Homeಅಂಕಣಗಳುಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

- Advertisement -
- Advertisement -

ದುರ್ಗಾ- ಮಹಿಷ ಕದನ ಮತ್ತು ಮಹಿಷಾಸುರ ಮಧನದ ಪರಿಣಾಮ ಇದ್ದೀತು. ನಮ್ಮ ಎಲ್ಲ ಜಾನುವಾರುಗಳ ಪೈಕಿ ನಿಕೃಷ್ಟವೆಂದು ಕಳಂಕ ಹೊತ್ತ ಪ್ರಾಣಿಯಿದು. ಪರಮ ಕ್ರೌರ್ಯಕ್ಕೆ ಗುರಿಯಾಗುವ ಜೀವಿ. ಮನಸೇಚ್ಛೆ ಬಡಿತ ತಿನ್ನುತ್ತದೆ, ದೇವಿಯ ಮುಂದೆ ಕತ್ತು ಕಡಿಸಿಕೊಂಡು ಬಲಿಯಾಗುತ್ತದೆ. ಮೇವು ನೀರಿಲ್ಲದೆ ನೂರಾರು ಕಿ.ಮೀ. ದೂರ ಹಿಂಸೆಯ ಸಾಗಣೆಗೆ ತುತ್ತಾಗಿ ಕಸಾಯಿಖಾನೆಗಳಲ್ಲಿ ಅತ್ಯಂತ ಯಾತನೆಯ ಮರಣಕ್ಕೆ ಗುರಿಯಾಗುತ್ತದೆ.

ಕಪ್ಪು ವರ್ಣವನ್ನು ಕೀಳೆಂದೂ, ಗೌರವರ್ಣವನ್ನು ಮೇಲೆಂದೂ ನೂರಾರು ವರ್ಷಗಳಿಂದ ನಿತ್ಯ ಬದುಕಿನಲ್ಲಿ ಕಂಡೂಕಾಣದಂತೆ ಭೇದಭಾವ ಬಗೆಯುತ್ತ ಬಂದಿರುವ ವ್ಯವಸ್ಥೆ ಆಷಾಢಭೂತಿತನದ್ದು.

1890ರ ಆಪ್ಟೆ ಸಂಸ್ಕೃತ ನಿಘಂಟಿನ ಪ್ರಕಾರ ಕೃಷ್ಣ ಎಂಬ ಶಬ್ದಕ್ಕೆ ಕಪ್ಪು, ಕತ್ತಲೆ, ಕಡು ನೀಲಿ, ದುಷ್ಟ, ಅನಿಷ್ಟ, ಕೃಷ್ಣಮೃಗ, ಕೋಗಿಲೆ, ಕೃಷ್ಣಪಕ್ಷ, ವಿಷ್ಣುವಿನ ಎಂಟನೆಯ ಅವತಾರ ಕೃಷ್ಣ, ಕೃಷ್ಣನ ಮಗ ಪ್ರದ್ಯುಮ್ನ, ಮಹಾ ಭಾರತದ ಅರ್ಜುನ ಎಂಬ ಅರ್ಥಗಳಿವೆ. ಕೃಷ್ಣ ಎಂಬುದು ದೇಶದ ಅತಿ ಜನಪ್ರಿಯ ಹೆಸರುಗಳಲ್ಲೊಂದು.

ವಿಷ್ಣುವಿನ ಮೂರು ಅವತಾರಗಳಾದ ರಾಮ, ಕೃಷ್ಣ ಹಾಗೂ ಮೋಹಿನಿಯ ಮೈಬಣ್ಣ ಕಪ್ಪು ಇಲ್ಲವೇ ಕಡುನೀಲಿ. ಮೂವರ ಸೌಂದರ್ಯವನ್ನು ಪುರಾಣಗಳು, ಭಾಗವತಗಳು ಕೊಂಡಾಡಿವೆ.

ಭಾರತದ ಅರ್ಥವ್ಯವಸ್ಥೆ ಹೊಳೆಯಲು ಬಡಪಾಯಿ ಎಮ್ಮೆ ಕೋಣಗಳು ಕೂಡ ಶ್ರಮಿಸಿವೆ. ಬೈಸಿಕೊಳ್ಳುವುದಷ್ಟೇ ಅಲ್ಲ ಬೈಗುಳವೇ ಆಗಿ ಹೋಗಿರುವ ಈ ಪಶುವಿನ ಹಿರಿಮೆ ಗರಿಮೆಯ ನೆನೆವುದು ಮಾನವೀಯ ನಡವಳಿಕೆ.

