Homeಅಂತರಾಷ್ಟ್ರೀಯಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್'

ಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್’

- Advertisement -
- Advertisement -

ಆತನ ಹೆಸರು ಸಲ್ಮಾನ್ ಖಾನ್. ಇಲ್ಲ, ಈತ ಬಾಲಿವುಡ್ ನಟನಲ್ಲ. ಬದಲಾಗಿ ಖ್ಯಾತ ಉದ್ಯಮಿ ಬಿಲ್ ಗೇಟ್ಸ್‌ಗೆ ಮಾತ್ರವಲ್ಲದೆ ಆತನ ಮಕ್ಕಳಿಗೂ ತನ್ನ “ಶಾಲೆ”ಯಲ್ಲಿ ಪ್ರತಿನಿತ್ಯ ‘ಪಾಠ’ ಹೇಳಿಕೊಡುತ್ತಿರುವ ‘ಶಿಕ್ಷಕ’!

ಅದಕ್ಕಿಂತ ಮುಖ್ಯವಾಗಿ ಈ ಸಲ್ಮಾನ್ ಖಾನ್ ನಡೆಸುತ್ತಿರುವ ‘ಶಾಲೆ’ಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅವರಿಗೆಲ್ಲ ಪ್ರತಿನಿತ್ಯ ನೂರಾರು ಪಾಠಗಳನ್ನು ಬೋಧಿಸಲಾಗುತ್ತಿದೆ. ಆದರೂ ಈ ಶಾಲೆಯಲ್ಲಿ ಒಬ್ಬನೇ ಒಬ್ಬ ಅಧ್ಯಾಪಕನಿದ್ದಾನೆ. ಆತನೇ ಈ ಸಲ್ಮಾನ್ ಖಾನ್!

ಅಚ್ಚರಿ ಎನಿಸುತ್ತಿದೆಯೆ? ಬನ್ನಿ ಸಲ್ಮಾನ್ ಖಾನ್ ನಡೆಸುತ್ತಿರುವ ‘ವರ್‍ಚ್ಯು ಅಲ್’ ಶಾಲೆಗೆ. ಈ ಸಲ್ಮಾನ್ ಖಾನ್‍ನ ತಾಯಿ ಭಾರತದ ಕೊಲ್ಕತ್ತಾದವರು. ತಂದೆ ಬಾಂಗ್ಲಾದೇಶದವರು. ಅಮೆರಿಕದಲ್ಲಿ ಜನಿಸಿದ ಸಲ್ಮಾನ್ ಖಾನ್ ಅಲ್ಲೇ ವಿದ್ಯಾಭ್ಯಾಸ ಮಾಡಿ ದೊಡ್ಡ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅದು ಅಂತಿಂತಹ ಕೆಲಸವಲ್ಲ. ಜನರ ಅತಿ ಆಸೆಯನ್ನೇ ಬಂಡವಾಳ ಮಾಡಿಕೊಂಡು ಅವರು ವಿವಿಧ ಕಂಪನಿಗಳ ಶೇರುಗಳಲ್ಲಿ ಹಣ ಹೂಡುವಂತೆ ಮಾಡುವ ಕೆಲಸ. ಅದಕ್ಕೆಂದು ಖಾನ್‍ಗೆ ಕೈತುಂಬ ಸಂಬಳ ಬರುತ್ತಿತ್ತು.

