Homeಮುಖಪುಟ2023: ಹೊಸ ವರ್ಷದಲ್ಲಿ ಹೋಲಿಸ್ಟಿಕ್ ಜೀವನಶೈಲಿಗೆ ಶ್ರಮಿಸೋಣ

2023: ಹೊಸ ವರ್ಷದಲ್ಲಿ ಹೋಲಿಸ್ಟಿಕ್ ಜೀವನಶೈಲಿಗೆ ಶ್ರಮಿಸೋಣ

- Advertisement -
- Advertisement -

ಬೆಳಗಿನ ಜಾವದ ಐದು ಗಂಟೆಯ ಚುಮುಚುಮು ಚಳಿಗೆ ತಲೆಗೊಂದು ಟೋಪಿ ಹಾಕಿಕೊಂಡು ರನ್ನಿಂಗ್‌ಗೆ ಹೊರಟಾಗ, ನಮಗೆ ಅಪರಿಚಿತವೆನ್ನಬಹುದಾದ, ಉತ್ತರ ಕರ್ನಾಟಕದ ಊರಿನಲ್ಲಿ ಹೆಣ್ಣುಮಗಳೊಬ್ಬಳು ಆಗಷ್ಟೇ ಸ್ನಾನ ಮುಗಿಸಿ, ನೆತ್ತಿಯ ಮೇಲಿನ ನೀರು ಆರುವ ಮುನ್ನವೇ, ಒದ್ದೆ ಮುದ್ದೆ ಕೂದಲನ್ನು ಟವಲಿನಲ್ಲಿ ಸುತ್ತಿಕೊಂಡು, ಗುಡಿಸಿ ಸಾರಿಸಿದ ನೆಲಕ್ಕೆ ರಂಗೋಲಿಯ ಚುಕ್ಕಿಯನ್ನಿಡುವುದನ್ನು ನೋಡಿದಾಗ ಮೂಡಿದ ಮನಸ್ಸಿನ ಭಾವ; ಉಳಿದುಕೊಂಡಿದ್ದ ಟೆಂಟ್ ಹೌಸ್‌ನಿಂದ ಸೂರ್ಯ ಹುಟ್ಟುವ ಮುನ್ನವೇ ಹೊರಬಂದು ಚಳಿಗೆ ಮುಖವೊಡ್ಡಿ ಕಾಲಾಡಿಸುತ್ತಿದ್ದಾಗ, ಹಿಮಾಲಯದ ತಪ್ಪಲಿನ ಕಾರ್ಗಿಲ್‌ನ ಹೊರವಲಯದ ಜನರಿಲ್ಲದ ತಾಣದಲ್ಲಿ, ಕುರಿಕಾಯುವ ಅಲೆಮಾರಿ ಸಮುದಾಯದ ವೃದ್ಧರೊಬ್ಬರು ಹರಿಯುವ ತೊರೆಯ ಪಕ್ಕದಲ್ಲಿ ಕಲ್ಲು ಜೋಡಿಸಿ ಒಲೆ ಹೂಡಿ ಚಹಾ ಕಾಯಿಸಿ “ಸರ್‌ದೀ ಮೆ ಚಾಯ್ ಬಹೊತ್ ಸುಕೂನ್ ದೇತಾ ಹೈ ಬಿಟಿಯಾ, ಪೀವೋ” (ಚಳಿಯಲ್ಲಿ ಚಹಾ ಕುಡಿಯೋದು ಬಹಳ ನೆಮ್ಮದಿ ಕೊಡುತ್ತೆ ಮಗಳೇ, ಕುಡಿ.) ಎಂದು ಟೀ ನೀಡಿ ನಕ್ಕಾಗ ಮೂಡಿದ ಮನಸ್ಸಿನ ಭಾವ; ಇವೆರಡೂ ಭಾವಗಳಿಗೆ ಇದ್ದ ಸಾಮ್ಯತೆಯೆಂದರೆ ಅವರ ’ಬದುಕು’ ಎನ್ನಬಹುದೇನೊ.

