Homeಕರ್ನಾಟಕಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

"ನಾವು ಮನಸ್ಸು, ಹೃದಯಗಳನ್ನು ನೇಯೋಣ, ಹರಿಯೋದು ಬೇಡ" ಎಂದು ಹಂಸಲೇಖ ಅವರು ಮನವಿ ಮಾಡಿದರು.

- Advertisement -
- Advertisement -

ಜೇನುಕುರುಬ ಸಮುದಾಯದ ಸಂಗೀತ ಕಲೆಯನ್ನು ಝೀ ಕನ್ನಡ ವಾಹಿನಿಯಲ್ಲಿ ಪ್ರದರ್ಶಿಸೋಣ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಹೇಳಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ ಬೆಂಗಳೂರಿನ ಸ್ಫೂರ್ತಿಧಾಮದಲ್ಲಿ ಆಯೋಜಿಸಿದ್ದ ‘ನೆಲದ ಪದ’ ಸಾಂಸ್ಕೃತಿಕ ಯುವಜನ ಉತ್ಸವವನ್ನು ಉದ್ಘಾಟಿಸಿದ ಅವರು, ಜೇನುಕುರುಬ ಯುವಜನರ ಕಲಾ ಪ್ರದರ್ಶನವನ್ನು ನೋಡಿ, ‘ಜೇನುಕುರುಬ ಯುವಕರನ್ನು ಮುಖ್ಯವಾಹಿನಿಗೆ ತರಬೇಕಾಗಿದೆ’ ಎಂದರು.

ಝೀ ಕನ್ನಡ ವಾಹಿನಿಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಜಾನಪದ ವಿಚಾರವಾಗಿ ಚರ್ಚಿಸುವಾಗಲೆಲ್ಲ ಯಾವುದಾದರೂ ವಿಶೇಷ ಕಾರ್ಯಕ್ರಮ ರೂಪಿಸಲು ಸಾಧ್ಯವಿದ್ದರೆ ತಿಳಿಸಿ ಸರ್ ಎಂದು ನನಗೆ ಕೇಳಿಕೊಳ್ಳುತ್ತಾರೆ. ನಾನು ಯಾವಾಗಲೂ ಗೊಂದಲದಲ್ಲೇ ಇರುತ್ತಿದ್ದೆ. ಇವತ್ತು ಒಂದು ಸರಿಯಾದ ಚಿತ್ರಣ ಸಿಕ್ಕಿದೆ. ಆ ಜೇನುಕುರುಬ ತಂಡಕ್ಕೆ ಇನ್ನೊಂದಿಷ್ಟು ಅಭ್ಯಾಸ ಕೊಡಿಸಿ, ಅದಕ್ಕೊಂದು ಅಲಂಕಾರಿಕ ರೂಪವನ್ನು ನೀಡಿ, ಝೀ ವಾಹಿನಿಯಲ್ಲಿ ಪ್ರದರ್ಶನ ಪಡಿಸೋಣ ಎಂದರು.

25,000 ರೂ.ಗಳನ್ನು ತಂಡಕ್ಕೆ ಬಹುಮಾನವಾಗಿ ಘೋಷಿಸಿದ ಅವರು, “ಜೇನುಕುರುಬರ ತಂಡ ವೇದಿಕೆಗೆ ಬಂದಾಗ ನನ್ನ ಕಣ್ಣಂಚಿನಲ್ಲಿ ನೀರು ಬಂದವು. ಎಷ್ಟು ಉತ್ಸಾಹ, ಎಷ್ಟು ಅದಮ್ಯವಾದ ಚೈತನ್ಯ ಅವರದ್ದು. ಲಯಬದ್ಧತೆಯೊಂದಿಗೆ ಸಭೆಗೆ ಬಂದು ಸಭಾ ಗೌರವವನ್ನು ಪಡೆದು, ಅವರು ಹಾಡಿದ ನಾಲ್ಕು ರಾಗಗಳೂ ಬಹಳ ಅದ್ಭುತವಾಗಿದ್ದವು” ಎಂದು ಬಣ್ಣಿಸಿದರು.

