Homeಕರ್ನಾಟಕ'ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ': ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

- Advertisement -
- Advertisement -

ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಮತ್ತು ಕೇಂದ್ರದ ಬಿಜೆಪಿ ವರಿಷ್ಟರಿಗೆ ಪತ್ರ ಬರೆದಿದ್ದ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ‘ನನಗೆ ರೆಬಲ್ ಆಗುವುದೇ ಗೊತ್ತಿಲ್ಲ, ಆದರೆ ನ್ಯಾಯ ಕೇಳುವುದನ್ನು ಬಿಡಲ್ಲ. ನಿಯಮ ಮತ್ತು ಪ್ರಕ್ರಿಯೆಯನ್ನು ಮೀರಬಾರದು ಎಂಬುದಷ್ಟೆ ನನ್ನ ಆಗ್ರಹ’ ಎಂದು ಹೇಳಿದ್ದಾರೆ.

“ನಾನು ನ್ಯಾಯ ಕೇಳಿದ್ದೇನೆ. ನಿಯಮ ಉಲ್ಲಂಘನೆಯಾಗಿರುವುದನ್ನು ನಾನು ಆಕ್ಷೇಪಿಸಿದ್ದೇನೆ ಅಷ್ಟೆ. ಆದರೆ ಸರ್ಕಾರದ ವಿರುದ್ಧ ನಾನು ಬಂಡಾಯ ಎದ್ದಿಲ್ಲ. ಅಥವಾ ಮುಖ್ಯಮಂತ್ರಿ ಮತ್ತು ನನ್ನ ನಡುವೆ ಯಾವುದೇ ವೈಯಕ್ತಿಕ ತಕರಾರಿಲ್ಲ. ಆದರೆ ಕೆಲವು ಮಾಧ್ಯಮಗಳು ನಾನು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದೇನೆ ಎಂದು ವರದಿ ಮಾಡಿವೆ, ಅದು ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಂದು ರಾಜ್ಯದಲ್ಲಿ ಹಣವನ್ನು ಯಾವುದೆ ಕೆಲಸಕ್ಕೆ ಬಳಸುವ ಪರಮಾಧಿಕಾರ ಸಿಎಂಗೆ ಇದೆ. ಆದರೆ ಒಂದು ಇಲಾಖೆಗೆ ಹಣ ಬಂದಮೇಲೆ ಅದು ಇಲಾಖೆಯ ಕೆಲಸ. ಈಗ ಸಿಎಂ ನಮ್ಮ ಇಲಾಖೆಗೆ ಬಂದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಒಂದು ಇಲಾಖೆಗೆ ಬಿಡುಗಡೆಯಾಗಿರುವ ಹಣವನ್ನು ಇಲಾಖೆಯ ಸಚಿವರಿಗೆ ಗೊತ್ತಿಲ್ಲದೆ ಅಥವಾ ಮಾಹಿತಿ ನೀಡದೇ ಆ ಹಣವನ್ನು ಶಾಸಕರಿಗೆ ಅಥವಾ ಇತರೆ ಕೆಲಸಗಳಿಗೆ ಬಳಸಲಾಗಿದೆ. ಇದನ್ನು ಆರ್ಥಿಕ ಇಲಾಖೆಯೂ ಒಪ್ಪಿಕೊಂಡಿದೆ. ನಮ್ಮಿಂದ ತಪ್ಪಾಗಿದೆ ಎಂದೂ ಹೇಳಿದೆ. ಆದರೆ ಮುಖ್ಯಮಂತ್ರಿ ಹೇಳಿದ ಮೇಲೆ ಆ ಕೆಲಸ ಮಾಡಲೇಬೇಕಲ್ಲ ಎಂದು ಅವರು ಹೇಳಿದರು. ಹಾಗಾಗಿ ನ್ಯಾಯ ಕೇಳಿದ್ದೇನೆ ಅಷ್ಟೆ. ಈ ಕುರಿತು ಸಿಎಂ ಸೇರಿದಂತೆ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

“ಯಡಿಯೂರಪ್ಪ ರಾಜೀನಾಮೆ ಕೊಡಲಿ ಅಥವಾ ಈಶ್ವರಪ್ಪ ರಾಜೀನಾಮೆ ಕೊಡಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದು ಖಂಡಿತಾ ಸಾಧ್ಯವಿಲ್ಲ. ನಾನು ಯಡಿಯೂರಪ್ಪ ಯಾವಾಗಲೂ ಒಂದೇ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮತ್ತು ಈಶ್ವರಪ್ಪನವರ ನಡುವಿನ ಭಿನ್ನಾಭಿಪ್ರಾಯ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, “ಇದು ಹೊಸದಲ್ಲ, ಮೊದಲಿನಿಂದಲೂ ಇದೆ. ನಾವು ಒಂದೇ ತಟ್ಟೆಯಲ್ಲಿ ಊಟಮಾಡಿದ್ದೇವೆ, ಬಿಜಿನಸ್ ಪಾರ್ಟ್ನರ್ ನಾವು. ಯಡಿಯೂರಪ್ಪ ಬಿಜೆಪಿಯಿಂದ ಹೊರಗೆ ಹೋಗಿ ಕೆಜೆಪಿ ಕಟ್ಟಿದ್ದರು. ಆಗ ಅವರೂ ಬಿಜೆಪಿಯ ವಿರುದ್ಧ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದರು. ನಾವೂ ಕೂಡ ತಕ್ಕ ಉತ್ತರ ಕೊಟ್ಟಿದ್ದೆವು. ನಂತರ ಬಿಜೆಪಿಯೊಳಗೆ ವಿಲೀನವಾಗಬೇಕು ಎನ್ನುವ ವಿಷಯ ಬಂದಾಗ ನಾನು ಯಡಿಯೂರಪ್ಪನವರನ್ನು ನೋಡಿ, ‘ಮೊದಲೇ ಹೇಳಿದ್ದೆ ಕೆಜೆಪಿ ಬೇಡ ಎಂದು. ಈಗ ನೋಡಿ ನಮಗೂ ನಿಮಗೂ ತ್ರಾಸ’ ಎಂದು ಹೇಳಿದೆ. ಅದಕ್ಕೆ ನೋವಿನಿಂದಲೇ ಉತ್ತರಿಸಿದ ಯಡಿಯೂರಪ್ಪ, ‘ನಾನು ಕೆಜೆಪಿ ಕಟ್ಟಬೇಕೆಂದೂ, ತಾವು ಜೊತೆಗೆ ಬರುತ್ತೇವೆ ಎಂದೂ ಹಲವರು ಒತ್ತಾಯಿಸಿದ್ದರು. ಆದರೆ ಪಕ್ಷ ಕಟ್ಟಿದ ನಂತರ ಯಾರೂ ಹತ್ತಿರ ಸುಳಿಯಲಿಲ್ಲ’ ಎಂದು ಹೇಳಿದ್ದರು. ಇದನ್ನು ಯಾಕೆ ಹೇಳುತ್ತಿದ್ದೇನೆ ಎಂದರೆ, ಯಡಿಯೂರಪ್ಪ ತನ್ನ ಸುತ್ತಲಿನವರ ಮಾತನ್ನು ಬೇಗ ನಂಬುತ್ತಾರೆ. ಬಹುಶಃ ಈಗಲೂ ಅದೇ ಆಗಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.


ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...