ಬದುಕಿನ ಏರಿಳಿತಗಳ ನಡುವೆ ನಾನಾ ತರಹದ ಅನುಭವಗಳಿಗೆ, ನೋವು ನಲಿವುಗಳಿಗೆ, ಕಷ್ಟ ಕಾರ್ಪಣ್ಯಗಳಿಗೆ ತೆರೆದಿಟ್ಟುಕೊಂಡು ನಿರಂತರವಾಗಿ ಸಾಗುತ್ತಲೇ ಇರುವಾಗ ನಾನು ಕೇಳಿಕೊಳ್ಳುವ ಮುಖ್ಯ ಪ್ರಶ್ನೆ ಈ ’ಬದುಕು’ ಎಂದರೆ ಏನು? ಬದುಕುವುದು ಎಂದರೆ ಹೇಗಿರಬೇಕು? ಈ ಪ್ರಶ್ನೆಗಳನ್ನು ಬಹುಶಃ ನನ್ನಂತೆ ಎಲ್ಲರೂ ಒಂದಲ್ಲ ಒಂದು ಸಂದರ್ಭದಲ್ಲಿ ಕೇಳಿಕೊಂಡಿರುತ್ತಾರೆ. ಸರಿಯುತ್ತಿರುವ ವರುಷದ ಕೊನೆಯಲ್ಲಿ ನಿಂತು ಬದಲಾಗುವ ಕ್ಯಾಲೆಂಡರಿನೊಂದಿಗೆ ಹೊಸದಿನಗಳನ್ನು ಸ್ವಾಗತಿಸುವ ಸಂದರ್ಭದಲ್ಲಿ ನಾವು ನಮಗೆ ಮತ್ತೆಮತ್ತೆ ಕೇಳಿಕೊಳ್ಳಲೇಬೇಕಾದ ಬಹುಮುಖ್ಯ ಪ್ರಶ್ನೆಗಳಿವು. ಇತ್ತೀಚಿನ ದಿನಗಳಲ್ಲಿ ಕೋವಿಡ್‌ನಂತಹ ಕಷ್ಟದ ದಿನಗಳನ್ನು ಸವೆಸಿ, ಬದುಕುಳಿದು, ಮತ್ತೆ ಬದುಕು ಕಟ್ಟಿಕೊಳ್ಳಲು ಹೋರಾಡಿರುವವರಿಂದ ಹಿಡಿದು ಬರೀ ಆರ್ಥಿಕವಾಗಿಯಷ್ಟೇ ಅಲ್ಲ ಮಾನಸಿಕವಾಗಿ, ದೈಹಿಕವಾಗಿ, ಆರೋಗ್ಯದಲ್ಲೂ ಜರ್ಜರಿತರಾಗಿ, ಬದುಕುಳಿದಿರುವುದೇ ವರವೆಂದು ಜೀವಿಸುತ್ತಿರುವವರೂ, ಈಗ ಹಿಂತಿರುಗಿ ನೋಡಿ ನಕ್ಕಿದ್ದೆಲ್ಲ, ಸಂಭ್ರಮಿಸಿದ್ದೆಲ್ಲಿ, ಎಡವಿದ್ದೆಲ್ಲಿ ಹಾಗೂ ನಿಜವಾಗಿಯೂ ಬದುಕನ್ನು ಬದುಕಿದ್ದೆಲ್ಲಿ ಎನ್ನುವುದನ್ನು ಕೇಳಿಕೊಳ್ಳಲೇಬೇಕಿದೆ.

