Homeಮುಖಪುಟ2023: ಹೊಸ ವರ್ಷದಲ್ಲಿ ಹೋಲಿಸ್ಟಿಕ್ ಜೀವನಶೈಲಿಗೆ ಶ್ರಮಿಸೋಣ

2023: ಹೊಸ ವರ್ಷದಲ್ಲಿ ಹೋಲಿಸ್ಟಿಕ್ ಜೀವನಶೈಲಿಗೆ ಶ್ರಮಿಸೋಣ

- Advertisement -
- Advertisement -

ಬೆಳಗಿನ ಜಾವದ ಐದು ಗಂಟೆಯ ಚುಮುಚುಮು ಚಳಿಗೆ ತಲೆಗೊಂದು ಟೋಪಿ ಹಾಕಿಕೊಂಡು ರನ್ನಿಂಗ್‌ಗೆ ಹೊರಟಾಗ, ನಮಗೆ ಅಪರಿಚಿತವೆನ್ನಬಹುದಾದ, ಉತ್ತರ ಕರ್ನಾಟಕದ ಊರಿನಲ್ಲಿ ಹೆಣ್ಣುಮಗಳೊಬ್ಬಳು ಆಗಷ್ಟೇ ಸ್ನಾನ ಮುಗಿಸಿ, ನೆತ್ತಿಯ ಮೇಲಿನ ನೀರು ಆರುವ ಮುನ್ನವೇ, ಒದ್ದೆ ಮುದ್ದೆ ಕೂದಲನ್ನು ಟವಲಿನಲ್ಲಿ ಸುತ್ತಿಕೊಂಡು, ಗುಡಿಸಿ ಸಾರಿಸಿದ ನೆಲಕ್ಕೆ ರಂಗೋಲಿಯ ಚುಕ್ಕಿಯನ್ನಿಡುವುದನ್ನು ನೋಡಿದಾಗ ಮೂಡಿದ ಮನಸ್ಸಿನ ಭಾವ; ಉಳಿದುಕೊಂಡಿದ್ದ ಟೆಂಟ್ ಹೌಸ್‌ನಿಂದ ಸೂರ್ಯ ಹುಟ್ಟುವ ಮುನ್ನವೇ ಹೊರಬಂದು ಚಳಿಗೆ ಮುಖವೊಡ್ಡಿ ಕಾಲಾಡಿಸುತ್ತಿದ್ದಾಗ, ಹಿಮಾಲಯದ ತಪ್ಪಲಿನ ಕಾರ್ಗಿಲ್‌ನ ಹೊರವಲಯದ ಜನರಿಲ್ಲದ ತಾಣದಲ್ಲಿ, ಕುರಿಕಾಯುವ ಅಲೆಮಾರಿ ಸಮುದಾಯದ ವೃದ್ಧರೊಬ್ಬರು ಹರಿಯುವ ತೊರೆಯ ಪಕ್ಕದಲ್ಲಿ ಕಲ್ಲು ಜೋಡಿಸಿ ಒಲೆ ಹೂಡಿ ಚಹಾ ಕಾಯಿಸಿ “ಸರ್‌ದೀ ಮೆ ಚಾಯ್ ಬಹೊತ್ ಸುಕೂನ್ ದೇತಾ ಹೈ ಬಿಟಿಯಾ, ಪೀವೋ” (ಚಳಿಯಲ್ಲಿ ಚಹಾ ಕುಡಿಯೋದು ಬಹಳ ನೆಮ್ಮದಿ ಕೊಡುತ್ತೆ ಮಗಳೇ, ಕುಡಿ.) ಎಂದು ಟೀ ನೀಡಿ ನಕ್ಕಾಗ ಮೂಡಿದ ಮನಸ್ಸಿನ ಭಾವ; ಇವೆರಡೂ ಭಾವಗಳಿಗೆ ಇದ್ದ ಸಾಮ್ಯತೆಯೆಂದರೆ ಅವರ ’ಬದುಕು’ ಎನ್ನಬಹುದೇನೊ.