ಕಪ್ಪೆಂದು ಜರೆಯುವ ಬೈಗುಳವೇ ಆಗಿ ಹೋಗಿರುವ ಎಮ್ಮೆಗಳು- ಕೋಣಗಳು ಗದ್ದೆ ಉಳುತ್ತವೆ, ಹೇರು ಎಳೆಯುತ್ತವೆ, ಕನಿಷ್ಠ ತಿಂದು ಗರಿಷ್ಠ ಹಾಲು ಕರೆಯುತ್ತವೆ. ಎಮ್ಮೆ ಹಾಲಿನಲ್ಲಿ ಹೃದಯಕ್ಕೆ ಮಾರಕವಾದ ಕೊಲೆಸ್ಟ್ರಾಲ್ ಪ್ರಮಾಣ ಶೇ.45ರಷ್ಟು ಕಡಿಮೆ, ಒಮೇಗ-3 ಮೇದಸ್ಸು ಹೆಚ್ಚಿನ ಪ್ರಮಾಣದಲ್ಲಿದೆ, ಪ್ರೊಟೀನು, ಕಬ್ಬಿಣಾಂಶ ಹೇರಳ. ಜಾನುವಾರು ತಜ್ಞರು ಎಮ್ಮೆಯನ್ನು ಭಾರತದ ಹೆಮ್ಮೆ ಎಂದು ಬಣ್ಣಿಸುವುದುಂಟು.

ನಮ್ಮ ದೇಶದಲ್ಲಿರುವ ಎಮ್ಮೆಗಳ ಸಂಖ್ಯೆ ಸುಮಾರು 12 ಕೋಟಿ. ಪ್ರಪಂಚದ ಅರ್ಧಕ್ಕಿಂತ ಹೆಚ್ಚು ಎಮ್ಮೆಗಳಿಗೆ ಭಾರತವೇ ತವರು. ವರ್ಷಕ್ಕೆ ಉತ್ಪತ್ತಿಯಾಗುತ್ತಿರುವ ಎಮ್ಮೆ ಮಾಂಸದ ಪ್ರಮಾಣ ಹನ್ನೊಂದು ಲಕ್ಷ ಟನ್ನುಗಳಷ್ಟು. ಎಮ್ಮೆ ಮಾಂಸದ ರಫ್ತಿನಿಂದ ಬೊಕ್ಕಸಕ್ಕೆ ಭರ್ತಿಯಾಗುತ್ತಿರುವ ವಾರ್ಷಿಕ ವರಮಾನ 30 ಸಾವಿರ ಕೋಟಿ ರೂಪಾಯಿ ಮೀರಿದ್ದು. ಅರ್ಧಕ್ಕಿಂತ ಹೆಚ್ಚು ಪ್ರಮಾಣದ ಹಾಲನ್ನು ಉತ್ಪಾದಿಸುತ್ತಿರುವುದು ಎಮ್ಮೆಗಳೇ.

