Homeಅಂಕಣಗಳುಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

- Advertisement -
- Advertisement -

ದುರ್ಗಾ- ಮಹಿಷ ಕದನ ಮತ್ತು ಮಹಿಷಾಸುರ ಮಧನದ ಪರಿಣಾಮ ಇದ್ದೀತು. ನಮ್ಮ ಎಲ್ಲ ಜಾನುವಾರುಗಳ ಪೈಕಿ ನಿಕೃಷ್ಟವೆಂದು ಕಳಂಕ ಹೊತ್ತ ಪ್ರಾಣಿಯಿದು. ಪರಮ ಕ್ರೌರ್ಯಕ್ಕೆ ಗುರಿಯಾಗುವ ಜೀವಿ. ಮನಸೇಚ್ಛೆ ಬಡಿತ ತಿನ್ನುತ್ತದೆ, ದೇವಿಯ ಮುಂದೆ ಕತ್ತು ಕಡಿಸಿಕೊಂಡು ಬಲಿಯಾಗುತ್ತದೆ. ಮೇವು ನೀರಿಲ್ಲದೆ ನೂರಾರು ಕಿ.ಮೀ. ದೂರ ಹಿಂಸೆಯ ಸಾಗಣೆಗೆ ತುತ್ತಾಗಿ ಕಸಾಯಿಖಾನೆಗಳಲ್ಲಿ ಅತ್ಯಂತ ಯಾತನೆಯ ಮರಣಕ್ಕೆ ಗುರಿಯಾಗುತ್ತದೆ.

ಕಪ್ಪು ವರ್ಣವನ್ನು ಕೀಳೆಂದೂ, ಗೌರವರ್ಣವನ್ನು ಮೇಲೆಂದೂ ನೂರಾರು ವರ್ಷಗಳಿಂದ ನಿತ್ಯ ಬದುಕಿನಲ್ಲಿ ಕಂಡೂಕಾಣದಂತೆ ಭೇದಭಾವ ಬಗೆಯುತ್ತ ಬಂದಿರುವ ವ್ಯವಸ್ಥೆ ಆಷಾಢಭೂತಿತನದ್ದು.

1890ರ ಆಪ್ಟೆ ಸಂಸ್ಕೃತ ನಿಘಂಟಿನ ಪ್ರಕಾರ ಕೃಷ್ಣ ಎಂಬ ಶಬ್ದಕ್ಕೆ ಕಪ್ಪು, ಕತ್ತಲೆ, ಕಡು ನೀಲಿ, ದುಷ್ಟ, ಅನಿಷ್ಟ, ಕೃಷ್ಣಮೃಗ, ಕೋಗಿಲೆ, ಕೃಷ್ಣಪಕ್ಷ, ವಿಷ್ಣುವಿನ ಎಂಟನೆಯ ಅವತಾರ ಕೃಷ್ಣ, ಕೃಷ್ಣನ ಮಗ ಪ್ರದ್ಯುಮ್ನ, ಮಹಾ ಭಾರತದ ಅರ್ಜುನ ಎಂಬ ಅರ್ಥಗಳಿವೆ. ಕೃಷ್ಣ ಎಂಬುದು ದೇಶದ ಅತಿ ಜನಪ್ರಿಯ ಹೆಸರುಗಳಲ್ಲೊಂದು.

ವಿಷ್ಣುವಿನ ಮೂರು ಅವತಾರಗಳಾದ ರಾಮ, ಕೃಷ್ಣ ಹಾಗೂ ಮೋಹಿನಿಯ ಮೈಬಣ್ಣ ಕಪ್ಪು ಇಲ್ಲವೇ ಕಡುನೀಲಿ. ಮೂವರ ಸೌಂದರ್ಯವನ್ನು ಪುರಾಣಗಳು, ಭಾಗವತಗಳು ಕೊಂಡಾಡಿವೆ.

ಭಾರತದ ಅರ್ಥವ್ಯವಸ್ಥೆ ಹೊಳೆಯಲು ಬಡಪಾಯಿ ಎಮ್ಮೆ ಕೋಣಗಳು ಕೂಡ ಶ್ರಮಿಸಿವೆ. ಬೈಸಿಕೊಳ್ಳುವುದಷ್ಟೇ ಅಲ್ಲ ಬೈಗುಳವೇ ಆಗಿ ಹೋಗಿರುವ ಈ ಪಶುವಿನ ಹಿರಿಮೆ ಗರಿಮೆಯ ನೆನೆವುದು ಮಾನವೀಯ ನಡವಳಿಕೆ.

