Homeಅಂಕಣಗಳುಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

- Advertisement -
- Advertisement -

ದುರ್ಗಾ- ಮಹಿಷ ಕದನ ಮತ್ತು ಮಹಿಷಾಸುರ ಮಧನದ ಪರಿಣಾಮ ಇದ್ದೀತು. ನಮ್ಮ ಎಲ್ಲ ಜಾನುವಾರುಗಳ ಪೈಕಿ ನಿಕೃಷ್ಟವೆಂದು ಕಳಂಕ ಹೊತ್ತ ಪ್ರಾಣಿಯಿದು. ಪರಮ ಕ್ರೌರ್ಯಕ್ಕೆ ಗುರಿಯಾಗುವ ಜೀವಿ. ಮನಸೇಚ್ಛೆ ಬಡಿತ ತಿನ್ನುತ್ತದೆ, ದೇವಿಯ ಮುಂದೆ ಕತ್ತು ಕಡಿಸಿಕೊಂಡು ಬಲಿಯಾಗುತ್ತದೆ. ಮೇವು ನೀರಿಲ್ಲದೆ ನೂರಾರು ಕಿ.ಮೀ. ದೂರ ಹಿಂಸೆಯ ಸಾಗಣೆಗೆ ತುತ್ತಾಗಿ ಕಸಾಯಿಖಾನೆಗಳಲ್ಲಿ ಅತ್ಯಂತ ಯಾತನೆಯ ಮರಣಕ್ಕೆ ಗುರಿಯಾಗುತ್ತದೆ.

ಕಪ್ಪು ವರ್ಣವನ್ನು ಕೀಳೆಂದೂ, ಗೌರವರ್ಣವನ್ನು ಮೇಲೆಂದೂ ನೂರಾರು ವರ್ಷಗಳಿಂದ ನಿತ್ಯ ಬದುಕಿನಲ್ಲಿ ಕಂಡೂಕಾಣದಂತೆ ಭೇದಭಾವ ಬಗೆಯುತ್ತ ಬಂದಿರುವ ವ್ಯವಸ್ಥೆ ಆಷಾಢಭೂತಿತನದ್ದು.

1890ರ ಆಪ್ಟೆ ಸಂಸ್ಕೃತ ನಿಘಂಟಿನ ಪ್ರಕಾರ ಕೃಷ್ಣ ಎಂಬ ಶಬ್ದಕ್ಕೆ ಕಪ್ಪು, ಕತ್ತಲೆ, ಕಡು ನೀಲಿ, ದುಷ್ಟ, ಅನಿಷ್ಟ, ಕೃಷ್ಣಮೃಗ, ಕೋಗಿಲೆ, ಕೃಷ್ಣಪಕ್ಷ, ವಿಷ್ಣುವಿನ ಎಂಟನೆಯ ಅವತಾರ ಕೃಷ್ಣ, ಕೃಷ್ಣನ ಮಗ ಪ್ರದ್ಯುಮ್ನ, ಮಹಾ ಭಾರತದ ಅರ್ಜುನ ಎಂಬ ಅರ್ಥಗಳಿವೆ. ಕೃಷ್ಣ ಎಂಬುದು ದೇಶದ ಅತಿ ಜನಪ್ರಿಯ ಹೆಸರುಗಳಲ್ಲೊಂದು.

ವಿಷ್ಣುವಿನ ಮೂರು ಅವತಾರಗಳಾದ ರಾಮ, ಕೃಷ್ಣ ಹಾಗೂ ಮೋಹಿನಿಯ ಮೈಬಣ್ಣ ಕಪ್ಪು ಇಲ್ಲವೇ ಕಡುನೀಲಿ. ಮೂವರ ಸೌಂದರ್ಯವನ್ನು ಪುರಾಣಗಳು, ಭಾಗವತಗಳು ಕೊಂಡಾಡಿವೆ.

ಭಾರತದ ಅರ್ಥವ್ಯವಸ್ಥೆ ಹೊಳೆಯಲು ಬಡಪಾಯಿ ಎಮ್ಮೆ ಕೋಣಗಳು ಕೂಡ ಶ್ರಮಿಸಿವೆ. ಬೈಸಿಕೊಳ್ಳುವುದಷ್ಟೇ ಅಲ್ಲ ಬೈಗುಳವೇ ಆಗಿ ಹೋಗಿರುವ ಈ ಪಶುವಿನ ಹಿರಿಮೆ ಗರಿಮೆಯ ನೆನೆವುದು ಮಾನವೀಯ ನಡವಳಿಕೆ.