ಗೋಹತ್ಯೆ ವಿರುದ್ಧ ಸಿಡಿದೇಳುವವರನ್ನು ಮಹಿಷ ಹತ್ಯೆ ಯಾಕೆ ಬಾಧಿಸುವುದಿಲ್ಲ ಎಂದು ಕೇಳುತ್ತಾರೆ ಚಿಂತಕ ಕಂಚಾ ಐಲಯ್ಯ. ಗೋವುಗಳು, ದಲಿತರು-ಬಹುಜನರು ಈ ಎರಡೂ ಜಾನುವಾರುಗಳ ಕುರಿತು ತೋರುವ ಪ್ರೀತಿ ಮಮತೆಯನ್ನು ನೋಡಿದರೆ ಎರಡಕ್ಕೂ ಒಂದೇ ಬಗೆಯ ಸಮ್ಮಾನ ಸಿಗಬೇಕು ಎಂದು ವಾದಿಸುತ್ತಾರೆ. ಎಮ್ಮೆಯ ಹಾಲನ್ನು ಮೇಲ್ಜಾತಿಗಳೆಂದು ಹೇಳಿಕೊಳ್ಳುವವರೂ ಬಗೆಬಗೆಯಾಗಿ ಸೇವಿಸುವುದು ಸುಳ್ಳೇನೂ ಅಲ್ಲ. ಆದರೆ ಎಮ್ಮೆಗೆ ಬ್ರಾಹ್ಮಣ್ಯದಲ್ಲಿ ಯಾವುದೇ ಸ್ಥಾನಮಾನ ಇಲ್ಲ. ಆರ್ಥಿಕ ಸಮೀಕ್ಷೆಯೊಂದನ್ನು ನಡೆಸಿದ್ದೇ ಆದರೆ ಭಾರತದಲ್ಲಿ ಕೋಟ್ಯಂತರ ಜನರ ಜೀವನೋಪಾಯ ಮೂಲವಾಗಿ ಹೊಮ್ಮುವುದು ಎಮ್ಮೆಯೇ ವಿನಾ ಆಕಳು ಅಲ್ಲ. ಒಂದೇ ಹುಲ್ಲನ್ನು ತಿನ್ನುವ ಎರಡು ಪ್ರಾಣಿಗಳಲ್ಲಿ ಒಂದು ಆಧ್ಯಾತ್ಮಿಕವಾಗಿ ಮತ್ತು ರಾಜಕೀಯವಾಗಿ ಅಸ್ಪೃಶ್ಯ ಎನಿಸಿಕೊಳ್ಳುವುದು ಯಾಕಾಗಿ ಎಂದು ಅವರು ಕೇಳುತ್ತಾರೆ. ಎರಡರ ಪೈಕಿ ಯಾವುದು ಶ್ರೇಷ್ಠ ಮತ್ತು ಯಾವುದು ಕನಿಷ್ಠ ಎಂದು ತೀರ್ಮಾನ ಮಾಡಲೇಬೇಕಿದ್ದಲ್ಲಿ, ಅಂತಹ ಹಕ್ಕು- ಅಧಿಕಾರ ಇರಬೇಕಾದದ್ದು ಈ ಎರಡೂ ಪ್ರಾಣಿಗಳನ್ನು ತಲೆತಲಾಂತರಗಳಿಂದ ಸಾಕಿ ಸಲಹುತ್ತ ಬಂದಿರುವ ದಲಿತರು- ಬಹುಜನರಿಗೆ.

ಕಪ್ಪು ಮೈ ಬಣ್ಣದ ಜನ ಸಮುದಾಯಗಳನ್ನು ವಿಕಾರವಾಗಿ ಚಿತ್ರಿಸಿ, ರಾಕ್ಷಸರೆಂದು ಕರೆದ ಬಿಳಿ ಮೈ ಬಣ್ಣದವರ ವರ್ಣಭೇದ ನೀತಿ ಜನಜನಿತ. ಇದೇ ನೀತಿ ಪ್ರಾಣಿ ಪ್ರಪಂಚಕ್ಕೂ ವಿಸ್ತರಿಸಿತು. ಈ ಅಹಮಿಕೆಗೆ ತಿರಸ್ಕಾರಕ್ಕೆ ತುತ್ತಾದ ಜಾನುವಾರು ಎಮ್ಮೆ. ಬೆಳ್ಳಗಿದ್ದುದು ಸುಂದರವಷ್ಟೇ ಅಲ್ಲ ಗೌರವಾನ್ವಿತ ಕೂಡ ಎನಿಸಿಕೊಂಡಿತು ಎನ್ನುತ್ತಾರೆ ಐಲಯ್ಯ.

ಆದರೂ ಮಹಿಷ ಪರಂಪರೆ ನಮ್ಮ ಅನೇಕ ಗಿರಿಜನರ ಆಚರಣೆಗಳಲ್ಲಿ ಇನ್ನೂ ಜೀವಂತವಿದೆ. ಮಧ್ಯಭಾರತದ ಗೊಂಡರು ಮತ್ತು ಮರಿಯಾ ಗೊಂಡರು, ಪಶ್ಚಿಮ ಭಾರತದ ಕಾಟಕಾರಿಗಳು ಹಾಗೂ ದಕ್ಷಿಣ ಭಾರತದ ತೋಡರು ಈ ಮಾತಿಗೆ ಉದಾಹರಣೆಯಾಗುತ್ತಾರೆ.

