Homeಅಂಕಣಗಳುಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

- Advertisement -
- Advertisement -

ದುರ್ಗಾ- ಮಹಿಷ ಕದನ ಮತ್ತು ಮಹಿಷಾಸುರ ಮಧನದ ಪರಿಣಾಮ ಇದ್ದೀತು. ನಮ್ಮ ಎಲ್ಲ ಜಾನುವಾರುಗಳ ಪೈಕಿ ನಿಕೃಷ್ಟವೆಂದು ಕಳಂಕ ಹೊತ್ತ ಪ್ರಾಣಿಯಿದು. ಪರಮ ಕ್ರೌರ್ಯಕ್ಕೆ ಗುರಿಯಾಗುವ ಜೀವಿ. ಮನಸೇಚ್ಛೆ ಬಡಿತ ತಿನ್ನುತ್ತದೆ, ದೇವಿಯ ಮುಂದೆ ಕತ್ತು ಕಡಿಸಿಕೊಂಡು ಬಲಿಯಾಗುತ್ತದೆ. ಮೇವು ನೀರಿಲ್ಲದೆ ನೂರಾರು ಕಿ.ಮೀ. ದೂರ ಹಿಂಸೆಯ ಸಾಗಣೆಗೆ ತುತ್ತಾಗಿ ಕಸಾಯಿಖಾನೆಗಳಲ್ಲಿ ಅತ್ಯಂತ ಯಾತನೆಯ ಮರಣಕ್ಕೆ ಗುರಿಯಾಗುತ್ತದೆ.

ಕಪ್ಪು ವರ್ಣವನ್ನು ಕೀಳೆಂದೂ, ಗೌರವರ್ಣವನ್ನು ಮೇಲೆಂದೂ ನೂರಾರು ವರ್ಷಗಳಿಂದ ನಿತ್ಯ ಬದುಕಿನಲ್ಲಿ ಕಂಡೂಕಾಣದಂತೆ ಭೇದಭಾವ ಬಗೆಯುತ್ತ ಬಂದಿರುವ ವ್ಯವಸ್ಥೆ ಆಷಾಢಭೂತಿತನದ್ದು.

1890ರ ಆಪ್ಟೆ ಸಂಸ್ಕೃತ ನಿಘಂಟಿನ ಪ್ರಕಾರ ಕೃಷ್ಣ ಎಂಬ ಶಬ್ದಕ್ಕೆ ಕಪ್ಪು, ಕತ್ತಲೆ, ಕಡು ನೀಲಿ, ದುಷ್ಟ, ಅನಿಷ್ಟ, ಕೃಷ್ಣಮೃಗ, ಕೋಗಿಲೆ, ಕೃಷ್ಣಪಕ್ಷ, ವಿಷ್ಣುವಿನ ಎಂಟನೆಯ ಅವತಾರ ಕೃಷ್ಣ, ಕೃಷ್ಣನ ಮಗ ಪ್ರದ್ಯುಮ್ನ, ಮಹಾ ಭಾರತದ ಅರ್ಜುನ ಎಂಬ ಅರ್ಥಗಳಿವೆ. ಕೃಷ್ಣ ಎಂಬುದು ದೇಶದ ಅತಿ ಜನಪ್ರಿಯ ಹೆಸರುಗಳಲ್ಲೊಂದು.

ವಿಷ್ಣುವಿನ ಮೂರು ಅವತಾರಗಳಾದ ರಾಮ, ಕೃಷ್ಣ ಹಾಗೂ ಮೋಹಿನಿಯ ಮೈಬಣ್ಣ ಕಪ್ಪು ಇಲ್ಲವೇ ಕಡುನೀಲಿ. ಮೂವರ ಸೌಂದರ್ಯವನ್ನು ಪುರಾಣಗಳು, ಭಾಗವತಗಳು ಕೊಂಡಾಡಿವೆ.

ಭಾರತದ ಅರ್ಥವ್ಯವಸ್ಥೆ ಹೊಳೆಯಲು ಬಡಪಾಯಿ ಎಮ್ಮೆ ಕೋಣಗಳು ಕೂಡ ಶ್ರಮಿಸಿವೆ. ಬೈಸಿಕೊಳ್ಳುವುದಷ್ಟೇ ಅಲ್ಲ ಬೈಗುಳವೇ ಆಗಿ ಹೋಗಿರುವ ಈ ಪಶುವಿನ ಹಿರಿಮೆ ಗರಿಮೆಯ ನೆನೆವುದು ಮಾನವೀಯ ನಡವಳಿಕೆ.

