Homeಅಂಕಣಗಳುಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

- Advertisement -
- Advertisement -

ದುರ್ಗಾ- ಮಹಿಷ ಕದನ ಮತ್ತು ಮಹಿಷಾಸುರ ಮಧನದ ಪರಿಣಾಮ ಇದ್ದೀತು. ನಮ್ಮ ಎಲ್ಲ ಜಾನುವಾರುಗಳ ಪೈಕಿ ನಿಕೃಷ್ಟವೆಂದು ಕಳಂಕ ಹೊತ್ತ ಪ್ರಾಣಿಯಿದು. ಪರಮ ಕ್ರೌರ್ಯಕ್ಕೆ ಗುರಿಯಾಗುವ ಜೀವಿ. ಮನಸೇಚ್ಛೆ ಬಡಿತ ತಿನ್ನುತ್ತದೆ, ದೇವಿಯ ಮುಂದೆ ಕತ್ತು ಕಡಿಸಿಕೊಂಡು ಬಲಿಯಾಗುತ್ತದೆ. ಮೇವು ನೀರಿಲ್ಲದೆ ನೂರಾರು ಕಿ.ಮೀ. ದೂರ ಹಿಂಸೆಯ ಸಾಗಣೆಗೆ ತುತ್ತಾಗಿ ಕಸಾಯಿಖಾನೆಗಳಲ್ಲಿ ಅತ್ಯಂತ ಯಾತನೆಯ ಮರಣಕ್ಕೆ ಗುರಿಯಾಗುತ್ತದೆ.

ಕಪ್ಪು ವರ್ಣವನ್ನು ಕೀಳೆಂದೂ, ಗೌರವರ್ಣವನ್ನು ಮೇಲೆಂದೂ ನೂರಾರು ವರ್ಷಗಳಿಂದ ನಿತ್ಯ ಬದುಕಿನಲ್ಲಿ ಕಂಡೂಕಾಣದಂತೆ ಭೇದಭಾವ ಬಗೆಯುತ್ತ ಬಂದಿರುವ ವ್ಯವಸ್ಥೆ ಆಷಾಢಭೂತಿತನದ್ದು.

1890ರ ಆಪ್ಟೆ ಸಂಸ್ಕೃತ ನಿಘಂಟಿನ ಪ್ರಕಾರ ಕೃಷ್ಣ ಎಂಬ ಶಬ್ದಕ್ಕೆ ಕಪ್ಪು, ಕತ್ತಲೆ, ಕಡು ನೀಲಿ, ದುಷ್ಟ, ಅನಿಷ್ಟ, ಕೃಷ್ಣಮೃಗ, ಕೋಗಿಲೆ, ಕೃಷ್ಣಪಕ್ಷ, ವಿಷ್ಣುವಿನ ಎಂಟನೆಯ ಅವತಾರ ಕೃಷ್ಣ, ಕೃಷ್ಣನ ಮಗ ಪ್ರದ್ಯುಮ್ನ, ಮಹಾ ಭಾರತದ ಅರ್ಜುನ ಎಂಬ ಅರ್ಥಗಳಿವೆ. ಕೃಷ್ಣ ಎಂಬುದು ದೇಶದ ಅತಿ ಜನಪ್ರಿಯ ಹೆಸರುಗಳಲ್ಲೊಂದು.

ವಿಷ್ಣುವಿನ ಮೂರು ಅವತಾರಗಳಾದ ರಾಮ, ಕೃಷ್ಣ ಹಾಗೂ ಮೋಹಿನಿಯ ಮೈಬಣ್ಣ ಕಪ್ಪು ಇಲ್ಲವೇ ಕಡುನೀಲಿ. ಮೂವರ ಸೌಂದರ್ಯವನ್ನು ಪುರಾಣಗಳು, ಭಾಗವತಗಳು ಕೊಂಡಾಡಿವೆ.

ಭಾರತದ ಅರ್ಥವ್ಯವಸ್ಥೆ ಹೊಳೆಯಲು ಬಡಪಾಯಿ ಎಮ್ಮೆ ಕೋಣಗಳು ಕೂಡ ಶ್ರಮಿಸಿವೆ. ಬೈಸಿಕೊಳ್ಳುವುದಷ್ಟೇ ಅಲ್ಲ ಬೈಗುಳವೇ ಆಗಿ ಹೋಗಿರುವ ಈ ಪಶುವಿನ ಹಿರಿಮೆ ಗರಿಮೆಯ ನೆನೆವುದು ಮಾನವೀಯ ನಡವಳಿಕೆ.