ಎಲ್ಲ ಸಂಗೀತ ಪ್ರಕಾರಗಳು ಇಂದು ಶ್ರುತಿ ಬದ್ಧತೆಗೆ ಹಾಗೂ ಶಿಸ್ತಿಗೆ ಒಳಪಟ್ಟಿವೆ. ನಾವು ಒಂಚೂರು ಶ್ರುತಿ ಹಾಗೂ ಶಿಸ್ತಿಗೆ ಒಳಪಟ್ಟರೆ ನಾವು ಮೇಲೇರುವ ಸ್ಥಿತಿ ಹೆಚ್ಚಾಗುತ್ತದೆ. ನಮ್ಮ ಮೆದುಳೇ ನಮ್ಮ ಹೆಡ್‌ ಮಾಸ್ಟರ್‌. ಈ ಮೆದುಳಿಗೆ ಯಾರು ಹೆಡ್ ಮಾಸ್ಟರ್‌ ಎಂಬುದು ನಮಗೆ ಗೊತ್ತಿಲ್ಲ. ಈ ಮೆದುಳು ನಮ್ಮನ್ನು ನಿಯಂತ್ರಿಸುತ್ತದೆ. ಈ ಮೆದುಳಿಗೆ ನೀವು ಆಜ್ಞೆ ಮಾಡಿ. ನೀವು ಅಂದುಕೊಂಡಂತೆ ಆಗುತ್ತೀರಿ. ಅಂದುಕೋ, ನೀ ಆಗುತ್ತೀಯ ಎಂದು ಪ್ರೋತ್ಸಾಹಿಸಿದರು.

ಜಗತ್ತಿನಲ್ಲಿ ಜನಪದದ ಕುರಿತು ಅನುಕಂಪದ ಅಲೆ ಎದ್ದಿದೆ. ಜನಪದರು ಶ್ರುತಿಬದ್ಧತೆಗೆ ಮರಳಿದ್ದಾರೆ. ಉತ್ಸಾಹ, ಹುಮ್ಮಸ್ಸು ಹುಟ್ಟಿನಿಂದಲೇ ಜನಪದರಿಗೆ ಇದೆ. ಆದರೆ ಕೊಂಚ ಶ್ರುತಿ, ಲಯಬದ್ಧತೆ, ಕೊಂಚ ಸಭಾ ಮರ್ಯಾದೆ ನಡೆಸಿಕೊಟ್ಟರೆ ಜಗತ್ತು ಜನಪದರನ್ನು ಆಲಂಗಿಸಲು ಸಿದ್ಧವಾಗಿದೆ ಎಂದು ಹೇಳಿದರು.

ತಮ್ಮ ದೇಸಿ ಸಂಸ್ಥೆ ಕುರಿತು ಮಾತನಾಡಿದ ಅವರು, “ಈ ಸಂಸ್ಥೆಯಲ್ಲಿ ಈ ನೆಲದ ಜಾನಪದೀಯ ಸೊಗಡನ್ನು ಕಟ್ಟಲು, ಪಠ್ಯವನ್ನು ರೂಪಿಸಲು ಸಾಕಷ್ಟು ಕಷ್ಟಪಟ್ಟಿದ್ದೇವೆ. ಬಹಳ ದಿಕ್ಕು ತೋಚದೆ ಈಗಲೂ ಒದ್ದಾಡುತ್ತಿದ್ದೇವೆ. ಜಾನಪದೀಯ ಸೊಗಡನ್ನು ಪಠ್ಯದ ಮೂಲಕ ಹೇಳಲು ಸಾಧ್ಯವೇ? ಅದು ಸ್ವಾ- ಅನುಭವದಿಂದ ಬರಬೇಕು. ಜನಪದ ಎಂಬುದು ಸಂಭ್ರಮ, ಸೊಗಡು. ಆ ಸೊಗಡಿಗೆ ಪಠ್ಯವನ್ನು ರೂಪಿಸುವುದು ಬಹಳ ಕಷ್ಟ. ಆದರೂ ನಾವು ಒಂದು ತಾಳ ಶಾಸ್ತ್ರವನ್ನು ರಚಿಸಿದ್ದೇವೆ. ಜನಪದ ಸಂಗೀತವನ್ನು ಕಲಿಯುವುದಕ್ಕಾಗಿ ಶಿಸ್ತುಬದ್ಧ ಸಂಗೀತ ಲಿಪಿ ಹಾಗೂ ಪಠ್ಯಕ್ರಮವನ್ನು ರೂಪಿಸಿದ್ದೇವೆ. ಜೊತೆಗೆ ಪ್ರದರ್ಶನ ಕಲೆಗಳಿಗೆ ಬೇಕಾಗಿರುವ ಎಲ್ಲ ಸುಧಾರಣೆ ಕುರಿತು ಪಠ್ಯದಲ್ಲಿ ಸೇರಿಸಿದ್ದೇವೆ. ನಮಗೆ ಈಗ ವಿದ್ಯಾರ್ಥಿಗಳು ಅಥವಾ ಪ್ರತಿಭೆಗಳು ಬೇಕಿದ್ದಾರೆ. ಹಂಸಲೇಖ ದೇಸಿ ವಿದ್ಯಾ ಸಂಸ್ಥೆ ನಿಮ್ಮ ಸೇವೆಗೆ ಕಂಕಣ ಕಟ್ಟಿ ನಿಂತಿದೆ” ಎಂದು ಆಹ್ವಾನಿಸಿದರು.