ಕಪ್ಪೆಂದು ಜರೆಯುವ ಬೈಗುಳವೇ ಆಗಿ ಹೋಗಿರುವ ಎಮ್ಮೆಗಳು- ಕೋಣಗಳು ಗದ್ದೆ ಉಳುತ್ತವೆ, ಹೇರು ಎಳೆಯುತ್ತವೆ, ಕನಿಷ್ಠ ತಿಂದು ಗರಿಷ್ಠ ಹಾಲು ಕರೆಯುತ್ತವೆ. ಎಮ್ಮೆ ಹಾಲಿನಲ್ಲಿ ಹೃದಯಕ್ಕೆ ಮಾರಕವಾದ ಕೊಲೆಸ್ಟ್ರಾಲ್ ಪ್ರಮಾಣ ಶೇ.45ರಷ್ಟು ಕಡಿಮೆ, ಒಮೇಗ-3 ಮೇದಸ್ಸು ಹೆಚ್ಚಿನ ಪ್ರಮಾಣದಲ್ಲಿದೆ, ಪ್ರೊಟೀನು, ಕಬ್ಬಿಣಾಂಶ ಹೇರಳ. ಜಾನುವಾರು ತಜ್ಞರು ಎಮ್ಮೆಯನ್ನು ಭಾರತದ ಹೆಮ್ಮೆ ಎಂದು ಬಣ್ಣಿಸುವುದುಂಟು.

ನಮ್ಮ ದೇಶದಲ್ಲಿರುವ ಎಮ್ಮೆಗಳ ಸಂಖ್ಯೆ ಸುಮಾರು 12 ಕೋಟಿ. ಪ್ರಪಂಚದ ಅರ್ಧಕ್ಕಿಂತ ಹೆಚ್ಚು ಎಮ್ಮೆಗಳಿಗೆ ಭಾರತವೇ ತವರು. ವರ್ಷಕ್ಕೆ ಉತ್ಪತ್ತಿಯಾಗುತ್ತಿರುವ ಎಮ್ಮೆ ಮಾಂಸದ ಪ್ರಮಾಣ ಹನ್ನೊಂದು ಲಕ್ಷ ಟನ್ನುಗಳಷ್ಟು. ಎಮ್ಮೆ ಮಾಂಸದ ರಫ್ತಿನಿಂದ ಬೊಕ್ಕಸಕ್ಕೆ ಭರ್ತಿಯಾಗುತ್ತಿರುವ ವಾರ್ಷಿಕ ವರಮಾನ 30 ಸಾವಿರ ಕೋಟಿ ರೂಪಾಯಿ ಮೀರಿದ್ದು. ಅರ್ಧಕ್ಕಿಂತ ಹೆಚ್ಚು ಪ್ರಮಾಣದ ಹಾಲನ್ನು ಉತ್ಪಾದಿಸುತ್ತಿರುವುದು ಎಮ್ಮೆಗಳೇ.