ಆರು ವರ್ಷಗಳ ಹಿಂದೆ ಒಮ್ಮೆ ಏನಾಯಿತೆಂದರೆ, ಖಾನ್‍ನ ಚಿಕ್ಕಮ್ಮನ ಮಗಳಾದ ನಾಡಿಯಾ ಶಾಲೆಯಲ್ಲಿ ಗಣಿತದಲ್ಲಿ ಬೇರೆ ವಿದ್ಯಾರ್ಥಿಗಳಿಗಿಂತ ಹಿಂದೆ ಬಿದ್ದಿದ್ದಾಳೆ ಎಂದು ಖಾನ್‍ಗೆ ಗೊತ್ತಾಯಿತು. ಆದರೆ ಆಗ ಖಾನ್ ಅಮೆರಿಕದ ಪೂರ್ವ ಕಡಲತೀರದಲ್ಲಿರುವ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿದ್ದರೆ, ನಾಡಿಯಾ ಪಶ್ಚಿಮ ಕಡಲತೀರದಲ್ಲಿರುವ ಮತ್ತೊಂದು ನಗರದಲ್ಲಿ ವಾಸಿಸುತ್ತಿದ್ದಳು. ಆದರೂ ಆಕೆಗೆ ಪ್ರತಿದಿನ ಫೋನ್ ಮೂಲಕವೇ ಗಣಿತದಲ್ಲಿ ಪಾಠ ಹೇಳಿಕೊಡಲು ಖಾನ್ ಪ್ರಾರಂಭಿಸಿದ. ಆದರೆ ಸ್ವಲ್ಪ ದಿನಗಳಲ್ಲೇ ಇದು ಕಷ್ಟವಾಗಲಾರಂಭಿಸಿತು. ಎರಡೂ ನಗರಗಳ ನಡುವೆ ನಾಲ್ಕು ಗಂಟೆಗಳ ವ್ಯತ್ಯಾಸ ಇತ್ತಲ್ಲದೆ, ಈತನ ಕೆಲಸದ ಸಮಯ-ನಾಡಿಯಾಳ ಶಾಲೆಯ ಸಮಯ ಇತ್ಯಾದಿಗಳು ನಿತ್ಯದ ಪಾಠಕ್ಕೆ ಅಡ್ಡಬರಲಾರಂಭಿಸಿದವು.

ಆಗ ಖಾನ್‍ಗೆ ಹೊಳೆದದ್ದೇ ಈ ವೀಡಿಯೋ ಪಾಠಕ್ರಮ. ನಾಡಿಯಾ ಎದುರಿಸುತ್ತಿದ್ದ ಗಣಿತದ ಸಮಸ್ಯೆಗೆ ಹೇಗೆ ಉತ್ತರವನ್ನು ಕಂಡುಹಿಡಿಯಬೇಕೆಂಬುದನ್ನು ಕುರಿತು ಖಾನ್ ಪುಟ್ಟ ವೀಡಿಯೋಗಳನ್ನು ತಯಾರಿಸಿ ಅವುಗಳನ್ನು ‘ಯೂಟ್ಯೂಬ್’ ಎಂಬ ವೆಬ್‍ಸೈಟಿನಲ್ಲಿ ಹಾಕಲಾರಂಭಿಸಿದ. ಅದರಿಂದಾಗಿ ನಾಡಿಯಾ ಯಾವಾಗ ಬೇಕಾದರೂ ಅವುಗಳನ್ನು ನೋಡಬಹುದಿತ್ತು ಮತ್ತು ಅಗತ್ಯವಿದ್ದರೆ ಹಳೆ ಪಾಠಗಳಿಗೂ ಮತ್ತೆ ಭೇಟಿ ನೀಡಬಹುದಿತ್ತು. ಇದರಿಂದಾಗಿ ನಾಡಿಯಾಳಿಗೆ ಎಷ್ಟು ಉಪಯೋಗವಾಯಿತೆಂದರೆ ಆಕೆ ಗಣಿತದಲ್ಲಿ ಉತ್ತಮ ಅಂಕಗಳನ್ನು ಪಡೆದಳು.

ಇದನ್ನೂ ಓದಿ: ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

ನಾಡಿಯಾಳ ನಂತರ ಆಕೆಯ ಸಹೋದರರಾದ ಆರ್ಮನ್ ಮತ್ತು ಆಲಿಗೂ ಖಾನ್ ಇದೇರೀತಿ ಪಾಠ ಮಾಡಲಾರಂಭಿಸಿದ. ಆದರೆ ಅಷ್ಟು ಹೊತ್ತಿಗೆ ಖಾನ್‍ನ ಇತರೆ ಸಂಬಂಧಿಕರ ಮಕ್ಕಳು ಮತ್ತು ಆ ಮಕ್ಕಳ ಸ್ನೇಹಿತರೂ ಈ ಪಾಠಗಳನ್ನು ನೋಡಿ ಕಲಿಯಲಾರಂಭಿಸಿದ್ದರು. ಇದಕ್ಕೆಲ್ಲ ಖಾನ್ ಬಳಸಿದ್ದು ತನ್ನ ಕಂಪ್ಯೂಟರ್ ಮತ್ತು ಅದಕ್ಕೆ ಅಳವಡಿಸಿದ್ದ 200 ಡಾಲರ್‌ಗಳ ಕ್ಯಾಮೆರಾ, 80 ಡಾಲರ್‌ಗಳ ಪ್ಯಾಡ್ ಮತ್ತು 20 ಡಾಲರ್‌ಗಳ ವೀಡಿಯೋ ರೆಕಾರ್ಡರ್ ಹಾಗೂ ಪುಕ್ಕಟೆ ಸಿಗುವ ಹಲವು ಸಾಫ್ಟ್‍ವೇರ್‌ಗಳನ್ನು.