ನೀವು ನುಡಿಸುವ ಡೊಳ್ಳು ವಾದ್ಯವನ್ನು ಶ್ರುತಿ ಮಾಡಲು ಯೋಗ್ಯವಾಗಿ ತಯಾರು ಮಾಡಿದ್ದೇವೆ. ಅದನ್ನು ಇನ್ನೂ ನಾಡಿಗೆ ಅರ್ಪಣೆ ಮಾಡಿಲ್ಲ ಎಂದ ಅವರು, ಯಾರಾದರೂ 25 ಜನರ ತಂಡಗಳಾಗಿ ಬಂದರೆ ಅಥವಾ ನಾನಾಗಿಯೇ ಬಂದು ತಯಾರು ಮಾಡುವ ಕೆಲಸವನ್ನು ಮಾಡಬಲ್ಲೆ. ಲಯಬದ್ಧತೆ ರೂಪಿಸಿಕೊಂಡರೆ ಜನಪದಕ್ಕೆ ಕೊಂಬು, ಕೋಡುಗಳು ಹೆಚ್ಚಾಗುತ್ತವೆ. ನಾನು ನಿಮ್ಮ ಜೊತೆಯಲ್ಲಿ ಮುಂದೆ ಕೆಲಸ ಮಾಡುತ್ತೇನೆ ಎಂದರು.

“ನಾವು ನೇಯೋಣ, ಹರಿಯದಿರೋಣ. ಬಟ್ಟೆಯನ್ನು, ಸಂಭ್ರಮವನ್ನು, ಅಕ್ಷರವನ್ನು, ಮನಸ್ಸು, ಹೃದಯಗಳನ್ನು ನೇಯೋಣ. ಆದರೆ ಹರಿಯೋದು ಬೇಡ” ಎಂದು ಅವರು ತಮ್ಮ ಭಾಷಣದ ಆರಂಭದಲ್ಲಿ ಹೇಳಿದರು.

ಹಂಸಲೇಖ ಅವರು ಮಾರ್ಮಿಕವಾಗಿ ಹೇಳಿದ ‘ನೇಯುವ ಕಾರ್ಯ’ವನ್ನು ಉಲ್ಲೇಖಿಸಿ ಮಾತನಾಡಿದ ಸ್ಫೂರ್ತಿಧಾಮದ ಅಧ್ಯಕ್ಷರು, ಐಪಿಎಸ್‌ ನಿವೃತ್ತ ಅಧಿಕಾರಿಯಾಗಿರುವ ಮರಿಸ್ವಾಮಿಯವರು, “ಉತ್ತರಖಾಂಡ್‌ನಲ್ಲಿ ನಡೆದ ಧರ್ಮ ಸಂಸತ್‌ ಇಡೀ ಒಂದು ಜನಾಂಗವನ್ನೇ ನಾಶ ಮಾಡುವ ಮಾತನಾಡುತ್ತದೆ. ಹೀಗಾಗಿ ಹರಿದು ಹಾಕುವ ಕೆಲಸ ದೊಡ್ಡ ಮಟ್ಟದಲ್ಲಿ ಆಗುವ ಸಾಧ್ಯತೆ ಕಾಣುತ್ತದೆ. ನೇಯುವಲ್ಲಿ ನಾವು ಎಲ್ಲಿ ಸೋತುಬಿಡುತ್ತೇವೆ ಎಂಬ ಭಯ ಕಾಡುತ್ತಿದೆ. ಹೀಗೆ ಹರಿಯೋರನ್ನು ಅಧಿಕಾರಕ್ಕೆ ಕೂರಿಸಿದವರು ಯಾರು? ಹಾಲನ್ನು ಹಾಕಿ ಸಾಕಿ, ಗಟ್ಟಿ ಮಾಡಿ ಕೂರಿಸಿದವರು ನಾವು. ಈಗ ಅವರು ಇಡೀ ದೇಶವನ್ನೇ ಹರಿದುಹಾಕುವ ಮಾತನಾಡುತ್ತಿದ್ದಾರೆ. ಇಡೀ ದೇಶ ಯೋಚಿಸಬೇಕಾದ ವಿಚಾರವಿದು” ಎಂದು ಎಚ್ಚರಿಸಿದರು.

