್ಟು ಉಳಿತಾಯವಿದೆ. ಇದಕ್ಕಿಂತ ಒಬ್ಬ ಮನುಷ್ಯನಿಗೆ ಜೀವನದಲ್ಲಿ ಇನ್ನೇನು ಬೇಕು? ನನಗೆ 80 ವರ್ಷ ವಯಸ್ಸಾದಾಗ ನನ್ನ ಹತ್ತಿರ ಎಷ್ಟು ದುಡ್ಡಿದೆ ಎಂಬುದಕ್ಕಿಂತ ನಾನು ಸಮಾಜಕ್ಕಾಗಿ ಏನನ್ನು ಮಾಡಿದೆ ಎಂಬುದು ಮುಖ್ಯವಾಗುತ್ತದೆ. ಈ ನನ್ನ ಪಾಠಗಳಿಂದ ಜನರಿಗೆ ಉಪಯೋಗವಾದರೆ ಅದಕ್ಕಿಂತ ಉತ್ತಮವಾದದ್ದೇನಿದೆ? ಬದುಕಿನಲ್ಲಿ ನೆಮ್ಮದಿ ಮತ್ತು ಸಂತೋಷ ಎಲ್ಲದಕ್ಕಿಂತ ಮುಖ್ಯ” ಎಂದು ಖಾನ್ ನಿರ್ಧರಿಸಿದ.

ಆಗ ಖಾನ್ ವರ್ಷಕ್ಕೆ ಮಿಲಿಯನ್ ಡಾಲರ್ ಸಂಬಳ ನೀಡುತ್ತಿದ್ದ ಬ್ಯಾಂಕ್ ಕೆಲಸಕ್ಕೆ ರಾಜೀನಾಮೆ ನೀಡಿ ‘ಖಾನ್ ಅಕಾಡೆಮಿ’ಗೆ ತನ್ನನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡ. ಈತ ತನ್ನ ಪಾಠಗಳಿಗೆ ಶುಲ್ಕವನ್ನು ವಿಧಿಸದೆ ಬಿಟ್ಟಿಯಾಗಿ ಹೇಳಿಕೊಡುತ್ತಿದ್ದರಿಂದ ನಿಧಾನವಾಗಿ ಆತನ ಉಳಿತಾಯದ ಹಣವೆಲ್ಲ ಕರಗಲಾರಂಭಿಸಿತು. ಆದರೂ ಈತನ ಅಕಾಡೆಮಿಯ ಜನಪ್ರಿಯತೆಯನ್ನು ಕಂಡು ಅದೆಷ್ಟೋ ಉದ್ಯಮಿಗಳು ಅದನ್ನು ಆತನಿಂದ ಖರೀದಿಸಲು ಮುಂದಾದರು. ಆದರೆ ಅದನ್ನು ಕೊಂಡವರು ತನ್ನಂತೆ ಪುಕ್ಕಟೆಯಾಗಿ ಪಾಠ ಹೇಳಿಕೊಡುವುದಿಲ್ಲ ಎಂದು ಗೊತ್ತಿದ್ದರಿಂದ ಖಾನ್ ಅದನ್ನು ಮಾರಲು ನಿರಾಕರಿಸಿದ್ದ.

ಅದೃಷ್ಟವಶಾತ್ ಅದೇಹೊತ್ತಿಗೆ ಈ ಖಾನ್ ಅಕಾಡೆಮಿ ಬಗ್ಗೆ ಬಿಲ್ ಗೇಟ್ಸ್‌ನ ಮಕ್ಕಳಿಗೂ ಗೊತ್ತಾಗಿ ಅವರೂ ಇಲ್ಲಿದ್ದ ಮಾಹಿತಿಯನ್ನು ಆಧರಿಸಿ ಕಲಿಯಲಾರಂಭಿಸಿದ್ದರು. ಒಮ್ಮೆ ಇದರ ಬಗ್ಗೆ ತಮ್ಮ ತಂದೆಗೂ ಹೇಳಿದರು. ಆತ ಕೂಡ ಇದನ್ನು ನೋಡಿ ಮೆಚ್ಚಿಕೊಂಡ. ಎಷ್ಟರಮಟ್ಟಿಗೆ ಅಂದರೆ ಖಾನ್ ಅಕಾಡೆಮಿಗೆ ಬಿಲ್ ಗೇಟ್ಸ್ ಫೌಂಡೇಷನ್‍ನಿಂದ ದೊಡ್ಡಮೊತ್ತದ ದೇಣಿಗೆಯನ್ನು ನೀಡಿದೆ. ಬಿಲ್ ಗೇಟ್ಸ್ ಅಲ್ಲದೆ ಗೂಗಲ್ ಸಂಸ್ಥೆಯವರೂ ಖಾನ್ ಅಕಾಡೆಮಿಯ ಸಾಧನೆಯನ್ನು ಮೆಚ್ಚಿ ಅದಕ್ಕೆ ದೊಡ್ಡ ಮೊತ್ತದ ಪ್ರಶಸ್ತಿಯನ್ನು ನೀಡಿದರಲ್ಲದೆ ಅವರೂ ದೇಣಿಗೆಯನ್ನು ನೀಡಿದರು. ಇವತ್ತು ಅದಷ್ಟೋ ಅಭಿಮಾನಿಗಳು ತಮ್ಮ ಶಕ್ತಾನುಸಾರ ಖಾನ್‍ನ ಈ ವಿದ್ಯಾಸಂಸ್ಥೆಗೆ ಹಣ ಸಹಾಯವನ್ನು ಮಾಡುತ್ತಿದ್ದಾರೆ.

ಇದರ ಬಗ್ಗೆ ಇಷ್ಟೆಲ್ಲ ಹೇಳಿದ್ದಕ್ಕೆ ಕಾರಣವಿದೆ. ನಮ್ಮ ಪತ್ರಿಕೆಯ ಓದುಗರಲ್ಲಿ ಬಹಳಷ್ಟು ಜನ ಶಾಲಾ ಅಧ್ಯಾಪಕರಿದ್ದಾರೆ. ಅವರೆಲ್ಲರೂ ಸಲ್ಮಾನ್ ಖಾನ್ ಅವರ khanacademy.org ಎಂಬ ವೆಬ್‍ಸೈಟಿಗೆ ಭೇಟಿ ನೀಡಿದರೆ ನಮ್ಮ ರಾಜ್ಯದ ಶಾಲಾಮಕ್ಕಳಿಗೆ ಇವತ್ತು ಕಷ್ಟದ ಸಬ್ಜೆಕ್ಟ್ ಆಗಿರುವ ಗಣಿತವನ್ನು ಇನ್ನೂ ಚೆನ್ನಾಗಿ ಹೇಳಿಕೊಟ್ಟು ಅವರೆಲ್ಲ ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚು ಯಶಸ್ವಿಯಾಗುವಂತೆ ಮಾಡಬಹುದಾಗಿದೆ. ಓರ್ವ ಗುರುವಿನ ಕರ್ತವ್ಯ ಅದೇ ಅಲ್ಲವೇ?

 ಗೌರಿ ಲಂಕೇಶ್
13 ಜುಲೈ, 2011 (ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...