ಕಪ್ಪೆಂದು ಜರೆಯುವ ಬೈಗುಳವೇ ಆಗಿ ಹೋಗಿರುವ ಎಮ್ಮೆಗಳು- ಕೋಣಗಳು ಗದ್ದೆ ಉಳುತ್ತವೆ, ಹೇರು ಎಳೆಯುತ್ತವೆ, ಕನಿಷ್ಠ ತಿಂದು ಗರಿಷ್ಠ ಹಾಲು ಕರೆಯುತ್ತವೆ. ಎಮ್ಮೆ ಹಾಲಿನಲ್ಲಿ ಹೃದಯಕ್ಕೆ ಮಾರಕವಾದ ಕೊಲೆಸ್ಟ್ರಾಲ್ ಪ್ರಮಾಣ ಶೇ.45ರಷ್ಟು ಕಡಿಮೆ, ಒಮೇಗ-3 ಮೇದಸ್ಸು ಹೆಚ್ಚಿನ ಪ್ರಮಾಣದಲ್ಲಿದೆ, ಪ್ರೊಟೀನು, ಕಬ್ಬಿಣಾಂಶ ಹೇರಳ. ಜಾನುವಾರು ತಜ್ಞರು ಎಮ್ಮೆಯನ್ನು ಭಾರತದ ಹೆಮ್ಮೆ ಎಂದು ಬಣ್ಣಿಸುವುದುಂಟು.

ನಮ್ಮ ದೇಶದಲ್ಲಿರುವ ಎಮ್ಮೆಗಳ ಸಂಖ್ಯೆ ಸುಮಾರು 12 ಕೋಟಿ. ಪ್ರಪಂಚದ ಅರ್ಧಕ್ಕಿಂತ ಹೆಚ್ಚು ಎಮ್ಮೆಗಳಿಗೆ ಭಾರತವೇ ತವರು. ವರ್ಷಕ್ಕೆ ಉತ್ಪತ್ತಿಯಾಗುತ್ತಿರುವ ಎಮ್ಮೆ ಮಾಂಸದ ಪ್ರಮಾಣ ಹನ್ನೊಂದು ಲಕ್ಷ ಟನ್ನುಗಳಷ್ಟು. ಎಮ್ಮೆ ಮಾಂಸದ ರಫ್ತಿನಿಂದ ಬೊಕ್ಕಸಕ್ಕೆ ಭರ್ತಿಯಾಗುತ್ತಿರುವ ವಾರ್ಷಿಕ ವರಮಾನ 30 ಸಾವಿರ ಕೋಟಿ ರೂಪಾಯಿ ಮೀರಿದ್ದು. ಅರ್ಧಕ್ಕಿಂತ ಹೆಚ್ಚು ಪ್ರಮಾಣದ ಹಾಲನ್ನು ಉತ್ಪಾದಿಸುತ್ತಿರುವುದು ಎಮ್ಮೆಗಳೇ.