ನೀಲಗಿರಿಯ ಗಿರಿಜನರಾದ ತೋಡರ ಪಾಲಿಗೆ ಎಮ್ಮೆಗಳು ಪವಿತ್ರ ಪ್ರಾಣಿಗಳಾಗಿದ್ದವೇ ವಿನಾ ಆಕಳುಗಳಲ್ಲ. ಪವಿತ್ರ ಎಮ್ಮೆಯನ್ನು ಕಟ್ಟುತ್ತಿದ್ದ ಸ್ಥಳಗಳು ಅವರ ಪಾಲಿಗೆ ಆರಾಧಿಸುವ ಗುಡಿಗಳು. ಹೈನು ಮಂದಿರಗಳೆಂದೇ ಅವುಗಳನ್ನು ಕರೆಯಲಾಗುತ್ತಿತ್ತು.

ಸತ್ತ ತೋಡನ ಅಂತ್ಯಸಂಸ್ಕಾರದಲ್ಲಿ ಎಮ್ಮೆಯನ್ನು ಬಲಿ ಕೊಡುತ್ತಿದ್ದರು ತೋಡರು. ಈ ಎಮ್ಮೆ ಪರಲೋಕ ಸೇರಿದ ಮೃತನನ್ನು ಸೇರಿಕೊಳ್ಳಬೇಕು ಎಂಬುದು ಈ ಬಲಿಯ ಉದ್ದೇಶವಾಗಿತ್ತೇ ವಿನಾ ಅದನ್ನು ತಿನ್ನುವುದಲ್ಲ.
ಛತ್ತೀಸಗಢದ ಬಸ್ತರ್ ಜಿಲ್ಲೆಯ ಇಂದ್ರಾವತೀ ನದೀ ದಂಡೆಗುಂಟ ವಾಸಿಸುತ್ತಿದ್ದ ಮರಿಯಾ ಮತ್ತು ಮರಿಯಾ ಗೊಂಡ ಆದಿವಾಸಿಗಳು ತಮಗೆ ಮಹಿಷದೊಂದಿಗೆ ಆಧ್ಯಾತ್ಮಿಕ ಸಂಬಂಧವಿದೆ ಎಂದು ನಂಬಿದ್ದವರು. ಹೀಗಾಗಿ ಅವರ ಪಾಲಿನ ಆಧ್ಯಾತ್ಮಿಕ ಸಂಬಂಧದ ಚಿಹ್ನೆ ಮಹಿಷ. ಹಬ್ಬಗಳಲ್ಲಿ ಮಹಿಷದ ಕೊಂಬುಗಳನ್ನು ತಲೆಯ ಮೇಲೆ ಧರಿಸಿ, ಡೋಲಿನ ತಾಳಕ್ಕೆ ಹೆಜ್ಜೆ ಹಾಕಿ ಹುಸಿ ಕಾಳಗವನ್ನು ನಟಿಸುತ್ತಾರೆ. ತಮ್ಮ ಪ್ರಾಚೀನ ಮಹಿಷ ದೈವವನ್ನು ದಾಂತೇಶ್ವರಿ ಎಂದೇ ಪೂಜಿಸುತ್ತಾರೆ. ಮಹಿಷನನ್ನು ಮಹಸೋಬಾ (ಮಹಿಷಬಾಬಾ ಇಲ್ಲವೇ ತಂದೆ) ಎಂದು ಮಧ್ಯ ಭಾರತ ಮತ್ತು ಪಶ್ಚಿಮ ಭಾರತದ ಗಿರಿಜನರು ಪೂಜಿಸುತ್ತಿದ್ದರು. ಮಹಾರಾಷ್ಟ್ರದ ಕಾಟ್ಕರೀ ಗಿರಿಜನರು ಮತ್ತು ಶಿವಾಜಿಯ ವಂಶಜರೆನ್ನಲಾಗುವ ಭೋಸ್ಲೆಗಳು ಮಹಸೊಬನನ್ನು ಪೂಜಿಸುತ್ತಾರೆ. ನಂದಿತಾ ಕೃಷ್ಣ ಅವರ ಭಾರತದ ಪವಿತ್ರ ಪ್ರಾಣಿಗಳು ಎಂಬ ಕೃತಿಯಲ್ಲಿ ಈ ವಿವರಗಳು ಓದಲು ಸಿಗುತ್ತವೆ.

