Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...