ಗೋಹತ್ಯೆ ವಿರುದ್ಧ ಸಿಡಿದೇಳುವವರನ್ನು ಮಹಿಷ ಹತ್ಯೆ ಯಾಕೆ ಬಾಧಿಸುವುದಿಲ್ಲ ಎಂದು ಕೇಳುತ್ತಾರೆ ಚಿಂತಕ ಕಂಚಾ ಐಲಯ್ಯ. ಗೋವುಗಳು, ದಲಿತರು-ಬಹುಜನರು ಈ ಎರಡೂ ಜಾನುವಾರುಗಳ ಕುರಿತು ತೋರುವ ಪ್ರೀತಿ ಮಮತೆಯನ್ನು ನೋಡಿದರೆ ಎರಡಕ್ಕೂ ಒಂದೇ ಬಗೆಯ ಸಮ್ಮಾನ ಸಿಗಬೇಕು ಎಂದು ವಾದಿಸುತ್ತಾರೆ. ಎಮ್ಮೆಯ ಹಾಲನ್ನು ಮೇಲ್ಜಾತಿಗಳೆಂದು ಹೇಳಿಕೊಳ್ಳುವವರೂ ಬಗೆಬಗೆಯಾಗಿ ಸೇವಿಸುವುದು ಸುಳ್ಳೇನೂ ಅಲ್ಲ. ಆದರೆ ಎಮ್ಮೆಗೆ ಬ್ರಾಹ್ಮಣ್ಯದಲ್ಲಿ ಯಾವುದೇ ಸ್ಥಾನಮಾನ ಇಲ್ಲ. ಆರ್ಥಿಕ ಸಮೀಕ್ಷೆಯೊಂದನ್ನು ನಡೆಸಿದ್ದೇ ಆದರೆ ಭಾರತದಲ್ಲಿ ಕೋಟ್ಯಂತರ ಜನರ ಜೀವನೋಪಾಯ ಮೂಲವಾಗಿ ಹೊಮ್ಮುವುದು ಎಮ್ಮೆಯೇ ವಿನಾ ಆಕಳು ಅಲ್ಲ. ಒಂದೇ ಹುಲ್ಲನ್ನು ತಿನ್ನುವ ಎರಡು ಪ್ರಾಣಿಗಳಲ್ಲಿ ಒಂದು ಆಧ್ಯಾತ್ಮಿಕವಾಗಿ ಮತ್ತು ರಾಜಕೀಯವಾಗಿ ಅಸ್ಪೃಶ್ಯ ಎನಿಸಿಕೊಳ್ಳುವುದು ಯಾಕಾಗಿ ಎಂದು ಅವರು ಕೇಳುತ್ತಾರೆ. ಎರಡರ ಪೈಕಿ ಯಾವುದು ಶ್ರೇಷ್ಠ ಮತ್ತು ಯಾವುದು ಕನಿಷ್ಠ ಎಂದು ತೀರ್ಮಾನ ಮಾಡಲೇಬೇಕಿದ್ದಲ್ಲಿ, ಅಂತಹ ಹಕ್ಕು- ಅಧಿಕಾರ ಇರಬೇಕಾದದ್ದು ಈ ಎರಡೂ ಪ್ರಾಣಿಗಳನ್ನು ತಲೆತಲಾಂತರಗಳಿಂದ ಸಾಕಿ ಸಲಹುತ್ತ ಬಂದಿರುವ ದಲಿತರು- ಬಹುಜನರಿಗೆ.

ಕಪ್ಪು ಮೈ ಬಣ್ಣದ ಜನ ಸಮುದಾಯಗಳನ್ನು ವಿಕಾರವಾಗಿ ಚಿತ್ರಿಸಿ, ರಾಕ್ಷಸರೆಂದು ಕರೆದ ಬಿಳಿ ಮೈ ಬಣ್ಣದವರ ವರ್ಣಭೇದ ನೀತಿ ಜನಜನಿತ. ಇದೇ ನೀತಿ ಪ್ರಾಣಿ ಪ್ರಪಂಚಕ್ಕೂ ವಿಸ್ತರಿಸಿತು. ಈ ಅಹಮಿಕೆಗೆ ತಿರಸ್ಕಾರಕ್ಕೆ ತುತ್ತಾದ ಜಾನುವಾರು ಎಮ್ಮೆ. ಬೆಳ್ಳಗಿದ್ದುದು ಸುಂದರವಷ್ಟೇ ಅಲ್ಲ ಗೌರವಾನ್ವಿತ ಕೂಡ ಎನಿಸಿಕೊಂಡಿತು ಎನ್ನುತ್ತಾರೆ ಐಲಯ್ಯ.

ಆದರೂ ಮಹಿಷ ಪರಂಪರೆ ನಮ್ಮ ಅನೇಕ ಗಿರಿಜನರ ಆಚರಣೆಗಳಲ್ಲಿ ಇನ್ನೂ ಜೀವಂತವಿದೆ. ಮಧ್ಯಭಾರತದ ಗೊಂಡರು ಮತ್ತು ಮರಿಯಾ ಗೊಂಡರು, ಪಶ್ಚಿಮ ಭಾರತದ ಕಾಟಕಾರಿಗಳು ಹಾಗೂ ದಕ್ಷಿಣ ಭಾರತದ ತೋಡರು ಈ ಮಾತಿಗೆ ಉದಾಹರಣೆಯಾಗುತ್ತಾರೆ.