ಈ ಸಮಗ್ರ ಬದುಕಿಗೊಂದು ಇಂಥದ್ದೇ ಎಂಬ ಒಂದು ಚೌಕಟ್ಟಿಲ್ಲದಿದ್ದರೂ ಬುದ್ಧ ಹೇಳಿದ ’ಆಸೆಯೇ ದುಃಖಕ್ಕೆ ಮೂಲ’, ಬಸವಣ್ಣನೆಂದ ’ಕಾಯಕವೇ ಕೈಲಾಸ’, ಓಶೋ ಹೇಳಿದ ’ಬದುಕನ್ನು ಜೀವಿಸು’ ಅನ್ನುವ ಮಾತುಗಳನ್ನು ಜೋಡಿಸಿ ಬದುಕುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕಿದೆ. ಹೇಗೆ ಕಣ್ಣು, ಮೂಗು, ಕೈ, ಕಾಲು ಹಾಗೂ ದೇಹದ ಪ್ರತಿಯೊಂದು ಅಂಗಾಂಗಗಳು ಆರೋಗ್ಯವಾಗಿರುವುದು ಇಡೀ ದೇಹಕ್ಕೆ ಅವಶ್ಯಕವೋ ಹಾಗೆಯೇ ಮನಸ್ಸಿನ ಆರೋಗ್ಯಕ್ಕೆ ನಮ್ಮ ಆಲೋಚನೆಗಳು, ಅವುಗಳ ಗಟ್ಟಿತನ, ಒಳನೋಟ, ಹೊರನೋಟ, ಆಂತರಿಕ ಶುದ್ಧಿ ಎಲ್ಲವೂ ಮುಖ್ಯವಾಗುತ್ತವೆ. ಹೀಗೆ ಅವೆರಡೂ ಒಂದರ ಕೈ ಇನ್ನೊಂದು ಹಿಡಿದು, ಬೆಂಬಿಡದ ಸಂಗಾತಿಯಂತೆ ನಡೆಯಬೇಕಾಗುತ್ತದೆ. ಅಂದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಒಂದಕ್ಕೊಂದು ಜೊತೆಯಾಗಿ ಸಾಗಿದಾಗಲಷ್ಟೇ ಈ ಬದುಕನ್ನು ಜೀವಿಸಲು ಸಹನೀಯವಾಗುವುದು.

ಪ್ರತಿದಿನ ಮನುಷ್ಯನ ಮೆದುಳು ಸುಮಾರು 70,000 ಆಲೋಚನೆಗಳನ್ನು ಮಂಥನ ಮಾಡುತ್ತದಂತೆ. ಇವುಗಳಲ್ಲಿ ಖುಷಿ ಕೊಡುವುದೊಂದಿಷ್ಟಿದ್ದರೆ, ಚಿಂತೆಗೆ ಹಚ್ಚುವುದು ಒಂದಿಷ್ಟು. ಇವುಗಳಲ್ಲಿನ ಅನೇಕ ಆಲೋಚನೆಗಳಿಗೆ ನಾವಿರುವ ಸಾಮಾಜಿಕ ಪರಿಸರ, ಮನೆಯ ವಾತಾವರಣ, ಬದುಕುವ ರೀತಿ, ಆರ್ಥಿಕ ಪರಿಸ್ಥಿತಿ, ಆರೋಗ್ಯದ ಸುಸ್ಥಿತಿ ಎಲ್ಲವೂ ಕಾರಣವಾಗಿರುತ್ತದೆ. ಹಾಗಾಗಿ ಈ ಸಮಗ್ರ ಬದುಕಿಗೆ ನಾವು ಆಲೋಚಿಸುವ ದಿಕ್ಕು ಸರಿದಾರಿಯಲ್ಲಿರುವುದು ಬಹಳ ಮುಖ್ಯ. ಇದ್ಯಾಕೆ ಮುಖ್ಯವಾಗುತ್ತದೆಂದರೆ, ನಮ್ಮ ಆಲೋಚನೆಗಳು ನಮ್ಮ ಸುತ್ತಲಿನ ಪರಿಸರವನ್ನು ಹಾಳು ಮಾಡುವ ಅಥವಾ ಸುಂದರಗೊಳಿಸುವ ಮೊದಲು, ಅವು ನಮ್ಮೊಳಗಿಂದಲೇ ತಮ್ಮ ಕೆಲಸವನ್ನು ಶುರುಮಾಡುತ್ತವೆ.