ಬದುಕಿನ ಏರಿಳಿತಗಳ ನಡುವೆ ನಾನಾ ತರಹದ ಅನುಭವಗಳಿಗೆ, ನೋವು ನಲಿವುಗಳಿಗೆ, ಕಷ್ಟ ಕಾರ್ಪಣ್ಯಗಳಿಗೆ ತೆರೆದಿಟ್ಟುಕೊಂಡು ನಿರಂತರವಾಗಿ ಸಾಗುತ್ತಲೇ ಇರುವಾಗ ನಾನು ಕೇಳಿಕೊಳ್ಳುವ ಮುಖ್ಯ ಪ್ರಶ್ನೆ ಈ ’ಬದುಕು’ ಎಂದರೆ ಏನು? ಬದುಕುವುದು ಎಂದರೆ ಹೇಗಿರಬೇಕು? ಈ ಪ್ರಶ್ನೆಗಳನ್ನು ಬಹುಶಃ ನನ್ನಂತೆ ಎಲ್ಲರೂ ಒಂದಲ್ಲ ಒಂದು ಸಂದರ್ಭದಲ್ಲಿ ಕೇಳಿಕೊಂಡಿರುತ್ತಾರೆ. ಸರಿಯುತ್ತಿರುವ ವರುಷದ ಕೊನೆಯಲ್ಲಿ ನಿಂತು ಬದಲಾಗುವ ಕ್ಯಾಲೆಂಡರಿನೊಂದಿಗೆ ಹೊಸದಿನಗಳನ್ನು ಸ್ವಾಗತಿಸುವ ಸಂದರ್ಭದಲ್ಲಿ ನಾವು ನಮಗೆ ಮತ್ತೆಮತ್ತೆ ಕೇಳಿಕೊಳ್ಳಲೇಬೇಕಾದ ಬಹುಮುಖ್ಯ ಪ್ರಶ್ನೆಗಳಿವು. ಇತ್ತೀಚಿನ ದಿನಗಳಲ್ಲಿ ಕೋವಿಡ್‌ನಂತಹ ಕಷ್ಟದ ದಿನಗಳನ್ನು ಸವೆಸಿ, ಬದುಕುಳಿದು, ಮತ್ತೆ ಬದುಕು ಕಟ್ಟಿಕೊಳ್ಳಲು ಹೋರಾಡಿರುವವರಿಂದ ಹಿಡಿದು ಬರೀ ಆರ್ಥಿಕವಾಗಿಯಷ್ಟೇ ಅಲ್ಲ ಮಾನಸಿಕವಾಗಿ, ದೈಹಿಕವಾಗಿ, ಆರೋಗ್ಯದಲ್ಲೂ ಜರ್ಜರಿತರಾಗಿ, ಬದುಕುಳಿದಿರುವುದೇ ವರವೆಂದು ಜೀವಿಸುತ್ತಿರುವವರೂ, ಈಗ ಹಿಂತಿರುಗಿ ನೋಡಿ ನಕ್ಕಿದ್ದೆಲ್ಲ, ಸಂಭ್ರಮಿಸಿದ್ದೆಲ್ಲಿ, ಎಡವಿದ್ದೆಲ್ಲಿ ಹಾಗೂ ನಿಜವಾಗಿಯೂ ಬದುಕನ್ನು ಬದುಕಿದ್ದೆಲ್ಲಿ ಎನ್ನುವುದನ್ನು ಕೇಳಿಕೊಳ್ಳಲೇಬೇಕಿದೆ.