ಕಪ್ಪೆಂದು ಜರೆಯುವ ಬೈಗುಳವೇ ಆಗಿ ಹೋಗಿರುವ ಎಮ್ಮೆಗಳು- ಕೋಣಗಳು ಗದ್ದೆ ಉಳುತ್ತವೆ, ಹೇರು ಎಳೆಯುತ್ತವೆ, ಕನಿಷ್ಠ ತಿಂದು ಗರಿಷ್ಠ ಹಾಲು ಕರೆಯುತ್ತವೆ. ಎಮ್ಮೆ ಹಾಲಿನಲ್ಲಿ ಹೃದಯಕ್ಕೆ ಮಾರಕವಾದ ಕೊಲೆಸ್ಟ್ರಾಲ್ ಪ್ರಮಾಣ ಶೇ.45ರಷ್ಟು ಕಡಿಮೆ, ಒಮೇಗ-3 ಮೇದಸ್ಸು ಹೆಚ್ಚಿನ ಪ್ರಮಾಣದಲ್ಲಿದೆ, ಪ್ರೊಟೀನು, ಕಬ್ಬಿಣಾಂಶ ಹೇರಳ. ಜಾನುವಾರು ತಜ್ಞರು ಎಮ್ಮೆಯನ್ನು ಭಾರತದ ಹೆಮ್ಮೆ ಎಂದು ಬಣ್ಣಿಸುವುದುಂಟು.

ನಮ್ಮ ದೇಶದಲ್ಲಿರುವ ಎಮ್ಮೆಗಳ ಸಂಖ್ಯೆ ಸುಮಾರು 12 ಕೋಟಿ. ಪ್ರಪಂಚದ ಅರ್ಧಕ್ಕಿಂತ ಹೆಚ್ಚು ಎಮ್ಮೆಗಳಿಗೆ ಭಾರತವೇ ತವರು. ವರ್ಷಕ್ಕೆ ಉತ್ಪತ್ತಿಯಾಗುತ್ತಿರುವ ಎಮ್ಮೆ ಮಾಂಸದ ಪ್ರಮಾಣ ಹನ್ನೊಂದು ಲಕ್ಷ ಟನ್ನುಗಳಷ್ಟು. ಎಮ್ಮೆ ಮಾಂಸದ ರಫ್ತಿನಿಂದ ಬೊಕ್ಕಸಕ್ಕೆ ಭರ್ತಿಯಾಗುತ್ತಿರುವ ವಾರ್ಷಿಕ ವರಮಾನ 30 ಸಾವಿರ ಕೋಟಿ ರೂಪಾಯಿ ಮೀರಿದ್ದು. ಅರ್ಧಕ್ಕಿಂತ ಹೆಚ್ಚು ಪ್ರಮಾಣದ ಹಾಲನ್ನು ಉತ್ಪಾದಿಸುತ್ತಿರುವುದು ಎಮ್ಮೆಗಳೇ.