ಕಪ್ಪೆಂದು ಜರೆಯುವ ಬೈಗುಳವೇ ಆಗಿ ಹೋಗಿರುವ ಎಮ್ಮೆಗಳು- ಕೋಣಗಳು ಗದ್ದೆ ಉಳುತ್ತವೆ, ಹೇರು ಎಳೆಯುತ್ತವೆ, ಕನಿಷ್ಠ ತಿಂದು ಗರಿಷ್ಠ ಹಾಲು ಕರೆಯುತ್ತವೆ. ಎಮ್ಮೆ ಹಾಲಿನಲ್ಲಿ ಹೃದಯಕ್ಕೆ ಮಾರಕವಾದ ಕೊಲೆಸ್ಟ್ರಾಲ್ ಪ್ರಮಾಣ ಶೇ.45ರಷ್ಟು ಕಡಿಮೆ, ಒಮೇಗ-3 ಮೇದಸ್ಸು ಹೆಚ್ಚಿನ ಪ್ರಮಾಣದಲ್ಲಿದೆ, ಪ್ರೊಟೀನು, ಕಬ್ಬಿಣಾಂಶ ಹೇರಳ. ಜಾನುವಾರು ತಜ್ಞರು ಎಮ್ಮೆಯನ್ನು ಭಾರತದ ಹೆಮ್ಮೆ ಎಂದು ಬಣ್ಣಿಸುವುದುಂಟು.

ನಮ್ಮ ದೇಶದಲ್ಲಿರುವ ಎಮ್ಮೆಗಳ ಸಂಖ್ಯೆ ಸುಮಾರು 12 ಕೋಟಿ. ಪ್ರಪಂಚದ ಅರ್ಧಕ್ಕಿಂತ ಹೆಚ್ಚು ಎಮ್ಮೆಗಳಿಗೆ ಭಾರತವೇ ತವರು. ವರ್ಷಕ್ಕೆ ಉತ್ಪತ್ತಿಯಾಗುತ್ತಿರುವ ಎಮ್ಮೆ ಮಾಂಸದ ಪ್ರಮಾಣ ಹನ್ನೊಂದು ಲಕ್ಷ ಟನ್ನುಗಳಷ್ಟು. ಎಮ್ಮೆ ಮಾಂಸದ ರಫ್ತಿನಿಂದ ಬೊಕ್ಕಸಕ್ಕೆ ಭರ್ತಿಯಾಗುತ್ತಿರುವ ವಾರ್ಷಿಕ ವರಮಾನ 30 ಸಾವಿರ ಕೋಟಿ ರೂಪಾಯಿ ಮೀರಿದ್ದು. ಅರ್ಧಕ್ಕಿಂತ ಹೆಚ್ಚು ಪ್ರಮಾಣದ ಹಾಲನ್ನು ಉತ್ಪಾದಿಸುತ್ತಿರುವುದು ಎಮ್ಮೆಗಳೇ.

