Homeಕರ್ನಾಟಕ'ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ': ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

- Advertisement -
- Advertisement -

ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಮತ್ತು ಕೇಂದ್ರದ ಬಿಜೆಪಿ ವರಿಷ್ಟರಿಗೆ ಪತ್ರ ಬರೆದಿದ್ದ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ‘ನನಗೆ ರೆಬಲ್ ಆಗುವುದೇ ಗೊತ್ತಿಲ್ಲ, ಆದರೆ ನ್ಯಾಯ ಕೇಳುವುದನ್ನು ಬಿಡಲ್ಲ. ನಿಯಮ ಮತ್ತು ಪ್ರಕ್ರಿಯೆಯನ್ನು ಮೀರಬಾರದು ಎಂಬುದಷ್ಟೆ ನನ್ನ ಆಗ್ರಹ’ ಎಂದು ಹೇಳಿದ್ದಾರೆ.

“ನಾನು ನ್ಯಾಯ ಕೇಳಿದ್ದೇನೆ. ನಿಯಮ ಉಲ್ಲಂಘನೆಯಾಗಿರುವುದನ್ನು ನಾನು ಆಕ್ಷೇಪಿಸಿದ್ದೇನೆ ಅಷ್ಟೆ. ಆದರೆ ಸರ್ಕಾರದ ವಿರುದ್ಧ ನಾನು ಬಂಡಾಯ ಎದ್ದಿಲ್ಲ. ಅಥವಾ ಮುಖ್ಯಮಂತ್ರಿ ಮತ್ತು ನನ್ನ ನಡುವೆ ಯಾವುದೇ ವೈಯಕ್ತಿಕ ತಕರಾರಿಲ್ಲ. ಆದರೆ ಕೆಲವು ಮಾಧ್ಯಮಗಳು ನಾನು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದೇನೆ ಎಂದು ವರದಿ ಮಾಡಿವೆ, ಅದು ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಂದು ರಾಜ್ಯದಲ್ಲಿ ಹಣವನ್ನು ಯಾವುದೆ ಕೆಲಸಕ್ಕೆ ಬಳಸುವ ಪರಮಾಧಿಕಾರ ಸಿಎಂಗೆ ಇದೆ. ಆದರೆ ಒಂದು ಇಲಾಖೆಗೆ ಹಣ ಬಂದಮೇಲೆ ಅದು ಇಲಾಖೆಯ ಕೆಲಸ. ಈಗ ಸಿಎಂ ನಮ್ಮ ಇಲಾಖೆಗೆ ಬಂದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಒಂದು ಇಲಾಖೆಗೆ ಬಿಡುಗಡೆಯಾಗಿರುವ ಹಣವನ್ನು ಇಲಾಖೆಯ ಸಚಿವರಿಗೆ ಗೊತ್ತಿಲ್ಲದೆ ಅಥವಾ ಮಾಹಿತಿ ನೀಡದೇ ಆ ಹಣವನ್ನು ಶಾಸಕರಿಗೆ ಅಥವಾ ಇತರೆ ಕೆಲಸಗಳಿಗೆ ಬಳಸಲಾಗಿದೆ. ಇದನ್ನು ಆರ್ಥಿಕ ಇಲಾಖೆಯೂ ಒಪ್ಪಿಕೊಂಡಿದೆ. ನಮ್ಮಿಂದ ತಪ್ಪಾಗಿದೆ ಎಂದೂ ಹೇಳಿದೆ. ಆದರೆ ಮುಖ್ಯಮಂತ್ರಿ ಹೇಳಿದ ಮೇಲೆ ಆ ಕೆಲಸ ಮಾಡಲೇಬೇಕಲ್ಲ ಎಂದು ಅವರು ಹೇಳಿದರು. ಹಾಗಾಗಿ ನ್ಯಾಯ ಕೇಳಿದ್ದೇನೆ ಅಷ್ಟೆ. ಈ ಕುರಿತು ಸಿಎಂ ಸೇರಿದಂತೆ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

“ಯಡಿಯೂರಪ್ಪ ರಾಜೀನಾಮೆ ಕೊಡಲಿ ಅಥವಾ ಈಶ್ವರಪ್ಪ ರಾಜೀನಾಮೆ ಕೊಡಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದು ಖಂಡಿತಾ ಸಾಧ್ಯವಿಲ್ಲ. ನಾನು ಯಡಿಯೂರಪ್ಪ ಯಾವಾಗಲೂ ಒಂದೇ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮತ್ತು ಈಶ್ವರಪ್ಪನವರ ನಡುವಿನ ಭಿನ್ನಾಭಿಪ್ರಾಯ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, “ಇದು ಹೊಸದಲ್ಲ, ಮೊದಲಿನಿಂದಲೂ ಇದೆ. ನಾವು ಒಂದೇ ತಟ್ಟೆಯಲ್ಲಿ ಊಟಮಾಡಿದ್ದೇವೆ, ಬಿಜಿನಸ್ ಪಾರ್ಟ್ನರ್ ನಾವು. ಯಡಿಯೂರಪ್ಪ ಬಿಜೆಪಿಯಿಂದ ಹೊರಗೆ ಹೋಗಿ ಕೆಜೆಪಿ ಕಟ್ಟಿದ್ದರು. ಆಗ ಅವರೂ ಬಿಜೆಪಿಯ ವಿರುದ್ಧ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದರು. ನಾವೂ ಕೂಡ ತಕ್ಕ ಉತ್ತರ ಕೊಟ್ಟಿದ್ದೆವು. ನಂತರ ಬಿಜೆಪಿಯೊಳಗೆ ವಿಲೀನವಾಗಬೇಕು ಎನ್ನುವ ವಿಷಯ ಬಂದಾಗ ನಾನು ಯಡಿಯೂರಪ್ಪನವರನ್ನು ನೋಡಿ, ‘ಮೊದಲೇ ಹೇಳಿದ್ದೆ ಕೆಜೆಪಿ ಬೇಡ ಎಂದು. ಈಗ ನೋಡಿ ನಮಗೂ ನಿಮಗೂ ತ್ರಾಸ’ ಎಂದು ಹೇಳಿದೆ. ಅದಕ್ಕೆ ನೋವಿನಿಂದಲೇ ಉತ್ತರಿಸಿದ ಯಡಿಯೂರಪ್ಪ, ‘ನಾನು ಕೆಜೆಪಿ ಕಟ್ಟಬೇಕೆಂದೂ, ತಾವು ಜೊತೆಗೆ ಬರುತ್ತೇವೆ ಎಂದೂ ಹಲವರು ಒತ್ತಾಯಿಸಿದ್ದರು. ಆದರೆ ಪಕ್ಷ ಕಟ್ಟಿದ ನಂತರ ಯಾರೂ ಹತ್ತಿರ ಸುಳಿಯಲಿಲ್ಲ’ ಎಂದು ಹೇಳಿದ್ದರು. ಇದನ್ನು ಯಾಕೆ ಹೇಳುತ್ತಿದ್ದೇನೆ ಎಂದರೆ, ಯಡಿಯೂರಪ್ಪ ತನ್ನ ಸುತ್ತಲಿನವರ ಮಾತನ್ನು ಬೇಗ ನಂಬುತ್ತಾರೆ. ಬಹುಶಃ ಈಗಲೂ ಅದೇ ಆಗಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.


ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...