Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...