ಗೋಹತ್ಯೆ ವಿರುದ್ಧ ಸಿಡಿದೇಳುವವರನ್ನು ಮಹಿಷ ಹತ್ಯೆ ಯಾಕೆ ಬಾಧಿಸುವುದಿಲ್ಲ ಎಂದು ಕೇಳುತ್ತಾರೆ ಚಿಂತಕ ಕಂಚಾ ಐಲಯ್ಯ. ಗೋವುಗಳು, ದಲಿತರು-ಬಹುಜನರು ಈ ಎರಡೂ ಜಾನುವಾರುಗಳ ಕುರಿತು ತೋರುವ ಪ್ರೀತಿ ಮಮತೆಯನ್ನು ನೋಡಿದರೆ ಎರಡಕ್ಕೂ ಒಂದೇ ಬಗೆಯ ಸಮ್ಮಾನ ಸಿಗಬೇಕು ಎಂದು ವಾದಿಸುತ್ತಾರೆ. ಎಮ್ಮೆಯ ಹಾಲನ್ನು ಮೇಲ್ಜಾತಿಗಳೆಂದು ಹೇಳಿಕೊಳ್ಳುವವರೂ ಬಗೆಬಗೆಯಾಗಿ ಸೇವಿಸುವುದು ಸುಳ್ಳೇನೂ ಅಲ್ಲ. ಆದರೆ ಎಮ್ಮೆಗೆ ಬ್ರಾಹ್ಮಣ್ಯದಲ್ಲಿ ಯಾವುದೇ ಸ್ಥಾನಮಾನ ಇಲ್ಲ. ಆರ್ಥಿಕ ಸಮೀಕ್ಷೆಯೊಂದನ್ನು ನಡೆಸಿದ್ದೇ ಆದರೆ ಭಾರತದಲ್ಲಿ ಕೋಟ್ಯಂತರ ಜನರ ಜೀವನೋಪಾಯ ಮೂಲವಾಗಿ ಹೊಮ್ಮುವುದು ಎಮ್ಮೆಯೇ ವಿನಾ ಆಕಳು ಅಲ್ಲ. ಒಂದೇ ಹುಲ್ಲನ್ನು ತಿನ್ನುವ ಎರಡು ಪ್ರಾಣಿಗಳಲ್ಲಿ ಒಂದು ಆಧ್ಯಾತ್ಮಿಕವಾಗಿ ಮತ್ತು ರಾಜಕೀಯವಾಗಿ ಅಸ್ಪೃಶ್ಯ ಎನಿಸಿಕೊಳ್ಳುವುದು ಯಾಕಾಗಿ ಎಂದು ಅವರು ಕೇಳುತ್ತಾರೆ. ಎರಡರ ಪೈಕಿ ಯಾವುದು ಶ್ರೇಷ್ಠ ಮತ್ತು ಯಾವುದು ಕನಿಷ್ಠ ಎಂದು ತೀರ್ಮಾನ ಮಾಡಲೇಬೇಕಿದ್ದಲ್ಲಿ, ಅಂತಹ ಹಕ್ಕು- ಅಧಿಕಾರ ಇರಬೇಕಾದದ್ದು ಈ ಎರಡೂ ಪ್ರಾಣಿಗಳನ್ನು ತಲೆತಲಾಂತರಗಳಿಂದ ಸಾಕಿ ಸಲಹುತ್ತ ಬಂದಿರುವ ದಲಿತರು- ಬಹುಜನರಿಗೆ.

ಕಪ್ಪು ಮೈ ಬಣ್ಣದ ಜನ ಸಮುದಾಯಗಳನ್ನು ವಿಕಾರವಾಗಿ ಚಿತ್ರಿಸಿ, ರಾಕ್ಷಸರೆಂದು ಕರೆದ ಬಿಳಿ ಮೈ ಬಣ್ಣದವರ ವರ್ಣಭೇದ ನೀತಿ ಜನಜನಿತ. ಇದೇ ನೀತಿ ಪ್ರಾಣಿ ಪ್ರಪಂಚಕ್ಕೂ ವಿಸ್ತರಿಸಿತು. ಈ ಅಹಮಿಕೆಗೆ ತಿರಸ್ಕಾರಕ್ಕೆ ತುತ್ತಾದ ಜಾನುವಾರು ಎಮ್ಮೆ. ಬೆಳ್ಳಗಿದ್ದುದು ಸುಂದರವಷ್ಟೇ ಅಲ್ಲ ಗೌರವಾನ್ವಿತ ಕೂಡ ಎನಿಸಿಕೊಂಡಿತು ಎನ್ನುತ್ತಾರೆ ಐಲಯ್ಯ.

ಆದರೂ ಮಹಿಷ ಪರಂಪರೆ ನಮ್ಮ ಅನೇಕ ಗಿರಿಜನರ ಆಚರಣೆಗಳಲ್ಲಿ ಇನ್ನೂ ಜೀವಂತವಿದೆ. ಮಧ್ಯಭಾರತದ ಗೊಂಡರು ಮತ್ತು ಮರಿಯಾ ಗೊಂಡರು, ಪಶ್ಚಿಮ ಭಾರತದ ಕಾಟಕಾರಿಗಳು ಹಾಗೂ ದಕ್ಷಿಣ ಭಾರತದ ತೋಡರು ಈ ಮಾತಿಗೆ ಉದಾಹರಣೆಯಾಗುತ್ತಾರೆ.