ಈ ಸಮಗ್ರ ಬದುಕಿಗೊಂದು ಇಂಥದ್ದೇ ಎಂಬ ಒಂದು ಚೌಕಟ್ಟಿಲ್ಲದಿದ್ದರೂ ಬುದ್ಧ ಹೇಳಿದ ’ಆಸೆಯೇ ದುಃಖಕ್ಕೆ ಮೂಲ’, ಬಸವಣ್ಣನೆಂದ ’ಕಾಯಕವೇ ಕೈಲಾಸ’, ಓಶೋ ಹೇಳಿದ ’ಬದುಕನ್ನು ಜೀವಿಸು’ ಅನ್ನುವ ಮಾತುಗಳನ್ನು ಜೋಡಿಸಿ ಬದುಕುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕಿದೆ. ಹೇಗೆ ಕಣ್ಣು, ಮೂಗು, ಕೈ, ಕಾಲು ಹಾಗೂ ದೇಹದ ಪ್ರತಿಯೊಂದು ಅಂಗಾಂಗಗಳು ಆರೋಗ್ಯವಾಗಿರುವುದು ಇಡೀ ದೇಹಕ್ಕೆ ಅವಶ್ಯಕವೋ ಹಾಗೆಯೇ ಮನಸ್ಸಿನ ಆರೋಗ್ಯಕ್ಕೆ ನಮ್ಮ ಆಲೋಚನೆಗಳು, ಅವುಗಳ ಗಟ್ಟಿತನ, ಒಳನೋಟ, ಹೊರನೋಟ, ಆಂತರಿಕ ಶುದ್ಧಿ ಎಲ್ಲವೂ ಮುಖ್ಯವಾಗುತ್ತವೆ. ಹೀಗೆ ಅವೆರಡೂ ಒಂದರ ಕೈ ಇನ್ನೊಂದು ಹಿಡಿದು, ಬೆಂಬಿಡದ ಸಂಗಾತಿಯಂತೆ ನಡೆಯಬೇಕಾಗುತ್ತದೆ. ಅಂದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಒಂದಕ್ಕೊಂದು ಜೊತೆಯಾಗಿ ಸಾಗಿದಾಗಲಷ್ಟೇ ಈ ಬದುಕನ್ನು ಜೀವಿಸಲು ಸಹನೀಯವಾಗುವುದು.

ಪ್ರತಿದಿನ ಮನುಷ್ಯನ ಮೆದುಳು ಸುಮಾರು 70,000 ಆಲೋಚನೆಗಳನ್ನು ಮಂಥನ ಮಾಡುತ್ತದಂತೆ. ಇವುಗಳಲ್ಲಿ ಖುಷಿ ಕೊಡುವುದೊಂದಿಷ್ಟಿದ್ದರೆ, ಚಿಂತೆಗೆ ಹಚ್ಚುವುದು ಒಂದಿಷ್ಟು. ಇವುಗಳಲ್ಲಿನ ಅನೇಕ ಆಲೋಚನೆಗಳಿಗೆ ನಾವಿರುವ ಸಾಮಾಜಿಕ ಪರಿಸರ, ಮನೆಯ ವಾತಾವರಣ, ಬದುಕುವ ರೀತಿ, ಆರ್ಥಿಕ ಪರಿಸ್ಥಿತಿ, ಆರೋಗ್ಯದ ಸುಸ್ಥಿತಿ ಎಲ್ಲವೂ ಕಾರಣವಾಗಿರುತ್ತದೆ. ಹಾಗಾಗಿ ಈ ಸಮಗ್ರ ಬದುಕಿಗೆ ನಾವು ಆಲೋಚಿಸುವ ದಿಕ್ಕು ಸರಿದಾರಿಯಲ್ಲಿರುವುದು ಬಹಳ ಮುಖ್ಯ. ಇದ್ಯಾಕೆ ಮುಖ್ಯವಾಗುತ್ತದೆಂದರೆ, ನಮ್ಮ ಆಲೋಚನೆಗಳು ನಮ್ಮ ಸುತ್ತಲಿನ ಪರಿಸರವನ್ನು ಹಾಳು ಮಾಡುವ ಅಥವಾ ಸುಂದರಗೊಳಿಸುವ ಮೊದಲು, ಅವು ನಮ್ಮೊಳಗಿಂದಲೇ ತಮ್ಮ ಕೆಲಸವನ್ನು ಶುರುಮಾಡುತ್ತವೆ.

