Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...