ನೀಲಗಿರಿಯ ಗಿರಿಜನರಾದ ತೋಡರ ಪಾಲಿಗೆ ಎಮ್ಮೆಗಳು ಪವಿತ್ರ ಪ್ರಾಣಿಗಳಾಗಿದ್ದವೇ ವಿನಾ ಆಕಳುಗಳಲ್ಲ. ಪವಿತ್ರ ಎಮ್ಮೆಯನ್ನು ಕಟ್ಟುತ್ತಿದ್ದ ಸ್ಥಳಗಳು ಅವರ ಪಾಲಿಗೆ ಆರಾಧಿಸುವ ಗುಡಿಗಳು. ಹೈನು ಮಂದಿರಗಳೆಂದೇ ಅವುಗಳನ್ನು ಕರೆಯಲಾಗುತ್ತಿತ್ತು.

ಸತ್ತ ತೋಡನ ಅಂತ್ಯಸಂಸ್ಕಾರದಲ್ಲಿ ಎಮ್ಮೆಯನ್ನು ಬಲಿ ಕೊಡುತ್ತಿದ್ದರು ತೋಡರು. ಈ ಎಮ್ಮೆ ಪರಲೋಕ ಸೇರಿದ ಮೃತನನ್ನು ಸೇರಿಕೊಳ್ಳಬೇಕು ಎಂಬುದು ಈ ಬಲಿಯ ಉದ್ದೇಶವಾಗಿತ್ತೇ ವಿನಾ ಅದನ್ನು ತಿನ್ನುವುದಲ್ಲ.
ಛತ್ತೀಸಗಢದ ಬಸ್ತರ್ ಜಿಲ್ಲೆಯ ಇಂದ್ರಾವತೀ ನದೀ ದಂಡೆಗುಂಟ ವಾಸಿಸುತ್ತಿದ್ದ ಮರಿಯಾ ಮತ್ತು ಮರಿಯಾ ಗೊಂಡ ಆದಿವಾಸಿಗಳು ತಮಗೆ ಮಹಿಷದೊಂದಿಗೆ ಆಧ್ಯಾತ್ಮಿಕ ಸಂಬಂಧವಿದೆ ಎಂದು ನಂಬಿದ್ದವರು. ಹೀಗಾಗಿ ಅವರ ಪಾಲಿನ ಆಧ್ಯಾತ್ಮಿಕ ಸಂಬಂಧದ ಚಿಹ್ನೆ ಮಹಿಷ. ಹಬ್ಬಗಳಲ್ಲಿ ಮಹಿಷದ ಕೊಂಬುಗಳನ್ನು ತಲೆಯ ಮೇಲೆ ಧರಿಸಿ, ಡೋಲಿನ ತಾಳಕ್ಕೆ ಹೆಜ್ಜೆ ಹಾಕಿ ಹುಸಿ ಕಾಳಗವನ್ನು ನಟಿಸುತ್ತಾರೆ. ತಮ್ಮ ಪ್ರಾಚೀನ ಮಹಿಷ ದೈವವನ್ನು ದಾಂತೇಶ್ವರಿ ಎಂದೇ ಪೂಜಿಸುತ್ತಾರೆ. ಮಹಿಷನನ್ನು ಮಹಸೋಬಾ (ಮಹಿಷಬಾಬಾ ಇಲ್ಲವೇ ತಂದೆ) ಎಂದು ಮಧ್ಯ ಭಾರತ ಮತ್ತು ಪಶ್ಚಿಮ ಭಾರತದ ಗಿರಿಜನರು ಪೂಜಿಸುತ್ತಿದ್ದರು. ಮಹಾರಾಷ್ಟ್ರದ ಕಾಟ್ಕರೀ ಗಿರಿಜನರು ಮತ್ತು ಶಿವಾಜಿಯ ವಂಶಜರೆನ್ನಲಾಗುವ ಭೋಸ್ಲೆಗಳು ಮಹಸೊಬನನ್ನು ಪೂಜಿಸುತ್ತಾರೆ. ನಂದಿತಾ ಕೃಷ್ಣ ಅವರ ಭಾರತದ ಪವಿತ್ರ ಪ್ರಾಣಿಗಳು ಎಂಬ ಕೃತಿಯಲ್ಲಿ ಈ ವಿವರಗಳು ಓದಲು ಸಿಗುತ್ತವೆ.