ನೀಲಗಿರಿಯ ಗಿರಿಜನರಾದ ತೋಡರ ಪಾಲಿಗೆ ಎಮ್ಮೆಗಳು ಪವಿತ್ರ ಪ್ರಾಣಿಗಳಾಗಿದ್ದವೇ ವಿನಾ ಆಕಳುಗಳಲ್ಲ. ಪವಿತ್ರ ಎಮ್ಮೆಯನ್ನು ಕಟ್ಟುತ್ತಿದ್ದ ಸ್ಥಳಗಳು ಅವರ ಪಾಲಿಗೆ ಆರಾಧಿಸುವ ಗುಡಿಗಳು. ಹೈನು ಮಂದಿರಗಳೆಂದೇ ಅವುಗಳನ್ನು ಕರೆಯಲಾಗುತ್ತಿತ್ತು.

ಸತ್ತ ತೋಡನ ಅಂತ್ಯಸಂಸ್ಕಾರದಲ್ಲಿ ಎಮ್ಮೆಯನ್ನು ಬಲಿ ಕೊಡುತ್ತಿದ್ದರು ತೋಡರು. ಈ ಎಮ್ಮೆ ಪರಲೋಕ ಸೇರಿದ ಮೃತನನ್ನು ಸೇರಿಕೊಳ್ಳಬೇಕು ಎಂಬುದು ಈ ಬಲಿಯ ಉದ್ದೇಶವಾಗಿತ್ತೇ ವಿನಾ ಅದನ್ನು ತಿನ್ನುವುದಲ್ಲ.
ಛತ್ತೀಸಗಢದ ಬಸ್ತರ್ ಜಿಲ್ಲೆಯ ಇಂದ್ರಾವತೀ ನದೀ ದಂಡೆಗುಂಟ ವಾಸಿಸುತ್ತಿದ್ದ ಮರಿಯಾ ಮತ್ತು ಮರಿಯಾ ಗೊಂಡ ಆದಿವಾಸಿಗಳು ತಮಗೆ ಮಹಿಷದೊಂದಿಗೆ ಆಧ್ಯಾತ್ಮಿಕ ಸಂಬಂಧವಿದೆ ಎಂದು ನಂಬಿದ್ದವರು. ಹೀಗಾಗಿ ಅವರ ಪಾಲಿನ ಆಧ್ಯಾತ್ಮಿಕ ಸಂಬಂಧದ ಚಿಹ್ನೆ ಮಹಿಷ. ಹಬ್ಬಗಳಲ್ಲಿ ಮಹಿಷದ ಕೊಂಬುಗಳನ್ನು ತಲೆಯ ಮೇಲೆ ಧರಿಸಿ, ಡೋಲಿನ ತಾಳಕ್ಕೆ ಹೆಜ್ಜೆ ಹಾಕಿ ಹುಸಿ ಕಾಳಗವನ್ನು ನಟಿಸುತ್ತಾರೆ. ತಮ್ಮ ಪ್ರಾಚೀನ ಮಹಿಷ ದೈವವನ್ನು ದಾಂತೇಶ್ವರಿ ಎಂದೇ ಪೂಜಿಸುತ್ತಾರೆ. ಮಹಿಷನನ್ನು ಮಹಸೋಬಾ (ಮಹಿಷಬಾಬಾ ಇಲ್ಲವೇ ತಂದೆ) ಎಂದು ಮಧ್ಯ ಭಾರತ ಮತ್ತು ಪಶ್ಚಿಮ ಭಾರತದ ಗಿರಿಜನರು ಪೂಜಿಸುತ್ತಿದ್ದರು. ಮಹಾರಾಷ್ಟ್ರದ ಕಾಟ್ಕರೀ ಗಿರಿಜನರು ಮತ್ತು ಶಿವಾಜಿಯ ವಂಶಜರೆನ್ನಲಾಗುವ ಭೋಸ್ಲೆಗಳು ಮಹಸೊಬನನ್ನು ಪೂಜಿಸುತ್ತಾರೆ. ನಂದಿತಾ ಕೃಷ್ಣ ಅವರ ಭಾರತದ ಪವಿತ್ರ ಪ್ರಾಣಿಗಳು ಎಂಬ ಕೃತಿಯಲ್ಲಿ ಈ ವಿವರಗಳು ಓದಲು ಸಿಗುತ್ತವೆ.