ಗೋಹತ್ಯೆ ವಿರುದ್ಧ ಸಿಡಿದೇಳುವವರನ್ನು ಮಹಿಷ ಹತ್ಯೆ ಯಾಕೆ ಬಾಧಿಸುವುದಿಲ್ಲ ಎಂದು ಕೇಳುತ್ತಾರೆ ಚಿಂತಕ ಕಂಚಾ ಐಲಯ್ಯ. ಗೋವುಗಳು, ದಲಿತರು-ಬಹುಜನರು ಈ ಎರಡೂ ಜಾನುವಾರುಗಳ ಕುರಿತು ತೋರುವ ಪ್ರೀತಿ ಮಮತೆಯನ್ನು ನೋಡಿದರೆ ಎರಡಕ್ಕೂ ಒಂದೇ ಬಗೆಯ ಸಮ್ಮಾನ ಸಿಗಬೇಕು ಎಂದು ವಾದಿಸುತ್ತಾರೆ. ಎಮ್ಮೆಯ ಹಾಲನ್ನು ಮೇಲ್ಜಾತಿಗಳೆಂದು ಹೇಳಿಕೊಳ್ಳುವವರೂ ಬಗೆಬಗೆಯಾಗಿ ಸೇವಿಸುವುದು ಸುಳ್ಳೇನೂ ಅಲ್ಲ. ಆದರೆ ಎಮ್ಮೆಗೆ ಬ್ರಾಹ್ಮಣ್ಯದಲ್ಲಿ ಯಾವುದೇ ಸ್ಥಾನಮಾನ ಇಲ್ಲ. ಆರ್ಥಿಕ ಸಮೀಕ್ಷೆಯೊಂದನ್ನು ನಡೆಸಿದ್ದೇ ಆದರೆ ಭಾರತದಲ್ಲಿ ಕೋಟ್ಯಂತರ ಜನರ ಜೀವನೋಪಾಯ ಮೂಲವಾಗಿ ಹೊಮ್ಮುವುದು ಎಮ್ಮೆಯೇ ವಿನಾ ಆಕಳು ಅಲ್ಲ. ಒಂದೇ ಹುಲ್ಲನ್ನು ತಿನ್ನುವ ಎರಡು ಪ್ರಾಣಿಗಳಲ್ಲಿ ಒಂದು ಆಧ್ಯಾತ್ಮಿಕವಾಗಿ ಮತ್ತು ರಾಜಕೀಯವಾಗಿ ಅಸ್ಪೃಶ್ಯ ಎನಿಸಿಕೊಳ್ಳುವುದು ಯಾಕಾಗಿ ಎಂದು ಅವರು ಕೇಳುತ್ತಾರೆ. ಎರಡರ ಪೈಕಿ ಯಾವುದು ಶ್ರೇಷ್ಠ ಮತ್ತು ಯಾವುದು ಕನಿಷ್ಠ ಎಂದು ತೀರ್ಮಾನ ಮಾಡಲೇಬೇಕಿದ್ದಲ್ಲಿ, ಅಂತಹ ಹಕ್ಕು- ಅಧಿಕಾರ ಇರಬೇಕಾದದ್ದು ಈ ಎರಡೂ ಪ್ರಾಣಿಗಳನ್ನು ತಲೆತಲಾಂತರಗಳಿಂದ ಸಾಕಿ ಸಲಹುತ್ತ ಬಂದಿರುವ ದಲಿತರು- ಬಹುಜನರಿಗೆ.

ಕಪ್ಪು ಮೈ ಬಣ್ಣದ ಜನ ಸಮುದಾಯಗಳನ್ನು ವಿಕಾರವಾಗಿ ಚಿತ್ರಿಸಿ, ರಾಕ್ಷಸರೆಂದು ಕರೆದ ಬಿಳಿ ಮೈ ಬಣ್ಣದವರ ವರ್ಣಭೇದ ನೀತಿ ಜನಜನಿತ. ಇದೇ ನೀತಿ ಪ್ರಾಣಿ ಪ್ರಪಂಚಕ್ಕೂ ವಿಸ್ತರಿಸಿತು. ಈ ಅಹಮಿಕೆಗೆ ತಿರಸ್ಕಾರಕ್ಕೆ ತುತ್ತಾದ ಜಾನುವಾರು ಎಮ್ಮೆ. ಬೆಳ್ಳಗಿದ್ದುದು ಸುಂದರವಷ್ಟೇ ಅಲ್ಲ ಗೌರವಾನ್ವಿತ ಕೂಡ ಎನಿಸಿಕೊಂಡಿತು ಎನ್ನುತ್ತಾರೆ ಐಲಯ್ಯ.

ಆದರೂ ಮಹಿಷ ಪರಂಪರೆ ನಮ್ಮ ಅನೇಕ ಗಿರಿಜನರ ಆಚರಣೆಗಳಲ್ಲಿ ಇನ್ನೂ ಜೀವಂತವಿದೆ. ಮಧ್ಯಭಾರತದ ಗೊಂಡರು ಮತ್ತು ಮರಿಯಾ ಗೊಂಡರು, ಪಶ್ಚಿಮ ಭಾರತದ ಕಾಟಕಾರಿಗಳು ಹಾಗೂ ದಕ್ಷಿಣ ಭಾರತದ ತೋಡರು ಈ ಮಾತಿಗೆ ಉದಾಹರಣೆಯಾಗುತ್ತಾರೆ.