ದುರ್ಗೆಯ ಕೈಯಲ್ಲಿ ಅಸುರ ಮಹಿಷ ಹತನಾಗುವ ಕತೆಯಲ್ಲಿ ಯಾವ ನೈತಿಕ ಅಂಶವೂ ಇಲ್ಲ. ಭೂಮಿಯ ಫಲವತ್ತತೆಯ ಆವರ್ತ ಆಯಾ ಸುಗ್ಗಿಯೊಂದಿಗೆ ಕೊನೆಯಾಗುತ್ತದೆ. ಭೂಮಿ ಸಸ್ಯಶ್ಯಾಮಲೆಯಾಗಿ ಮತ್ತೆ ಮೈ ತುಂಬಿಕೊಂಡರೆ ಮತ್ತೊಂದು ಸುಗ್ಗಿ. ಮತ್ತೆ ದುರ್ಗೆಯ ಕೈಯಲ್ಲಿ ಹತನಾಗಲು ಅಸುರ ಪುನಃ ಸಿದ್ಧನಾಗುತ್ತಾನೆ. ಮಾನವನ ಅನ್ನದ ತಟ್ಟೆ ಹೀಗೆ ಬರಿದಾಗದೆ ಮತ್ತೆ ಮತ್ತೆ ತುಂಬುತ್ತ ಹೋಗುವುದೇ ಈ ಕತೆಯ ಆಶಯ ಎಂದು ವ್ಯಾಖ್ಯಾನಿಸುತ್ತಾರೆ ಪಟ್ನಾಯಕ್.

ರೂಪಕ ಇಲ್ಲವೇ ಪ್ರತಿಮೆಯ ಮಾತಿನಲ್ಲಿ ಭೂಮಿಯನ್ನು ಆಕಳು ಎಂದಿದ್ದಾರೆ ಪುರಾಣಶಾಸ್ತ್ರಜ್ಞ ದೇವದತ್ ಪಟ್ನಾಯಕ್. ಭೂಮಿಯೇ ದನಿಯೆತ್ತಿ ಪ್ರತಿಭಟಿಸುವ ಮಟ್ಟಿಗೆ ಭೂಮಿಯನ್ನು ಕೊಳ್ಳೆ ಹೊಡೆವ ದುಷ್ಟಶಕ್ತಿಗಳನ್ನು ನಿವಾರಿಸಲಾಗುತ್ತದೆ. ಭೂಮಿಯೆಂಬ ಆಕಳ ಕಣ್ಣೀರನ್ನು ಒರೆಸುವ ವಿಷ್ಣು, ಭೂದಾಹಿ ರಾಜ ಮಹಾರಾಜರ ಒಜ್ಜೆಯನ್ನು ಇಳಿಸುವ ವಚನ ನೀಡುತ್ತಾನೆಂದು ಪುರಾಣಗಳು ಹೇಳುತ್ತವೆ. ಆದರೆ ಇಂದು ಧನದಾಹೀ ಉದ್ಯಮಗಳು ಭೂಮಿಯ ಕೊಳ್ಳೆ ಹೊಡೆಯತೊಡಗಿವೆ. ಸರಕಾರಗಳು ಈ ಸಮತೋಲನವನ್ನು ನಿರ್ಲಕ್ಷಿಸಿವೆ. ಕೊಳ್ಳೆಯ ಕೈಗಳಿಗೆ ಹತಾರುಗಳನ್ನು ಇಡತೊಡಗಿವೆ. ಭೂಮಿಯೆಂಬ ಆಕಳಿನ ರಕ್ಷಣೆಗೆ ಮುಂದಾಗುವ ಸ್ವಯಂಸೇವಾ ಸಂಸ್ಥೆಗಳನ್ನು ಶಿಕ್ಷಿಸತೊಡಗಿವೆ.

ಹೀಗಾಗಿ ಸೊಂಟ ಕಟ್ಟುವುದೇ ಆದರೆ ಅದು ಭೂಮಿಯೆಂಬ ಆಕಳಿನ ರಕ್ಷಣೆಗೆ ಕಟ್ಟಬೇಕು. ಭೂಮಿಯೇ ಇಲ್ಲದೆ ಆಕಳು ಹೇಗೆ ಉಳಿದೀತು?


ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....