Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...