ಇನ್ನು ಇದರೊಂದಿಗೆ ದೈಹಿಕ ಆರೋಗ್ಯವೂ ಅಷ್ಟೇ ಮುಖ್ಯವಾದ ವಿಚಾರ. ದೈಹಿಕ ಆರೋಗ್ಯವೆಂದರೆ ಅಂಗಡಿಯಲ್ಲಿ ಕಾಸಿಗೆ ಸಿಗುವ ವಸ್ತುವಲ್ಲ ಅಥವಾ ಯಾವುದೇ ವಸ್ತುವನ್ನು ಬಳಸಿ ಸಂಪೂರ್ಣ ಆರೋಗ್ಯ ಪಡೆಯಲೂ ಸಾಧ್ಯವಿಲ್ಲ. ನಾನಾಗಲೇ ಹೇಳಿದಂತೆ, ರಂಗೋಲಿಗೆ ಚುಕ್ಕಿ ಇಟ್ಟ ಹೆಣ್ಣು ಮತ್ತು ಚಳಿಗೆ ಮೈ ಒಡ್ಡಿ ಚಹಾ ಕಾಯಿಸುವ ವೃದ್ಧನಲ್ಲಿ ಕಾಣಿಸಿದ್ದು ಒಂದು ಶಿಸ್ತುಬದ್ಧ ಜೀವನ. ಸೂರ್ಯನ ಜೊತೆಜೊತೆಗೆ ಎದ್ದು ಮನಸ್ಸಿಗೆ ಮುದ ನೀಡುವ ಹಾಗೂ ಉಲ್ಲಸಿತಗೊಳಿಸುವ ಒಂದಿಷ್ಟು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದಿನದ ಸಮಯಕ್ಕೊಂದು ನಕ್ಷೆ ರೂಪಿಸಿಕೊಂಡು, ತೊಡಕುಗಳನ್ನು ಮೀರಿ ಅಂದುಕೊಂಡ ಕೆಲಸಗಳನ್ನು ಮುಗಿಸಿ, ಆರೋಗ್ಯಕರ ಗುಣಮಟ್ಟದ ಸಮಯ ಕಳೆದು, ಸಂಭ್ರಮದ ಮತ್ತು ಸಂತೃಪ್ತಿಯ ಬದುಕು ಬದುಕುವುದೇ ನಿಜವಾದ ಆರೋಗ್ಯಕರ ಜೀವನ. ಈ ತರದ ಬದುಕು ಬದುಕಲು ಶಿಸ್ತಿರಬೇಕು, ಶ್ರದ್ಧೆಯಿರಬೇಕು; ಹೀಗೇ ಬದುಕುತ್ತೇವೆನ್ನುವ ಹಠವಿರಬೇಕು. ಆಸೆ, ಆಕಾಂಕ್ಷೆ, ಖರ್ಚುವೆಚ್ಚಗಳಲ್ಲಿ ಹಿಡಿತವಿರಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಆಲೋಚನೆಯ ದಿಕ್ಕು ಸರಿಯಾಗಿರಬೇಕು. ಮನಸ್ಸಿನ ಆರೋಗ್ಯಕ್ಕೂ ದೇಹದ ಆರೋಗ್ಯಕ್ಕೂ ನೇರವಾದ ಸಂಬಂಧವಿರುವುದರಿಂದ ಬದುಕುವ ಧಾವಂತದಲ್ಲಿ ಮನಸ್ಸಿಗೂ ದೇಹಕ್ಕೂ ಕೊಂಡಿ ತ್ರಾಸದಾಯಕವಾಗಿರಬಾರದು. ನಮ್ಮೊಳಗಿನ, ನಮ್ಮವರ ಬಗೆಗಿನ, ನಮ್ಮ ಸುತ್ತಮುತ್ತಲಿನ ಸಮಾಜದ ಬಗೆಗಿನ ನಮ್ಮ ಆಲೋಚನೆ ಪ್ರಬುದ್ಧತೆಯಿಂದ ಮತ್ತು ಕಾಳಜಿಯಿಂದ ಕೂಡಿರಬೇಕಾಗುತ್ತದೆ. ಅಂದರೆ ಒಂದು ಸ್ವಸ್ಥ ಬದುಕಿನ ಕನಸು ಕಾಣಲು ನಮ್ಮ ಸುತ್ತಲಿನ ಪರಿಸರವೂ ಸ್ವಸ್ಥವಾಗಿರುವುದು ಮುಖ್ಯ. ಅಲ್ಲಿ ದ್ವೇಷ, ಅಸೂಯೆ, ಅಸಹ್ಯ, ಅಪಹಾಸ್ಯ, ಅನಿಷ್ಟ ಆಚರಣೆ, ಅಂಧಶ್ರದ್ಧೆಗಳಿಗೆ ಜಾಗ ಕೊಡದೆ ಒಬ್ಬರಿಗೊಬ್ಬರು ಹೆಗಲಾಗಿ, ನೊಗವಾಗಿ, ಆಸರೆಯಾಗಿ ಬದುಕಲು ಯೋಗ್ಯವಾದಂತಹ ವಾತಾವರಣ ನಿರ್ಮಿಸಿಕೊಳ್ಳಬೇಕಾದದ್ದು ಬಹಳ ಮುಖ್ಯ. ಆಗಲೇ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಈ ಮಾನಸಿಕ ಆರೋಗ್ಯ ಸಿದ್ಧಿಸಿಕೊಂಡರೆ ದೈಹಿಕ ಆರೋಗ್ಯದೆಡೆಗೆ ಗಮನ ನೀಡುವುದು ಕಷ್ಟದ ಕೆಲಸವೇನಲ್ಲ. ಈ ಪ್ರೀತಿ ಒಂದು ರೀತಿಯ ಔಷಧಿ. ಪ್ರೀತಿ ಮನೆಯೊಳಗೆ ನೆಮ್ಮದಿ ನೆಲೆಸುವಂತೆ ಮಾಡುತ್ತದೆ. ಅದೇ ಪ್ರೀತಿಯನ್ನು ನಾವು ಬದುಕುವ ಪರಿಸರದೆಡೆಗೆ ಹಂಚಿದಾಗ ಆ ನೆಮ್ಮದಿಯೂ ಮನೆಯ ಹೊರಗೆ ಪಸರಿಸುತ್ತದೆ. ಹೀಗೊಂದು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹೆಚ್ಚೇನೂ ಕಷ್ಟ ಪಡುವುದು ಬೇಕಿಲ್ಲ; ಹೆಚ್ಚುಹೆಚ್ಚು ಸ್ವಸ್ಥ ಮನಸ್ಸುಗಳ ಇದ್ದರದೇ ಸಾಕು. ಅಂತದೊಂದು ಸ್ವಸ್ಥ ಮನಸ್ಸು ಬೆಳೆಸಿಕೊಂಡು ನೋಡಲು ಸಾಧ್ಯವಾದರೆ, ಸುತ್ತಲಿನ ಕಲ್ಲು ಕೋಟೆಯೂ ನಕ್ಕಂತೆ ಭಾಸವಾಗುತ್ತದೆ.

