Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...