ಗೋಹತ್ಯೆ ವಿರುದ್ಧ ಸಿಡಿದೇಳುವವರನ್ನು ಮಹಿಷ ಹತ್ಯೆ ಯಾಕೆ ಬಾಧಿಸುವುದಿಲ್ಲ ಎಂದು ಕೇಳುತ್ತಾರೆ ಚಿಂತಕ ಕಂಚಾ ಐಲಯ್ಯ. ಗೋವುಗಳು, ದಲಿತರು-ಬಹುಜನರು ಈ ಎರಡೂ ಜಾನುವಾರುಗಳ ಕುರಿತು ತೋರುವ ಪ್ರೀತಿ ಮಮತೆಯನ್ನು ನೋಡಿದರೆ ಎರಡಕ್ಕೂ ಒಂದೇ ಬಗೆಯ ಸಮ್ಮಾನ ಸಿಗಬೇಕು ಎಂದು ವಾದಿಸುತ್ತಾರೆ. ಎಮ್ಮೆಯ ಹಾಲನ್ನು ಮೇಲ್ಜಾತಿಗಳೆಂದು ಹೇಳಿಕೊಳ್ಳುವವರೂ ಬಗೆಬಗೆಯಾಗಿ ಸೇವಿಸುವುದು ಸುಳ್ಳೇನೂ ಅಲ್ಲ. ಆದರೆ ಎಮ್ಮೆಗೆ ಬ್ರಾಹ್ಮಣ್ಯದಲ್ಲಿ ಯಾವುದೇ ಸ್ಥಾನಮಾನ ಇಲ್ಲ. ಆರ್ಥಿಕ ಸಮೀಕ್ಷೆಯೊಂದನ್ನು ನಡೆಸಿದ್ದೇ ಆದರೆ ಭಾರತದಲ್ಲಿ ಕೋಟ್ಯಂತರ ಜನರ ಜೀವನೋಪಾಯ ಮೂಲವಾಗಿ ಹೊಮ್ಮುವುದು ಎಮ್ಮೆಯೇ ವಿನಾ ಆಕಳು ಅಲ್ಲ. ಒಂದೇ ಹುಲ್ಲನ್ನು ತಿನ್ನುವ ಎರಡು ಪ್ರಾಣಿಗಳಲ್ಲಿ ಒಂದು ಆಧ್ಯಾತ್ಮಿಕವಾಗಿ ಮತ್ತು ರಾಜಕೀಯವಾಗಿ ಅಸ್ಪೃಶ್ಯ ಎನಿಸಿಕೊಳ್ಳುವುದು ಯಾಕಾಗಿ ಎಂದು ಅವರು ಕೇಳುತ್ತಾರೆ. ಎರಡರ ಪೈಕಿ ಯಾವುದು ಶ್ರೇಷ್ಠ ಮತ್ತು ಯಾವುದು ಕನಿಷ್ಠ ಎಂದು ತೀರ್ಮಾನ ಮಾಡಲೇಬೇಕಿದ್ದಲ್ಲಿ, ಅಂತಹ ಹಕ್ಕು- ಅಧಿಕಾರ ಇರಬೇಕಾದದ್ದು ಈ ಎರಡೂ ಪ್ರಾಣಿಗಳನ್ನು ತಲೆತಲಾಂತರಗಳಿಂದ ಸಾಕಿ ಸಲಹುತ್ತ ಬಂದಿರುವ ದಲಿತರು- ಬಹುಜನರಿಗೆ.

ಕಪ್ಪು ಮೈ ಬಣ್ಣದ ಜನ ಸಮುದಾಯಗಳನ್ನು ವಿಕಾರವಾಗಿ ಚಿತ್ರಿಸಿ, ರಾಕ್ಷಸರೆಂದು ಕರೆದ ಬಿಳಿ ಮೈ ಬಣ್ಣದವರ ವರ್ಣಭೇದ ನೀತಿ ಜನಜನಿತ. ಇದೇ ನೀತಿ ಪ್ರಾಣಿ ಪ್ರಪಂಚಕ್ಕೂ ವಿಸ್ತರಿಸಿತು. ಈ ಅಹಮಿಕೆಗೆ ತಿರಸ್ಕಾರಕ್ಕೆ ತುತ್ತಾದ ಜಾನುವಾರು ಎಮ್ಮೆ. ಬೆಳ್ಳಗಿದ್ದುದು ಸುಂದರವಷ್ಟೇ ಅಲ್ಲ ಗೌರವಾನ್ವಿತ ಕೂಡ ಎನಿಸಿಕೊಂಡಿತು ಎನ್ನುತ್ತಾರೆ ಐಲಯ್ಯ.

ಆದರೂ ಮಹಿಷ ಪರಂಪರೆ ನಮ್ಮ ಅನೇಕ ಗಿರಿಜನರ ಆಚರಣೆಗಳಲ್ಲಿ ಇನ್ನೂ ಜೀವಂತವಿದೆ. ಮಧ್ಯಭಾರತದ ಗೊಂಡರು ಮತ್ತು ಮರಿಯಾ ಗೊಂಡರು, ಪಶ್ಚಿಮ ಭಾರತದ ಕಾಟಕಾರಿಗಳು ಹಾಗೂ ದಕ್ಷಿಣ ಭಾರತದ ತೋಡರು ಈ ಮಾತಿಗೆ ಉದಾಹರಣೆಯಾಗುತ್ತಾರೆ.