ದುರ್ಗೆಯ ಕೈಯಲ್ಲಿ ಅಸುರ ಮಹಿಷ ಹತನಾಗುವ ಕತೆಯಲ್ಲಿ ಯಾವ ನೈತಿಕ ಅಂಶವೂ ಇಲ್ಲ. ಭೂಮಿಯ ಫಲವತ್ತತೆಯ ಆವರ್ತ ಆಯಾ ಸುಗ್ಗಿಯೊಂದಿಗೆ ಕೊನೆಯಾಗುತ್ತದೆ. ಭೂಮಿ ಸಸ್ಯಶ್ಯಾಮಲೆಯಾಗಿ ಮತ್ತೆ ಮೈ ತುಂಬಿಕೊಂಡರೆ ಮತ್ತೊಂದು ಸುಗ್ಗಿ. ಮತ್ತೆ ದುರ್ಗೆಯ ಕೈಯಲ್ಲಿ ಹತನಾಗಲು ಅಸುರ ಪುನಃ ಸಿದ್ಧನಾಗುತ್ತಾನೆ. ಮಾನವನ ಅನ್ನದ ತಟ್ಟೆ ಹೀಗೆ ಬರಿದಾಗದೆ ಮತ್ತೆ ಮತ್ತೆ ತುಂಬುತ್ತ ಹೋಗುವುದೇ ಈ ಕತೆಯ ಆಶಯ ಎಂದು ವ್ಯಾಖ್ಯಾನಿಸುತ್ತಾರೆ ಪಟ್ನಾಯಕ್.

ರೂಪಕ ಇಲ್ಲವೇ ಪ್ರತಿಮೆಯ ಮಾತಿನಲ್ಲಿ ಭೂಮಿಯನ್ನು ಆಕಳು ಎಂದಿದ್ದಾರೆ ಪುರಾಣಶಾಸ್ತ್ರಜ್ಞ ದೇವದತ್ ಪಟ್ನಾಯಕ್. ಭೂಮಿಯೇ ದನಿಯೆತ್ತಿ ಪ್ರತಿಭಟಿಸುವ ಮಟ್ಟಿಗೆ ಭೂಮಿಯನ್ನು ಕೊಳ್ಳೆ ಹೊಡೆವ ದುಷ್ಟಶಕ್ತಿಗಳನ್ನು ನಿವಾರಿಸಲಾಗುತ್ತದೆ. ಭೂಮಿಯೆಂಬ ಆಕಳ ಕಣ್ಣೀರನ್ನು ಒರೆಸುವ ವಿಷ್ಣು, ಭೂದಾಹಿ ರಾಜ ಮಹಾರಾಜರ ಒಜ್ಜೆಯನ್ನು ಇಳಿಸುವ ವಚನ ನೀಡುತ್ತಾನೆಂದು ಪುರಾಣಗಳು ಹೇಳುತ್ತವೆ. ಆದರೆ ಇಂದು ಧನದಾಹೀ ಉದ್ಯಮಗಳು ಭೂಮಿಯ ಕೊಳ್ಳೆ ಹೊಡೆಯತೊಡಗಿವೆ. ಸರಕಾರಗಳು ಈ ಸಮತೋಲನವನ್ನು ನಿರ್ಲಕ್ಷಿಸಿವೆ. ಕೊಳ್ಳೆಯ ಕೈಗಳಿಗೆ ಹತಾರುಗಳನ್ನು ಇಡತೊಡಗಿವೆ. ಭೂಮಿಯೆಂಬ ಆಕಳಿನ ರಕ್ಷಣೆಗೆ ಮುಂದಾಗುವ ಸ್ವಯಂಸೇವಾ ಸಂಸ್ಥೆಗಳನ್ನು ಶಿಕ್ಷಿಸತೊಡಗಿವೆ.

ಹೀಗಾಗಿ ಸೊಂಟ ಕಟ್ಟುವುದೇ ಆದರೆ ಅದು ಭೂಮಿಯೆಂಬ ಆಕಳಿನ ರಕ್ಷಣೆಗೆ ಕಟ್ಟಬೇಕು. ಭೂಮಿಯೇ ಇಲ್ಲದೆ ಆಕಳು ಹೇಗೆ ಉಳಿದೀತು?


ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....