ಇದು ಹೆಚ್ಚು ಜನಪ್ರಿಯತೆ ಪಡೆಯುತ್ತಿದ್ದಂತೆ ಖಾನ್ ತನ್ನದೇ ಒಂದು ವೆಬ್‍ಸೈಟ್ ಶುರು ಮಾಡಿ ಅವುಗಳನ್ನೆಲ್ಲ ಅದರಲ್ಲಿ ಸೇರಿಸಲಾರಂಭಿಸಿದ. ಕಾಲಕ್ರಮೇಣ ಇದು ಎಷ್ಟು ದೊಡ್ಡದಾಯಿತು ಎಂದರೆ ಇದರಲ್ಲಿ ಪಾಠಗಳನ್ನು ಹೇಳಿಕೊಡುವುದಕ್ಕೆ ಆತನಿಗೆ ದಿನದ ಇಪ್ಪತ್ತನಾಲ್ಕು ಗಂಟೆಗಳು ಸಾಲದಾಯಿತು. ಆಗ ಖಾನ್ ಯೋಚಿಸಿದ: “ನನಗೆ ಒಬ್ಬಳು ಸುಂದರ ಹೆಂಡತಿ ಇದ್ದಾಳೆ, ಇಬ್ಬರು ಮುದ್ದಿನ ಮಕ್ಕಳಿದ್ದಾರೆ, ವಾಸಿಸಲು ಒಂದು ಮನೆ ಇದೆ, ಎರಡು ಕಾರ್‌ಗಳಿವೆ, ಸಾಕಷ್ಟು ಉಳಿತಾಯವಿದೆ. ಇದಕ್ಕಿಂತ ಒಬ್ಬ ಮನುಷ್ಯನಿಗೆ ಜೀವನದಲ್ಲಿ ಇನ್ನೇನು ಬೇಕು? ನನಗೆ 80 ವರ್ಷ ವಯಸ್ಸಾದಾಗ ನನ್ನ ಹತ್ತಿರ ಎಷ್ಟು ದುಡ್ಡಿದೆ ಎಂಬುದಕ್ಕಿಂತ ನಾನು ಸಮಾಜಕ್ಕಾಗಿ ಏನನ್ನು ಮಾಡಿದೆ ಎಂಬುದು ಮುಖ್ಯವಾಗುತ್ತದೆ. ಈ ನನ್ನ ಪಾಠಗಳಿಂದ ಜನರಿಗೆ ಉಪಯೋಗವಾದರೆ ಅದಕ್ಕಿಂತ ಉತ್ತಮವಾದದ್ದೇನಿದೆ? ಬದುಕಿನಲ್ಲಿ ನೆಮ್ಮದಿ ಮತ್ತು ಸಂತೋಷ ಎಲ್ಲದಕ್ಕಿಂತ ಮುಖ್ಯ” ಎಂದು ಖಾನ್ ನಿರ್ಧರಿಸಿದ.

ಆಗ ಖಾನ್ ವರ್ಷಕ್ಕೆ ಮಿಲಿಯನ್ ಡಾಲರ್ ಸಂಬಳ ನೀಡುತ್ತಿದ್ದ ಬ್ಯಾಂಕ್ ಕೆಲಸಕ್ಕೆ ರಾಜೀನಾಮೆ ನೀಡಿ ‘ಖಾನ್ ಅಕಾಡೆಮಿ’ಗೆ ತನ್ನನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡ. ಈತ ತನ್ನ ಪಾಠಗಳಿಗೆ ಶುಲ್ಕವನ್ನು ವಿಧಿಸದೆ ಬಿಟ್ಟಿಯಾಗಿ ಹೇಳಿಕೊಡುತ್ತಿದ್ದರಿಂದ ನಿಧಾನವಾಗಿ ಆತನ ಉಳಿತಾಯದ ಹಣವೆಲ್ಲ ಕರಗಲಾರಂಭಿಸಿತು. ಆದರೂ ಈತನ ಅಕಾಡೆಮಿಯ ಜನಪ್ರಿಯತೆಯನ್ನು ಕಂಡು ಅದೆಷ್ಟೋ ಉದ್ಯಮಿಗಳು ಅದನ್ನು ಆತನಿಂದ ಖರೀದಿಸಲು ಮುಂದಾದರು. ಆದರೆ ಅದನ್ನು ಕೊಂಡವರು ತನ್ನಂತೆ ಪುಕ್ಕಟೆಯಾಗಿ ಪಾಠ ಹೇಳಿಕೊಡುವುದಿಲ್ಲ ಎಂದು ಗೊತ್ತಿದ್ದರಿಂದ ಖಾನ್ ಅದನ್ನು ಮಾರಲು ನಿರಾಕರಿಸಿದ್ದ.

ಅದೃಷ್ಟವಶಾತ್ ಅದೇಹೊತ್ತಿಗೆ ಈ ಖಾನ್ ಅಕಾಡೆಮಿ ಬಗ್ಗೆ ಬಿಲ್ ಗೇಟ್ಸ್‌ನ ಮಕ್ಕಳಿಗೂ ಗೊತ್ತಾಗಿ ಅವರೂ ಇಲ್ಲಿದ್ದ ಮಾಹಿತಿಯನ್ನು ಆಧರಿಸಿ ಕಲಿಯಲಾರಂಭಿಸಿದ್ದರು. ಒಮ್ಮೆ ಇದರ ಬಗ್ಗೆ ತಮ್ಮ ತಂದೆಗೂ ಹೇಳಿದರು. ಆತ ಕೂಡ ಇದನ್ನು ನೋಡಿ ಮೆಚ್ಚಿಕೊಂಡ. ಎಷ್ಟರಮಟ್ಟಿಗೆ ಅಂದರೆ ಖಾನ್ ಅಕಾಡೆಮಿಗೆ ಬಿಲ್ ಗೇಟ್ಸ್ ಫೌಂಡೇಷನ್‍ನಿಂದ ದೊಡ್ಡಮೊತ್ತದ ದೇಣಿಗೆಯನ್ನು ನೀಡಿದೆ. ಬಿಲ್ ಗೇಟ್ಸ್ ಅಲ್ಲದೆ ಗೂಗಲ್ ಸಂಸ್ಥೆಯವರೂ ಖಾನ್ ಅಕಾಡೆಮಿಯ ಸಾಧನೆಯನ್ನು ಮೆಚ್ಚಿ ಅದಕ್ಕೆ ದೊಡ್ಡ ಮೊತ್ತದ ಪ್ರಶಸ್ತಿಯನ್ನು ನೀಡಿದರಲ್ಲದೆ ಅವರೂ ದೇಣಿಗೆಯನ್ನು ನೀಡಿದರು. ಇವತ್ತು ಅದಷ್ಟೋ ಅಭಿಮಾನಿಗಳು ತಮ್ಮ ಶಕ್ತಾನುಸಾರ ಖಾನ್‍ನ ಈ ವಿದ್ಯಾಸಂಸ್ಥೆಗೆ ಹಣ ಸಹಾಯವನ್ನು ಮಾಡುತ್ತಿದ್ದಾರೆ.

ಇದರ ಬಗ್ಗೆ ಇಷ್ಟೆಲ್ಲ ಹೇಳಿದ್ದಕ್ಕೆ ಕಾರಣವಿದೆ. ನಮ್ಮ ಪತ್ರಿಕೆಯ ಓದುಗರಲ್ಲಿ ಬಹಳಷ್ಟು ಜನ ಶಾಲಾ ಅಧ್ಯಾಪಕರಿದ್ದಾರೆ. ಅವರೆಲ್ಲರೂ ಸಲ್ಮಾನ್ ಖಾನ್ ಅವರ khanacademy.org ಎಂಬ ವೆಬ್‍ಸೈಟಿಗೆ ಭೇಟಿ ನೀಡಿದರೆ ನಮ್ಮ ರಾಜ್ಯದ ಶಾಲಾಮಕ್ಕಳಿಗೆ ಇವತ್ತು ಕಷ್ಟದ ಸಬ್ಜೆಕ್ಟ್ ಆಗಿರುವ ಗಣಿತವನ್ನು ಇನ್ನೂ ಚೆನ್ನಾಗಿ ಹೇಳಿಕೊಟ್ಟು ಅವರೆಲ್ಲ ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚು ಯಶಸ್ವಿಯಾಗುವಂತೆ ಮಾಡಬಹುದಾಗಿದೆ. ಓರ್ವ ಗುರುವಿನ ಕರ್ತವ್ಯ ಅದೇ ಅಲ್ಲವೇ?

 ಗೌರಿ ಲಂಕೇಶ್
13 ಜುಲೈ, 2011 (ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...