“ಸಮಾತೆಯ ಹೆಸರಲ್ಲಿ ಅಸಮಾನತೆಯನ್ನು ಹೇಳುವವರು ಬಯಲಾಗುತ್ತಿದ್ದಾರೆ. ನಾವು ಪ್ರೊಗೆಸಿವ್ ಎಂದುಕೊಂಡ ಅನೇಕರು ಆಂತರಿಕವಾಗಿ ರಿಗ್ರೆಸಿವ್ ಆಗಿದ್ದಾರೆ. ತಮ್ಮ ಆತ್ಮವನ್ನು ತೆರೆದಿಟ್ಟು ತಾವು ಎಲ್ಲಿದ್ದೇವೆ ಎಂಬುದನ್ನು ತೋರಿಸುತ್ತಿದ್ದಾರೆ” ಎಂದರು.

ಪ್ರಗತಿಪರ ಆಗುವುದು ಹೆಣ್ಣುಮಕ್ಕಳಿಗೆ ಅನಿವಾರ್ಯ: ಎಂ.ಡಿ.ಪಲ್ಲವಿ

ಗಾಯಕಿ ಎಂ.ಡಿ.ಪಲ್ಲವಿ ಅವರು ಮಾತನಾಡಿ, “ನಾವು ನಮ್ಮ ಬದುಕನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎಂದು ಯೋಚಿಸಬೇಕು. ನನ್ನ ಹೋರಾಟ- ನಾನು ಪ್ರಗತಿಪರ ಆಗಿರಬೇಕು ಎಂಬುದಕ್ಕಾಗಿರುತ್ತದೆ. ನಾನು ಪ್ರಗತಿಪರ ಆಗಿದ್ದೇನೆ, ಆಗಿರುತ್ತೇನೆ. ಪ್ರಗತಿಪರ ಆಗುವುದು ಹೆಣ್ಣು ಮಕ್ಕಳಿಗೆ ಅನಿವಾರ್ಯ. ಇಲ್ಲವಾದರೆ ವಿದ್ಯಾಭ್ಯಾಸವೂ ಸಿಗುವುದಿಲ್ಲ. ಸಮಾಜ ಪ್ರಗತಿಗಪರ ಆಗಬೇಕೆಂದರೆ ವಿದ್ಯಾಭ್ಯಾಸದ ಜೊತೆಗೆ ಸಮಾನತೆಯೂ ಮುಖ್ಯ. ಆ ಸಮಾನತೆಯನ್ನು ಡಾ.ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಕೊಟ್ಟಿದ್ದಾರೆ. ಸಮಾನತೆಯನ್ನು ಸಂಪೂರ್ಣವಾಗಿ ತರಲು ಸಾಧ್ಯವಾಗಿಲ್ಲ. ಅದರತ್ತ ನಾವು ಹೆಜ್ಜೆ ಹಾಕಬೇಕು. ನಮ್ಮ ದಾರಿಯನ್ನು ನಾವೇ ಕಲ್ಪಿಸಿಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟರು.

ಹೋರಾಟ- ಪ್ರೀತಿಯಿಂದಲೂ ಸಾಧ್ಯವಿದೆ. ಕಿರುಚದೆ, ರೇಗದ ಮೆಲುದನಿಯಲ್ಲಿ ಲಯಬದ್ಧವಾಗಿ, ಶ್ರುತಿಬದ್ಧವಾಗಿಯೂ ಹೋರಾಟ ಮಾಡಬಹುದು ಎಂದು ಅವರು ತಿಳಿಸಿದರು.

