Homeಕರ್ನಾಟಕ'ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ': ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

- Advertisement -
- Advertisement -

ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಮತ್ತು ಕೇಂದ್ರದ ಬಿಜೆಪಿ ವರಿಷ್ಟರಿಗೆ ಪತ್ರ ಬರೆದಿದ್ದ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ‘ನನಗೆ ರೆಬಲ್ ಆಗುವುದೇ ಗೊತ್ತಿಲ್ಲ, ಆದರೆ ನ್ಯಾಯ ಕೇಳುವುದನ್ನು ಬಿಡಲ್ಲ. ನಿಯಮ ಮತ್ತು ಪ್ರಕ್ರಿಯೆಯನ್ನು ಮೀರಬಾರದು ಎಂಬುದಷ್ಟೆ ನನ್ನ ಆಗ್ರಹ’ ಎಂದು ಹೇಳಿದ್ದಾರೆ.

“ನಾನು ನ್ಯಾಯ ಕೇಳಿದ್ದೇನೆ. ನಿಯಮ ಉಲ್ಲಂಘನೆಯಾಗಿರುವುದನ್ನು ನಾನು ಆಕ್ಷೇಪಿಸಿದ್ದೇನೆ ಅಷ್ಟೆ. ಆದರೆ ಸರ್ಕಾರದ ವಿರುದ್ಧ ನಾನು ಬಂಡಾಯ ಎದ್ದಿಲ್ಲ. ಅಥವಾ ಮುಖ್ಯಮಂತ್ರಿ ಮತ್ತು ನನ್ನ ನಡುವೆ ಯಾವುದೇ ವೈಯಕ್ತಿಕ ತಕರಾರಿಲ್ಲ. ಆದರೆ ಕೆಲವು ಮಾಧ್ಯಮಗಳು ನಾನು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದೇನೆ ಎಂದು ವರದಿ ಮಾಡಿವೆ, ಅದು ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಂದು ರಾಜ್ಯದಲ್ಲಿ ಹಣವನ್ನು ಯಾವುದೆ ಕೆಲಸಕ್ಕೆ ಬಳಸುವ ಪರಮಾಧಿಕಾರ ಸಿಎಂಗೆ ಇದೆ. ಆದರೆ ಒಂದು ಇಲಾಖೆಗೆ ಹಣ ಬಂದಮೇಲೆ ಅದು ಇಲಾಖೆಯ ಕೆಲಸ. ಈಗ ಸಿಎಂ ನಮ್ಮ ಇಲಾಖೆಗೆ ಬಂದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಒಂದು ಇಲಾಖೆಗೆ ಬಿಡುಗಡೆಯಾಗಿರುವ ಹಣವನ್ನು ಇಲಾಖೆಯ ಸಚಿವರಿಗೆ ಗೊತ್ತಿಲ್ಲದೆ ಅಥವಾ ಮಾಹಿತಿ ನೀಡದೇ ಆ ಹಣವನ್ನು ಶಾಸಕರಿಗೆ ಅಥವಾ ಇತರೆ ಕೆಲಸಗಳಿಗೆ ಬಳಸಲಾಗಿದೆ. ಇದನ್ನು ಆರ್ಥಿಕ ಇಲಾಖೆಯೂ ಒಪ್ಪಿಕೊಂಡಿದೆ. ನಮ್ಮಿಂದ ತಪ್ಪಾಗಿದೆ ಎಂದೂ ಹೇಳಿದೆ. ಆದರೆ ಮುಖ್ಯಮಂತ್ರಿ ಹೇಳಿದ ಮೇಲೆ ಆ ಕೆಲಸ ಮಾಡಲೇಬೇಕಲ್ಲ ಎಂದು ಅವರು ಹೇಳಿದರು. ಹಾಗಾಗಿ ನ್ಯಾಯ ಕೇಳಿದ್ದೇನೆ ಅಷ್ಟೆ. ಈ ಕುರಿತು ಸಿಎಂ ಸೇರಿದಂತೆ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

“ಯಡಿಯೂರಪ್ಪ ರಾಜೀನಾಮೆ ಕೊಡಲಿ ಅಥವಾ ಈಶ್ವರಪ್ಪ ರಾಜೀನಾಮೆ ಕೊಡಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದು ಖಂಡಿತಾ ಸಾಧ್ಯವಿಲ್ಲ. ನಾನು ಯಡಿಯೂರಪ್ಪ ಯಾವಾಗಲೂ ಒಂದೇ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮತ್ತು ಈಶ್ವರಪ್ಪನವರ ನಡುವಿನ ಭಿನ್ನಾಭಿಪ್ರಾಯ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, “ಇದು ಹೊಸದಲ್ಲ, ಮೊದಲಿನಿಂದಲೂ ಇದೆ. ನಾವು ಒಂದೇ ತಟ್ಟೆಯಲ್ಲಿ ಊಟಮಾಡಿದ್ದೇವೆ, ಬಿಜಿನಸ್ ಪಾರ್ಟ್ನರ್ ನಾವು. ಯಡಿಯೂರಪ್ಪ ಬಿಜೆಪಿಯಿಂದ ಹೊರಗೆ ಹೋಗಿ ಕೆಜೆಪಿ ಕಟ್ಟಿದ್ದರು. ಆಗ ಅವರೂ ಬಿಜೆಪಿಯ ವಿರುದ್ಧ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದರು. ನಾವೂ ಕೂಡ ತಕ್ಕ ಉತ್ತರ ಕೊಟ್ಟಿದ್ದೆವು. ನಂತರ ಬಿಜೆಪಿಯೊಳಗೆ ವಿಲೀನವಾಗಬೇಕು ಎನ್ನುವ ವಿಷಯ ಬಂದಾಗ ನಾನು ಯಡಿಯೂರಪ್ಪನವರನ್ನು ನೋಡಿ, ‘ಮೊದಲೇ ಹೇಳಿದ್ದೆ ಕೆಜೆಪಿ ಬೇಡ ಎಂದು. ಈಗ ನೋಡಿ ನಮಗೂ ನಿಮಗೂ ತ್ರಾಸ’ ಎಂದು ಹೇಳಿದೆ. ಅದಕ್ಕೆ ನೋವಿನಿಂದಲೇ ಉತ್ತರಿಸಿದ ಯಡಿಯೂರಪ್ಪ, ‘ನಾನು ಕೆಜೆಪಿ ಕಟ್ಟಬೇಕೆಂದೂ, ತಾವು ಜೊತೆಗೆ ಬರುತ್ತೇವೆ ಎಂದೂ ಹಲವರು ಒತ್ತಾಯಿಸಿದ್ದರು. ಆದರೆ ಪಕ್ಷ ಕಟ್ಟಿದ ನಂತರ ಯಾರೂ ಹತ್ತಿರ ಸುಳಿಯಲಿಲ್ಲ’ ಎಂದು ಹೇಳಿದ್ದರು. ಇದನ್ನು ಯಾಕೆ ಹೇಳುತ್ತಿದ್ದೇನೆ ಎಂದರೆ, ಯಡಿಯೂರಪ್ಪ ತನ್ನ ಸುತ್ತಲಿನವರ ಮಾತನ್ನು ಬೇಗ ನಂಬುತ್ತಾರೆ. ಬಹುಶಃ ಈಗಲೂ ಅದೇ ಆಗಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.


ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...