ನೀಲಗಿರಿಯ ಗಿರಿಜನರಾದ ತೋಡರ ಪಾಲಿಗೆ ಎಮ್ಮೆಗಳು ಪವಿತ್ರ ಪ್ರಾಣಿಗಳಾಗಿದ್ದವೇ ವಿನಾ ಆಕಳುಗಳಲ್ಲ. ಪವಿತ್ರ ಎಮ್ಮೆಯನ್ನು ಕಟ್ಟುತ್ತಿದ್ದ ಸ್ಥಳಗಳು ಅವರ ಪಾಲಿಗೆ ಆರಾಧಿಸುವ ಗುಡಿಗಳು. ಹೈನು ಮಂದಿರಗಳೆಂದೇ ಅವುಗಳನ್ನು ಕರೆಯಲಾಗುತ್ತಿತ್ತು.

ಸತ್ತ ತೋಡನ ಅಂತ್ಯಸಂಸ್ಕಾರದಲ್ಲಿ ಎಮ್ಮೆಯನ್ನು ಬಲಿ ಕೊಡುತ್ತಿದ್ದರು ತೋಡರು. ಈ ಎಮ್ಮೆ ಪರಲೋಕ ಸೇರಿದ ಮೃತನನ್ನು ಸೇರಿಕೊಳ್ಳಬೇಕು ಎಂಬುದು ಈ ಬಲಿಯ ಉದ್ದೇಶವಾಗಿತ್ತೇ ವಿನಾ ಅದನ್ನು ತಿನ್ನುವುದಲ್ಲ.
ಛತ್ತೀಸಗಢದ ಬಸ್ತರ್ ಜಿಲ್ಲೆಯ ಇಂದ್ರಾವತೀ ನದೀ ದಂಡೆಗುಂಟ ವಾಸಿಸುತ್ತಿದ್ದ ಮರಿಯಾ ಮತ್ತು ಮರಿಯಾ ಗೊಂಡ ಆದಿವಾಸಿಗಳು ತಮಗೆ ಮಹಿಷದೊಂದಿಗೆ ಆಧ್ಯಾತ್ಮಿಕ ಸಂಬಂಧವಿದೆ ಎಂದು ನಂಬಿದ್ದವರು. ಹೀಗಾಗಿ ಅವರ ಪಾಲಿನ ಆಧ್ಯಾತ್ಮಿಕ ಸಂಬಂಧದ ಚಿಹ್ನೆ ಮಹಿಷ. ಹಬ್ಬಗಳಲ್ಲಿ ಮಹಿಷದ ಕೊಂಬುಗಳನ್ನು ತಲೆಯ ಮೇಲೆ ಧರಿಸಿ, ಡೋಲಿನ ತಾಳಕ್ಕೆ ಹೆಜ್ಜೆ ಹಾಕಿ ಹುಸಿ ಕಾಳಗವನ್ನು ನಟಿಸುತ್ತಾರೆ. ತಮ್ಮ ಪ್ರಾಚೀನ ಮಹಿಷ ದೈವವನ್ನು ದಾಂತೇಶ್ವರಿ ಎಂದೇ ಪೂಜಿಸುತ್ತಾರೆ. ಮಹಿಷನನ್ನು ಮಹಸೋಬಾ (ಮಹಿಷಬಾಬಾ ಇಲ್ಲವೇ ತಂದೆ) ಎಂದು ಮಧ್ಯ ಭಾರತ ಮತ್ತು ಪಶ್ಚಿಮ ಭಾರತದ ಗಿರಿಜನರು ಪೂಜಿಸುತ್ತಿದ್ದರು. ಮಹಾರಾಷ್ಟ್ರದ ಕಾಟ್ಕರೀ ಗಿರಿಜನರು ಮತ್ತು ಶಿವಾಜಿಯ ವಂಶಜರೆನ್ನಲಾಗುವ ಭೋಸ್ಲೆಗಳು ಮಹಸೊಬನನ್ನು ಪೂಜಿಸುತ್ತಾರೆ. ನಂದಿತಾ ಕೃಷ್ಣ ಅವರ ಭಾರತದ ಪವಿತ್ರ ಪ್ರಾಣಿಗಳು ಎಂಬ ಕೃತಿಯಲ್ಲಿ ಈ ವಿವರಗಳು ಓದಲು ಸಿಗುತ್ತವೆ.