ಹಿರಿಯ ಪತ್ರಕರ್ತರಾದ ವಿಜಯಮ್ಮ ಮಾತನಾಡಿ, “ಇಂದು ಮಾತನಾಡಿದರೆ ದೇಶದ್ರೋಹ ಎಂಬ ಪರಿಸ್ಥಿತಿ ಬಂದಿರುವುದರಿಂದ ನಾವು ಮಾತನಾಡುವುದಿಲ್ಲ. ನಿಮ್ಮ ಧರ್ಮ, ನಿಮ್ಮ ನಂಬಿಕೆಗಳು, ಅಪನಂಬಿಕೆಗಳು, ಮೂಢನಂಬಿಕೆಗಳು ನಿಮಗಿರಲಿ; ನಮ್ಮ ಅಭಿಪ್ರಾಯಗಳನ್ನು ಹೇಳುವುದಕ್ಕೆ ನಾವು ಇನ್ನೊಂದು ದಾರಿಯನ್ನು ಹುಡುಕುತ್ತೇವೆ. ನಮ್ಮ ಸಾಂಸ್ಕೃತಿಕ ದಾರಿಯನ್ನು ಪ್ರತಿರೋಧದ ದನಿಯಾಗಿ ಬಳಸಿಕೊಳ್ಳಲು ಪ್ರಯತ್ನಪಡುತ್ತಿದ್ದೇವೆ” ಎಂದರು.

ಚಲನಚಿತ್ರ ನಿರ್ದೇಶಕ ಮಂಸೋರೆ ಮಾತನಾಡಿ ಕೆವಿಎಸ್‌ ಸಂಘಟನೆಯ ಕೆಲಸಗಳನ್ನು ಶ್ಲಾಘಿಸಿದರು. ಮುಂದುವರಿದು ಮಾತನಾಡಿದ ಅವರು, “ನಿನ್ನೆ ಫೇಸ್‌ಬುಕ್‌ನಲ್ಲಿ ಒಂದು ಘಟನೆ ಓದಿದೆ. ನಾವು ಎಂತಹ ಸಮಾಜದಲ್ಲಿ ಇದ್ದೇವೆ ಎಂದು ನಾಚಿಕೆಯಾಗುತ್ತದೆ. ನಾವು ಜಾತಿ, ಧರ್ಮದಿಂದ ಹೊರಬರಬೇಕಾಗಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು ಇವುಗಳಿಂದ ಹೊರಬೇಕಾಗಿದೆ. ನಾವು ವೈಯಕ್ತಿಕವಾಗಿಯೂ ಹೋರಾಡಿ ಜಾತಿ, ಧರ್ಮದ ಸಂಕೋಲೆಗಳಿಂದ ಬಿಡುಗಡೆ ಹೊಂದಿ ಮನುಷ್ಯರಾಗಲು ಪ್ರಯತ್ನಪಡಬೇಕು” ಎಂದು ಆಶಿಸಿದರು.

ಬಿ.ಎಂ.ಗಿರಿರಾಜ್ ಮಾತನಾಡಿ, “ಕುವೆಂಪು ಅವರು ಹೇಳಿದಂತೆ ಮನುಷ್ಯನಿಗೆ ಮೂರು ಹಸಿವುಗಳು ಇರಬೇಕಾಗುತ್ತದೆ. ಅಧ್ಯಾತ್ಮದ ಹಸಿವು, ಆಧುನಿಕತೆಯ ಹಸಿವು, ಸಮಾನತೆ ಹಸಿವು. ಈ ಹಸಿವುಗಳು ತುಂಬಿದರೆ ನಾವು ತಪ್ಪು ಮಾಡುವುದು ಕಡಿಮೆಯಾಗುತ್ತದೆ. ಕುವೆಂಪು ಅವರು ಅಧ್ಯಾತ್ಮದ ಕಡೆಗೂ, ಆಧುನಿಕತೆಯ ಕಡೆಗೂ ಒಮ್ಮೆಲೇ ಯೋಚಿಸುತ್ತಿದ್ದರು” ಎಂದು ವಿವರಿಸಿದರು.

ನೆಲದ ಪದ ಕಾರ್ಯಕ್ರಮ ಬಹುತ್ವವನ್ನು ಪ್ರತಿಪಾದಿಸಿತು. (ಹೆಚ್ಚಿನ ವರದಿಯನ್ನು ‘ಇಲ್ಲಿ’ ಓದಬಹುದು.)


ಇದನ್ನೂ ಓದಿರಿ: ಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The present needed culture movement

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...