ದುರ್ಗೆಯ ಕೈಯಲ್ಲಿ ಅಸುರ ಮಹಿಷ ಹತನಾಗುವ ಕತೆಯಲ್ಲಿ ಯಾವ ನೈತಿಕ ಅಂಶವೂ ಇಲ್ಲ. ಭೂಮಿಯ ಫಲವತ್ತತೆಯ ಆವರ್ತ ಆಯಾ ಸುಗ್ಗಿಯೊಂದಿಗೆ ಕೊನೆಯಾಗುತ್ತದೆ. ಭೂಮಿ ಸಸ್ಯಶ್ಯಾಮಲೆಯಾಗಿ ಮತ್ತೆ ಮೈ ತುಂಬಿಕೊಂಡರೆ ಮತ್ತೊಂದು ಸುಗ್ಗಿ. ಮತ್ತೆ ದುರ್ಗೆಯ ಕೈಯಲ್ಲಿ ಹತನಾಗಲು ಅಸುರ ಪುನಃ ಸಿದ್ಧನಾಗುತ್ತಾನೆ. ಮಾನವನ ಅನ್ನದ ತಟ್ಟೆ ಹೀಗೆ ಬರಿದಾಗದೆ ಮತ್ತೆ ಮತ್ತೆ ತುಂಬುತ್ತ ಹೋಗುವುದೇ ಈ ಕತೆಯ ಆಶಯ ಎಂದು ವ್ಯಾಖ್ಯಾನಿಸುತ್ತಾರೆ ಪಟ್ನಾಯಕ್.

ರೂಪಕ ಇಲ್ಲವೇ ಪ್ರತಿಮೆಯ ಮಾತಿನಲ್ಲಿ ಭೂಮಿಯನ್ನು ಆಕಳು ಎಂದಿದ್ದಾರೆ ಪುರಾಣಶಾಸ್ತ್ರಜ್ಞ ದೇವದತ್ ಪಟ್ನಾಯಕ್. ಭೂಮಿಯೇ ದನಿಯೆತ್ತಿ ಪ್ರತಿಭಟಿಸುವ ಮಟ್ಟಿಗೆ ಭೂಮಿಯನ್ನು ಕೊಳ್ಳೆ ಹೊಡೆವ ದುಷ್ಟಶಕ್ತಿಗಳನ್ನು ನಿವಾರಿಸಲಾಗುತ್ತದೆ. ಭೂಮಿಯೆಂಬ ಆಕಳ ಕಣ್ಣೀರನ್ನು ಒರೆಸುವ ವಿಷ್ಣು, ಭೂದಾಹಿ ರಾಜ ಮಹಾರಾಜರ ಒಜ್ಜೆಯನ್ನು ಇಳಿಸುವ ವಚನ ನೀಡುತ್ತಾನೆಂದು ಪುರಾಣಗಳು ಹೇಳುತ್ತವೆ. ಆದರೆ ಇಂದು ಧನದಾಹೀ ಉದ್ಯಮಗಳು ಭೂಮಿಯ ಕೊಳ್ಳೆ ಹೊಡೆಯತೊಡಗಿವೆ. ಸರಕಾರಗಳು ಈ ಸಮತೋಲನವನ್ನು ನಿರ್ಲಕ್ಷಿಸಿವೆ. ಕೊಳ್ಳೆಯ ಕೈಗಳಿಗೆ ಹತಾರುಗಳನ್ನು ಇಡತೊಡಗಿವೆ. ಭೂಮಿಯೆಂಬ ಆಕಳಿನ ರಕ್ಷಣೆಗೆ ಮುಂದಾಗುವ ಸ್ವಯಂಸೇವಾ ಸಂಸ್ಥೆಗಳನ್ನು ಶಿಕ್ಷಿಸತೊಡಗಿವೆ.

ಹೀಗಾಗಿ ಸೊಂಟ ಕಟ್ಟುವುದೇ ಆದರೆ ಅದು ಭೂಮಿಯೆಂಬ ಆಕಳಿನ ರಕ್ಷಣೆಗೆ ಕಟ್ಟಬೇಕು. ಭೂಮಿಯೇ ಇಲ್ಲದೆ ಆಕಳು ಹೇಗೆ ಉಳಿದೀತು?


ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....