ನೀಲಗಿರಿಯ ಗಿರಿಜನರಾದ ತೋಡರ ಪಾಲಿಗೆ ಎಮ್ಮೆಗಳು ಪವಿತ್ರ ಪ್ರಾಣಿಗಳಾಗಿದ್ದವೇ ವಿನಾ ಆಕಳುಗಳಲ್ಲ. ಪವಿತ್ರ ಎಮ್ಮೆಯನ್ನು ಕಟ್ಟುತ್ತಿದ್ದ ಸ್ಥಳಗಳು ಅವರ ಪಾಲಿಗೆ ಆರಾಧಿಸುವ ಗುಡಿಗಳು. ಹೈನು ಮಂದಿರಗಳೆಂದೇ ಅವುಗಳನ್ನು ಕರೆಯಲಾಗುತ್ತಿತ್ತು.

ಸತ್ತ ತೋಡನ ಅಂತ್ಯಸಂಸ್ಕಾರದಲ್ಲಿ ಎಮ್ಮೆಯನ್ನು ಬಲಿ ಕೊಡುತ್ತಿದ್ದರು ತೋಡರು. ಈ ಎಮ್ಮೆ ಪರಲೋಕ ಸೇರಿದ ಮೃತನನ್ನು ಸೇರಿಕೊಳ್ಳಬೇಕು ಎಂಬುದು ಈ ಬಲಿಯ ಉದ್ದೇಶವಾಗಿತ್ತೇ ವಿನಾ ಅದನ್ನು ತಿನ್ನುವುದಲ್ಲ.
ಛತ್ತೀಸಗಢದ ಬಸ್ತರ್ ಜಿಲ್ಲೆಯ ಇಂದ್ರಾವತೀ ನದೀ ದಂಡೆಗುಂಟ ವಾಸಿಸುತ್ತಿದ್ದ ಮರಿಯಾ ಮತ್ತು ಮರಿಯಾ ಗೊಂಡ ಆದಿವಾಸಿಗಳು ತಮಗೆ ಮಹಿಷದೊಂದಿಗೆ ಆಧ್ಯಾತ್ಮಿಕ ಸಂಬಂಧವಿದೆ ಎಂದು ನಂಬಿದ್ದವರು. ಹೀಗಾಗಿ ಅವರ ಪಾಲಿನ ಆಧ್ಯಾತ್ಮಿಕ ಸಂಬಂಧದ ಚಿಹ್ನೆ ಮಹಿಷ. ಹಬ್ಬಗಳಲ್ಲಿ ಮಹಿಷದ ಕೊಂಬುಗಳನ್ನು ತಲೆಯ ಮೇಲೆ ಧರಿಸಿ, ಡೋಲಿನ ತಾಳಕ್ಕೆ ಹೆಜ್ಜೆ ಹಾಕಿ ಹುಸಿ ಕಾಳಗವನ್ನು ನಟಿಸುತ್ತಾರೆ. ತಮ್ಮ ಪ್ರಾಚೀನ ಮಹಿಷ ದೈವವನ್ನು ದಾಂತೇಶ್ವರಿ ಎಂದೇ ಪೂಜಿಸುತ್ತಾರೆ. ಮಹಿಷನನ್ನು ಮಹಸೋಬಾ (ಮಹಿಷಬಾಬಾ ಇಲ್ಲವೇ ತಂದೆ) ಎಂದು ಮಧ್ಯ ಭಾರತ ಮತ್ತು ಪಶ್ಚಿಮ ಭಾರತದ ಗಿರಿಜನರು ಪೂಜಿಸುತ್ತಿದ್ದರು. ಮಹಾರಾಷ್ಟ್ರದ ಕಾಟ್ಕರೀ ಗಿರಿಜನರು ಮತ್ತು ಶಿವಾಜಿಯ ವಂಶಜರೆನ್ನಲಾಗುವ ಭೋಸ್ಲೆಗಳು ಮಹಸೊಬನನ್ನು ಪೂಜಿಸುತ್ತಾರೆ. ನಂದಿತಾ ಕೃಷ್ಣ ಅವರ ಭಾರತದ ಪವಿತ್ರ ಪ್ರಾಣಿಗಳು ಎಂಬ ಕೃತಿಯಲ್ಲಿ ಈ ವಿವರಗಳು ಓದಲು ಸಿಗುತ್ತವೆ.