ಇನ್ನು ಇದರೊಂದಿಗೆ ದೈಹಿಕ ಆರೋಗ್ಯವೂ ಅಷ್ಟೇ ಮುಖ್ಯವಾದ ವಿಚಾರ. ದೈಹಿಕ ಆರೋಗ್ಯವೆಂದರೆ ಅಂಗಡಿಯಲ್ಲಿ ಕಾಸಿಗೆ ಸಿಗುವ ವಸ್ತುವಲ್ಲ ಅಥವಾ ಯಾವುದೇ ವಸ್ತುವನ್ನು ಬಳಸಿ ಸಂಪೂರ್ಣ ಆರೋಗ್ಯ ಪಡೆಯಲೂ ಸಾಧ್ಯವಿಲ್ಲ. ನಾನಾಗಲೇ ಹೇಳಿದಂತೆ, ರಂಗೋಲಿಗೆ ಚುಕ್ಕಿ ಇಟ್ಟ ಹೆಣ್ಣು ಮತ್ತು ಚಳಿಗೆ ಮೈ ಒಡ್ಡಿ ಚಹಾ ಕಾಯಿಸುವ ವೃದ್ಧನಲ್ಲಿ ಕಾಣಿಸಿದ್ದು ಒಂದು ಶಿಸ್ತುಬದ್ಧ ಜೀವನ. ಸೂರ್ಯನ ಜೊತೆಜೊತೆಗೆ ಎದ್ದು ಮನಸ್ಸಿಗೆ ಮುದ ನೀಡುವ ಹಾಗೂ ಉಲ್ಲಸಿತಗೊಳಿಸುವ ಒಂದಿಷ್ಟು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದಿನದ ಸಮಯಕ್ಕೊಂದು ನಕ್ಷೆ ರೂಪಿಸಿಕೊಂಡು, ತೊಡಕುಗಳನ್ನು ಮೀರಿ ಅಂದುಕೊಂಡ ಕೆಲಸಗಳನ್ನು ಮುಗಿಸಿ, ಆರೋಗ್ಯಕರ ಗುಣಮಟ್ಟದ ಸಮಯ ಕಳೆದು, ಸಂಭ್ರಮದ ಮತ್ತು ಸಂತೃಪ್ತಿಯ ಬದುಕು ಬದುಕುವುದೇ ನಿಜವಾದ ಆರೋಗ್ಯಕರ ಜೀವನ. ಈ ತರದ ಬದುಕು ಬದುಕಲು ಶಿಸ್ತಿರಬೇಕು, ಶ್ರದ್ಧೆಯಿರಬೇಕು; ಹೀಗೇ ಬದುಕುತ್ತೇವೆನ್ನುವ ಹಠವಿರಬೇಕು. ಆಸೆ, ಆಕಾಂಕ್ಷೆ, ಖರ್ಚುವೆಚ್ಚಗಳಲ್ಲಿ ಹಿಡಿತವಿರಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಆಲೋಚನೆಯ ದಿಕ್ಕು ಸರಿಯಾಗಿರಬೇಕು. ಮನಸ್ಸಿನ ಆರೋಗ್ಯಕ್ಕೂ ದೇಹದ ಆರೋಗ್ಯಕ್ಕೂ ನೇರವಾದ ಸಂಬಂಧವಿರುವುದರಿಂದ ಬದುಕುವ ಧಾವಂತದಲ್ಲಿ ಮನಸ್ಸಿಗೂ ದೇಹಕ್ಕೂ ಕೊಂಡಿ ತ್ರಾಸದಾಯಕವಾಗಿರಬಾರದು. ನಮ್ಮೊಳಗಿನ, ನಮ್ಮವರ ಬಗೆಗಿನ, ನಮ್ಮ ಸುತ್ತಮುತ್ತಲಿನ ಸಮಾಜದ ಬಗೆಗಿನ ನಮ್ಮ ಆಲೋಚನೆ ಪ್ರಬುದ್ಧತೆಯಿಂದ ಮತ್ತು ಕಾಳಜಿಯಿಂದ ಕೂಡಿರಬೇಕಾಗುತ್ತದೆ. ಅಂದರೆ ಒಂದು ಸ್ವಸ್ಥ ಬದುಕಿನ ಕನಸು ಕಾಣಲು ನಮ್ಮ ಸುತ್ತಲಿನ ಪರಿಸರವೂ ಸ್ವಸ್ಥವಾಗಿರುವುದು ಮುಖ್ಯ. ಅಲ್ಲಿ ದ್ವೇಷ, ಅಸೂಯೆ, ಅಸಹ್ಯ, ಅಪಹಾಸ್ಯ, ಅನಿಷ್ಟ ಆಚರಣೆ, ಅಂಧಶ್ರದ್ಧೆಗಳಿಗೆ ಜಾಗ ಕೊಡದೆ ಒಬ್ಬರಿಗೊಬ್ಬರು ಹೆಗಲಾಗಿ, ನೊಗವಾಗಿ, ಆಸರೆಯಾಗಿ ಬದುಕಲು ಯೋಗ್ಯವಾದಂತಹ ವಾತಾವರಣ ನಿರ್ಮಿಸಿಕೊಳ್ಳಬೇಕಾದದ್ದು ಬಹಳ ಮುಖ್ಯ. ಆಗಲೇ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಈ ಮಾನಸಿಕ ಆರೋಗ್ಯ ಸಿದ್ಧಿಸಿಕೊಂಡರೆ ದೈಹಿಕ ಆರೋಗ್ಯದೆಡೆಗೆ ಗಮನ ನೀಡುವುದು ಕಷ್ಟದ ಕೆಲಸವೇನಲ್ಲ. ಈ ಪ್ರೀತಿ ಒಂದು ರೀತಿಯ ಔಷಧಿ. ಪ್ರೀತಿ ಮನೆಯೊಳಗೆ ನೆಮ್ಮದಿ ನೆಲೆಸುವಂತೆ ಮಾಡುತ್ತದೆ. ಅದೇ ಪ್ರೀತಿಯನ್ನು ನಾವು ಬದುಕುವ ಪರಿಸರದೆಡೆಗೆ ಹಂಚಿದಾಗ ಆ ನೆಮ್ಮದಿಯೂ ಮನೆಯ ಹೊರಗೆ ಪಸರಿಸುತ್ತದೆ. ಹೀಗೊಂದು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹೆಚ್ಚೇನೂ ಕಷ್ಟ ಪಡುವುದು ಬೇಕಿಲ್ಲ; ಹೆಚ್ಚುಹೆಚ್ಚು ಸ್ವಸ್ಥ ಮನಸ್ಸುಗಳ ಇದ್ದರದೇ ಸಾಕು. ಅಂತದೊಂದು ಸ್ವಸ್ಥ ಮನಸ್ಸು ಬೆಳೆಸಿಕೊಂಡು ನೋಡಲು ಸಾಧ್ಯವಾದರೆ, ಸುತ್ತಲಿನ ಕಲ್ಲು ಕೋಟೆಯೂ ನಕ್ಕಂತೆ ಭಾಸವಾಗುತ್ತದೆ.