ದುರ್ಗೆಯ ಕೈಯಲ್ಲಿ ಅಸುರ ಮಹಿಷ ಹತನಾಗುವ ಕತೆಯಲ್ಲಿ ಯಾವ ನೈತಿಕ ಅಂಶವೂ ಇಲ್ಲ. ಭೂಮಿಯ ಫಲವತ್ತತೆಯ ಆವರ್ತ ಆಯಾ ಸುಗ್ಗಿಯೊಂದಿಗೆ ಕೊನೆಯಾಗುತ್ತದೆ. ಭೂಮಿ ಸಸ್ಯಶ್ಯಾಮಲೆಯಾಗಿ ಮತ್ತೆ ಮೈ ತುಂಬಿಕೊಂಡರೆ ಮತ್ತೊಂದು ಸುಗ್ಗಿ. ಮತ್ತೆ ದುರ್ಗೆಯ ಕೈಯಲ್ಲಿ ಹತನಾಗಲು ಅಸುರ ಪುನಃ ಸಿದ್ಧನಾಗುತ್ತಾನೆ. ಮಾನವನ ಅನ್ನದ ತಟ್ಟೆ ಹೀಗೆ ಬರಿದಾಗದೆ ಮತ್ತೆ ಮತ್ತೆ ತುಂಬುತ್ತ ಹೋಗುವುದೇ ಈ ಕತೆಯ ಆಶಯ ಎಂದು ವ್ಯಾಖ್ಯಾನಿಸುತ್ತಾರೆ ಪಟ್ನಾಯಕ್.

ರೂಪಕ ಇಲ್ಲವೇ ಪ್ರತಿಮೆಯ ಮಾತಿನಲ್ಲಿ ಭೂಮಿಯನ್ನು ಆಕಳು ಎಂದಿದ್ದಾರೆ ಪುರಾಣಶಾಸ್ತ್ರಜ್ಞ ದೇವದತ್ ಪಟ್ನಾಯಕ್. ಭೂಮಿಯೇ ದನಿಯೆತ್ತಿ ಪ್ರತಿಭಟಿಸುವ ಮಟ್ಟಿಗೆ ಭೂಮಿಯನ್ನು ಕೊಳ್ಳೆ ಹೊಡೆವ ದುಷ್ಟಶಕ್ತಿಗಳನ್ನು ನಿವಾರಿಸಲಾಗುತ್ತದೆ. ಭೂಮಿಯೆಂಬ ಆಕಳ ಕಣ್ಣೀರನ್ನು ಒರೆಸುವ ವಿಷ್ಣು, ಭೂದಾಹಿ ರಾಜ ಮಹಾರಾಜರ ಒಜ್ಜೆಯನ್ನು ಇಳಿಸುವ ವಚನ ನೀಡುತ್ತಾನೆಂದು ಪುರಾಣಗಳು ಹೇಳುತ್ತವೆ. ಆದರೆ ಇಂದು ಧನದಾಹೀ ಉದ್ಯಮಗಳು ಭೂಮಿಯ ಕೊಳ್ಳೆ ಹೊಡೆಯತೊಡಗಿವೆ. ಸರಕಾರಗಳು ಈ ಸಮತೋಲನವನ್ನು ನಿರ್ಲಕ್ಷಿಸಿವೆ. ಕೊಳ್ಳೆಯ ಕೈಗಳಿಗೆ ಹತಾರುಗಳನ್ನು ಇಡತೊಡಗಿವೆ. ಭೂಮಿಯೆಂಬ ಆಕಳಿನ ರಕ್ಷಣೆಗೆ ಮುಂದಾಗುವ ಸ್ವಯಂಸೇವಾ ಸಂಸ್ಥೆಗಳನ್ನು ಶಿಕ್ಷಿಸತೊಡಗಿವೆ.

ಹೀಗಾಗಿ ಸೊಂಟ ಕಟ್ಟುವುದೇ ಆದರೆ ಅದು ಭೂಮಿಯೆಂಬ ಆಕಳಿನ ರಕ್ಷಣೆಗೆ ಕಟ್ಟಬೇಕು. ಭೂಮಿಯೇ ಇಲ್ಲದೆ ಆಕಳು ಹೇಗೆ ಉಳಿದೀತು?


ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...