ದುರ್ಗೆಯ ಕೈಯಲ್ಲಿ ಅಸುರ ಮಹಿಷ ಹತನಾಗುವ ಕತೆಯಲ್ಲಿ ಯಾವ ನೈತಿಕ ಅಂಶವೂ ಇಲ್ಲ. ಭೂಮಿಯ ಫಲವತ್ತತೆಯ ಆವರ್ತ ಆಯಾ ಸುಗ್ಗಿಯೊಂದಿಗೆ ಕೊನೆಯಾಗುತ್ತದೆ. ಭೂಮಿ ಸಸ್ಯಶ್ಯಾಮಲೆಯಾಗಿ ಮತ್ತೆ ಮೈ ತುಂಬಿಕೊಂಡರೆ ಮತ್ತೊಂದು ಸುಗ್ಗಿ. ಮತ್ತೆ ದುರ್ಗೆಯ ಕೈಯಲ್ಲಿ ಹತನಾಗಲು ಅಸುರ ಪುನಃ ಸಿದ್ಧನಾಗುತ್ತಾನೆ. ಮಾನವನ ಅನ್ನದ ತಟ್ಟೆ ಹೀಗೆ ಬರಿದಾಗದೆ ಮತ್ತೆ ಮತ್ತೆ ತುಂಬುತ್ತ ಹೋಗುವುದೇ ಈ ಕತೆಯ ಆಶಯ ಎಂದು ವ್ಯಾಖ್ಯಾನಿಸುತ್ತಾರೆ ಪಟ್ನಾಯಕ್.

ರೂಪಕ ಇಲ್ಲವೇ ಪ್ರತಿಮೆಯ ಮಾತಿನಲ್ಲಿ ಭೂಮಿಯನ್ನು ಆಕಳು ಎಂದಿದ್ದಾರೆ ಪುರಾಣಶಾಸ್ತ್ರಜ್ಞ ದೇವದತ್ ಪಟ್ನಾಯಕ್. ಭೂಮಿಯೇ ದನಿಯೆತ್ತಿ ಪ್ರತಿಭಟಿಸುವ ಮಟ್ಟಿಗೆ ಭೂಮಿಯನ್ನು ಕೊಳ್ಳೆ ಹೊಡೆವ ದುಷ್ಟಶಕ್ತಿಗಳನ್ನು ನಿವಾರಿಸಲಾಗುತ್ತದೆ. ಭೂಮಿಯೆಂಬ ಆಕಳ ಕಣ್ಣೀರನ್ನು ಒರೆಸುವ ವಿಷ್ಣು, ಭೂದಾಹಿ ರಾಜ ಮಹಾರಾಜರ ಒಜ್ಜೆಯನ್ನು ಇಳಿಸುವ ವಚನ ನೀಡುತ್ತಾನೆಂದು ಪುರಾಣಗಳು ಹೇಳುತ್ತವೆ. ಆದರೆ ಇಂದು ಧನದಾಹೀ ಉದ್ಯಮಗಳು ಭೂಮಿಯ ಕೊಳ್ಳೆ ಹೊಡೆಯತೊಡಗಿವೆ. ಸರಕಾರಗಳು ಈ ಸಮತೋಲನವನ್ನು ನಿರ್ಲಕ್ಷಿಸಿವೆ. ಕೊಳ್ಳೆಯ ಕೈಗಳಿಗೆ ಹತಾರುಗಳನ್ನು ಇಡತೊಡಗಿವೆ. ಭೂಮಿಯೆಂಬ ಆಕಳಿನ ರಕ್ಷಣೆಗೆ ಮುಂದಾಗುವ ಸ್ವಯಂಸೇವಾ ಸಂಸ್ಥೆಗಳನ್ನು ಶಿಕ್ಷಿಸತೊಡಗಿವೆ.

ಹೀಗಾಗಿ ಸೊಂಟ ಕಟ್ಟುವುದೇ ಆದರೆ ಅದು ಭೂಮಿಯೆಂಬ ಆಕಳಿನ ರಕ್ಷಣೆಗೆ ಕಟ್ಟಬೇಕು. ಭೂಮಿಯೇ ಇಲ್ಲದೆ ಆಕಳು ಹೇಗೆ ಉಳಿದೀತು?


ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...