Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...