ಅಂದಹಾಗೆ ಬರಲಿರುವ ದಿನಗಳಿಗಾಗಿ ಒಂದಿಷ್ಟು ಪ್ರತಿಜ್ಞೆಗಳನ್ನು ಕೈಗೊಳ್ಳಬೇಕಿದೆ. ಅವುಗಳಲ್ಲಿ ಮುಖ್ಯವಾದವುಗಳು ಬೆಳಿಗ್ಗೆ ಬೇಗ ಏಳುವುದು, ಒಂದಿಷ್ಟು ವ್ಯಾಯಾಮ, ಒಳ್ಳೆಯ ಊಟ, ಒಳ್ಳೆಯ ನಿದ್ದೆ, ದೇಹ ದಣಿಯುವಷ್ಟು ಕೆಲಸ, ಒಂದಿಷ್ಟು ಸಮಯ ತಮ್ಮವರಿಗಾಗಿ ನೀಡುವುದು; ಇವಿಷ್ಟೂ ದೇಹದ ಆರೋಗ್ಯಕ್ಕಾದರೆ, ಮನಸ್ಸಿನ ಆರೋಗ್ಯಕ್ಕಾಗಿ ಒಂದಿಷ್ಟು ಓದು, ಅನಗತ್ಯ ಹಾಗೂ ಕೆಟ್ಟ ’ಕಾರ್ಯಕ್ರಮಗಳು-ಮನಸ್ಥಿತಿಯ ಜನರು-ಕೆಲಸ’ಗಳಿಂದ ದೂರವಿರುವುದು, ಪ್ರೀತಿ ಕೊಡಲಾಗದಿದ್ದರೂ ದ್ವೇಷ ಹಂಚದಿರುವುದು, ಸಮುದಾಯ ಕೇಂದ್ರಿತವಲ್ಲದ ಅನಗತ್ಯವಾದ ವಾದ ವಿವಾದಗಳಿಂದ ದೂರವಿರುವುದು ಹಾಗೂ ನಮಗಾಗಿ ಮತ್ತು ನಮ್ಮ ಮುಂದಿನ ಪೀಳಿಗೆಗಾಗಿ ಒಂದು ಒಳ್ಳೆಯ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಕಿಂಚಿತ್ತಾದರೂ ಭಾಗಿಯಾಗುವುದು; ಇವಿಷ್ಟು ನಾವು ಕೈಗೊಳ್ಳಲೇಬೇಕಾದ ಪ್ರತಿಜ್ಞೆಗಳು. ಈ ಮಾನಸಿಕ ಸಿದ್ಧತೆಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ. ನಮ್ಮ ಮುಂದಿರುವ ಅನೇಕ ಸಾಮಾಜಿಕ ಒತ್ತಡಗಳನ್ನು, ಅಂತಹ ಒತ್ತಡಗಳನ್ನು ಹೆಚ್ಚಿಸುವ ಮಾಧ್ಯಮಗಳನ್ನು ಮೀರಿ ಸ್ವಸ್ಥ ಬದುಕನ್ನು ಕಟ್ಟಕೊಳ್ಳುತ್ತಾ 2023ರಲ್ಲಿ ಮುಂದುವರಿಯೋಣ. ಅಷ್ಟಕ್ಕೂ, ಇದಕ್ಕೇ ಅಲ್ವೇ ಸಮಗ್ರ ಬದುಕು ಅಥವಾ Holistic Living ಅನ್ನುವುದು!

ಪಲ್ಲವಿ ಇಡೂರು

ಪಲ್ಲವಿ ಇಡೂರು
ಲೇಖಕಿ ಮತ್ತು ರಾಜಕೀಯ ವಿಮರ್ಶಕರು. ’ಜೊಲಾಂಟಾ’ (ಇರೇನಾ ಸ್ಲೆಂಡರ್ ಜೀವನ ಕಥನ) ಮತ್ತು ದೇಶ ವಿಭಜನೆಯ ಬಗ್ಗೆ ’ಆಗಸ್ಟ್ ಮಾಸದ ರಾಜಕೀಯ ಕಥನ’ ಎಂಬ ಪುಸ್ತಕಗಳನ್ನು ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...