ಅಂದಹಾಗೆ ಬರಲಿರುವ ದಿನಗಳಿಗಾಗಿ ಒಂದಿಷ್ಟು ಪ್ರತಿಜ್ಞೆಗಳನ್ನು ಕೈಗೊಳ್ಳಬೇಕಿದೆ. ಅವುಗಳಲ್ಲಿ ಮುಖ್ಯವಾದವುಗಳು ಬೆಳಿಗ್ಗೆ ಬೇಗ ಏಳುವುದು, ಒಂದಿಷ್ಟು ವ್ಯಾಯಾಮ, ಒಳ್ಳೆಯ ಊಟ, ಒಳ್ಳೆಯ ನಿದ್ದೆ, ದೇಹ ದಣಿಯುವಷ್ಟು ಕೆಲಸ, ಒಂದಿಷ್ಟು ಸಮಯ ತಮ್ಮವರಿಗಾಗಿ ನೀಡುವುದು; ಇವಿಷ್ಟೂ ದೇಹದ ಆರೋಗ್ಯಕ್ಕಾದರೆ, ಮನಸ್ಸಿನ ಆರೋಗ್ಯಕ್ಕಾಗಿ ಒಂದಿಷ್ಟು ಓದು, ಅನಗತ್ಯ ಹಾಗೂ ಕೆಟ್ಟ ’ಕಾರ್ಯಕ್ರಮಗಳು-ಮನಸ್ಥಿತಿಯ ಜನರು-ಕೆಲಸ’ಗಳಿಂದ ದೂರವಿರುವುದು, ಪ್ರೀತಿ ಕೊಡಲಾಗದಿದ್ದರೂ ದ್ವೇಷ ಹಂಚದಿರುವುದು, ಸಮುದಾಯ ಕೇಂದ್ರಿತವಲ್ಲದ ಅನಗತ್ಯವಾದ ವಾದ ವಿವಾದಗಳಿಂದ ದೂರವಿರುವುದು ಹಾಗೂ ನಮಗಾಗಿ ಮತ್ತು ನಮ್ಮ ಮುಂದಿನ ಪೀಳಿಗೆಗಾಗಿ ಒಂದು ಒಳ್ಳೆಯ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಕಿಂಚಿತ್ತಾದರೂ ಭಾಗಿಯಾಗುವುದು; ಇವಿಷ್ಟು ನಾವು ಕೈಗೊಳ್ಳಲೇಬೇಕಾದ ಪ್ರತಿಜ್ಞೆಗಳು. ಈ ಮಾನಸಿಕ ಸಿದ್ಧತೆಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ. ನಮ್ಮ ಮುಂದಿರುವ ಅನೇಕ ಸಾಮಾಜಿಕ ಒತ್ತಡಗಳನ್ನು, ಅಂತಹ ಒತ್ತಡಗಳನ್ನು ಹೆಚ್ಚಿಸುವ ಮಾಧ್ಯಮಗಳನ್ನು ಮೀರಿ ಸ್ವಸ್ಥ ಬದುಕನ್ನು ಕಟ್ಟಕೊಳ್ಳುತ್ತಾ 2023ರಲ್ಲಿ ಮುಂದುವರಿಯೋಣ. ಅಷ್ಟಕ್ಕೂ, ಇದಕ್ಕೇ ಅಲ್ವೇ ಸಮಗ್ರ ಬದುಕು ಅಥವಾ Holistic Living ಅನ್ನುವುದು!

ಪಲ್ಲವಿ ಇಡೂರು

ಪಲ್ಲವಿ ಇಡೂರು
ಲೇಖಕಿ ಮತ್ತು ರಾಜಕೀಯ ವಿಮರ್ಶಕರು. ’ಜೊಲಾಂಟಾ’ (ಇರೇನಾ ಸ್ಲೆಂಡರ್ ಜೀವನ ಕಥನ) ಮತ್ತು ದೇಶ ವಿಭಜನೆಯ ಬಗ್ಗೆ ’ಆಗಸ್ಟ್ ಮಾಸದ ರಾಜಕೀಯ ಕಥನ’ ಎಂಬ ಪುಸ್ತಕಗಳನ್ನು ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...