Homeಕರ್ನಾಟಕ'ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ': ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

- Advertisement -
- Advertisement -

ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಮತ್ತು ಕೇಂದ್ರದ ಬಿಜೆಪಿ ವರಿಷ್ಟರಿಗೆ ಪತ್ರ ಬರೆದಿದ್ದ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ‘ನನಗೆ ರೆಬಲ್ ಆಗುವುದೇ ಗೊತ್ತಿಲ್ಲ, ಆದರೆ ನ್ಯಾಯ ಕೇಳುವುದನ್ನು ಬಿಡಲ್ಲ. ನಿಯಮ ಮತ್ತು ಪ್ರಕ್ರಿಯೆಯನ್ನು ಮೀರಬಾರದು ಎಂಬುದಷ್ಟೆ ನನ್ನ ಆಗ್ರಹ’ ಎಂದು ಹೇಳಿದ್ದಾರೆ.

“ನಾನು ನ್ಯಾಯ ಕೇಳಿದ್ದೇನೆ. ನಿಯಮ ಉಲ್ಲಂಘನೆಯಾಗಿರುವುದನ್ನು ನಾನು ಆಕ್ಷೇಪಿಸಿದ್ದೇನೆ ಅಷ್ಟೆ. ಆದರೆ ಸರ್ಕಾರದ ವಿರುದ್ಧ ನಾನು ಬಂಡಾಯ ಎದ್ದಿಲ್ಲ. ಅಥವಾ ಮುಖ್ಯಮಂತ್ರಿ ಮತ್ತು ನನ್ನ ನಡುವೆ ಯಾವುದೇ ವೈಯಕ್ತಿಕ ತಕರಾರಿಲ್ಲ. ಆದರೆ ಕೆಲವು ಮಾಧ್ಯಮಗಳು ನಾನು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದೇನೆ ಎಂದು ವರದಿ ಮಾಡಿವೆ, ಅದು ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಂದು ರಾಜ್ಯದಲ್ಲಿ ಹಣವನ್ನು ಯಾವುದೆ ಕೆಲಸಕ್ಕೆ ಬಳಸುವ ಪರಮಾಧಿಕಾರ ಸಿಎಂಗೆ ಇದೆ. ಆದರೆ ಒಂದು ಇಲಾಖೆಗೆ ಹಣ ಬಂದಮೇಲೆ ಅದು ಇಲಾಖೆಯ ಕೆಲಸ. ಈಗ ಸಿಎಂ ನಮ್ಮ ಇಲಾಖೆಗೆ ಬಂದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಒಂದು ಇಲಾಖೆಗೆ ಬಿಡುಗಡೆಯಾಗಿರುವ ಹಣವನ್ನು ಇಲಾಖೆಯ ಸಚಿವರಿಗೆ ಗೊತ್ತಿಲ್ಲದೆ ಅಥವಾ ಮಾಹಿತಿ ನೀಡದೇ ಆ ಹಣವನ್ನು ಶಾಸಕರಿಗೆ ಅಥವಾ ಇತರೆ ಕೆಲಸಗಳಿಗೆ ಬಳಸಲಾಗಿದೆ. ಇದನ್ನು ಆರ್ಥಿಕ ಇಲಾಖೆಯೂ ಒಪ್ಪಿಕೊಂಡಿದೆ. ನಮ್ಮಿಂದ ತಪ್ಪಾಗಿದೆ ಎಂದೂ ಹೇಳಿದೆ. ಆದರೆ ಮುಖ್ಯಮಂತ್ರಿ ಹೇಳಿದ ಮೇಲೆ ಆ ಕೆಲಸ ಮಾಡಲೇಬೇಕಲ್ಲ ಎಂದು ಅವರು ಹೇಳಿದರು. ಹಾಗಾಗಿ ನ್ಯಾಯ ಕೇಳಿದ್ದೇನೆ ಅಷ್ಟೆ. ಈ ಕುರಿತು ಸಿಎಂ ಸೇರಿದಂತೆ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

“ಯಡಿಯೂರಪ್ಪ ರಾಜೀನಾಮೆ ಕೊಡಲಿ ಅಥವಾ ಈಶ್ವರಪ್ಪ ರಾಜೀನಾಮೆ ಕೊಡಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದು ಖಂಡಿತಾ ಸಾಧ್ಯವಿಲ್ಲ. ನಾನು ಯಡಿಯೂರಪ್ಪ ಯಾವಾಗಲೂ ಒಂದೇ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮತ್ತು ಈಶ್ವರಪ್ಪನವರ ನಡುವಿನ ಭಿನ್ನಾಭಿಪ್ರಾಯ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, “ಇದು ಹೊಸದಲ್ಲ, ಮೊದಲಿನಿಂದಲೂ ಇದೆ. ನಾವು ಒಂದೇ ತಟ್ಟೆಯಲ್ಲಿ ಊಟಮಾಡಿದ್ದೇವೆ, ಬಿಜಿನಸ್ ಪಾರ್ಟ್ನರ್ ನಾವು. ಯಡಿಯೂರಪ್ಪ ಬಿಜೆಪಿಯಿಂದ ಹೊರಗೆ ಹೋಗಿ ಕೆಜೆಪಿ ಕಟ್ಟಿದ್ದರು. ಆಗ ಅವರೂ ಬಿಜೆಪಿಯ ವಿರುದ್ಧ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದರು. ನಾವೂ ಕೂಡ ತಕ್ಕ ಉತ್ತರ ಕೊಟ್ಟಿದ್ದೆವು. ನಂತರ ಬಿಜೆಪಿಯೊಳಗೆ ವಿಲೀನವಾಗಬೇಕು ಎನ್ನುವ ವಿಷಯ ಬಂದಾಗ ನಾನು ಯಡಿಯೂರಪ್ಪನವರನ್ನು ನೋಡಿ, ‘ಮೊದಲೇ ಹೇಳಿದ್ದೆ ಕೆಜೆಪಿ ಬೇಡ ಎಂದು. ಈಗ ನೋಡಿ ನಮಗೂ ನಿಮಗೂ ತ್ರಾಸ’ ಎಂದು ಹೇಳಿದೆ. ಅದಕ್ಕೆ ನೋವಿನಿಂದಲೇ ಉತ್ತರಿಸಿದ ಯಡಿಯೂರಪ್ಪ, ‘ನಾನು ಕೆಜೆಪಿ ಕಟ್ಟಬೇಕೆಂದೂ, ತಾವು ಜೊತೆಗೆ ಬರುತ್ತೇವೆ ಎಂದೂ ಹಲವರು ಒತ್ತಾಯಿಸಿದ್ದರು. ಆದರೆ ಪಕ್ಷ ಕಟ್ಟಿದ ನಂತರ ಯಾರೂ ಹತ್ತಿರ ಸುಳಿಯಲಿಲ್ಲ’ ಎಂದು ಹೇಳಿದ್ದರು. ಇದನ್ನು ಯಾಕೆ ಹೇಳುತ್ತಿದ್ದೇನೆ ಎಂದರೆ, ಯಡಿಯೂರಪ್ಪ ತನ್ನ ಸುತ್ತಲಿನವರ ಮಾತನ್ನು ಬೇಗ ನಂಬುತ್ತಾರೆ. ಬಹುಶಃ ಈಗಲೂ ಅದೇ ಆಗಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.


ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...