Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...